Homeಕರ್ನಾಟಕಮುಸ್ಲಾಪುರ ಮದ್ಯದಂಗಡಿ ಪ್ರಕರಣ; ಬಂಧನ ಭೀತಿಯಲ್ಲಿ ಊರು ತೊರೆದ ಗ್ರಾಮಸ್ಥರು!

ಮುಸ್ಲಾಪುರ ಮದ್ಯದಂಗಡಿ ಪ್ರಕರಣ; ಬಂಧನ ಭೀತಿಯಲ್ಲಿ ಊರು ತೊರೆದ ಗ್ರಾಮಸ್ಥರು!

ಗ್ರಾಮದಲ್ಲಿ ತೆರೆದ ಬಾರ್‌ ಮುಚ್ಚುವಂತೆ ಮಹಿಳೆಯರು ಪ್ರಶ್ನಿಸಿದಾಗ ಗಲಾಟೆ ನಡೆದಿದೆ. 41 ಜನರ ಮೇಲೆ ಪ್ರಕರಣ ದಾಖಲಾಗಿದ್ದು, ಪೊಲೀಸರು ದೌರ್ಜನ್ಯ ಎಸಗಿದ್ದಾರೆ ಎಂದೂ ಆರೋಪಿಸಲಾಗಿದೆ.

- Advertisement -
- Advertisement -

ಕಡೂರು ತಾಲ್ಲೂಕಿನ ಮುಸ್ಲಾಪುರ ಗ್ರಾಮದಲ್ಲಿ ಬಾರ್‌ ತೆರೆದಿದ್ದಕ್ಕೆ ಆಕ್ರೋಶಗೊಂಡ ಗ್ರಾಮದ ಮಹಿಳೆಯರು ನವೆಂಬರ್‌‌ 12ರಂದು ಬಾರ್‌ಗೆ ನುಗ್ಗಿ ಪೀಠೋಪಕರಣಗಳನ್ನೆಲ್ಲ ಮುರಿದುಹಾಕಿದ ಸುದ್ದಿ, ವೀಡಿಯೋ ಸಾಮಾಜಿಕ ಜಾಲತಾಣವೂ ಸೇರಿದಂತೆ ಮಾಧ್ಯಮಗಳಲ್ಲಿ ವರದಿಯಾಗಿತ್ತು.

ಮುಸ್ಲಾಪುರ ನಾಲ್ಕೈದು ಸಮುದಾಯಗಳ ಸುಮಾರು 150 ಮನೆಗಳಿರುವ ಪುಟ್ಟ ಗ್ರಾಮ. ಕೃಷಿ ಭೂಮಿಯಲ್ಲಿ ಕೂಲಿ ಮಾಡುವುದು ಇಲ್ಲಿನ ಬಹುತೇಕ ಜನರ ಬದುಕಾಗಿತ್ತು. ಹೀಗೆ ಕೂಲಿ ಮಾಡುತ್ತಾ ಜೀವನ ಸಾಗಿಸುತ್ತಿದ್ದ ಊರಿನಲ್ಲಿ ಹೋಟೆಲ್‌ ಹೆಸರಿನಲ್ಲಿ ಬಾರ್‌ ಅಂಡ್‌ ರೆಸ್ಟೋರೆಂಟ್‌ ಒಂದನ್ನು ಆರಂಭ ಮಾಡಲಾಯಿತು.
ಆರಂಭದಿಂದಲೇ ಇದಕ್ಕೆ ಗ್ರಾಮಸ್ಥರಿಂದ ಭಾರೀ ವಿರೋಧ ವ್ಯಕ್ತವಾಗಿತ್ತು. ಈ ಬಾರ್‌ ಇರುವ ಸಮೀಪದಲ್ಲಿಯೇ ಹೈಸ್ಕೂಲ್‌ ವಿದ್ಯಾರ್ಥಿಗಳಿಗಾಗಿ ಹಾಸ್ಟೆಲ್‌ಗಳಿದ್ದು, ಹತ್ತಿರದಲ್ಲಿಯೇ ಮದಗದಕೆರೆ ಹಾಗೂ ಚಾನೆಲ್‌ ಇದೆ. ಗ್ರಾಮದಲ್ಲಿ ಬಾರ್‌ ತೆರೆದರೆ ಕೂಲಿ ಕಾರ್ಮಿಕರು ದುಡಿದ ಹಣವನ್ನು ಕುಡಿಯುವುದಕ್ಕೆ ವ್ಯಯಿಸುತ್ತಾರೆ ಎನ್ನುವ ಮಹಿಳೆಯರು, ನಮ್ಮೂರಿನ ಸ್ವಾಸ್ಥ್ಯಕ್ಕಾಗಿ ನಮ್ಮೂರಿನಲ್ಲಿ ಬಾರ್‌ ಬೇಡ ಎಂದು ಅಲವತ್ತುಕೊಂಡಿದ್ದರು.
ಎಮ್ಮೆದೊಡ್ಡಿ ಗ್ರಾಮ ಪಂಚಾಯಿತಿಯಿಂದಲೂ ಬಾರ್‌ ಅಂಡ್‌ ರೆಸ್ಟೋರೆಂಟ್‌ ತೆರೆಯದಂತೆ ನಿರ್ಣಯ ಹೊರಡಿಸಿದ್ದಾಗಲೂ ಕಳ್ಳದಾರಿಯಿಂದ ಬಾರ್‌ ತೆರೆಯಲು ಪ್ರಯತ್ನಿಸಲಾಗಿದೆ ಎಂದು ದೂರಲಾಗಿದೆ. ಹೋಟೆಲ್‌ ಮಾಡುತ್ತೇವೆ ಎಂದು ಪರವಾನಗಿ ಪಡೆದು ಅಕ್ರಮವಾಗಿ ಬಾರ್‌ ನಡೆಸಲಾಗುತ್ತಿದೆ ಎಂದು ಗ್ರಾಮಸ್ಥರು ಕಳೆದ ಒಂದು ತಿಂಗಳಿನಿಂದ ಸತತ ಪ್ರತಿಭಟನೆ ನಡೆಸುತ್ತಾ ಬಂದಿದ್ದರು. ಈ ಬಗ್ಗೆ ಚಿಕ್ಕಮಗಳೂರು ಜಿಲ್ಲಾಧಿಕಾರಿಗೂ ಮನವಿ ಪತ್ರವನ್ನು ಸಲ್ಲಿಸಲಾಗಿತ್ತು.

“ಈ ನಡುವೆ ಬಾರ್‌ ಓಪನ್‌ ಮಾಡಿದ್ದನ್ನು ವಿರೋಧಿಸಿ ಮೂವರು ಮಹಿಳೆಯರು ಇದನ್ನು ಪ್ರಶ್ನಿಸಿ ಬಾರ್ ಒಳಗೆ ಹೋಗಿದ್ದರು. ಆ ಸಮಯದಲ್ಲಿ ಬಾರ್‌ನಲ್ಲಿದ್ದವರು ಕುಡಿದ ಅಮಲಿನಲ್ಲಿ ಮಹಿಳೆಯರ ಮೇಲೆ ಹಲ್ಲೆ ಮಾಡಿದ್ದಾರೆ. ಮಹಿಳೆಯರನ್ನು ಅವಾಚ್ಯ ಪದಗಳಲ್ಲಿ ನಿಂದಿಸಿ, ಕಿರುಕುಳ ನೀಡಿದ್ದಾರೆ. ಈ ಘಟನೆಯಿಂದ ಆಕ್ರೋಶಗೊಂಡ ಗ್ರಾಮದ ಮಹಿಳೆಯರು ಹಾಗೂ ಪುರುಷರು ಬಾರ್‌ಗೆ ನುಗ್ಗಿ ಪೀಠೋಪಕರಣಗಳನ್ನು ಮುರಿದುಹಾಕಿದ್ದರು. ನಂತರದಲ್ಲಿ ಕಿರುಕುಳಕ್ಕೊಳಗಾಗಿದ್ದ ಮಹಿಳೆಯರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು” ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿರಿ: ಅಡಿ ಇಡದಿರಿ ಗುಡಿಯೊಳಗೆ…! ದೇವಸ್ಥಾನ ಪ್ರವೇಶ ನಿಷೇಧ ಮತ್ತು ವಿರೋಧ

“ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯರನ್ನು ವಿಚಾರಣೆಗಾಗಿ ಭಾನುವಾರ ಪೊಲೀಸ್‌ ಠಾಣೆಗೆ ಕರೆದೊಯ್ಯಲಾಗಿತ್ತು. ಮಾರನೇ ದಿನ ಆರು ಗಂಟೆಗೆ ಗ್ರಾಮಕ್ಕೆ ಬಂದ ಪಿಎಸ್‌ಐ ರಮ್ಯಾ ಹಾಗೂ ಸಿಬ್ಬಂದಿ ಗ್ರಾಮದಲ್ಲಿ ಮನೆಯೊಂದರ ಮೇಲಿನ ಹೆಂಚುಗಳನ್ನು ಒಡೆದುಹಾಕಿ, ಮನೆಯೊಳಗೆ ಬಾಗಿಲು ಮುರಿದು,  ನುಗ್ಗಿ ಮೂರು ಮಂದಿ ಮಹಿಳೆಯರು ಸೇರಿದಂತೆ ಐದು ಜನರನ್ನು ಪೊಲೀಸ್‌ ಠಾಣೆಗೆ ಎಳೆದೊಯ್ದರು” ಎಂದು ಗ್ರಾಮದ ಹಲವು ಮುಖಂಡರು ಆರೋಪಿಸಿದ್ದರು. ಈ ಕುರಿತಂತೆ ವಿಡಿಯೊ ಕೂಡ ವೈರಲ್‌ ಆಗಿತ್ತು. ಬಾಗಿಲು ಹಾಗೂ ಹೆಂಚು ದ್ವಂಸ ಆಗಿರುವುದನ್ನು ಈ ವಿಡಿಯೊದಲ್ಲಿ ಕಾಣಬಹುದಾಗಿತ್ತು.

ಗ್ರಾಮಸ್ಥರೆಲ್ಲರೂ ಕೂಡಿ ಕಡೂರು ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಬಾರ್‌ ಮಾಲೀಕರು ಕೂಡ ಬಾರ್‌ನಲ್ಲಿ ನಡೆದಿದ್ದರ ಬಗ್ಗೆ ಪ್ರತಿದೂರು ನೀಡಿದ್ದರು. ಬಾರ್‌ ಮಾಲೀಕರ ದೂರಿನ ಆಧಾರದಲ್ಲಿ 41 ಜನರ ಮೇಲೆ ಎಫ್‌ಐಆರ್‌ ದಾಖಲಾಗಿದ್ದು ಐಪಿಸಿ ಸೆಕ್ಷನ್ 143, 144, 147, 148, 323, 324, 504, 506, 447, 427, 114, 149 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ಘಟನೆ ನಂತರ ಮುಸ್ಲಾಪುರ ಗ್ರಾಮದಲ್ಲಿ ಭಯದ ವಾತಾವರಣ ಉಂಟಾಗಿದ್ದು, ಪ್ರಕರಣದಲ್ಲಿ ಭಾಗಿಯಾದ 41 ಆರೋಪಿಗಳಲ್ಲಿ 17 ಮಹಿಳೆಯರಿದ್ದಾರೆ. ಐವರನ್ನು ಈಗಾಗಲೇ ಬಂಧಿಸಲಾಗಿದ್ದು, ಬಂಧನಕ್ಕೆ ಹೆದರಿ ಇನ್ನುಳಿದವರು ಊರು ತೊರೆದಿದ್ದಾರೆ ಎಂದು ‘ನಾನುಗೌರಿ.ಕಾಂ’ಗೆ ತಿಳಿದುಬಂದಿದೆ.

“ಕೃಷಿ ಚಟುವಟಿಕೆಗಳು ನಡೆಯಬೇಕಿದೆ. ಜನರು ಪೊಲೀಸರಿಗೆ ಹೆದರಿ ಊರು ಬಿಟ್ಟು ಹೋಗಿದ್ದಾರೆ. ಹೋರಾಟ ಹಿಂಸೆಗೆ ತಿರುಗಿದ್ದು ವಿಷಾದನೀಯ. ಸ್ಥಳೀಯ ಜನರ ಆಗ್ರಹಕ್ಕೆ ಬೆಲೆ ಇಲ್ಲದಿದ್ದಾಗ, ಈ ಘಟನೆ ನಡೆದಿದೆ” ಎನ್ನುತ್ತಾರೆ ಗ್ರಾಮದ ಕೆಲವು ಮುಖಂಡರು.

ಜನರ ವಿರುದ್ಧವಾಗಿ ಹೋಟೆಲ್‌ ಪರವಾನಗಿ ಬಳಸಿಕೊಂಡು ತೆರೆಯಲಾಗಿರುವ ಬಾರ್‌ನಲ್ಲಿ ಐದು ಜನರ ಸಹಭಾಗಿತ್ವವಿದ್ದು, ಅದರಲ್ಲಿ ಒಬ್ಬರು ಸರ್ಕಾರಿ ಅಧಿಕಾರಿಯೊಬ್ಬರ ಪತ್ನಿಯು ಇದ್ದಾರೆ ಎಂಬ ಆರೋಪಗಳಿವೆ. ಇದೇನೇ ಇರಲಿ, ನಮ್ಮೂರಿಗೆ ಬಾರ್‌ ಬೇಡ, ಊರಿನಲ್ಲಿ ಬಾರ್‌ ತೆರೆದರೆ ಇಡೀ ಊರಿನ ಸ್ವಾಸ್ಥ್ಯ ಹಾಳಾಗುತ್ತದೆ ಎಂದು ದುಡಿವ ಮಹಿಳೆಯರು ಸತತ ಒಂದು ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿದ್ದಾಗಲೂ, ಈ ಮಹಿಳೆಯರ ಅಳಲನ್ನು ಕೇಳದ ಸರ್ಕಾರವು ಜನವಿರೋಧಿಯಾಗಿದೆ ಎಂಬುದು ಜನರ ಅಭಿಪ್ರಾಯ.

ಕುಡಿತದಿಂದಾಗಿ ಮುಂದಾಗಬಹುದಾದ ಅನಾಹುತಗಳನ್ನು ತಡೆಯುವ ನಿಟ್ಟಿನಲ್ಲಿ ಅಪಾಯವನ್ನು ಲೆಕ್ಕಿಸದೇ ಗ್ರಾಮದ ಮಹಿಳೆಯರು ಇಟ್ಟಿರುವ ಹೆಜ್ಜೆಗೆ ಪರ ವಿರೋಧದ ಅಭಿಪ್ರಾಯಗಳು ಬಂದಿವೆ. ದಾಳಿಗೆ ಪ್ರತಿದಾಳಿ ಎಂದು ಕೆಲವರು ಸಮರ್ಥಿಸಿದ್ದಾರೆ. ಕಾನೂನು ವಿರೋಧಿಯಾಗಿ ದಾಳಿ ಮಾಡಬಾರದಿತ್ತು ಎಂಬ ಅಭಿಪ್ರಾಯಗಳನ್ನು ಜನರು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಕ್ತಪಡಿಸಿದ್ದಾರೆ. ಪೊಲೀಸರು ದಾಳಿ ಮಾಡಿ ಮನೆಯ ಬಾಗಿಲು, ಹೆಂಚು ಒಡೆದಿದ್ದಾರೆ ಎಂಬುದಕ್ಕೂ ಟೀಕೆಗಳು ವ್ಯಕ್ತವಾಗಿವೆ. ಆದರೆ ಪೊಲೀಸರು ಈ ಆರೋಪವನ್ನು ನಿರಾಕರಿಸಿದ್ದಾರೆ.

ಇದನ್ನೂ ಓದಿರಿ: ಬಾಗಲೂರು ಗ್ರಾಪಂ: ದಲಿತ ಅಧ್ಯಕ್ಷೆ ಕುಳಿತ ಕುರ್ಚಿ ಗೋಮೂತ್ರದಿಂದ ಶುದ್ಧೀಕರಣ: ಬಿಜೆಪಿ ದೂರು

ಪಿಎಸ್‌ಐ ರಮ್ಯಾ ಹೇಳುವುದೇನು?

ನಾನುಗೌರಿ.ಕಾಂ ಜೊತೆ ಮಾತನಾಡಿದ ಕಡೂರು ಪಿಎಸ್‌ಐ ರಮ್ಯಾ, “ಐದು ಜನರನ್ನು ಬಂಧಿಸಲಾಗಿದೆ. ಉಳಿದವರು ಸಿಕ್ಕಿಲ್ಲ. ಪೊಲೀಸರು ದೌರ್ಜನ್ಯ ಎಸಗಿಲ್ಲ. ಯಾರದೇ ಮನೆಯ ಬಾಗಿಲು, ಹೆಂಚನ್ನು ನಾವು ಒಡೆದಿಲ್ಲ. ಪೊಲೀಸರ ಮೇಲೆ ಆರೋಪ ಹೊರಿಸಲು ಮಾಡಿರುವ ಸಂಚಿನ ಕುರಿತು ಮಾತನಾಡಿರುವ ಆಡಿಯೊ ನಮಗೆ ಲಭ್ಯವಾಗಿದೆ” ಎಂದರು.

ಪಿಎಸ್‌ಐ ರಮ್ಯಾ

“ಬಾಗಿಲನ್ನು ಎತ್ತಿದರೆ ಅದಾಗಿಯೇ ತೆರೆದುಕೊಳ್ಳುತ್ತದೆ. ಇದರ ವಿಡಿಯೊವನ್ನು ಜೆಸಿಬಿ ಮಂಜ ಮಾಡಿ, ಎಂಟು ಹತ್ತು ಹೆಂಚು ಒಡೆದು ಹಾಕಿ ಘಟನೆಯನ್ನು ಪೊಲೀಸರ ಮೇಲೆ ರೂಪಿಸಲಾಗಿದೆ” ಎಂದು ಇಬ್ಬರು ವ್ಯಕ್ತಿಗಳು ಮಾತನಾಡಿರುವ ಆಡಿಯೊದಲ್ಲಿನ ಸಾರಾಂಶ. ಆದರೆ ಆ ಆಡಿಯೊದಲ್ಲಿ ಮಾತನಾಡಿದವರು ಯಾರೆಂಬ ಮಾಹಿತಿ ಸಿಕ್ಕಿಲ್ಲ. ಉದ್ದೇಶಪೂರ್ವಕವಾಗಿಯೇ ಈ ಆಡಿಯೊವನ್ನು ಮಾಡಿ ಹರಿಬಿಡಲಾಗಿದೆಯೇ, ಪೊಲೀಸರಿಂದ ದೌರ್ಜನ್ಯವಾಗಿಲ್ಲವೆ ಎಂಬುದು ತನಿಖೆಗಳಿಂದ ತಿಳಿಯಬೇಕಿದೆ.

“ಹೆಂಚು ತೆಗೆದು ಒಳಗೆ ನುಗ್ಗುವಷ್ಟು ಕ್ರೂರಿಗಳು ನಮ್ಮಲ್ಲಿ ಯಾರೂ ಇಲ್ಲ. ಬಾರ್ ಇರಬೇಕೋ, ಬೇಡವೋ ಎಂಬುದನ್ನು ಸಂಬಂಧಪಟ್ಟವರು ನಿರ್ಧರಿಸುತ್ತಾರೆ. ಹಲ್ಲೆ ನಡೆಸಿದ್ದಾರೆಂದು ದೂರು ಬಂದಿದೆ. ಸಾಕ್ಷ್ಯಾಧಾರಗಳಿವೆ. ಪ್ರಕರಣ ದಾಖಲಿಸಿದ್ದೇವೆ. ಬಾರ್‌ ಪರವಾಗಿ ಪೊಲೀಸರು ನಿಲ್ಲಲು ಆ ಬಾರ್‌‌ ನನ್ನದೂ ಅಲ್ಲ, ನಮ್ಮಪ್ಪನ್ನದ್ದೂ ಅಲ್ಲ. ಯಾವನೋ ಬಾರ್‌ ಮಾಡಿಕೊಂಡಿದ್ದಾನೆ. ಅದಕ್ಕೂ ನನಗೂ ಸಂಬಂಧವಿಲ್ಲ. ಜನರು ಬಾರ್‌ ವಿರುದ್ಧ ಹೋರಾಟ ಮಾಡಿದಾಗ ನಾವು ರಕ್ಷಣೆ ನೀಡಿದ್ದೇವೆ. ಒಂದು ವಾರ ಬಂದೋಬಸ್ತ್‌ ಮಾಡಿದ್ದೇವೆ. ಬಾರ್‌ ಪರವಾಗಿದ್ದರೆ ನಾವು ಅಂದೇ ಪ್ರಕರಣ ದಾಖಲು ಮಾಡಬಹುದಿಲ್ಲತ್ತ?” ಎಂದು ಕೇಳುತ್ತಾರೆ ಪಿಎಸ್‌ಐ ರಮ್ಯಾ.

“ಡಿಸಿಗೆ ಮನವಿ ಕೊಡಿ, ಅಲ್ಲಿ ಪರಿಹಾರ ಸಿಗುತ್ತೆ. ಇಲ್ಲಿ ಪ್ರತಿಭಟನೆ ನಡೆಸಿದರೆ ಪರಿಹಾರ ಆಗಲ್ಲ ಎಂದು ನಾವೇ ಸಲಹೆ ನೀಡಿದ್ದೇವೆ. ಜಿಲ್ಲಾ ಕೇಂದ್ರ ಚಿಕ್ಕಮಗಳೂರಿಗೆ ಹೋಗಿ ಪ್ರತಿಭಟನೆ ನಡೆಸಿದ್ದಾರೆ. ಆದರೆ ಬಾರ್‌ ಕಾನೂನಾತ್ಮಕವಾಗಿ ಇದೆ ಅನಿಸುತ್ತೆ. ಯಾವುದೇ ಕ್ರಮಗಳನ್ನು ಸಂಬಂಧಪಟ್ಟವರು ಜರುಗಿಸಿಲ್ಲ. ಈಗ‌ ಹೋಟೆಲ್ ತೆರೆದಿದ್ದಾರೆ. ಜನರು ದಾಳಿ ಮಾಡಿದ್ದಾರೆ. ಪೊಲೀಸ್‌ ಅರೆಸ್ಟ್‌ ಮಾಡಿದ್ದನ್ನೇ ದೌರ್ಜನ್ಯ ಎನ್ನಲು ಆಗುತ್ತದೆಯೇ? ಪ್ರಕರಣ ದಾಖಲಾದ ಮೇಲೆ ಬಂಧನದ ಭೀತಿಯಲ್ಲಿ ಕೆಲವರು ತಪ್ಪಿಸಿಕೊಂಡಿದ್ದಾರೆ. ಅಂದು ಬಂಧಿಸಲು ಹೋದಾಗ ಬಾಗಿಲು ಬಡಿದಿದ್ದೇವೆ. ಅವರೇ ಡೋರ್‌ ಓಪನ್‌ ಮಾಡಿದ್ದಾರೆ. ಮರು ಮಾತನಾಡದೆ ನಮ್ಮೊಂದಿಗೆ ಬಂದಿದ್ದಾರೆ. ಡೋರ್‌ ಆಗಲಿ, ಹೆಂಚು ಒಡೆದು, ಬಾಗಿಲು ಒಡೆದು ಒಳಗೆ ಹೋಗುವಷ್ಟು ನಾವು ಕ್ರೂರಿಗಳಲ್ಲ” ಎಂಬುದು ಪಿಎಸ್‌ಐ ಪ್ರತಿಕ್ರಿಯೆ.

“ಬಾರ್‌‌ನಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ನಡೆದಾಗ ಈ ರೀತಿಯ ಗಲಾಟೆಯಾಗಿದೆ ಎಂದು ದೂರು ನೀಡಿದ್ದಾರೆ. ಮಹಿಳೆಯರ ಮೇಲೆ ದೌರ್ಜನ್ಯ ಎಸಗಿದವರನ್ನು ನೀವು ಬಂದಿಸಿದ್ದೀರಾ?” ಎಂದು ಪ್ರಶ್ನಿಸಿದಾಗ, “ದೌರ್ಜನ್ಯಕ್ಕೆ ಒಳಗಾಗಿದವರು ಬಾರ್‌ ಕೆಲಸಗಾರರು ಎಂಬುದಕ್ಕೆ ಸಾಕ್ಷಿಗಳಿವೆ. ಆದರೆ ಬಾರ್‌ನವರಿಂದ ಆಗಿದೆ ಎನ್ನಲಾದ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಯಾವುದೇ ಸಾಕ್ಷ್ಯಾಧಾರಗಳಿಲ್ಲ. ಸಿಕ್ಕಿರುವ ಸಾಕ್ಷಿಗಳ ಮೇಲೆ ಕ್ರಮ ಜರುಗಿಸಲಾಗಿದೆ” ಎಂದು ಪಿಎಸ್‌ಐ ತಿಳಿಸಿದರು.


ಇದನ್ನೂ ಓದಿರಿ: ಮಂಗಳೂರಿನಲ್ಲಿ ಮತೀಯ ಗೂಂಡಾಗಿರಿ: ಅನ್ಯಧರ್ಮದ ಗೆಳತಿಯನ್ನು ಡ್ರಾಪ್ ಮಾಡುತ್ತಿದ್ದ ಮುಸ್ಲಿಂ ಯುವಕನ ಮೇಲೆ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...