Homeಮುಖಪುಟಮುಸ್ಲಿಂ ಬಳೆ ವ್ಯಾಪಾರಿ ಮೇಲೆ ಗುಂಪು ಹಲ್ಲೆ; ‘ಬಳೆ ಜಿಹಾದ್’ ಎಂದ ಝೀ ಮತ್ತು ನ್ಯೂಸ್18!

ಮುಸ್ಲಿಂ ಬಳೆ ವ್ಯಾಪಾರಿ ಮೇಲೆ ಗುಂಪು ಹಲ್ಲೆ; ‘ಬಳೆ ಜಿಹಾದ್’ ಎಂದ ಝೀ ಮತ್ತು ನ್ಯೂಸ್18!

- Advertisement -
- Advertisement -

ಮಧ್ಯಪ್ರದೇಶದ ಇಂದೋರ್‌ನಲ್ಲಿ ಬಳೆ ಮಾರಾಟ ಮಾಡುತ್ತಿದ್ದ ಮುಸ್ಲಿಂ ಯುವಕನ ಮೇಲೆ ಕಳೆದ ಭಾನುವಾರ ದುಷ್ಕರ್ಮಿಗಳ ಗುಂಪೊಂದು ಕೋಮು ನಿಂದನೆ ಮಾಡುತ್ತಾ ಕ್ರೂರವಾಗಿ ಹಲ್ಲೆ ನಡೆಸಿತ್ತು. ಸಂತ್ರಸ್ತ ಯುವಕನನ್ನು ತಸ್ಲೀಂ ಎಂದು ಗುರುತಿಸಲಾಗಿದ್ದು, ತನ್ನ ಮೇಲೆ ಗುಂಪು ಹಲ್ಲೆ ನಡೆಸಿ, ತನ್ನ ವಸ್ತುಗಳನ್ನು ನಾಶ ಮಾಡಿ, 10 ಸಾವಿರ ರೂ.ಗಳನ್ನು ದೂಚಿಕೊಂಡು ಹೋಗಲಾಗಿದೆ ಎಂದು ಅವರು ಪ್ರಕರಣ ದಾಖಲಿಸಿದ್ದರು. ಪ್ರಕರಣದಲ್ಲಿ ಮೂವರನ್ನು ಇದುವರೆಗೂ ಬಂಧಿಸಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆಂದು ಮಾಧ್ಯಮಗಳು ವರದಿ ಮಾಡಿವೆ.

ಆದರೆ ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್‌‌ ಮಿಶ್ರಾ ಅವರು ಯುವಕ ತನ್ನ ಬಳಿ ಎರಡು ಆಧಾರ್‌ ಕಾರ್ಡ್‌ಗಳನ್ನು ಹೊಂದಿದ್ದು, ಹಿಂದೂ ಹೆಸರನ್ನು ಬಳಸಿಕೊಂಡಿದ್ದಾರೆ. ಅಲ್ಲಿಂದ ವಿವಾದ ಪ್ರಾರಂಭವಾಗಿದೆ ಎಂದು ಹೇಳಿದ್ದಾರೆ. ಈ ಮಧ್ಯೆ ಬಿಜೆಪಿಯ ಕೆಲವು ನಾಯಕರು ಪ್ರಕರಣವನ್ನು ಲವ್ ಜಿಹಾದ್ ಅಡಿಯಲ್ಲಿ ತನಿಖೆ ನಡೆಸಬೇಕು ಎಂದು ಘಟನೆಯನ್ನು ಕೋಮು ಪ್ರಚೋದನೆಗೂ ಬಳಸಿಕೊಂಡಿದ್ದಾರೆ.

ಇದನ್ನೂ ಓದಿ: ಪೊಲಿಟಿಕಲ್ ಕರೆಕ್ಟ್‌ನೆಸ್ ಮತ್ತು ಸಂವೇದನೆ; ಚಿತ್ರ, ಕಾರ್ಟೂನು, ಮಾಧ್ಯಮ ಮತ್ತು ತಿಳಿವಳಿಕೆಯ ಸಂವಾದ

ಅದಾಗ್ಯೂ, ನ್ಯೂಸ್18ಎಂಪಿ ಛತ್ತೀಸ್‌ಗಡ್‌ ಮತ್ತು ಝೀ ಹಿಂದೂಸ್ತಾನ್ ಪ್ರಕರಣವನ್ನು ತಿರುಚಿ, ಕೋಮು ಪ್ರಚೋದನೆಗೆ ಬಳಸಿಕೊಂಡಿದೆ. ಪ್ರಕರಣವನ್ನು ಬಳಸಿಕೊಂಡು, “ಬಳೆ ಜಿಹಾ‌ದ್‌” ನಡೆಯುತ್ತಿದೆ ಎಂದು ಪ್ರತಿಪಾದಿಸಿ, ಪ್ರಕರಣವನ್ನು ಕಾಲ್ಪನಿಕ “ಲವ್ ಜಿಹಾದ್‌”ಗೆ ತಗಲು ಹಾಕಿದೆ.

ಪ್ರಕರಣದ ಕುರಿತು ಝೀ ಹಿಂದೂಸ್ತಾನ್‌ ಮಾಡಿರುವ ವಿಶೇಷ ವರದಿಗೆ, “ಹಿಂದೂಸ್ತಾನದಲ್ಲಿ ಹಿಂದೂಗಳ ಮೇಲೆ ಬಳೆ ಜಿಹಾದ್?” ಎಂಬ ಹೆಸರನ್ನು ನೀಡಿದೆ. ಈ ಕಾರ್ಯಕ್ರಮದ ಪ್ರೊಮೋವನ್ನು ಝೀ ಹಿಂದೂಸ್ತಾನ್‌ ಟ್ವಿಟರ್‌ನಲ್ಲಿ ಹಂಚಿಕೊಂಡಿದೆ.

ಅದರಲ್ಲಿ, “ಇಂದೂರ್‌ನ ತಸ್ಲೀಂ, ತುಷಾರ್‌ ಯಾಕೆ ಆದ? ಸೇಡಿನ ಹೆಸರು, ಸೇಡಿನ ಕೆಲಸ, ಹಿಂದೂಗಳ ಮೇಲೆ ಪಿತೂರಿ? ಬಳೆಗಾರ ಆಗಿ ಸನಾತನದ ಮೇಲೆ ಮೋಸ? ಹಿಂದೂಸ್ತಾನದಲ್ಲಿ ಹಿಂದೂಗಳ ಮೇಲೆ ‘ಬಳೆ ಜಿಹಾದ್’?” ಎಂದು ಪ್ರಶ್ನೆಗಳನ್ನು ಹಾಕಿ ಟ್ವೀಟ್ ಮಾಡಲಾಗಿದೆ.

ಇದನ್ನೂ ಓದಿ: ಪೆಗಾಸಸ್ ಬಗ್ಗೆ ಮಾಧ್ಯಮ ವರದಿ ನಿಜವಾಗಿದ್ದರೆ ‘ಹಗರಣ ನಿಜಕ್ಕೂ ಗಂಭೀರ’: ಸುಪ್ರೀಂಕೋರ್ಟ್‌

ಝೀ ಹಿಂದೂಸ್ತಾನ್‌ ರೀತಿಯಲ್ಲೇ, ನ್ಯೂಸ್ 18 ಕೂಡ ಅಂತಹದ್ದೇ ವಿಶೇಷ ವರದಿಯನ್ನು ಮಾಡಿದೆ. ಅದು ತನ್ನ ವಿಶೇಷ ವರದಿಗೆ “ಬಳೆ ನೆಪ, ಲವ್ ಜಿಹಾದ್‌ ಗುರಿ!” ಎಂದು ಹೆಸರು ನೀಡಿದೆ.

ಅಲ್ಲದೆ ಪ್ರೋಮೋವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದು. ಅದರಲ್ಲಿ, “ಬಳೆ ನೆಪ, ಲವ್ ಜಿಹಾದ್‌ ಗುರಿ! ಬಳೆಗಾರನ ಮೇಲೆ ಹಲ್ಲೆಯಾದ ನಂತರ ಗಲಾಟೆ! ಬಳೆಗಾರನ ‘ಧರ್ಮ’ ಯಾವುದು? ಲವ್‌ ಜಿಹಾದ್‌ಗಾಗಿ ಹೆಸರು ಬದಲಾವಣೆ?” ಎಂದು ಟ್ವೀಟ್ ಮಾಡಿದೆ.

ಇದನ್ನೂ ಓದಿ: ಮುಂದಿನ 6 ತಿಂಗಳಲ್ಲಿ ಮಾಧ್ಯಮದ ಮೇಲೆ ನಿಯಂತ್ರಣ: ಅಣ್ಣಾಮಲೈ ವಿವಾದಿತ ಹೇಳಿಕೆ

ಆದರೆ ಪೊಲೀಸರು ಘಟನೆಯ ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಕೋಮು ಪ್ರಚೋದಕ ಹೇಳಿಕೆಗಳ ಬಗ್ಗೆ ಈ ಹಿಂದೆಯೆ ಎಚ್ಚರಿಕೆ ನೀಡಿದ್ದಾರೆ.

“ನಾವು ದೂರುದಾರರ ಪ್ರಕಾರ ಪ್ರಕರಣವನ್ನು ದಾಖಲಿಸಿಕೊಂಡಿದ್ದೇವೆ ಮತ್ತು ತನಿಖೆ ಮಾಡುತ್ತಿದ್ದೇವೆ. ಆದರೆ ಸಾಮಾಜಿಕ ಜಾಲತಾಣದ ಕೋಮು ಪ್ರಚೋದಕ ಪೋಸ್ಟ್‌ಗಳಿಗೆ ಪ್ರತಿಕ್ರಿಯಿಸದಂತೆ ಜನರಿಗೆ ನಾವು ಮನವಿ ಮಾಡಿದ್ದೇವೆ. ಸಾಮಾಜಿಕ ಜಾಲತಾಣದ ಅಂತಹ ಪೋಸ್ಟ್‌ಗಳ ಮೇಲೆ ನಾವು ನಿಗಾ ಇಟ್ಟಿದ್ದೇವೆ. ವಿಡಿಯೋದಲ್ಲಿನ ಆರೋಪಿಗಳನ್ನು ಗುರುತಿಸಲಾಗುತ್ತಿದ್ದು, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಇಂದೋರ್ ಪೂರ್ವ ಪೊಲೀಸ್ ಠಾಣೆಯ ಹಿರಿಯ ಪೊಲೀಸ್ ಅಧಿಕಾರಿ ಅಶುತೋಷ್ ಬಾಗ್ರಿ ಹೇಳಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿತ್ತು.

ಪೊಲೀಸರ ಎಚ್ಚರಿಕೆಯ ಹೊರತಾಗಿಯು ಎರಡು ಹಿಂದಿ ಚಾನೆಲ್‌ಗಳು ಪ್ರಕರಣವನ್ನು ಕಾಲ್ಪನಿಕ ಲವ್‌ಜಿಹಾದ್‌ಗೆ ತಗಲು ಹಾಕಿ ದ್ವೇಷವನ್ನು ಬಿತ್ತುತ್ತಿದೆ. ಇದರ ವಿರುದ್ದ ಸಾಮಾಜಿಕ ಜಾತಲಾಣದಲ್ಲಿ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದು, “ಇದು ಇಂದಿನ ಪತ್ರಿಕೋದ್ಯಮದ ‘ಮಟ್ಟ’ !!! ರಾಷ್ಟ್ರೀಯ ಚಾನೆಲ್ ಮೂಲಕ ದ್ವೇಷ ಮತ್ತು ಭಯೋತ್ಪಾದನೆಯನ್ನು ಬಹಿರಂಗವಾಗಿ ಪ್ರಚೋದಿಸಲಾಗುತ್ತಿದೆ! ಅದ್ಭುತವಾಗಿದೆ! ಈಗ ನಾಶವು ತುಂಬಾ ದೂರವಿಲ್ಲ” ಎಂದು ಹೇಳಿದ್ದಾರೆ.

ಘಟನೆಯ ವಿಡಿಯೊವನ್ನು ಇಲ್ಲಿ ಕ್ಲಿಕ್ ಮಾಡಿದರೆ ನೋಡಬಹುದು ನಾನುಗೌರಿ.ಕಾಂ ಫೇಸ್‌ಬುಕ್ ಪೇಜ್‌


 

ಇದನ್ನೂ ಓದಿ: ಸುಪ್ರೀಂಗೆ ಹೊಸ ನ್ಯಾಯಾಧೀಶರ ನೇಮಕಾತಿ: ಮಾಧ್ಯಮಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಸಿಜೆಐ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...