Homeಕರ್ನಾಟಕಮುಸ್ಲಿಮರ 2ಬಿ ಮೀಸಲಾತಿ ಬಗ್ಗೆ ಸೊಲ್ಲೆತ್ತುವ ಧೈರ್ಯ ಸಿದ್ದರಾಮಯ್ಯರಿಗೆ ಇಲ್ಲ: ಪತ್ರಕರ್ತ ಬಿ.ಎಂ. ಹನೀಫ್‌

ಮುಸ್ಲಿಮರ 2ಬಿ ಮೀಸಲಾತಿ ಬಗ್ಗೆ ಸೊಲ್ಲೆತ್ತುವ ಧೈರ್ಯ ಸಿದ್ದರಾಮಯ್ಯರಿಗೆ ಇಲ್ಲ: ಪತ್ರಕರ್ತ ಬಿ.ಎಂ. ಹನೀಫ್‌

- Advertisement -
- Advertisement -

ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ 2025-26ರ ಬಜೆಟ್‌ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಎಂದು ಕರೆಯಲಾಗುವ ಜಾತಿ ಸಮೀಕ್ಷೆ ಮೇಲೆ ಬಜೆಟ್ ಮಂಡನೆ ಮಾಡಬೇಕಿತ್ತು. ಆದರೆ ಅವರು ಅದನ್ನು ಮಾಡಿಲ್ಲ. ಅದಾಗ್ಯೂ, ಬಜೆಟ್‌ ಅನ್ನು ಯಾವ ಅಂಕಿ ಅಂಶಗಳ ಮೇಲೆ ಹಂಚಿಕೆ ಮಾಡಿದೆ ಎಂದು ಹೇಳುತ್ತಿಲ್ಲ ಎಂದು ಹಿರಿಯ ಪತ್ರಕರ್ತ ಬಿಎಂ ಹನೀಫ್ ಅವರು ಹೇಳಿದರು. ಮುಸ್ಲಿಮರ 2ಬಿ ಮೀಸಲಾತಿ

‘ಸಂಯುಕ್ತ ಹೋರಾಟ-ಕರ್ನಾಟಕ’ ಬೆಂಗಳೂರಿನ ಗಾಂಧಿ ಭವನದಲ್ಲಿ ಆಯೋಜಿಸಿರುವ ಎರಡು ದಿನಗಳ ‘ಜನ ಚಳವಳಿಗಳ ಬಜೆಟ್ ಅಧಿವೇಶನ’ದಲ್ಲಿ ಬುಧವಾರ ಭಾಗವಹಿಸಿ ‘ಅಲ್ಪಸಂಖ್ಯಾತರು ಮತ್ತು ಹಿಂದುಳಿದವರ ಕಲ್ಯಾಣ’ ಎಂಬ ವಿಚಾರದಲ್ಲಿ ಮಾತನಾಡುತ್ತಿದ್ದರು. 185 ಕೋಟಿ ವೆಚ್ಚ ಮಾಡಿದ ಈ ಸಮೀಕ್ಷೆಯ ಪ್ರಯೋಜನವೇನು ಎಂದ ಅವರು ಸಿದ್ದರಾಮಯ್ಯಾ ಅವರ ಬಜೆಟ್‌ಗೆ ವೈಜ್ಷಾನಿಕ ತಳಹದಿಯೆ ಇಲ್ಲ ಎಂದರು. ಮುಸ್ಲಿಮರ 2ಬಿ ಮೀಸಲಾತಿ

“ಕಳೆದ ಬಾರಿ 3.71 ಲಕ್ಷ ಕೋಟಿ ರೂ.ಗಳ ಬಜೆಟ್ ಮಂಡನೆಯಾಗಿದೆ. ಈ ಬಾರಿಯ ಬಜೆಟ್‌ 4 ಲಕ್ಷ ಕೋಟಿ ರೂ.  ದಾಟಿದೆ. ಅದಾಗ್ಯೂ, ಧಾರ್ಮಿಕ ಅಲ್ಪಸಂಖ್ಯಾತರಿಗೆ 4,400 ಕೋಟಿ ಮೀಸಲಿಡಲಾಗಿದೆ ಎಂದು ಹೇಳಲಾಗುತ್ತಿದೆ. ಈ ಧಾರ್ಮಿಕ ಅಲ್ಪಸಂಖ್ಯಾತರಲ್ಲಿ ಜೈನರು, ಬೌದ್ಧರು, ಕ್ರಿಶ್ಚಿಯನ್ನರು, ಪಾರ್ಸಿಗಳು ಇದ್ದಾರೆ. ಸುಮಾರು 18% ಅಲ್ಪಸಂಖ್ಯಾತರಿಗೆ ಮೀಸಲಿಟ್ಟ 4,400 ಕೋಟಿ ರೂ.ಗಳು ಬಜೆಟ್‌ನ 1% ಕೂಡಾ ಆಗುವುದಿಲ್ಲ. ಇದನ್ನು ಅರ್ಥ ಮಾಡಿಕೊಳ್ಳಲು 16 ಬಾರಿ ಬಜೆಟ್ ಮಂಡಿಸಬೇಕಾಗಿಲ್ಲ, ಸಾಮಾನ್ಯ ಜ್ಞಾನವಿದ್ದರೆ ಸಾಕು” ಎಂದು ಅವರು ಹೇಳಿದರು.

“ಧಾರ್ಮಿಕ ಅಲ್ಪಸಂಖ್ಯಾತರಿಗೆ 1% ಅಷ್ಟೆ ಕೊಟ್ಟಿದ್ದೇನೆ ಎಂದು ಸಿದ್ದರಾಮಯ್ಯ ಅವರು ಹೇಳುತ್ತಿದ್ದಾರೆ. ಇದನ್ನು ಅವರ ಸಾಧನೆ ಎಂದು ಹೇಳಬೇಕೆ? ಜಾತಿ ಸಮೀಕ್ಷೆ ಆಧಾರಲ್ಲಿ ಬಜೆಟ್ ಅನ್ನು ಹಂಚಿದ್ದರೆ, ಎಲ್ಲಾ ಸಮುದಾಯಕ್ಕೆ ಬೇಕಾದ ಪಾಲು ಸಿಗುತ್ತಿತ್ತು. ಆದರೆ ಈ ಜಾತಿ ಸಮೀಕ್ಷೆ ಪ್ರದರ್ಶನದ ವಸ್ತು ಮಾತ್ರವಾಗಿದೆ” ಎಂದು ಹೇಳಿದ್ದಾರೆ.

ಬಜೆಟ್‌ನಲ್ಲಿ ಕ್ರಿಶ್ಚಿಯನ್ನರಿಗೆ 250 ಕೋಟಿ ರೂ. ಎಂದು ಘೋಷಣೆ ಮಾಡಲಾಗಿದೆ. ಆದರೆ ಅವರಿಗೆ ಹಂಚಿಕೆಯಾಗುವುದು 80 ಕೋಟಿಯಷ್ಟೆ ಎಂಬುವುದನ್ನು ಹನೀಫ್ ಅವರು ಎತ್ತಿತೋರಿಸಿದರು. “2 ಕೋಟಿ ರೂ. ಗಳ ಸರ್ಕಾರಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ 4% ಮೀಸಲಾತಿ ನೀಡುತ್ತೇವೆ ಎಂದು ಸರ್ಕಾರ ಬಜೆಟ್‌ನಲ್ಲಿ ಹೇಳಿದೆ. ಈ ಬಗ್ಗೆ ಬಲಪಂಥೀಯರು, ಬಿಜೆಪಿ ಭಾರಿ ಗದ್ದಲ ಮಾಡಿದೆ. ಆದರೆ ಈ ಹಿಂದೆಯೆ ರಾಜ್ಯದ ಎಲ್ಲಾ ಸಮುದಾಯಕ್ಕೆ ಈ ಮೀಸಲಾತಿ ನೀಡಲಾಗಿತ್ತು. ಆದರೆ ಕಾಂಗ್ರೆಸ್ ಸರ್ಕಾರ ಮುಸ್ಲಿಮರಿಗೆ ನೀಡಿದ ಮೀಸಲಾತಿಯನ್ನು ಮಾತ್ರ ಎತ್ತಿ ತೋರಿಸಿದೆ” ಎಂದು ಹೇಳಿದರು.

“ಬೊಮ್ಮಾಯಿ ಸರ್ಕಾರ ಜಾರಿಗೆ ತಂದ ಗೋ ಹತ್ಯೆ ಕಾಯ್ದೆ, ಮತಾಂತರ ನಿಷೇಧ ಕಾಯ್ದೆ, ಒಬಿಸಿ ಪಟ್ಟಿಯಲ್ಲಿನ 2ಬಿ ಮೀಸಲಾತಿ ರದ್ದತಿಯನ್ನು ವಾಪಾಸು ಪಡೆಯುತ್ತೇವೆ ಎಂದು ಸಿದ್ದರಾಮಯ್ಯ ಅವರು ವಿಪಕ್ಷದಲ್ಲಿದ್ದಾಗ ಹೇಳಿದ್ದರು. ಆದರೆ ಇನ್ನು ಕೂಡಾ ಈ ಕಾಯ್ದೆಯನ್ನು ವಾಪಾಸು ಪಡೆದಿಲ್ಲ” ಎಂದು ಅವರು ತಿಳಿಸಿದರು.

“ಪ್ರಸ್ತುತ ಎಲ್ಲಾ ಸಮುದಾಯಗಳಿಗೆ ಮೀಸಲಾತಿಯಿದೆ. ಬ್ರಾಹ್ಮಣರಿಗಂತೂ ಅವರ ಜನಸಂಖ್ಯೆಗಿಂತ ಅಧಿಕವಾಗಿ 10% ನೀಡಲಾಗುತ್ತಿದೆ. ಒಬಿಸಿ ಪಟ್ಟಿಯಲ್ಲಿನ 2ಬಿ ಮೀಸಲಾತಿ ರದ್ದತಿಯನ್ನು ವಾಪಾಸು ಪಡೆಯುತ್ತೇವೆ ಎಂದು ಹೇಳಿದ್ದ ಸಿದ್ದರಾಮಯ್ಯ ಅವರು ಇವತ್ತಿನವರೆಗೆ ಒಂದೇ ಒಂದು ಸಂಪುಟ ಸಭೆಯಲ್ಲಿ ಈ ವಿಷಯದ ಬಗ್ಗೆ ಚರ್ಚಿಸಲು ಧೈರ್ಯ ಮಾಡಿಲ್ಲ. ಅಷ್ಟು ಮಾತ್ರವಲ್ಲ, ಈ ಬಗ್ಗೆ ಸುಪ್ರೀಂಕೋರ್ಟ್‌ಗೆ ಅಫಿಡವಿಟ್ ಸಲ್ಲಿಸುವ ಧೈರ್ಯ ಕೂಡಾ ತೋರುತ್ತಿಲ್ಲ.” ಎಂದು ಹನೀಫ್‌ ಅವರು ಹೇಳಿದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮೀಸಲಾತಿ ವಿಚಾರದಲ್ಲಿ ದಲಿತರನ್ನು ಗತಿಗೆಟ್ಟವರು ಎಂದು ಅವಮಾನಿಸಲಾಗುತ್ತಿದೆ: ಹೋರಾಟಗಾರ ಮಾವಳ್ಳಿ ಶಂಕರ್

ಮೀಸಲಾತಿ ವಿಚಾರದಲ್ಲಿ ದಲಿತರನ್ನು ಗತಿಗೆಟ್ಟವರು ಎಂದು ಅವಮಾನಿಸಲಾಗುತ್ತಿದೆ: ಹೋರಾಟಗಾರ ಮಾವಳ್ಳಿ ಶಂಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...