Homeಕರ್ನಾಟಕಮುಸ್ಲಿಮರ 2ಬಿ ಮೀಸಲಾತಿ ಬಗ್ಗೆ ಸೊಲ್ಲೆತ್ತುವ ಧೈರ್ಯ ಸಿದ್ದರಾಮಯ್ಯರಿಗೆ ಇಲ್ಲ: ಪತ್ರಕರ್ತ ಬಿ.ಎಂ. ಹನೀಫ್‌

ಮುಸ್ಲಿಮರ 2ಬಿ ಮೀಸಲಾತಿ ಬಗ್ಗೆ ಸೊಲ್ಲೆತ್ತುವ ಧೈರ್ಯ ಸಿದ್ದರಾಮಯ್ಯರಿಗೆ ಇಲ್ಲ: ಪತ್ರಕರ್ತ ಬಿ.ಎಂ. ಹನೀಫ್‌

- Advertisement -
- Advertisement -

ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ 2025-26ರ ಬಜೆಟ್‌ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಎಂದು ಕರೆಯಲಾಗುವ ಜಾತಿ ಸಮೀಕ್ಷೆ ಮೇಲೆ ಬಜೆಟ್ ಮಂಡನೆ ಮಾಡಬೇಕಿತ್ತು. ಆದರೆ ಅವರು ಅದನ್ನು ಮಾಡಿಲ್ಲ. ಅದಾಗ್ಯೂ, ಬಜೆಟ್‌ ಅನ್ನು ಯಾವ ಅಂಕಿ ಅಂಶಗಳ ಮೇಲೆ ಹಂಚಿಕೆ ಮಾಡಿದೆ ಎಂದು ಹೇಳುತ್ತಿಲ್ಲ ಎಂದು ಹಿರಿಯ ಪತ್ರಕರ್ತ ಬಿಎಂ ಹನೀಫ್ ಅವರು ಹೇಳಿದರು. ಮುಸ್ಲಿಮರ 2ಬಿ ಮೀಸಲಾತಿ

‘ಸಂಯುಕ್ತ ಹೋರಾಟ-ಕರ್ನಾಟಕ’ ಬೆಂಗಳೂರಿನ ಗಾಂಧಿ ಭವನದಲ್ಲಿ ಆಯೋಜಿಸಿರುವ ಎರಡು ದಿನಗಳ ‘ಜನ ಚಳವಳಿಗಳ ಬಜೆಟ್ ಅಧಿವೇಶನ’ದಲ್ಲಿ ಬುಧವಾರ ಭಾಗವಹಿಸಿ ‘ಅಲ್ಪಸಂಖ್ಯಾತರು ಮತ್ತು ಹಿಂದುಳಿದವರ ಕಲ್ಯಾಣ’ ಎಂಬ ವಿಚಾರದಲ್ಲಿ ಮಾತನಾಡುತ್ತಿದ್ದರು. 185 ಕೋಟಿ ವೆಚ್ಚ ಮಾಡಿದ ಈ ಸಮೀಕ್ಷೆಯ ಪ್ರಯೋಜನವೇನು ಎಂದ ಅವರು ಸಿದ್ದರಾಮಯ್ಯಾ ಅವರ ಬಜೆಟ್‌ಗೆ ವೈಜ್ಷಾನಿಕ ತಳಹದಿಯೆ ಇಲ್ಲ ಎಂದರು. ಮುಸ್ಲಿಮರ 2ಬಿ ಮೀಸಲಾತಿ

“ಕಳೆದ ಬಾರಿ 3.71 ಲಕ್ಷ ಕೋಟಿ ರೂ.ಗಳ ಬಜೆಟ್ ಮಂಡನೆಯಾಗಿದೆ. ಈ ಬಾರಿಯ ಬಜೆಟ್‌ 4 ಲಕ್ಷ ಕೋಟಿ ರೂ.  ದಾಟಿದೆ. ಅದಾಗ್ಯೂ, ಧಾರ್ಮಿಕ ಅಲ್ಪಸಂಖ್ಯಾತರಿಗೆ 4,400 ಕೋಟಿ ಮೀಸಲಿಡಲಾಗಿದೆ ಎಂದು ಹೇಳಲಾಗುತ್ತಿದೆ. ಈ ಧಾರ್ಮಿಕ ಅಲ್ಪಸಂಖ್ಯಾತರಲ್ಲಿ ಜೈನರು, ಬೌದ್ಧರು, ಕ್ರಿಶ್ಚಿಯನ್ನರು, ಪಾರ್ಸಿಗಳು ಇದ್ದಾರೆ. ಸುಮಾರು 18% ಅಲ್ಪಸಂಖ್ಯಾತರಿಗೆ ಮೀಸಲಿಟ್ಟ 4,400 ಕೋಟಿ ರೂ.ಗಳು ಬಜೆಟ್‌ನ 1% ಕೂಡಾ ಆಗುವುದಿಲ್ಲ. ಇದನ್ನು ಅರ್ಥ ಮಾಡಿಕೊಳ್ಳಲು 16 ಬಾರಿ ಬಜೆಟ್ ಮಂಡಿಸಬೇಕಾಗಿಲ್ಲ, ಸಾಮಾನ್ಯ ಜ್ಞಾನವಿದ್ದರೆ ಸಾಕು” ಎಂದು ಅವರು ಹೇಳಿದರು.

“ಧಾರ್ಮಿಕ ಅಲ್ಪಸಂಖ್ಯಾತರಿಗೆ 1% ಅಷ್ಟೆ ಕೊಟ್ಟಿದ್ದೇನೆ ಎಂದು ಸಿದ್ದರಾಮಯ್ಯ ಅವರು ಹೇಳುತ್ತಿದ್ದಾರೆ. ಇದನ್ನು ಅವರ ಸಾಧನೆ ಎಂದು ಹೇಳಬೇಕೆ? ಜಾತಿ ಸಮೀಕ್ಷೆ ಆಧಾರಲ್ಲಿ ಬಜೆಟ್ ಅನ್ನು ಹಂಚಿದ್ದರೆ, ಎಲ್ಲಾ ಸಮುದಾಯಕ್ಕೆ ಬೇಕಾದ ಪಾಲು ಸಿಗುತ್ತಿತ್ತು. ಆದರೆ ಈ ಜಾತಿ ಸಮೀಕ್ಷೆ ಪ್ರದರ್ಶನದ ವಸ್ತು ಮಾತ್ರವಾಗಿದೆ” ಎಂದು ಹೇಳಿದ್ದಾರೆ.

ಬಜೆಟ್‌ನಲ್ಲಿ ಕ್ರಿಶ್ಚಿಯನ್ನರಿಗೆ 250 ಕೋಟಿ ರೂ. ಎಂದು ಘೋಷಣೆ ಮಾಡಲಾಗಿದೆ. ಆದರೆ ಅವರಿಗೆ ಹಂಚಿಕೆಯಾಗುವುದು 80 ಕೋಟಿಯಷ್ಟೆ ಎಂಬುವುದನ್ನು ಹನೀಫ್ ಅವರು ಎತ್ತಿತೋರಿಸಿದರು. “2 ಕೋಟಿ ರೂ. ಗಳ ಸರ್ಕಾರಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ 4% ಮೀಸಲಾತಿ ನೀಡುತ್ತೇವೆ ಎಂದು ಸರ್ಕಾರ ಬಜೆಟ್‌ನಲ್ಲಿ ಹೇಳಿದೆ. ಈ ಬಗ್ಗೆ ಬಲಪಂಥೀಯರು, ಬಿಜೆಪಿ ಭಾರಿ ಗದ್ದಲ ಮಾಡಿದೆ. ಆದರೆ ಈ ಹಿಂದೆಯೆ ರಾಜ್ಯದ ಎಲ್ಲಾ ಸಮುದಾಯಕ್ಕೆ ಈ ಮೀಸಲಾತಿ ನೀಡಲಾಗಿತ್ತು. ಆದರೆ ಕಾಂಗ್ರೆಸ್ ಸರ್ಕಾರ ಮುಸ್ಲಿಮರಿಗೆ ನೀಡಿದ ಮೀಸಲಾತಿಯನ್ನು ಮಾತ್ರ ಎತ್ತಿ ತೋರಿಸಿದೆ” ಎಂದು ಹೇಳಿದರು.

“ಬೊಮ್ಮಾಯಿ ಸರ್ಕಾರ ಜಾರಿಗೆ ತಂದ ಗೋ ಹತ್ಯೆ ಕಾಯ್ದೆ, ಮತಾಂತರ ನಿಷೇಧ ಕಾಯ್ದೆ, ಒಬಿಸಿ ಪಟ್ಟಿಯಲ್ಲಿನ 2ಬಿ ಮೀಸಲಾತಿ ರದ್ದತಿಯನ್ನು ವಾಪಾಸು ಪಡೆಯುತ್ತೇವೆ ಎಂದು ಸಿದ್ದರಾಮಯ್ಯ ಅವರು ವಿಪಕ್ಷದಲ್ಲಿದ್ದಾಗ ಹೇಳಿದ್ದರು. ಆದರೆ ಇನ್ನು ಕೂಡಾ ಈ ಕಾಯ್ದೆಯನ್ನು ವಾಪಾಸು ಪಡೆದಿಲ್ಲ” ಎಂದು ಅವರು ತಿಳಿಸಿದರು.

“ಪ್ರಸ್ತುತ ಎಲ್ಲಾ ಸಮುದಾಯಗಳಿಗೆ ಮೀಸಲಾತಿಯಿದೆ. ಬ್ರಾಹ್ಮಣರಿಗಂತೂ ಅವರ ಜನಸಂಖ್ಯೆಗಿಂತ ಅಧಿಕವಾಗಿ 10% ನೀಡಲಾಗುತ್ತಿದೆ. ಒಬಿಸಿ ಪಟ್ಟಿಯಲ್ಲಿನ 2ಬಿ ಮೀಸಲಾತಿ ರದ್ದತಿಯನ್ನು ವಾಪಾಸು ಪಡೆಯುತ್ತೇವೆ ಎಂದು ಹೇಳಿದ್ದ ಸಿದ್ದರಾಮಯ್ಯ ಅವರು ಇವತ್ತಿನವರೆಗೆ ಒಂದೇ ಒಂದು ಸಂಪುಟ ಸಭೆಯಲ್ಲಿ ಈ ವಿಷಯದ ಬಗ್ಗೆ ಚರ್ಚಿಸಲು ಧೈರ್ಯ ಮಾಡಿಲ್ಲ. ಅಷ್ಟು ಮಾತ್ರವಲ್ಲ, ಈ ಬಗ್ಗೆ ಸುಪ್ರೀಂಕೋರ್ಟ್‌ಗೆ ಅಫಿಡವಿಟ್ ಸಲ್ಲಿಸುವ ಧೈರ್ಯ ಕೂಡಾ ತೋರುತ್ತಿಲ್ಲ.” ಎಂದು ಹನೀಫ್‌ ಅವರು ಹೇಳಿದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮೀಸಲಾತಿ ವಿಚಾರದಲ್ಲಿ ದಲಿತರನ್ನು ಗತಿಗೆಟ್ಟವರು ಎಂದು ಅವಮಾನಿಸಲಾಗುತ್ತಿದೆ: ಹೋರಾಟಗಾರ ಮಾವಳ್ಳಿ ಶಂಕರ್

ಮೀಸಲಾತಿ ವಿಚಾರದಲ್ಲಿ ದಲಿತರನ್ನು ಗತಿಗೆಟ್ಟವರು ಎಂದು ಅವಮಾನಿಸಲಾಗುತ್ತಿದೆ: ಹೋರಾಟಗಾರ ಮಾವಳ್ಳಿ ಶಂಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...