Homeಕರ್ನಾಟಕಮುಸ್ಲಾಪುರ ಮದ್ಯದಂಗಡಿ ಪ್ರಕರಣ; ಬಂಧನ ಭೀತಿಯಲ್ಲಿ ಊರು ತೊರೆದ ಗ್ರಾಮಸ್ಥರು!

ಮುಸ್ಲಾಪುರ ಮದ್ಯದಂಗಡಿ ಪ್ರಕರಣ; ಬಂಧನ ಭೀತಿಯಲ್ಲಿ ಊರು ತೊರೆದ ಗ್ರಾಮಸ್ಥರು!

ಗ್ರಾಮದಲ್ಲಿ ತೆರೆದ ಬಾರ್‌ ಮುಚ್ಚುವಂತೆ ಮಹಿಳೆಯರು ಪ್ರಶ್ನಿಸಿದಾಗ ಗಲಾಟೆ ನಡೆದಿದೆ. 41 ಜನರ ಮೇಲೆ ಪ್ರಕರಣ ದಾಖಲಾಗಿದ್ದು, ಪೊಲೀಸರು ದೌರ್ಜನ್ಯ ಎಸಗಿದ್ದಾರೆ ಎಂದೂ ಆರೋಪಿಸಲಾಗಿದೆ.

- Advertisement -
- Advertisement -

ಕಡೂರು ತಾಲ್ಲೂಕಿನ ಮುಸ್ಲಾಪುರ ಗ್ರಾಮದಲ್ಲಿ ಬಾರ್‌ ತೆರೆದಿದ್ದಕ್ಕೆ ಆಕ್ರೋಶಗೊಂಡ ಗ್ರಾಮದ ಮಹಿಳೆಯರು ನವೆಂಬರ್‌‌ 12ರಂದು ಬಾರ್‌ಗೆ ನುಗ್ಗಿ ಪೀಠೋಪಕರಣಗಳನ್ನೆಲ್ಲ ಮುರಿದುಹಾಕಿದ ಸುದ್ದಿ, ವೀಡಿಯೋ ಸಾಮಾಜಿಕ ಜಾಲತಾಣವೂ ಸೇರಿದಂತೆ ಮಾಧ್ಯಮಗಳಲ್ಲಿ ವರದಿಯಾಗಿತ್ತು.

ಮುಸ್ಲಾಪುರ ನಾಲ್ಕೈದು ಸಮುದಾಯಗಳ ಸುಮಾರು 150 ಮನೆಗಳಿರುವ ಪುಟ್ಟ ಗ್ರಾಮ. ಕೃಷಿ ಭೂಮಿಯಲ್ಲಿ ಕೂಲಿ ಮಾಡುವುದು ಇಲ್ಲಿನ ಬಹುತೇಕ ಜನರ ಬದುಕಾಗಿತ್ತು. ಹೀಗೆ ಕೂಲಿ ಮಾಡುತ್ತಾ ಜೀವನ ಸಾಗಿಸುತ್ತಿದ್ದ ಊರಿನಲ್ಲಿ ಹೋಟೆಲ್‌ ಹೆಸರಿನಲ್ಲಿ ಬಾರ್‌ ಅಂಡ್‌ ರೆಸ್ಟೋರೆಂಟ್‌ ಒಂದನ್ನು ಆರಂಭ ಮಾಡಲಾಯಿತು.
ಆರಂಭದಿಂದಲೇ ಇದಕ್ಕೆ ಗ್ರಾಮಸ್ಥರಿಂದ ಭಾರೀ ವಿರೋಧ ವ್ಯಕ್ತವಾಗಿತ್ತು. ಈ ಬಾರ್‌ ಇರುವ ಸಮೀಪದಲ್ಲಿಯೇ ಹೈಸ್ಕೂಲ್‌ ವಿದ್ಯಾರ್ಥಿಗಳಿಗಾಗಿ ಹಾಸ್ಟೆಲ್‌ಗಳಿದ್ದು, ಹತ್ತಿರದಲ್ಲಿಯೇ ಮದಗದಕೆರೆ ಹಾಗೂ ಚಾನೆಲ್‌ ಇದೆ. ಗ್ರಾಮದಲ್ಲಿ ಬಾರ್‌ ತೆರೆದರೆ ಕೂಲಿ ಕಾರ್ಮಿಕರು ದುಡಿದ ಹಣವನ್ನು ಕುಡಿಯುವುದಕ್ಕೆ ವ್ಯಯಿಸುತ್ತಾರೆ ಎನ್ನುವ ಮಹಿಳೆಯರು, ನಮ್ಮೂರಿನ ಸ್ವಾಸ್ಥ್ಯಕ್ಕಾಗಿ ನಮ್ಮೂರಿನಲ್ಲಿ ಬಾರ್‌ ಬೇಡ ಎಂದು ಅಲವತ್ತುಕೊಂಡಿದ್ದರು.
ಎಮ್ಮೆದೊಡ್ಡಿ ಗ್ರಾಮ ಪಂಚಾಯಿತಿಯಿಂದಲೂ ಬಾರ್‌ ಅಂಡ್‌ ರೆಸ್ಟೋರೆಂಟ್‌ ತೆರೆಯದಂತೆ ನಿರ್ಣಯ ಹೊರಡಿಸಿದ್ದಾಗಲೂ ಕಳ್ಳದಾರಿಯಿಂದ ಬಾರ್‌ ತೆರೆಯಲು ಪ್ರಯತ್ನಿಸಲಾಗಿದೆ ಎಂದು ದೂರಲಾಗಿದೆ. ಹೋಟೆಲ್‌ ಮಾಡುತ್ತೇವೆ ಎಂದು ಪರವಾನಗಿ ಪಡೆದು ಅಕ್ರಮವಾಗಿ ಬಾರ್‌ ನಡೆಸಲಾಗುತ್ತಿದೆ ಎಂದು ಗ್ರಾಮಸ್ಥರು ಕಳೆದ ಒಂದು ತಿಂಗಳಿನಿಂದ ಸತತ ಪ್ರತಿಭಟನೆ ನಡೆಸುತ್ತಾ ಬಂದಿದ್ದರು. ಈ ಬಗ್ಗೆ ಚಿಕ್ಕಮಗಳೂರು ಜಿಲ್ಲಾಧಿಕಾರಿಗೂ ಮನವಿ ಪತ್ರವನ್ನು ಸಲ್ಲಿಸಲಾಗಿತ್ತು.

“ಈ ನಡುವೆ ಬಾರ್‌ ಓಪನ್‌ ಮಾಡಿದ್ದನ್ನು ವಿರೋಧಿಸಿ ಮೂವರು ಮಹಿಳೆಯರು ಇದನ್ನು ಪ್ರಶ್ನಿಸಿ ಬಾರ್ ಒಳಗೆ ಹೋಗಿದ್ದರು. ಆ ಸಮಯದಲ್ಲಿ ಬಾರ್‌ನಲ್ಲಿದ್ದವರು ಕುಡಿದ ಅಮಲಿನಲ್ಲಿ ಮಹಿಳೆಯರ ಮೇಲೆ ಹಲ್ಲೆ ಮಾಡಿದ್ದಾರೆ. ಮಹಿಳೆಯರನ್ನು ಅವಾಚ್ಯ ಪದಗಳಲ್ಲಿ ನಿಂದಿಸಿ, ಕಿರುಕುಳ ನೀಡಿದ್ದಾರೆ. ಈ ಘಟನೆಯಿಂದ ಆಕ್ರೋಶಗೊಂಡ ಗ್ರಾಮದ ಮಹಿಳೆಯರು ಹಾಗೂ ಪುರುಷರು ಬಾರ್‌ಗೆ ನುಗ್ಗಿ ಪೀಠೋಪಕರಣಗಳನ್ನು ಮುರಿದುಹಾಕಿದ್ದರು. ನಂತರದಲ್ಲಿ ಕಿರುಕುಳಕ್ಕೊಳಗಾಗಿದ್ದ ಮಹಿಳೆಯರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು” ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿರಿ: ಅಡಿ ಇಡದಿರಿ ಗುಡಿಯೊಳಗೆ…! ದೇವಸ್ಥಾನ ಪ್ರವೇಶ ನಿಷೇಧ ಮತ್ತು ವಿರೋಧ

“ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯರನ್ನು ವಿಚಾರಣೆಗಾಗಿ ಭಾನುವಾರ ಪೊಲೀಸ್‌ ಠಾಣೆಗೆ ಕರೆದೊಯ್ಯಲಾಗಿತ್ತು. ಮಾರನೇ ದಿನ ಆರು ಗಂಟೆಗೆ ಗ್ರಾಮಕ್ಕೆ ಬಂದ ಪಿಎಸ್‌ಐ ರಮ್ಯಾ ಹಾಗೂ ಸಿಬ್ಬಂದಿ ಗ್ರಾಮದಲ್ಲಿ ಮನೆಯೊಂದರ ಮೇಲಿನ ಹೆಂಚುಗಳನ್ನು ಒಡೆದುಹಾಕಿ, ಮನೆಯೊಳಗೆ ಬಾಗಿಲು ಮುರಿದು,  ನುಗ್ಗಿ ಮೂರು ಮಂದಿ ಮಹಿಳೆಯರು ಸೇರಿದಂತೆ ಐದು ಜನರನ್ನು ಪೊಲೀಸ್‌ ಠಾಣೆಗೆ ಎಳೆದೊಯ್ದರು” ಎಂದು ಗ್ರಾಮದ ಹಲವು ಮುಖಂಡರು ಆರೋಪಿಸಿದ್ದರು. ಈ ಕುರಿತಂತೆ ವಿಡಿಯೊ ಕೂಡ ವೈರಲ್‌ ಆಗಿತ್ತು. ಬಾಗಿಲು ಹಾಗೂ ಹೆಂಚು ದ್ವಂಸ ಆಗಿರುವುದನ್ನು ಈ ವಿಡಿಯೊದಲ್ಲಿ ಕಾಣಬಹುದಾಗಿತ್ತು.

ಗ್ರಾಮಸ್ಥರೆಲ್ಲರೂ ಕೂಡಿ ಕಡೂರು ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಬಾರ್‌ ಮಾಲೀಕರು ಕೂಡ ಬಾರ್‌ನಲ್ಲಿ ನಡೆದಿದ್ದರ ಬಗ್ಗೆ ಪ್ರತಿದೂರು ನೀಡಿದ್ದರು. ಬಾರ್‌ ಮಾಲೀಕರ ದೂರಿನ ಆಧಾರದಲ್ಲಿ 41 ಜನರ ಮೇಲೆ ಎಫ್‌ಐಆರ್‌ ದಾಖಲಾಗಿದ್ದು ಐಪಿಸಿ ಸೆಕ್ಷನ್ 143, 144, 147, 148, 323, 324, 504, 506, 447, 427, 114, 149 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ಘಟನೆ ನಂತರ ಮುಸ್ಲಾಪುರ ಗ್ರಾಮದಲ್ಲಿ ಭಯದ ವಾತಾವರಣ ಉಂಟಾಗಿದ್ದು, ಪ್ರಕರಣದಲ್ಲಿ ಭಾಗಿಯಾದ 41 ಆರೋಪಿಗಳಲ್ಲಿ 17 ಮಹಿಳೆಯರಿದ್ದಾರೆ. ಐವರನ್ನು ಈಗಾಗಲೇ ಬಂಧಿಸಲಾಗಿದ್ದು, ಬಂಧನಕ್ಕೆ ಹೆದರಿ ಇನ್ನುಳಿದವರು ಊರು ತೊರೆದಿದ್ದಾರೆ ಎಂದು ‘ನಾನುಗೌರಿ.ಕಾಂ’ಗೆ ತಿಳಿದುಬಂದಿದೆ.

“ಕೃಷಿ ಚಟುವಟಿಕೆಗಳು ನಡೆಯಬೇಕಿದೆ. ಜನರು ಪೊಲೀಸರಿಗೆ ಹೆದರಿ ಊರು ಬಿಟ್ಟು ಹೋಗಿದ್ದಾರೆ. ಹೋರಾಟ ಹಿಂಸೆಗೆ ತಿರುಗಿದ್ದು ವಿಷಾದನೀಯ. ಸ್ಥಳೀಯ ಜನರ ಆಗ್ರಹಕ್ಕೆ ಬೆಲೆ ಇಲ್ಲದಿದ್ದಾಗ, ಈ ಘಟನೆ ನಡೆದಿದೆ” ಎನ್ನುತ್ತಾರೆ ಗ್ರಾಮದ ಕೆಲವು ಮುಖಂಡರು.

ಜನರ ವಿರುದ್ಧವಾಗಿ ಹೋಟೆಲ್‌ ಪರವಾನಗಿ ಬಳಸಿಕೊಂಡು ತೆರೆಯಲಾಗಿರುವ ಬಾರ್‌ನಲ್ಲಿ ಐದು ಜನರ ಸಹಭಾಗಿತ್ವವಿದ್ದು, ಅದರಲ್ಲಿ ಒಬ್ಬರು ಸರ್ಕಾರಿ ಅಧಿಕಾರಿಯೊಬ್ಬರ ಪತ್ನಿಯು ಇದ್ದಾರೆ ಎಂಬ ಆರೋಪಗಳಿವೆ. ಇದೇನೇ ಇರಲಿ, ನಮ್ಮೂರಿಗೆ ಬಾರ್‌ ಬೇಡ, ಊರಿನಲ್ಲಿ ಬಾರ್‌ ತೆರೆದರೆ ಇಡೀ ಊರಿನ ಸ್ವಾಸ್ಥ್ಯ ಹಾಳಾಗುತ್ತದೆ ಎಂದು ದುಡಿವ ಮಹಿಳೆಯರು ಸತತ ಒಂದು ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿದ್ದಾಗಲೂ, ಈ ಮಹಿಳೆಯರ ಅಳಲನ್ನು ಕೇಳದ ಸರ್ಕಾರವು ಜನವಿರೋಧಿಯಾಗಿದೆ ಎಂಬುದು ಜನರ ಅಭಿಪ್ರಾಯ.

ಕುಡಿತದಿಂದಾಗಿ ಮುಂದಾಗಬಹುದಾದ ಅನಾಹುತಗಳನ್ನು ತಡೆಯುವ ನಿಟ್ಟಿನಲ್ಲಿ ಅಪಾಯವನ್ನು ಲೆಕ್ಕಿಸದೇ ಗ್ರಾಮದ ಮಹಿಳೆಯರು ಇಟ್ಟಿರುವ ಹೆಜ್ಜೆಗೆ ಪರ ವಿರೋಧದ ಅಭಿಪ್ರಾಯಗಳು ಬಂದಿವೆ. ದಾಳಿಗೆ ಪ್ರತಿದಾಳಿ ಎಂದು ಕೆಲವರು ಸಮರ್ಥಿಸಿದ್ದಾರೆ. ಕಾನೂನು ವಿರೋಧಿಯಾಗಿ ದಾಳಿ ಮಾಡಬಾರದಿತ್ತು ಎಂಬ ಅಭಿಪ್ರಾಯಗಳನ್ನು ಜನರು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಕ್ತಪಡಿಸಿದ್ದಾರೆ. ಪೊಲೀಸರು ದಾಳಿ ಮಾಡಿ ಮನೆಯ ಬಾಗಿಲು, ಹೆಂಚು ಒಡೆದಿದ್ದಾರೆ ಎಂಬುದಕ್ಕೂ ಟೀಕೆಗಳು ವ್ಯಕ್ತವಾಗಿವೆ. ಆದರೆ ಪೊಲೀಸರು ಈ ಆರೋಪವನ್ನು ನಿರಾಕರಿಸಿದ್ದಾರೆ.

ಇದನ್ನೂ ಓದಿರಿ: ಬಾಗಲೂರು ಗ್ರಾಪಂ: ದಲಿತ ಅಧ್ಯಕ್ಷೆ ಕುಳಿತ ಕುರ್ಚಿ ಗೋಮೂತ್ರದಿಂದ ಶುದ್ಧೀಕರಣ: ಬಿಜೆಪಿ ದೂರು

ಪಿಎಸ್‌ಐ ರಮ್ಯಾ ಹೇಳುವುದೇನು?

ನಾನುಗೌರಿ.ಕಾಂ ಜೊತೆ ಮಾತನಾಡಿದ ಕಡೂರು ಪಿಎಸ್‌ಐ ರಮ್ಯಾ, “ಐದು ಜನರನ್ನು ಬಂಧಿಸಲಾಗಿದೆ. ಉಳಿದವರು ಸಿಕ್ಕಿಲ್ಲ. ಪೊಲೀಸರು ದೌರ್ಜನ್ಯ ಎಸಗಿಲ್ಲ. ಯಾರದೇ ಮನೆಯ ಬಾಗಿಲು, ಹೆಂಚನ್ನು ನಾವು ಒಡೆದಿಲ್ಲ. ಪೊಲೀಸರ ಮೇಲೆ ಆರೋಪ ಹೊರಿಸಲು ಮಾಡಿರುವ ಸಂಚಿನ ಕುರಿತು ಮಾತನಾಡಿರುವ ಆಡಿಯೊ ನಮಗೆ ಲಭ್ಯವಾಗಿದೆ” ಎಂದರು.

ಪಿಎಸ್‌ಐ ರಮ್ಯಾ

“ಬಾಗಿಲನ್ನು ಎತ್ತಿದರೆ ಅದಾಗಿಯೇ ತೆರೆದುಕೊಳ್ಳುತ್ತದೆ. ಇದರ ವಿಡಿಯೊವನ್ನು ಜೆಸಿಬಿ ಮಂಜ ಮಾಡಿ, ಎಂಟು ಹತ್ತು ಹೆಂಚು ಒಡೆದು ಹಾಕಿ ಘಟನೆಯನ್ನು ಪೊಲೀಸರ ಮೇಲೆ ರೂಪಿಸಲಾಗಿದೆ” ಎಂದು ಇಬ್ಬರು ವ್ಯಕ್ತಿಗಳು ಮಾತನಾಡಿರುವ ಆಡಿಯೊದಲ್ಲಿನ ಸಾರಾಂಶ. ಆದರೆ ಆ ಆಡಿಯೊದಲ್ಲಿ ಮಾತನಾಡಿದವರು ಯಾರೆಂಬ ಮಾಹಿತಿ ಸಿಕ್ಕಿಲ್ಲ. ಉದ್ದೇಶಪೂರ್ವಕವಾಗಿಯೇ ಈ ಆಡಿಯೊವನ್ನು ಮಾಡಿ ಹರಿಬಿಡಲಾಗಿದೆಯೇ, ಪೊಲೀಸರಿಂದ ದೌರ್ಜನ್ಯವಾಗಿಲ್ಲವೆ ಎಂಬುದು ತನಿಖೆಗಳಿಂದ ತಿಳಿಯಬೇಕಿದೆ.

“ಹೆಂಚು ತೆಗೆದು ಒಳಗೆ ನುಗ್ಗುವಷ್ಟು ಕ್ರೂರಿಗಳು ನಮ್ಮಲ್ಲಿ ಯಾರೂ ಇಲ್ಲ. ಬಾರ್ ಇರಬೇಕೋ, ಬೇಡವೋ ಎಂಬುದನ್ನು ಸಂಬಂಧಪಟ್ಟವರು ನಿರ್ಧರಿಸುತ್ತಾರೆ. ಹಲ್ಲೆ ನಡೆಸಿದ್ದಾರೆಂದು ದೂರು ಬಂದಿದೆ. ಸಾಕ್ಷ್ಯಾಧಾರಗಳಿವೆ. ಪ್ರಕರಣ ದಾಖಲಿಸಿದ್ದೇವೆ. ಬಾರ್‌ ಪರವಾಗಿ ಪೊಲೀಸರು ನಿಲ್ಲಲು ಆ ಬಾರ್‌‌ ನನ್ನದೂ ಅಲ್ಲ, ನಮ್ಮಪ್ಪನ್ನದ್ದೂ ಅಲ್ಲ. ಯಾವನೋ ಬಾರ್‌ ಮಾಡಿಕೊಂಡಿದ್ದಾನೆ. ಅದಕ್ಕೂ ನನಗೂ ಸಂಬಂಧವಿಲ್ಲ. ಜನರು ಬಾರ್‌ ವಿರುದ್ಧ ಹೋರಾಟ ಮಾಡಿದಾಗ ನಾವು ರಕ್ಷಣೆ ನೀಡಿದ್ದೇವೆ. ಒಂದು ವಾರ ಬಂದೋಬಸ್ತ್‌ ಮಾಡಿದ್ದೇವೆ. ಬಾರ್‌ ಪರವಾಗಿದ್ದರೆ ನಾವು ಅಂದೇ ಪ್ರಕರಣ ದಾಖಲು ಮಾಡಬಹುದಿಲ್ಲತ್ತ?” ಎಂದು ಕೇಳುತ್ತಾರೆ ಪಿಎಸ್‌ಐ ರಮ್ಯಾ.

“ಡಿಸಿಗೆ ಮನವಿ ಕೊಡಿ, ಅಲ್ಲಿ ಪರಿಹಾರ ಸಿಗುತ್ತೆ. ಇಲ್ಲಿ ಪ್ರತಿಭಟನೆ ನಡೆಸಿದರೆ ಪರಿಹಾರ ಆಗಲ್ಲ ಎಂದು ನಾವೇ ಸಲಹೆ ನೀಡಿದ್ದೇವೆ. ಜಿಲ್ಲಾ ಕೇಂದ್ರ ಚಿಕ್ಕಮಗಳೂರಿಗೆ ಹೋಗಿ ಪ್ರತಿಭಟನೆ ನಡೆಸಿದ್ದಾರೆ. ಆದರೆ ಬಾರ್‌ ಕಾನೂನಾತ್ಮಕವಾಗಿ ಇದೆ ಅನಿಸುತ್ತೆ. ಯಾವುದೇ ಕ್ರಮಗಳನ್ನು ಸಂಬಂಧಪಟ್ಟವರು ಜರುಗಿಸಿಲ್ಲ. ಈಗ‌ ಹೋಟೆಲ್ ತೆರೆದಿದ್ದಾರೆ. ಜನರು ದಾಳಿ ಮಾಡಿದ್ದಾರೆ. ಪೊಲೀಸ್‌ ಅರೆಸ್ಟ್‌ ಮಾಡಿದ್ದನ್ನೇ ದೌರ್ಜನ್ಯ ಎನ್ನಲು ಆಗುತ್ತದೆಯೇ? ಪ್ರಕರಣ ದಾಖಲಾದ ಮೇಲೆ ಬಂಧನದ ಭೀತಿಯಲ್ಲಿ ಕೆಲವರು ತಪ್ಪಿಸಿಕೊಂಡಿದ್ದಾರೆ. ಅಂದು ಬಂಧಿಸಲು ಹೋದಾಗ ಬಾಗಿಲು ಬಡಿದಿದ್ದೇವೆ. ಅವರೇ ಡೋರ್‌ ಓಪನ್‌ ಮಾಡಿದ್ದಾರೆ. ಮರು ಮಾತನಾಡದೆ ನಮ್ಮೊಂದಿಗೆ ಬಂದಿದ್ದಾರೆ. ಡೋರ್‌ ಆಗಲಿ, ಹೆಂಚು ಒಡೆದು, ಬಾಗಿಲು ಒಡೆದು ಒಳಗೆ ಹೋಗುವಷ್ಟು ನಾವು ಕ್ರೂರಿಗಳಲ್ಲ” ಎಂಬುದು ಪಿಎಸ್‌ಐ ಪ್ರತಿಕ್ರಿಯೆ.

“ಬಾರ್‌‌ನಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ನಡೆದಾಗ ಈ ರೀತಿಯ ಗಲಾಟೆಯಾಗಿದೆ ಎಂದು ದೂರು ನೀಡಿದ್ದಾರೆ. ಮಹಿಳೆಯರ ಮೇಲೆ ದೌರ್ಜನ್ಯ ಎಸಗಿದವರನ್ನು ನೀವು ಬಂದಿಸಿದ್ದೀರಾ?” ಎಂದು ಪ್ರಶ್ನಿಸಿದಾಗ, “ದೌರ್ಜನ್ಯಕ್ಕೆ ಒಳಗಾಗಿದವರು ಬಾರ್‌ ಕೆಲಸಗಾರರು ಎಂಬುದಕ್ಕೆ ಸಾಕ್ಷಿಗಳಿವೆ. ಆದರೆ ಬಾರ್‌ನವರಿಂದ ಆಗಿದೆ ಎನ್ನಲಾದ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಯಾವುದೇ ಸಾಕ್ಷ್ಯಾಧಾರಗಳಿಲ್ಲ. ಸಿಕ್ಕಿರುವ ಸಾಕ್ಷಿಗಳ ಮೇಲೆ ಕ್ರಮ ಜರುಗಿಸಲಾಗಿದೆ” ಎಂದು ಪಿಎಸ್‌ಐ ತಿಳಿಸಿದರು.


ಇದನ್ನೂ ಓದಿರಿ: ಮಂಗಳೂರಿನಲ್ಲಿ ಮತೀಯ ಗೂಂಡಾಗಿರಿ: ಅನ್ಯಧರ್ಮದ ಗೆಳತಿಯನ್ನು ಡ್ರಾಪ್ ಮಾಡುತ್ತಿದ್ದ ಮುಸ್ಲಿಂ ಯುವಕನ ಮೇಲೆ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....