Homeಮುಖಪುಟಮುಸ್ಲಿಂ ಬಳೆ ವ್ಯಾಪಾರಿ ಮೇಲೆ ಗುಂಪು ಹಲ್ಲೆ; ‘ಬಳೆ ಜಿಹಾದ್’ ಎಂದ ಝೀ ಮತ್ತು ನ್ಯೂಸ್18!

ಮುಸ್ಲಿಂ ಬಳೆ ವ್ಯಾಪಾರಿ ಮೇಲೆ ಗುಂಪು ಹಲ್ಲೆ; ‘ಬಳೆ ಜಿಹಾದ್’ ಎಂದ ಝೀ ಮತ್ತು ನ್ಯೂಸ್18!

- Advertisement -
- Advertisement -

ಮಧ್ಯಪ್ರದೇಶದ ಇಂದೋರ್‌ನಲ್ಲಿ ಬಳೆ ಮಾರಾಟ ಮಾಡುತ್ತಿದ್ದ ಮುಸ್ಲಿಂ ಯುವಕನ ಮೇಲೆ ಕಳೆದ ಭಾನುವಾರ ದುಷ್ಕರ್ಮಿಗಳ ಗುಂಪೊಂದು ಕೋಮು ನಿಂದನೆ ಮಾಡುತ್ತಾ ಕ್ರೂರವಾಗಿ ಹಲ್ಲೆ ನಡೆಸಿತ್ತು. ಸಂತ್ರಸ್ತ ಯುವಕನನ್ನು ತಸ್ಲೀಂ ಎಂದು ಗುರುತಿಸಲಾಗಿದ್ದು, ತನ್ನ ಮೇಲೆ ಗುಂಪು ಹಲ್ಲೆ ನಡೆಸಿ, ತನ್ನ ವಸ್ತುಗಳನ್ನು ನಾಶ ಮಾಡಿ, 10 ಸಾವಿರ ರೂ.ಗಳನ್ನು ದೂಚಿಕೊಂಡು ಹೋಗಲಾಗಿದೆ ಎಂದು ಅವರು ಪ್ರಕರಣ ದಾಖಲಿಸಿದ್ದರು. ಪ್ರಕರಣದಲ್ಲಿ ಮೂವರನ್ನು ಇದುವರೆಗೂ ಬಂಧಿಸಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆಂದು ಮಾಧ್ಯಮಗಳು ವರದಿ ಮಾಡಿವೆ.

ಆದರೆ ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್‌‌ ಮಿಶ್ರಾ ಅವರು ಯುವಕ ತನ್ನ ಬಳಿ ಎರಡು ಆಧಾರ್‌ ಕಾರ್ಡ್‌ಗಳನ್ನು ಹೊಂದಿದ್ದು, ಹಿಂದೂ ಹೆಸರನ್ನು ಬಳಸಿಕೊಂಡಿದ್ದಾರೆ. ಅಲ್ಲಿಂದ ವಿವಾದ ಪ್ರಾರಂಭವಾಗಿದೆ ಎಂದು ಹೇಳಿದ್ದಾರೆ. ಈ ಮಧ್ಯೆ ಬಿಜೆಪಿಯ ಕೆಲವು ನಾಯಕರು ಪ್ರಕರಣವನ್ನು ಲವ್ ಜಿಹಾದ್ ಅಡಿಯಲ್ಲಿ ತನಿಖೆ ನಡೆಸಬೇಕು ಎಂದು ಘಟನೆಯನ್ನು ಕೋಮು ಪ್ರಚೋದನೆಗೂ ಬಳಸಿಕೊಂಡಿದ್ದಾರೆ.

ಇದನ್ನೂ ಓದಿ: ಪೊಲಿಟಿಕಲ್ ಕರೆಕ್ಟ್‌ನೆಸ್ ಮತ್ತು ಸಂವೇದನೆ; ಚಿತ್ರ, ಕಾರ್ಟೂನು, ಮಾಧ್ಯಮ ಮತ್ತು ತಿಳಿವಳಿಕೆಯ ಸಂವಾದ

ಅದಾಗ್ಯೂ, ನ್ಯೂಸ್18ಎಂಪಿ ಛತ್ತೀಸ್‌ಗಡ್‌ ಮತ್ತು ಝೀ ಹಿಂದೂಸ್ತಾನ್ ಪ್ರಕರಣವನ್ನು ತಿರುಚಿ, ಕೋಮು ಪ್ರಚೋದನೆಗೆ ಬಳಸಿಕೊಂಡಿದೆ. ಪ್ರಕರಣವನ್ನು ಬಳಸಿಕೊಂಡು, “ಬಳೆ ಜಿಹಾ‌ದ್‌” ನಡೆಯುತ್ತಿದೆ ಎಂದು ಪ್ರತಿಪಾದಿಸಿ, ಪ್ರಕರಣವನ್ನು ಕಾಲ್ಪನಿಕ “ಲವ್ ಜಿಹಾದ್‌”ಗೆ ತಗಲು ಹಾಕಿದೆ.

ಪ್ರಕರಣದ ಕುರಿತು ಝೀ ಹಿಂದೂಸ್ತಾನ್‌ ಮಾಡಿರುವ ವಿಶೇಷ ವರದಿಗೆ, “ಹಿಂದೂಸ್ತಾನದಲ್ಲಿ ಹಿಂದೂಗಳ ಮೇಲೆ ಬಳೆ ಜಿಹಾದ್?” ಎಂಬ ಹೆಸರನ್ನು ನೀಡಿದೆ. ಈ ಕಾರ್ಯಕ್ರಮದ ಪ್ರೊಮೋವನ್ನು ಝೀ ಹಿಂದೂಸ್ತಾನ್‌ ಟ್ವಿಟರ್‌ನಲ್ಲಿ ಹಂಚಿಕೊಂಡಿದೆ.

ಅದರಲ್ಲಿ, “ಇಂದೂರ್‌ನ ತಸ್ಲೀಂ, ತುಷಾರ್‌ ಯಾಕೆ ಆದ? ಸೇಡಿನ ಹೆಸರು, ಸೇಡಿನ ಕೆಲಸ, ಹಿಂದೂಗಳ ಮೇಲೆ ಪಿತೂರಿ? ಬಳೆಗಾರ ಆಗಿ ಸನಾತನದ ಮೇಲೆ ಮೋಸ? ಹಿಂದೂಸ್ತಾನದಲ್ಲಿ ಹಿಂದೂಗಳ ಮೇಲೆ ‘ಬಳೆ ಜಿಹಾದ್’?” ಎಂದು ಪ್ರಶ್ನೆಗಳನ್ನು ಹಾಕಿ ಟ್ವೀಟ್ ಮಾಡಲಾಗಿದೆ.

ಇದನ್ನೂ ಓದಿ: ಪೆಗಾಸಸ್ ಬಗ್ಗೆ ಮಾಧ್ಯಮ ವರದಿ ನಿಜವಾಗಿದ್ದರೆ ‘ಹಗರಣ ನಿಜಕ್ಕೂ ಗಂಭೀರ’: ಸುಪ್ರೀಂಕೋರ್ಟ್‌

ಝೀ ಹಿಂದೂಸ್ತಾನ್‌ ರೀತಿಯಲ್ಲೇ, ನ್ಯೂಸ್ 18 ಕೂಡ ಅಂತಹದ್ದೇ ವಿಶೇಷ ವರದಿಯನ್ನು ಮಾಡಿದೆ. ಅದು ತನ್ನ ವಿಶೇಷ ವರದಿಗೆ “ಬಳೆ ನೆಪ, ಲವ್ ಜಿಹಾದ್‌ ಗುರಿ!” ಎಂದು ಹೆಸರು ನೀಡಿದೆ.

ಅಲ್ಲದೆ ಪ್ರೋಮೋವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದು. ಅದರಲ್ಲಿ, “ಬಳೆ ನೆಪ, ಲವ್ ಜಿಹಾದ್‌ ಗುರಿ! ಬಳೆಗಾರನ ಮೇಲೆ ಹಲ್ಲೆಯಾದ ನಂತರ ಗಲಾಟೆ! ಬಳೆಗಾರನ ‘ಧರ್ಮ’ ಯಾವುದು? ಲವ್‌ ಜಿಹಾದ್‌ಗಾಗಿ ಹೆಸರು ಬದಲಾವಣೆ?” ಎಂದು ಟ್ವೀಟ್ ಮಾಡಿದೆ.

ಇದನ್ನೂ ಓದಿ: ಮುಂದಿನ 6 ತಿಂಗಳಲ್ಲಿ ಮಾಧ್ಯಮದ ಮೇಲೆ ನಿಯಂತ್ರಣ: ಅಣ್ಣಾಮಲೈ ವಿವಾದಿತ ಹೇಳಿಕೆ

ಆದರೆ ಪೊಲೀಸರು ಘಟನೆಯ ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಕೋಮು ಪ್ರಚೋದಕ ಹೇಳಿಕೆಗಳ ಬಗ್ಗೆ ಈ ಹಿಂದೆಯೆ ಎಚ್ಚರಿಕೆ ನೀಡಿದ್ದಾರೆ.

“ನಾವು ದೂರುದಾರರ ಪ್ರಕಾರ ಪ್ರಕರಣವನ್ನು ದಾಖಲಿಸಿಕೊಂಡಿದ್ದೇವೆ ಮತ್ತು ತನಿಖೆ ಮಾಡುತ್ತಿದ್ದೇವೆ. ಆದರೆ ಸಾಮಾಜಿಕ ಜಾಲತಾಣದ ಕೋಮು ಪ್ರಚೋದಕ ಪೋಸ್ಟ್‌ಗಳಿಗೆ ಪ್ರತಿಕ್ರಿಯಿಸದಂತೆ ಜನರಿಗೆ ನಾವು ಮನವಿ ಮಾಡಿದ್ದೇವೆ. ಸಾಮಾಜಿಕ ಜಾಲತಾಣದ ಅಂತಹ ಪೋಸ್ಟ್‌ಗಳ ಮೇಲೆ ನಾವು ನಿಗಾ ಇಟ್ಟಿದ್ದೇವೆ. ವಿಡಿಯೋದಲ್ಲಿನ ಆರೋಪಿಗಳನ್ನು ಗುರುತಿಸಲಾಗುತ್ತಿದ್ದು, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಇಂದೋರ್ ಪೂರ್ವ ಪೊಲೀಸ್ ಠಾಣೆಯ ಹಿರಿಯ ಪೊಲೀಸ್ ಅಧಿಕಾರಿ ಅಶುತೋಷ್ ಬಾಗ್ರಿ ಹೇಳಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿತ್ತು.

ಪೊಲೀಸರ ಎಚ್ಚರಿಕೆಯ ಹೊರತಾಗಿಯು ಎರಡು ಹಿಂದಿ ಚಾನೆಲ್‌ಗಳು ಪ್ರಕರಣವನ್ನು ಕಾಲ್ಪನಿಕ ಲವ್‌ಜಿಹಾದ್‌ಗೆ ತಗಲು ಹಾಕಿ ದ್ವೇಷವನ್ನು ಬಿತ್ತುತ್ತಿದೆ. ಇದರ ವಿರುದ್ದ ಸಾಮಾಜಿಕ ಜಾತಲಾಣದಲ್ಲಿ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದು, “ಇದು ಇಂದಿನ ಪತ್ರಿಕೋದ್ಯಮದ ‘ಮಟ್ಟ’ !!! ರಾಷ್ಟ್ರೀಯ ಚಾನೆಲ್ ಮೂಲಕ ದ್ವೇಷ ಮತ್ತು ಭಯೋತ್ಪಾದನೆಯನ್ನು ಬಹಿರಂಗವಾಗಿ ಪ್ರಚೋದಿಸಲಾಗುತ್ತಿದೆ! ಅದ್ಭುತವಾಗಿದೆ! ಈಗ ನಾಶವು ತುಂಬಾ ದೂರವಿಲ್ಲ” ಎಂದು ಹೇಳಿದ್ದಾರೆ.

ಘಟನೆಯ ವಿಡಿಯೊವನ್ನು ಇಲ್ಲಿ ಕ್ಲಿಕ್ ಮಾಡಿದರೆ ನೋಡಬಹುದು ನಾನುಗೌರಿ.ಕಾಂ ಫೇಸ್‌ಬುಕ್ ಪೇಜ್‌


 

ಇದನ್ನೂ ಓದಿ: ಸುಪ್ರೀಂಗೆ ಹೊಸ ನ್ಯಾಯಾಧೀಶರ ನೇಮಕಾತಿ: ಮಾಧ್ಯಮಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಸಿಜೆಐ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...