Homeಕರ್ನಾಟಕಮುಸ್ಲಾಪುರ ಮದ್ಯದಂಗಡಿ ಪ್ರಕರಣ; ಬಂಧನ ಭೀತಿಯಲ್ಲಿ ಊರು ತೊರೆದ ಗ್ರಾಮಸ್ಥರು!

ಮುಸ್ಲಾಪುರ ಮದ್ಯದಂಗಡಿ ಪ್ರಕರಣ; ಬಂಧನ ಭೀತಿಯಲ್ಲಿ ಊರು ತೊರೆದ ಗ್ರಾಮಸ್ಥರು!

ಗ್ರಾಮದಲ್ಲಿ ತೆರೆದ ಬಾರ್‌ ಮುಚ್ಚುವಂತೆ ಮಹಿಳೆಯರು ಪ್ರಶ್ನಿಸಿದಾಗ ಗಲಾಟೆ ನಡೆದಿದೆ. 41 ಜನರ ಮೇಲೆ ಪ್ರಕರಣ ದಾಖಲಾಗಿದ್ದು, ಪೊಲೀಸರು ದೌರ್ಜನ್ಯ ಎಸಗಿದ್ದಾರೆ ಎಂದೂ ಆರೋಪಿಸಲಾಗಿದೆ.

- Advertisement -
- Advertisement -

ಕಡೂರು ತಾಲ್ಲೂಕಿನ ಮುಸ್ಲಾಪುರ ಗ್ರಾಮದಲ್ಲಿ ಬಾರ್‌ ತೆರೆದಿದ್ದಕ್ಕೆ ಆಕ್ರೋಶಗೊಂಡ ಗ್ರಾಮದ ಮಹಿಳೆಯರು ನವೆಂಬರ್‌‌ 12ರಂದು ಬಾರ್‌ಗೆ ನುಗ್ಗಿ ಪೀಠೋಪಕರಣಗಳನ್ನೆಲ್ಲ ಮುರಿದುಹಾಕಿದ ಸುದ್ದಿ, ವೀಡಿಯೋ ಸಾಮಾಜಿಕ ಜಾಲತಾಣವೂ ಸೇರಿದಂತೆ ಮಾಧ್ಯಮಗಳಲ್ಲಿ ವರದಿಯಾಗಿತ್ತು.

ಮುಸ್ಲಾಪುರ ನಾಲ್ಕೈದು ಸಮುದಾಯಗಳ ಸುಮಾರು 150 ಮನೆಗಳಿರುವ ಪುಟ್ಟ ಗ್ರಾಮ. ಕೃಷಿ ಭೂಮಿಯಲ್ಲಿ ಕೂಲಿ ಮಾಡುವುದು ಇಲ್ಲಿನ ಬಹುತೇಕ ಜನರ ಬದುಕಾಗಿತ್ತು. ಹೀಗೆ ಕೂಲಿ ಮಾಡುತ್ತಾ ಜೀವನ ಸಾಗಿಸುತ್ತಿದ್ದ ಊರಿನಲ್ಲಿ ಹೋಟೆಲ್‌ ಹೆಸರಿನಲ್ಲಿ ಬಾರ್‌ ಅಂಡ್‌ ರೆಸ್ಟೋರೆಂಟ್‌ ಒಂದನ್ನು ಆರಂಭ ಮಾಡಲಾಯಿತು.
ಆರಂಭದಿಂದಲೇ ಇದಕ್ಕೆ ಗ್ರಾಮಸ್ಥರಿಂದ ಭಾರೀ ವಿರೋಧ ವ್ಯಕ್ತವಾಗಿತ್ತು. ಈ ಬಾರ್‌ ಇರುವ ಸಮೀಪದಲ್ಲಿಯೇ ಹೈಸ್ಕೂಲ್‌ ವಿದ್ಯಾರ್ಥಿಗಳಿಗಾಗಿ ಹಾಸ್ಟೆಲ್‌ಗಳಿದ್ದು, ಹತ್ತಿರದಲ್ಲಿಯೇ ಮದಗದಕೆರೆ ಹಾಗೂ ಚಾನೆಲ್‌ ಇದೆ. ಗ್ರಾಮದಲ್ಲಿ ಬಾರ್‌ ತೆರೆದರೆ ಕೂಲಿ ಕಾರ್ಮಿಕರು ದುಡಿದ ಹಣವನ್ನು ಕುಡಿಯುವುದಕ್ಕೆ ವ್ಯಯಿಸುತ್ತಾರೆ ಎನ್ನುವ ಮಹಿಳೆಯರು, ನಮ್ಮೂರಿನ ಸ್ವಾಸ್ಥ್ಯಕ್ಕಾಗಿ ನಮ್ಮೂರಿನಲ್ಲಿ ಬಾರ್‌ ಬೇಡ ಎಂದು ಅಲವತ್ತುಕೊಂಡಿದ್ದರು.
ಎಮ್ಮೆದೊಡ್ಡಿ ಗ್ರಾಮ ಪಂಚಾಯಿತಿಯಿಂದಲೂ ಬಾರ್‌ ಅಂಡ್‌ ರೆಸ್ಟೋರೆಂಟ್‌ ತೆರೆಯದಂತೆ ನಿರ್ಣಯ ಹೊರಡಿಸಿದ್ದಾಗಲೂ ಕಳ್ಳದಾರಿಯಿಂದ ಬಾರ್‌ ತೆರೆಯಲು ಪ್ರಯತ್ನಿಸಲಾಗಿದೆ ಎಂದು ದೂರಲಾಗಿದೆ. ಹೋಟೆಲ್‌ ಮಾಡುತ್ತೇವೆ ಎಂದು ಪರವಾನಗಿ ಪಡೆದು ಅಕ್ರಮವಾಗಿ ಬಾರ್‌ ನಡೆಸಲಾಗುತ್ತಿದೆ ಎಂದು ಗ್ರಾಮಸ್ಥರು ಕಳೆದ ಒಂದು ತಿಂಗಳಿನಿಂದ ಸತತ ಪ್ರತಿಭಟನೆ ನಡೆಸುತ್ತಾ ಬಂದಿದ್ದರು. ಈ ಬಗ್ಗೆ ಚಿಕ್ಕಮಗಳೂರು ಜಿಲ್ಲಾಧಿಕಾರಿಗೂ ಮನವಿ ಪತ್ರವನ್ನು ಸಲ್ಲಿಸಲಾಗಿತ್ತು.

“ಈ ನಡುವೆ ಬಾರ್‌ ಓಪನ್‌ ಮಾಡಿದ್ದನ್ನು ವಿರೋಧಿಸಿ ಮೂವರು ಮಹಿಳೆಯರು ಇದನ್ನು ಪ್ರಶ್ನಿಸಿ ಬಾರ್ ಒಳಗೆ ಹೋಗಿದ್ದರು. ಆ ಸಮಯದಲ್ಲಿ ಬಾರ್‌ನಲ್ಲಿದ್ದವರು ಕುಡಿದ ಅಮಲಿನಲ್ಲಿ ಮಹಿಳೆಯರ ಮೇಲೆ ಹಲ್ಲೆ ಮಾಡಿದ್ದಾರೆ. ಮಹಿಳೆಯರನ್ನು ಅವಾಚ್ಯ ಪದಗಳಲ್ಲಿ ನಿಂದಿಸಿ, ಕಿರುಕುಳ ನೀಡಿದ್ದಾರೆ. ಈ ಘಟನೆಯಿಂದ ಆಕ್ರೋಶಗೊಂಡ ಗ್ರಾಮದ ಮಹಿಳೆಯರು ಹಾಗೂ ಪುರುಷರು ಬಾರ್‌ಗೆ ನುಗ್ಗಿ ಪೀಠೋಪಕರಣಗಳನ್ನು ಮುರಿದುಹಾಕಿದ್ದರು. ನಂತರದಲ್ಲಿ ಕಿರುಕುಳಕ್ಕೊಳಗಾಗಿದ್ದ ಮಹಿಳೆಯರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು” ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿರಿ: ಅಡಿ ಇಡದಿರಿ ಗುಡಿಯೊಳಗೆ…! ದೇವಸ್ಥಾನ ಪ್ರವೇಶ ನಿಷೇಧ ಮತ್ತು ವಿರೋಧ

“ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯರನ್ನು ವಿಚಾರಣೆಗಾಗಿ ಭಾನುವಾರ ಪೊಲೀಸ್‌ ಠಾಣೆಗೆ ಕರೆದೊಯ್ಯಲಾಗಿತ್ತು. ಮಾರನೇ ದಿನ ಆರು ಗಂಟೆಗೆ ಗ್ರಾಮಕ್ಕೆ ಬಂದ ಪಿಎಸ್‌ಐ ರಮ್ಯಾ ಹಾಗೂ ಸಿಬ್ಬಂದಿ ಗ್ರಾಮದಲ್ಲಿ ಮನೆಯೊಂದರ ಮೇಲಿನ ಹೆಂಚುಗಳನ್ನು ಒಡೆದುಹಾಕಿ, ಮನೆಯೊಳಗೆ ಬಾಗಿಲು ಮುರಿದು,  ನುಗ್ಗಿ ಮೂರು ಮಂದಿ ಮಹಿಳೆಯರು ಸೇರಿದಂತೆ ಐದು ಜನರನ್ನು ಪೊಲೀಸ್‌ ಠಾಣೆಗೆ ಎಳೆದೊಯ್ದರು” ಎಂದು ಗ್ರಾಮದ ಹಲವು ಮುಖಂಡರು ಆರೋಪಿಸಿದ್ದರು. ಈ ಕುರಿತಂತೆ ವಿಡಿಯೊ ಕೂಡ ವೈರಲ್‌ ಆಗಿತ್ತು. ಬಾಗಿಲು ಹಾಗೂ ಹೆಂಚು ದ್ವಂಸ ಆಗಿರುವುದನ್ನು ಈ ವಿಡಿಯೊದಲ್ಲಿ ಕಾಣಬಹುದಾಗಿತ್ತು.

ಗ್ರಾಮಸ್ಥರೆಲ್ಲರೂ ಕೂಡಿ ಕಡೂರು ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಬಾರ್‌ ಮಾಲೀಕರು ಕೂಡ ಬಾರ್‌ನಲ್ಲಿ ನಡೆದಿದ್ದರ ಬಗ್ಗೆ ಪ್ರತಿದೂರು ನೀಡಿದ್ದರು. ಬಾರ್‌ ಮಾಲೀಕರ ದೂರಿನ ಆಧಾರದಲ್ಲಿ 41 ಜನರ ಮೇಲೆ ಎಫ್‌ಐಆರ್‌ ದಾಖಲಾಗಿದ್ದು ಐಪಿಸಿ ಸೆಕ್ಷನ್ 143, 144, 147, 148, 323, 324, 504, 506, 447, 427, 114, 149 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ಘಟನೆ ನಂತರ ಮುಸ್ಲಾಪುರ ಗ್ರಾಮದಲ್ಲಿ ಭಯದ ವಾತಾವರಣ ಉಂಟಾಗಿದ್ದು, ಪ್ರಕರಣದಲ್ಲಿ ಭಾಗಿಯಾದ 41 ಆರೋಪಿಗಳಲ್ಲಿ 17 ಮಹಿಳೆಯರಿದ್ದಾರೆ. ಐವರನ್ನು ಈಗಾಗಲೇ ಬಂಧಿಸಲಾಗಿದ್ದು, ಬಂಧನಕ್ಕೆ ಹೆದರಿ ಇನ್ನುಳಿದವರು ಊರು ತೊರೆದಿದ್ದಾರೆ ಎಂದು ‘ನಾನುಗೌರಿ.ಕಾಂ’ಗೆ ತಿಳಿದುಬಂದಿದೆ.

“ಕೃಷಿ ಚಟುವಟಿಕೆಗಳು ನಡೆಯಬೇಕಿದೆ. ಜನರು ಪೊಲೀಸರಿಗೆ ಹೆದರಿ ಊರು ಬಿಟ್ಟು ಹೋಗಿದ್ದಾರೆ. ಹೋರಾಟ ಹಿಂಸೆಗೆ ತಿರುಗಿದ್ದು ವಿಷಾದನೀಯ. ಸ್ಥಳೀಯ ಜನರ ಆಗ್ರಹಕ್ಕೆ ಬೆಲೆ ಇಲ್ಲದಿದ್ದಾಗ, ಈ ಘಟನೆ ನಡೆದಿದೆ” ಎನ್ನುತ್ತಾರೆ ಗ್ರಾಮದ ಕೆಲವು ಮುಖಂಡರು.

ಜನರ ವಿರುದ್ಧವಾಗಿ ಹೋಟೆಲ್‌ ಪರವಾನಗಿ ಬಳಸಿಕೊಂಡು ತೆರೆಯಲಾಗಿರುವ ಬಾರ್‌ನಲ್ಲಿ ಐದು ಜನರ ಸಹಭಾಗಿತ್ವವಿದ್ದು, ಅದರಲ್ಲಿ ಒಬ್ಬರು ಸರ್ಕಾರಿ ಅಧಿಕಾರಿಯೊಬ್ಬರ ಪತ್ನಿಯು ಇದ್ದಾರೆ ಎಂಬ ಆರೋಪಗಳಿವೆ. ಇದೇನೇ ಇರಲಿ, ನಮ್ಮೂರಿಗೆ ಬಾರ್‌ ಬೇಡ, ಊರಿನಲ್ಲಿ ಬಾರ್‌ ತೆರೆದರೆ ಇಡೀ ಊರಿನ ಸ್ವಾಸ್ಥ್ಯ ಹಾಳಾಗುತ್ತದೆ ಎಂದು ದುಡಿವ ಮಹಿಳೆಯರು ಸತತ ಒಂದು ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿದ್ದಾಗಲೂ, ಈ ಮಹಿಳೆಯರ ಅಳಲನ್ನು ಕೇಳದ ಸರ್ಕಾರವು ಜನವಿರೋಧಿಯಾಗಿದೆ ಎಂಬುದು ಜನರ ಅಭಿಪ್ರಾಯ.

ಕುಡಿತದಿಂದಾಗಿ ಮುಂದಾಗಬಹುದಾದ ಅನಾಹುತಗಳನ್ನು ತಡೆಯುವ ನಿಟ್ಟಿನಲ್ಲಿ ಅಪಾಯವನ್ನು ಲೆಕ್ಕಿಸದೇ ಗ್ರಾಮದ ಮಹಿಳೆಯರು ಇಟ್ಟಿರುವ ಹೆಜ್ಜೆಗೆ ಪರ ವಿರೋಧದ ಅಭಿಪ್ರಾಯಗಳು ಬಂದಿವೆ. ದಾಳಿಗೆ ಪ್ರತಿದಾಳಿ ಎಂದು ಕೆಲವರು ಸಮರ್ಥಿಸಿದ್ದಾರೆ. ಕಾನೂನು ವಿರೋಧಿಯಾಗಿ ದಾಳಿ ಮಾಡಬಾರದಿತ್ತು ಎಂಬ ಅಭಿಪ್ರಾಯಗಳನ್ನು ಜನರು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಕ್ತಪಡಿಸಿದ್ದಾರೆ. ಪೊಲೀಸರು ದಾಳಿ ಮಾಡಿ ಮನೆಯ ಬಾಗಿಲು, ಹೆಂಚು ಒಡೆದಿದ್ದಾರೆ ಎಂಬುದಕ್ಕೂ ಟೀಕೆಗಳು ವ್ಯಕ್ತವಾಗಿವೆ. ಆದರೆ ಪೊಲೀಸರು ಈ ಆರೋಪವನ್ನು ನಿರಾಕರಿಸಿದ್ದಾರೆ.

ಇದನ್ನೂ ಓದಿರಿ: ಬಾಗಲೂರು ಗ್ರಾಪಂ: ದಲಿತ ಅಧ್ಯಕ್ಷೆ ಕುಳಿತ ಕುರ್ಚಿ ಗೋಮೂತ್ರದಿಂದ ಶುದ್ಧೀಕರಣ: ಬಿಜೆಪಿ ದೂರು

ಪಿಎಸ್‌ಐ ರಮ್ಯಾ ಹೇಳುವುದೇನು?

ನಾನುಗೌರಿ.ಕಾಂ ಜೊತೆ ಮಾತನಾಡಿದ ಕಡೂರು ಪಿಎಸ್‌ಐ ರಮ್ಯಾ, “ಐದು ಜನರನ್ನು ಬಂಧಿಸಲಾಗಿದೆ. ಉಳಿದವರು ಸಿಕ್ಕಿಲ್ಲ. ಪೊಲೀಸರು ದೌರ್ಜನ್ಯ ಎಸಗಿಲ್ಲ. ಯಾರದೇ ಮನೆಯ ಬಾಗಿಲು, ಹೆಂಚನ್ನು ನಾವು ಒಡೆದಿಲ್ಲ. ಪೊಲೀಸರ ಮೇಲೆ ಆರೋಪ ಹೊರಿಸಲು ಮಾಡಿರುವ ಸಂಚಿನ ಕುರಿತು ಮಾತನಾಡಿರುವ ಆಡಿಯೊ ನಮಗೆ ಲಭ್ಯವಾಗಿದೆ” ಎಂದರು.

ಪಿಎಸ್‌ಐ ರಮ್ಯಾ

“ಬಾಗಿಲನ್ನು ಎತ್ತಿದರೆ ಅದಾಗಿಯೇ ತೆರೆದುಕೊಳ್ಳುತ್ತದೆ. ಇದರ ವಿಡಿಯೊವನ್ನು ಜೆಸಿಬಿ ಮಂಜ ಮಾಡಿ, ಎಂಟು ಹತ್ತು ಹೆಂಚು ಒಡೆದು ಹಾಕಿ ಘಟನೆಯನ್ನು ಪೊಲೀಸರ ಮೇಲೆ ರೂಪಿಸಲಾಗಿದೆ” ಎಂದು ಇಬ್ಬರು ವ್ಯಕ್ತಿಗಳು ಮಾತನಾಡಿರುವ ಆಡಿಯೊದಲ್ಲಿನ ಸಾರಾಂಶ. ಆದರೆ ಆ ಆಡಿಯೊದಲ್ಲಿ ಮಾತನಾಡಿದವರು ಯಾರೆಂಬ ಮಾಹಿತಿ ಸಿಕ್ಕಿಲ್ಲ. ಉದ್ದೇಶಪೂರ್ವಕವಾಗಿಯೇ ಈ ಆಡಿಯೊವನ್ನು ಮಾಡಿ ಹರಿಬಿಡಲಾಗಿದೆಯೇ, ಪೊಲೀಸರಿಂದ ದೌರ್ಜನ್ಯವಾಗಿಲ್ಲವೆ ಎಂಬುದು ತನಿಖೆಗಳಿಂದ ತಿಳಿಯಬೇಕಿದೆ.

“ಹೆಂಚು ತೆಗೆದು ಒಳಗೆ ನುಗ್ಗುವಷ್ಟು ಕ್ರೂರಿಗಳು ನಮ್ಮಲ್ಲಿ ಯಾರೂ ಇಲ್ಲ. ಬಾರ್ ಇರಬೇಕೋ, ಬೇಡವೋ ಎಂಬುದನ್ನು ಸಂಬಂಧಪಟ್ಟವರು ನಿರ್ಧರಿಸುತ್ತಾರೆ. ಹಲ್ಲೆ ನಡೆಸಿದ್ದಾರೆಂದು ದೂರು ಬಂದಿದೆ. ಸಾಕ್ಷ್ಯಾಧಾರಗಳಿವೆ. ಪ್ರಕರಣ ದಾಖಲಿಸಿದ್ದೇವೆ. ಬಾರ್‌ ಪರವಾಗಿ ಪೊಲೀಸರು ನಿಲ್ಲಲು ಆ ಬಾರ್‌‌ ನನ್ನದೂ ಅಲ್ಲ, ನಮ್ಮಪ್ಪನ್ನದ್ದೂ ಅಲ್ಲ. ಯಾವನೋ ಬಾರ್‌ ಮಾಡಿಕೊಂಡಿದ್ದಾನೆ. ಅದಕ್ಕೂ ನನಗೂ ಸಂಬಂಧವಿಲ್ಲ. ಜನರು ಬಾರ್‌ ವಿರುದ್ಧ ಹೋರಾಟ ಮಾಡಿದಾಗ ನಾವು ರಕ್ಷಣೆ ನೀಡಿದ್ದೇವೆ. ಒಂದು ವಾರ ಬಂದೋಬಸ್ತ್‌ ಮಾಡಿದ್ದೇವೆ. ಬಾರ್‌ ಪರವಾಗಿದ್ದರೆ ನಾವು ಅಂದೇ ಪ್ರಕರಣ ದಾಖಲು ಮಾಡಬಹುದಿಲ್ಲತ್ತ?” ಎಂದು ಕೇಳುತ್ತಾರೆ ಪಿಎಸ್‌ಐ ರಮ್ಯಾ.

“ಡಿಸಿಗೆ ಮನವಿ ಕೊಡಿ, ಅಲ್ಲಿ ಪರಿಹಾರ ಸಿಗುತ್ತೆ. ಇಲ್ಲಿ ಪ್ರತಿಭಟನೆ ನಡೆಸಿದರೆ ಪರಿಹಾರ ಆಗಲ್ಲ ಎಂದು ನಾವೇ ಸಲಹೆ ನೀಡಿದ್ದೇವೆ. ಜಿಲ್ಲಾ ಕೇಂದ್ರ ಚಿಕ್ಕಮಗಳೂರಿಗೆ ಹೋಗಿ ಪ್ರತಿಭಟನೆ ನಡೆಸಿದ್ದಾರೆ. ಆದರೆ ಬಾರ್‌ ಕಾನೂನಾತ್ಮಕವಾಗಿ ಇದೆ ಅನಿಸುತ್ತೆ. ಯಾವುದೇ ಕ್ರಮಗಳನ್ನು ಸಂಬಂಧಪಟ್ಟವರು ಜರುಗಿಸಿಲ್ಲ. ಈಗ‌ ಹೋಟೆಲ್ ತೆರೆದಿದ್ದಾರೆ. ಜನರು ದಾಳಿ ಮಾಡಿದ್ದಾರೆ. ಪೊಲೀಸ್‌ ಅರೆಸ್ಟ್‌ ಮಾಡಿದ್ದನ್ನೇ ದೌರ್ಜನ್ಯ ಎನ್ನಲು ಆಗುತ್ತದೆಯೇ? ಪ್ರಕರಣ ದಾಖಲಾದ ಮೇಲೆ ಬಂಧನದ ಭೀತಿಯಲ್ಲಿ ಕೆಲವರು ತಪ್ಪಿಸಿಕೊಂಡಿದ್ದಾರೆ. ಅಂದು ಬಂಧಿಸಲು ಹೋದಾಗ ಬಾಗಿಲು ಬಡಿದಿದ್ದೇವೆ. ಅವರೇ ಡೋರ್‌ ಓಪನ್‌ ಮಾಡಿದ್ದಾರೆ. ಮರು ಮಾತನಾಡದೆ ನಮ್ಮೊಂದಿಗೆ ಬಂದಿದ್ದಾರೆ. ಡೋರ್‌ ಆಗಲಿ, ಹೆಂಚು ಒಡೆದು, ಬಾಗಿಲು ಒಡೆದು ಒಳಗೆ ಹೋಗುವಷ್ಟು ನಾವು ಕ್ರೂರಿಗಳಲ್ಲ” ಎಂಬುದು ಪಿಎಸ್‌ಐ ಪ್ರತಿಕ್ರಿಯೆ.

“ಬಾರ್‌‌ನಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ನಡೆದಾಗ ಈ ರೀತಿಯ ಗಲಾಟೆಯಾಗಿದೆ ಎಂದು ದೂರು ನೀಡಿದ್ದಾರೆ. ಮಹಿಳೆಯರ ಮೇಲೆ ದೌರ್ಜನ್ಯ ಎಸಗಿದವರನ್ನು ನೀವು ಬಂದಿಸಿದ್ದೀರಾ?” ಎಂದು ಪ್ರಶ್ನಿಸಿದಾಗ, “ದೌರ್ಜನ್ಯಕ್ಕೆ ಒಳಗಾಗಿದವರು ಬಾರ್‌ ಕೆಲಸಗಾರರು ಎಂಬುದಕ್ಕೆ ಸಾಕ್ಷಿಗಳಿವೆ. ಆದರೆ ಬಾರ್‌ನವರಿಂದ ಆಗಿದೆ ಎನ್ನಲಾದ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಯಾವುದೇ ಸಾಕ್ಷ್ಯಾಧಾರಗಳಿಲ್ಲ. ಸಿಕ್ಕಿರುವ ಸಾಕ್ಷಿಗಳ ಮೇಲೆ ಕ್ರಮ ಜರುಗಿಸಲಾಗಿದೆ” ಎಂದು ಪಿಎಸ್‌ಐ ತಿಳಿಸಿದರು.


ಇದನ್ನೂ ಓದಿರಿ: ಮಂಗಳೂರಿನಲ್ಲಿ ಮತೀಯ ಗೂಂಡಾಗಿರಿ: ಅನ್ಯಧರ್ಮದ ಗೆಳತಿಯನ್ನು ಡ್ರಾಪ್ ಮಾಡುತ್ತಿದ್ದ ಮುಸ್ಲಿಂ ಯುವಕನ ಮೇಲೆ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...