Homeಕರ್ನಾಟಕಮುಸ್ಲಿಮರ 2ಬಿ ಮೀಸಲಾತಿ ಬಗ್ಗೆ ಸೊಲ್ಲೆತ್ತುವ ಧೈರ್ಯ ಸಿದ್ದರಾಮಯ್ಯರಿಗೆ ಇಲ್ಲ: ಪತ್ರಕರ್ತ ಬಿ.ಎಂ. ಹನೀಫ್‌

ಮುಸ್ಲಿಮರ 2ಬಿ ಮೀಸಲಾತಿ ಬಗ್ಗೆ ಸೊಲ್ಲೆತ್ತುವ ಧೈರ್ಯ ಸಿದ್ದರಾಮಯ್ಯರಿಗೆ ಇಲ್ಲ: ಪತ್ರಕರ್ತ ಬಿ.ಎಂ. ಹನೀಫ್‌

- Advertisement -
- Advertisement -

ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ 2025-26ರ ಬಜೆಟ್‌ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಎಂದು ಕರೆಯಲಾಗುವ ಜಾತಿ ಸಮೀಕ್ಷೆ ಮೇಲೆ ಬಜೆಟ್ ಮಂಡನೆ ಮಾಡಬೇಕಿತ್ತು. ಆದರೆ ಅವರು ಅದನ್ನು ಮಾಡಿಲ್ಲ. ಅದಾಗ್ಯೂ, ಬಜೆಟ್‌ ಅನ್ನು ಯಾವ ಅಂಕಿ ಅಂಶಗಳ ಮೇಲೆ ಹಂಚಿಕೆ ಮಾಡಿದೆ ಎಂದು ಹೇಳುತ್ತಿಲ್ಲ ಎಂದು ಹಿರಿಯ ಪತ್ರಕರ್ತ ಬಿಎಂ ಹನೀಫ್ ಅವರು ಹೇಳಿದರು. ಮುಸ್ಲಿಮರ 2ಬಿ ಮೀಸಲಾತಿ

‘ಸಂಯುಕ್ತ ಹೋರಾಟ-ಕರ್ನಾಟಕ’ ಬೆಂಗಳೂರಿನ ಗಾಂಧಿ ಭವನದಲ್ಲಿ ಆಯೋಜಿಸಿರುವ ಎರಡು ದಿನಗಳ ‘ಜನ ಚಳವಳಿಗಳ ಬಜೆಟ್ ಅಧಿವೇಶನ’ದಲ್ಲಿ ಬುಧವಾರ ಭಾಗವಹಿಸಿ ‘ಅಲ್ಪಸಂಖ್ಯಾತರು ಮತ್ತು ಹಿಂದುಳಿದವರ ಕಲ್ಯಾಣ’ ಎಂಬ ವಿಚಾರದಲ್ಲಿ ಮಾತನಾಡುತ್ತಿದ್ದರು. 185 ಕೋಟಿ ವೆಚ್ಚ ಮಾಡಿದ ಈ ಸಮೀಕ್ಷೆಯ ಪ್ರಯೋಜನವೇನು ಎಂದ ಅವರು ಸಿದ್ದರಾಮಯ್ಯಾ ಅವರ ಬಜೆಟ್‌ಗೆ ವೈಜ್ಷಾನಿಕ ತಳಹದಿಯೆ ಇಲ್ಲ ಎಂದರು. ಮುಸ್ಲಿಮರ 2ಬಿ ಮೀಸಲಾತಿ

“ಕಳೆದ ಬಾರಿ 3.71 ಲಕ್ಷ ಕೋಟಿ ರೂ.ಗಳ ಬಜೆಟ್ ಮಂಡನೆಯಾಗಿದೆ. ಈ ಬಾರಿಯ ಬಜೆಟ್‌ 4 ಲಕ್ಷ ಕೋಟಿ ರೂ.  ದಾಟಿದೆ. ಅದಾಗ್ಯೂ, ಧಾರ್ಮಿಕ ಅಲ್ಪಸಂಖ್ಯಾತರಿಗೆ 4,400 ಕೋಟಿ ಮೀಸಲಿಡಲಾಗಿದೆ ಎಂದು ಹೇಳಲಾಗುತ್ತಿದೆ. ಈ ಧಾರ್ಮಿಕ ಅಲ್ಪಸಂಖ್ಯಾತರಲ್ಲಿ ಜೈನರು, ಬೌದ್ಧರು, ಕ್ರಿಶ್ಚಿಯನ್ನರು, ಪಾರ್ಸಿಗಳು ಇದ್ದಾರೆ. ಸುಮಾರು 18% ಅಲ್ಪಸಂಖ್ಯಾತರಿಗೆ ಮೀಸಲಿಟ್ಟ 4,400 ಕೋಟಿ ರೂ.ಗಳು ಬಜೆಟ್‌ನ 1% ಕೂಡಾ ಆಗುವುದಿಲ್ಲ. ಇದನ್ನು ಅರ್ಥ ಮಾಡಿಕೊಳ್ಳಲು 16 ಬಾರಿ ಬಜೆಟ್ ಮಂಡಿಸಬೇಕಾಗಿಲ್ಲ, ಸಾಮಾನ್ಯ ಜ್ಞಾನವಿದ್ದರೆ ಸಾಕು” ಎಂದು ಅವರು ಹೇಳಿದರು.

“ಧಾರ್ಮಿಕ ಅಲ್ಪಸಂಖ್ಯಾತರಿಗೆ 1% ಅಷ್ಟೆ ಕೊಟ್ಟಿದ್ದೇನೆ ಎಂದು ಸಿದ್ದರಾಮಯ್ಯ ಅವರು ಹೇಳುತ್ತಿದ್ದಾರೆ. ಇದನ್ನು ಅವರ ಸಾಧನೆ ಎಂದು ಹೇಳಬೇಕೆ? ಜಾತಿ ಸಮೀಕ್ಷೆ ಆಧಾರಲ್ಲಿ ಬಜೆಟ್ ಅನ್ನು ಹಂಚಿದ್ದರೆ, ಎಲ್ಲಾ ಸಮುದಾಯಕ್ಕೆ ಬೇಕಾದ ಪಾಲು ಸಿಗುತ್ತಿತ್ತು. ಆದರೆ ಈ ಜಾತಿ ಸಮೀಕ್ಷೆ ಪ್ರದರ್ಶನದ ವಸ್ತು ಮಾತ್ರವಾಗಿದೆ” ಎಂದು ಹೇಳಿದ್ದಾರೆ.

ಬಜೆಟ್‌ನಲ್ಲಿ ಕ್ರಿಶ್ಚಿಯನ್ನರಿಗೆ 250 ಕೋಟಿ ರೂ. ಎಂದು ಘೋಷಣೆ ಮಾಡಲಾಗಿದೆ. ಆದರೆ ಅವರಿಗೆ ಹಂಚಿಕೆಯಾಗುವುದು 80 ಕೋಟಿಯಷ್ಟೆ ಎಂಬುವುದನ್ನು ಹನೀಫ್ ಅವರು ಎತ್ತಿತೋರಿಸಿದರು. “2 ಕೋಟಿ ರೂ. ಗಳ ಸರ್ಕಾರಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ 4% ಮೀಸಲಾತಿ ನೀಡುತ್ತೇವೆ ಎಂದು ಸರ್ಕಾರ ಬಜೆಟ್‌ನಲ್ಲಿ ಹೇಳಿದೆ. ಈ ಬಗ್ಗೆ ಬಲಪಂಥೀಯರು, ಬಿಜೆಪಿ ಭಾರಿ ಗದ್ದಲ ಮಾಡಿದೆ. ಆದರೆ ಈ ಹಿಂದೆಯೆ ರಾಜ್ಯದ ಎಲ್ಲಾ ಸಮುದಾಯಕ್ಕೆ ಈ ಮೀಸಲಾತಿ ನೀಡಲಾಗಿತ್ತು. ಆದರೆ ಕಾಂಗ್ರೆಸ್ ಸರ್ಕಾರ ಮುಸ್ಲಿಮರಿಗೆ ನೀಡಿದ ಮೀಸಲಾತಿಯನ್ನು ಮಾತ್ರ ಎತ್ತಿ ತೋರಿಸಿದೆ” ಎಂದು ಹೇಳಿದರು.

“ಬೊಮ್ಮಾಯಿ ಸರ್ಕಾರ ಜಾರಿಗೆ ತಂದ ಗೋ ಹತ್ಯೆ ಕಾಯ್ದೆ, ಮತಾಂತರ ನಿಷೇಧ ಕಾಯ್ದೆ, ಒಬಿಸಿ ಪಟ್ಟಿಯಲ್ಲಿನ 2ಬಿ ಮೀಸಲಾತಿ ರದ್ದತಿಯನ್ನು ವಾಪಾಸು ಪಡೆಯುತ್ತೇವೆ ಎಂದು ಸಿದ್ದರಾಮಯ್ಯ ಅವರು ವಿಪಕ್ಷದಲ್ಲಿದ್ದಾಗ ಹೇಳಿದ್ದರು. ಆದರೆ ಇನ್ನು ಕೂಡಾ ಈ ಕಾಯ್ದೆಯನ್ನು ವಾಪಾಸು ಪಡೆದಿಲ್ಲ” ಎಂದು ಅವರು ತಿಳಿಸಿದರು.

“ಪ್ರಸ್ತುತ ಎಲ್ಲಾ ಸಮುದಾಯಗಳಿಗೆ ಮೀಸಲಾತಿಯಿದೆ. ಬ್ರಾಹ್ಮಣರಿಗಂತೂ ಅವರ ಜನಸಂಖ್ಯೆಗಿಂತ ಅಧಿಕವಾಗಿ 10% ನೀಡಲಾಗುತ್ತಿದೆ. ಒಬಿಸಿ ಪಟ್ಟಿಯಲ್ಲಿನ 2ಬಿ ಮೀಸಲಾತಿ ರದ್ದತಿಯನ್ನು ವಾಪಾಸು ಪಡೆಯುತ್ತೇವೆ ಎಂದು ಹೇಳಿದ್ದ ಸಿದ್ದರಾಮಯ್ಯ ಅವರು ಇವತ್ತಿನವರೆಗೆ ಒಂದೇ ಒಂದು ಸಂಪುಟ ಸಭೆಯಲ್ಲಿ ಈ ವಿಷಯದ ಬಗ್ಗೆ ಚರ್ಚಿಸಲು ಧೈರ್ಯ ಮಾಡಿಲ್ಲ. ಅಷ್ಟು ಮಾತ್ರವಲ್ಲ, ಈ ಬಗ್ಗೆ ಸುಪ್ರೀಂಕೋರ್ಟ್‌ಗೆ ಅಫಿಡವಿಟ್ ಸಲ್ಲಿಸುವ ಧೈರ್ಯ ಕೂಡಾ ತೋರುತ್ತಿಲ್ಲ.” ಎಂದು ಹನೀಫ್‌ ಅವರು ಹೇಳಿದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮೀಸಲಾತಿ ವಿಚಾರದಲ್ಲಿ ದಲಿತರನ್ನು ಗತಿಗೆಟ್ಟವರು ಎಂದು ಅವಮಾನಿಸಲಾಗುತ್ತಿದೆ: ಹೋರಾಟಗಾರ ಮಾವಳ್ಳಿ ಶಂಕರ್

ಮೀಸಲಾತಿ ವಿಚಾರದಲ್ಲಿ ದಲಿತರನ್ನು ಗತಿಗೆಟ್ಟವರು ಎಂದು ಅವಮಾನಿಸಲಾಗುತ್ತಿದೆ: ಹೋರಾಟಗಾರ ಮಾವಳ್ಳಿ ಶಂಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...