Homeಮುಖಪುಟಮದ್ರಸಾಗಳಿಗೆ ಧನ ಸಹಾಯ ನಿಲ್ಲಿಸುವಂತೆ ಮಕ್ಕಳ ಹಕ್ಕುಗಳ ಆಯೋಗ ಪತ್ರ : ವಿರೋಧ ವ್ಯಕ್ತಪಡಿಸಿದ ಮುಸ್ಲಿಂ...

ಮದ್ರಸಾಗಳಿಗೆ ಧನ ಸಹಾಯ ನಿಲ್ಲಿಸುವಂತೆ ಮಕ್ಕಳ ಹಕ್ಕುಗಳ ಆಯೋಗ ಪತ್ರ : ವಿರೋಧ ವ್ಯಕ್ತಪಡಿಸಿದ ಮುಸ್ಲಿಂ ಸಂಘಟನೆಗಳು

- Advertisement -
- Advertisement -

ಮದ್ರಸಾಗಳು ಮತ್ತು ಮದ್ರಸಾ ಮಂಡಳಿಗಳಿಗೆ ಧನಸಹಾಯ ನೀಡುವುದನ್ನು ನಿಲ್ಲಿಸುವಂತೆ ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (ಎನ್‌ಸಿಪಿಸಿಆರ್‌) ಪತ್ರ ಬರೆದಿರುವುದು ಮುಸ್ಲಿಂ ಸಂಘಟನೆಗಳ ಭಾರೀ ವಿರೋಧಕ್ಕೆ ಕಾರಣವಾಗಿದೆ.

ಎನ್‌ಸಿಪಿಸಿಆರ್‌ ಮದ್ರಸಾ ಮಂಡಳಿಗಳನ್ನು ಸ್ಥಗಿತಗೊಳಿಸುವಂತೆ ಮತ್ತು ಮುಚ್ಚುವಂತೆಯೂ ಶಿಫಾರಸು ಮಾಡಿದೆ.

ದೇಶದ ವಿವಿಧ ಪ್ರಮುಖ ಮುಸ್ಲಿಂ ಸಂಘಟನೆಗಳು ಎನ್‌ಸಿಪಿಸಿಆರ್‌ ಶಿಫಾರಸನ್ನು ಕಟುವಾಗಿ ವಿರೋಧಿಸಿವೆ. ವಿಶೇಷವಾಗಿ ಕೇರಳದ ಪ್ರಭಾವಿ ಮುಸ್ಲಿಂ ಸಂಘಟನೆಗಳಾದ ಸಮಸ್ತ ಎಪಿ ಮತ್ತು ಇಕೆ ವಿಭಾಗ ವಿರೋಧ ವ್ಯಕ್ತಪಡಿಸಿವೆ.

ಕೇರಳದ ಇಸ್ಲಾಮಿಕ್ ವಿದ್ವಾಂಸರ ಅತಿದೊಡ್ಡ ಸಂಘಟನೆಯಾದ ಸಮಸ್ತ ಕೇರಳ ಜಂ-ಇಯತುಲ್ ಉಲಮಾ (ಸಮಸ್ತ) ಸದಸ್ಯರು ಎನ್‌ಸಿಪಿಸಿಆರ್ ಶಿಫಾರಸು ಸಂಘ ಪರಿವಾರದ ಸೈದ್ಧಾಂತಿಕ ಯೋಜನೆಗಳನ್ನು ಕಾರ್ಯಗತಗೊಳಿಸುವ ಕಾರ್ಯಸೂಚಿಯ ಭಾಗವಾಗಿದೆ ಎಂದು ಹೇಳಿದ್ದಾರೆ.

ಸಮಸ್ತ ಮುಶಾವರದ ಸದಸ್ಯ ಉಮರ್ ಫೈಝಿ ಮುಕ್ಕಂ ಮಾತನಾಡಿ, ಈ ಶಿಫಾರಸ್ಸು ಮುಸ್ಲಿಮರನ್ನು ಗುರಿಯಾಗಿಸುವ ದೊಡ್ಡ ಕಾರ್ಯಸೂಚಿಯ ಭಾಗವಾಗಿದೆ ಎಂದಿದ್ದಾರೆ. ಜಮಾತ್-ಎ-ಇಸ್ಲಾಮಿ ಹಿಂದ್‌ನ ಕೇರಳ ರಾಜ್ಯ ಅಮೀರ್ ಪಿ ಮುಜೀಬ್ ರೆಹಮಾನ್ ಕೂಡ ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್), ಸಿಪಿಎಂ ಮತ್ತು ಕಾಂಗ್ರೆಸ್ ನಾಯಕರು ಕೂಡ ಎನ್‌ಸಿಪಿಸಿಆರ್‌ ಪತ್ರಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.

ಎನ್‌ಸಿಪಿಸಿಆರ್‌ ಶಿಫಾರಸು ಕೇರಳದ ಮದ್ರಸಾಗಳ ಕಾರ್ಯನಿರ್ವಹಣೆಯ ಮೇಲೆ ಪರಿಣಾಮ ಬೀರುವುದಿಲ್ಲ. ಏಕೆಂದರೆ ರಾಜ್ಯ ಸರ್ಕಾರವು ಇಲ್ಲಿನ ಮದ್ರಸಗಳಿಗೆ ಯಾವುದೇ ಹಣಕಾಸಿನ ನೆರವು ನೀಡುತ್ತಿಲ್ಲ ಎಂದು ಸಮಸ್ತದ ಯುವ ಘಟಕವಾದ ಸುನ್ನಿ ಯುವಜನ ಸಂಘದ (ಎಸ್‌ವೈಎಸ್) ರಾಜ್ಯ ಕಾರ್ಯದರ್ಶಿ ಅಬ್ದುಸ್ಸಮದ್ ಪೂಕ್ಕೊಟೂರ್ ಹೇಳಿದ್ದಾರೆ.

ಎನ್‌ಸಿಪಿಸಿಆರ್‌ ಶಿಫಾರಸು ಯಾವುದೇ ಕಾರಣಕ್ಕೆ ಒಪ್ಪಲು ಸಾಧ್ಯವಿಲ್ಲ. ಅದನ್ನು ವಾಪಸ್ ಪಡೆಯಬೇಕು ಎಂದು ಸಮಸ್ತ ಎಪಿ ವಿಭಾಗದ ಮದ್ರಸಾ ಅಧ್ಯಾಪಕರ ಸಂಘಟನೆ ಸುನ್ನಿ ಜಂ-ಇಯತುಲ್ ಮುಅಲ್ಲಿಮೀನ್‌ (ಎಸ್‌ಜೆಎಂ) ಕೇರಳ ಮತ್ತು ಕರ್ನಾಟಕದ ರಾಜ್ಯ ಘಟಕ ಹೇಳಿದೆ.

ಎನ್‌ಸಿಪಿಸಿಆರ್‌ ಶಿಫಾರಸು ಕೇರಳ ಮತ್ತು ಕರ್ನಾಟಕದ ಕರಾವಳಿ ಭಾಗದ ಮದ್ರಸಾಗಳಿಗೆ ಸದ್ಯಕ್ಕೆ ಪರಿಣಾಮ ಬೀರುವುದಿಲ್ಲ. ಈ ಶಿಫಾರಸನ್ನು ರಾಜ್ಯ ಸರ್ಕಾರಗಳು ಗಂಭೀರವಾಗಿ ಪರಿಗಣಿಸಿ ಕ್ರಮ ಕೈಗೊಂಡರೆ ಉತ್ತರ ಭಾರತದ ಮದ್ರಸಾಗಳಿಗೆ ದೊಡ್ಡ ಮಟ್ಟಿನ ಪರಿಣಾಮ ಬೀರಬಹುದು. ಕರ್ನಾಟಕದಲ್ಲಿ ಉತ್ತರ ಕರ್ನಾಟಕದ ಮದ್ರಸಾಗಳಿಗೂ ಸಮಸ್ಯೆ ಆಗಬಹುದು. ಮುಂದೊಂದು ದಿನ ಕೇರಳ ಮತ್ತು ಕರ್ನಾಟಕ ಕರಾವಳಿಯ ಮದ್ರಸಾಗಳಿಗೂ ಸಮಸ್ಯೆ ಉಂಟು ಮಾಡಬಹುದು ಎಂಬುವುದು ಕೇರಳದ ಮುಸ್ಲಿಂ ಸಂಘಟನೆಗಳ ವಾದ.

ಕರಾವಳಿ ಕರ್ನಾಟಕ ಮತ್ತು ಕೇರಳದಲ್ಲಿ ಮದ್ರಸಾಗಳೆಂದರೆ ಬೆಳಿಗ್ಗೆ ಮತ್ತು ಸಂಜೆ ಒಂದೆರಡು ಗಂಟೆಗಳ ಕಾಲ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುವ ಕೇಂದ್ರಗಳಾಗಿವೆ. ಮದ್ರಸಾದ ಅವಧಿಯ ಬಳಿಕ ಮಕ್ಕಳು ಶಾಲೆಗೆ ಹೋಗಿ ಶಿಕ್ಷಣ ಪಡೆಯುತ್ತಾರೆ. ಹತ್ತನೇ ತರಗತಿ ಬಳಿಕ ವಸತಿ ಸಹಿತ ಧಾರ್ಮಿಕ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳು, ಅಲ್ಲೇ ಪಿಯುಸಿ, ಪದವಿ ಶಿಕ್ಷಣ ಪಡೆಯುತ್ತಿದ್ದಾರೆ. ಈ ಮೂಲಕ ಧಾರ್ಮಿಕ ಶಿಕ್ಷಣ ಕೇಂದ್ರಗಳು ಸಮನ್ವಯ ಶಿಕ್ಷಣ ಕೇಂದ್ರಗಳಾಗಿ ಗುರುತಿಸಿಕೊಂಡಿವೆ.

ಎನ್‌ಸಿಪಿಸಿಆರ್‌ ಪತ್ರದಲ್ಲಿ ಏನಿದೆ? 

“ಮುಸ್ಲಿಮರು ಅಥವಾ ಇನ್ಯಾರೆ ಆದರೂ, ಅವರೆಲ್ಲರೂ 2009ರ ಶಿಕ್ಷಣದ ಹಕ್ಕು ಕಾಯ್ದೆಯಡಿ ಮಾನ್ಯತೆ ಪಡೆದ ಶಾಲೆಗಳಲ್ಲಿ ಮಾತ್ರವೇ ದಾಖಲಾಗಿರಬೇಕೆಂದು” ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಪ್ರಿಯಾಂಕ್ ಕಾನೂಂಗೊ ಅವರು ಪತ್ರದಲ್ಲಿ ತಿಳಿಸಿದ್ದಾರೆ.

“ಆರ್‌ಟಿಇ ಕಾಯ್ದೆ-2009ರಿಂದ ಧಾರ್ಮಿಕ ಶಿಕ್ಷಣ ಸಂಸ್ಥೆಗಳನ್ನು ಹೊರತುಪಡಿಸಿರುವುದು, ಕೇವಲ ಧಾರ್ಮಿಕ ಶಿಕ್ಷಣಸಂಸ್ಥೆಗಳಿಗೆ ಮಾತ್ರ ಹಾಜರಾಗುತ್ತಿರುವ ಮಕ್ಕಳನ್ನು ಸಾಮಾನ್ಯ ಶಿಕ್ಷಣ ವ್ಯವಸ್ಥೆಯಿಂದ ಹೊರಗಿಟ್ಟಂತಾಗಿದೆ. ಮಕ್ಕಳನ್ನು ಸಬಲೀಕರಣಗೊಳಿಸುವ ಉದ್ದೇಶದಿಂದ ರೂಪಿಸಲಾದ ಕಾಯ್ದೆಯು ತಪ್ಪು ವ್ಯಾಖ್ಯಾನದಿಂದಾಗಿ ಅವಕಾಶ ವಂಚಿತರಾಗುವ ಹಾಗೂ ತಾರತಮ್ಯದ ಹೊಸ ಪದರಗಳು ಸೃಷ್ಟಿಯಾಗಿವೆ” ಎಂದು ಅವರು ಹೇಳಿದ್ದಾರೆ.

‘ಧರ್ಮದ ಪಾಲಕರು ಅಥವಾ ಹಕ್ಕುಗಳ ದಮನಕಾರರು : ಮಕ್ಕಳ ಸಾಂವಿಧಾನಿಕ ಹಕ್ಕುಗಳ ವರ್ಸಸ್ ಮದ್ರಸಾಗಳು ’ಎಂಬ ರಾಷ್ಟ್ರೀಯ ಮಕ್ಕಳ ಹಕ್ಕುಗಳ ಆಯೋಗದ ವರದಿಯನ್ನು ಆಧರಿಸಿ ಕಾನೂಂಗೊ ಅವರು ಈ ಪತ್ರವನ್ನು ಬರೆದಿದ್ದಾರೆ.

ಇದನ್ನೂ ಓದಿ : ಗೋಶಾಲೆ ಸ್ವಚ್ಛಗೊಳಿಸಿ, ಅಲ್ಲೇ ಮಲಗಿದರೆ ಕ್ಯಾನ್ಸರ್‌ ಗುಣಪಡಿಸಬಹುದು : ಯುಪಿ ಸಚಿವರ ಹೊಸ ಸಂಶೋಧನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...