Homeಮುಖಪುಟಮುಸ್ಲಿಂ ಬಳೆ ವ್ಯಾಪಾರಿ ಮೇಲೆ ಗುಂಪು ಹಲ್ಲೆ; ‘ಬಳೆ ಜಿಹಾದ್’ ಎಂದ ಝೀ ಮತ್ತು ನ್ಯೂಸ್18!

ಮುಸ್ಲಿಂ ಬಳೆ ವ್ಯಾಪಾರಿ ಮೇಲೆ ಗುಂಪು ಹಲ್ಲೆ; ‘ಬಳೆ ಜಿಹಾದ್’ ಎಂದ ಝೀ ಮತ್ತು ನ್ಯೂಸ್18!

- Advertisement -
- Advertisement -

ಮಧ್ಯಪ್ರದೇಶದ ಇಂದೋರ್‌ನಲ್ಲಿ ಬಳೆ ಮಾರಾಟ ಮಾಡುತ್ತಿದ್ದ ಮುಸ್ಲಿಂ ಯುವಕನ ಮೇಲೆ ಕಳೆದ ಭಾನುವಾರ ದುಷ್ಕರ್ಮಿಗಳ ಗುಂಪೊಂದು ಕೋಮು ನಿಂದನೆ ಮಾಡುತ್ತಾ ಕ್ರೂರವಾಗಿ ಹಲ್ಲೆ ನಡೆಸಿತ್ತು. ಸಂತ್ರಸ್ತ ಯುವಕನನ್ನು ತಸ್ಲೀಂ ಎಂದು ಗುರುತಿಸಲಾಗಿದ್ದು, ತನ್ನ ಮೇಲೆ ಗುಂಪು ಹಲ್ಲೆ ನಡೆಸಿ, ತನ್ನ ವಸ್ತುಗಳನ್ನು ನಾಶ ಮಾಡಿ, 10 ಸಾವಿರ ರೂ.ಗಳನ್ನು ದೂಚಿಕೊಂಡು ಹೋಗಲಾಗಿದೆ ಎಂದು ಅವರು ಪ್ರಕರಣ ದಾಖಲಿಸಿದ್ದರು. ಪ್ರಕರಣದಲ್ಲಿ ಮೂವರನ್ನು ಇದುವರೆಗೂ ಬಂಧಿಸಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆಂದು ಮಾಧ್ಯಮಗಳು ವರದಿ ಮಾಡಿವೆ.

ಆದರೆ ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್‌‌ ಮಿಶ್ರಾ ಅವರು ಯುವಕ ತನ್ನ ಬಳಿ ಎರಡು ಆಧಾರ್‌ ಕಾರ್ಡ್‌ಗಳನ್ನು ಹೊಂದಿದ್ದು, ಹಿಂದೂ ಹೆಸರನ್ನು ಬಳಸಿಕೊಂಡಿದ್ದಾರೆ. ಅಲ್ಲಿಂದ ವಿವಾದ ಪ್ರಾರಂಭವಾಗಿದೆ ಎಂದು ಹೇಳಿದ್ದಾರೆ. ಈ ಮಧ್ಯೆ ಬಿಜೆಪಿಯ ಕೆಲವು ನಾಯಕರು ಪ್ರಕರಣವನ್ನು ಲವ್ ಜಿಹಾದ್ ಅಡಿಯಲ್ಲಿ ತನಿಖೆ ನಡೆಸಬೇಕು ಎಂದು ಘಟನೆಯನ್ನು ಕೋಮು ಪ್ರಚೋದನೆಗೂ ಬಳಸಿಕೊಂಡಿದ್ದಾರೆ.

ಇದನ್ನೂ ಓದಿ: ಪೊಲಿಟಿಕಲ್ ಕರೆಕ್ಟ್‌ನೆಸ್ ಮತ್ತು ಸಂವೇದನೆ; ಚಿತ್ರ, ಕಾರ್ಟೂನು, ಮಾಧ್ಯಮ ಮತ್ತು ತಿಳಿವಳಿಕೆಯ ಸಂವಾದ

ಅದಾಗ್ಯೂ, ನ್ಯೂಸ್18ಎಂಪಿ ಛತ್ತೀಸ್‌ಗಡ್‌ ಮತ್ತು ಝೀ ಹಿಂದೂಸ್ತಾನ್ ಪ್ರಕರಣವನ್ನು ತಿರುಚಿ, ಕೋಮು ಪ್ರಚೋದನೆಗೆ ಬಳಸಿಕೊಂಡಿದೆ. ಪ್ರಕರಣವನ್ನು ಬಳಸಿಕೊಂಡು, “ಬಳೆ ಜಿಹಾ‌ದ್‌” ನಡೆಯುತ್ತಿದೆ ಎಂದು ಪ್ರತಿಪಾದಿಸಿ, ಪ್ರಕರಣವನ್ನು ಕಾಲ್ಪನಿಕ “ಲವ್ ಜಿಹಾದ್‌”ಗೆ ತಗಲು ಹಾಕಿದೆ.

ಪ್ರಕರಣದ ಕುರಿತು ಝೀ ಹಿಂದೂಸ್ತಾನ್‌ ಮಾಡಿರುವ ವಿಶೇಷ ವರದಿಗೆ, “ಹಿಂದೂಸ್ತಾನದಲ್ಲಿ ಹಿಂದೂಗಳ ಮೇಲೆ ಬಳೆ ಜಿಹಾದ್?” ಎಂಬ ಹೆಸರನ್ನು ನೀಡಿದೆ. ಈ ಕಾರ್ಯಕ್ರಮದ ಪ್ರೊಮೋವನ್ನು ಝೀ ಹಿಂದೂಸ್ತಾನ್‌ ಟ್ವಿಟರ್‌ನಲ್ಲಿ ಹಂಚಿಕೊಂಡಿದೆ.

ಅದರಲ್ಲಿ, “ಇಂದೂರ್‌ನ ತಸ್ಲೀಂ, ತುಷಾರ್‌ ಯಾಕೆ ಆದ? ಸೇಡಿನ ಹೆಸರು, ಸೇಡಿನ ಕೆಲಸ, ಹಿಂದೂಗಳ ಮೇಲೆ ಪಿತೂರಿ? ಬಳೆಗಾರ ಆಗಿ ಸನಾತನದ ಮೇಲೆ ಮೋಸ? ಹಿಂದೂಸ್ತಾನದಲ್ಲಿ ಹಿಂದೂಗಳ ಮೇಲೆ ‘ಬಳೆ ಜಿಹಾದ್’?” ಎಂದು ಪ್ರಶ್ನೆಗಳನ್ನು ಹಾಕಿ ಟ್ವೀಟ್ ಮಾಡಲಾಗಿದೆ.

ಇದನ್ನೂ ಓದಿ: ಪೆಗಾಸಸ್ ಬಗ್ಗೆ ಮಾಧ್ಯಮ ವರದಿ ನಿಜವಾಗಿದ್ದರೆ ‘ಹಗರಣ ನಿಜಕ್ಕೂ ಗಂಭೀರ’: ಸುಪ್ರೀಂಕೋರ್ಟ್‌

ಝೀ ಹಿಂದೂಸ್ತಾನ್‌ ರೀತಿಯಲ್ಲೇ, ನ್ಯೂಸ್ 18 ಕೂಡ ಅಂತಹದ್ದೇ ವಿಶೇಷ ವರದಿಯನ್ನು ಮಾಡಿದೆ. ಅದು ತನ್ನ ವಿಶೇಷ ವರದಿಗೆ “ಬಳೆ ನೆಪ, ಲವ್ ಜಿಹಾದ್‌ ಗುರಿ!” ಎಂದು ಹೆಸರು ನೀಡಿದೆ.

ಅಲ್ಲದೆ ಪ್ರೋಮೋವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದು. ಅದರಲ್ಲಿ, “ಬಳೆ ನೆಪ, ಲವ್ ಜಿಹಾದ್‌ ಗುರಿ! ಬಳೆಗಾರನ ಮೇಲೆ ಹಲ್ಲೆಯಾದ ನಂತರ ಗಲಾಟೆ! ಬಳೆಗಾರನ ‘ಧರ್ಮ’ ಯಾವುದು? ಲವ್‌ ಜಿಹಾದ್‌ಗಾಗಿ ಹೆಸರು ಬದಲಾವಣೆ?” ಎಂದು ಟ್ವೀಟ್ ಮಾಡಿದೆ.

ಇದನ್ನೂ ಓದಿ: ಮುಂದಿನ 6 ತಿಂಗಳಲ್ಲಿ ಮಾಧ್ಯಮದ ಮೇಲೆ ನಿಯಂತ್ರಣ: ಅಣ್ಣಾಮಲೈ ವಿವಾದಿತ ಹೇಳಿಕೆ

ಆದರೆ ಪೊಲೀಸರು ಘಟನೆಯ ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಕೋಮು ಪ್ರಚೋದಕ ಹೇಳಿಕೆಗಳ ಬಗ್ಗೆ ಈ ಹಿಂದೆಯೆ ಎಚ್ಚರಿಕೆ ನೀಡಿದ್ದಾರೆ.

“ನಾವು ದೂರುದಾರರ ಪ್ರಕಾರ ಪ್ರಕರಣವನ್ನು ದಾಖಲಿಸಿಕೊಂಡಿದ್ದೇವೆ ಮತ್ತು ತನಿಖೆ ಮಾಡುತ್ತಿದ್ದೇವೆ. ಆದರೆ ಸಾಮಾಜಿಕ ಜಾಲತಾಣದ ಕೋಮು ಪ್ರಚೋದಕ ಪೋಸ್ಟ್‌ಗಳಿಗೆ ಪ್ರತಿಕ್ರಿಯಿಸದಂತೆ ಜನರಿಗೆ ನಾವು ಮನವಿ ಮಾಡಿದ್ದೇವೆ. ಸಾಮಾಜಿಕ ಜಾಲತಾಣದ ಅಂತಹ ಪೋಸ್ಟ್‌ಗಳ ಮೇಲೆ ನಾವು ನಿಗಾ ಇಟ್ಟಿದ್ದೇವೆ. ವಿಡಿಯೋದಲ್ಲಿನ ಆರೋಪಿಗಳನ್ನು ಗುರುತಿಸಲಾಗುತ್ತಿದ್ದು, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಇಂದೋರ್ ಪೂರ್ವ ಪೊಲೀಸ್ ಠಾಣೆಯ ಹಿರಿಯ ಪೊಲೀಸ್ ಅಧಿಕಾರಿ ಅಶುತೋಷ್ ಬಾಗ್ರಿ ಹೇಳಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿತ್ತು.

ಪೊಲೀಸರ ಎಚ್ಚರಿಕೆಯ ಹೊರತಾಗಿಯು ಎರಡು ಹಿಂದಿ ಚಾನೆಲ್‌ಗಳು ಪ್ರಕರಣವನ್ನು ಕಾಲ್ಪನಿಕ ಲವ್‌ಜಿಹಾದ್‌ಗೆ ತಗಲು ಹಾಕಿ ದ್ವೇಷವನ್ನು ಬಿತ್ತುತ್ತಿದೆ. ಇದರ ವಿರುದ್ದ ಸಾಮಾಜಿಕ ಜಾತಲಾಣದಲ್ಲಿ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದು, “ಇದು ಇಂದಿನ ಪತ್ರಿಕೋದ್ಯಮದ ‘ಮಟ್ಟ’ !!! ರಾಷ್ಟ್ರೀಯ ಚಾನೆಲ್ ಮೂಲಕ ದ್ವೇಷ ಮತ್ತು ಭಯೋತ್ಪಾದನೆಯನ್ನು ಬಹಿರಂಗವಾಗಿ ಪ್ರಚೋದಿಸಲಾಗುತ್ತಿದೆ! ಅದ್ಭುತವಾಗಿದೆ! ಈಗ ನಾಶವು ತುಂಬಾ ದೂರವಿಲ್ಲ” ಎಂದು ಹೇಳಿದ್ದಾರೆ.

ಘಟನೆಯ ವಿಡಿಯೊವನ್ನು ಇಲ್ಲಿ ಕ್ಲಿಕ್ ಮಾಡಿದರೆ ನೋಡಬಹುದು ನಾನುಗೌರಿ.ಕಾಂ ಫೇಸ್‌ಬುಕ್ ಪೇಜ್‌


 

ಇದನ್ನೂ ಓದಿ: ಸುಪ್ರೀಂಗೆ ಹೊಸ ನ್ಯಾಯಾಧೀಶರ ನೇಮಕಾತಿ: ಮಾಧ್ಯಮಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಸಿಜೆಐ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...