Homeಮುಖಪುಟಮದ್ರಸಾಗಳಿಗೆ ಧನ ಸಹಾಯ ನಿಲ್ಲಿಸುವಂತೆ ಮಕ್ಕಳ ಹಕ್ಕುಗಳ ಆಯೋಗ ಪತ್ರ : ವಿರೋಧ ವ್ಯಕ್ತಪಡಿಸಿದ ಮುಸ್ಲಿಂ...

ಮದ್ರಸಾಗಳಿಗೆ ಧನ ಸಹಾಯ ನಿಲ್ಲಿಸುವಂತೆ ಮಕ್ಕಳ ಹಕ್ಕುಗಳ ಆಯೋಗ ಪತ್ರ : ವಿರೋಧ ವ್ಯಕ್ತಪಡಿಸಿದ ಮುಸ್ಲಿಂ ಸಂಘಟನೆಗಳು

- Advertisement -
- Advertisement -

ಮದ್ರಸಾಗಳು ಮತ್ತು ಮದ್ರಸಾ ಮಂಡಳಿಗಳಿಗೆ ಧನಸಹಾಯ ನೀಡುವುದನ್ನು ನಿಲ್ಲಿಸುವಂತೆ ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (ಎನ್‌ಸಿಪಿಸಿಆರ್‌) ಪತ್ರ ಬರೆದಿರುವುದು ಮುಸ್ಲಿಂ ಸಂಘಟನೆಗಳ ಭಾರೀ ವಿರೋಧಕ್ಕೆ ಕಾರಣವಾಗಿದೆ.

ಎನ್‌ಸಿಪಿಸಿಆರ್‌ ಮದ್ರಸಾ ಮಂಡಳಿಗಳನ್ನು ಸ್ಥಗಿತಗೊಳಿಸುವಂತೆ ಮತ್ತು ಮುಚ್ಚುವಂತೆಯೂ ಶಿಫಾರಸು ಮಾಡಿದೆ.

ದೇಶದ ವಿವಿಧ ಪ್ರಮುಖ ಮುಸ್ಲಿಂ ಸಂಘಟನೆಗಳು ಎನ್‌ಸಿಪಿಸಿಆರ್‌ ಶಿಫಾರಸನ್ನು ಕಟುವಾಗಿ ವಿರೋಧಿಸಿವೆ. ವಿಶೇಷವಾಗಿ ಕೇರಳದ ಪ್ರಭಾವಿ ಮುಸ್ಲಿಂ ಸಂಘಟನೆಗಳಾದ ಸಮಸ್ತ ಎಪಿ ಮತ್ತು ಇಕೆ ವಿಭಾಗ ವಿರೋಧ ವ್ಯಕ್ತಪಡಿಸಿವೆ.

ಕೇರಳದ ಇಸ್ಲಾಮಿಕ್ ವಿದ್ವಾಂಸರ ಅತಿದೊಡ್ಡ ಸಂಘಟನೆಯಾದ ಸಮಸ್ತ ಕೇರಳ ಜಂ-ಇಯತುಲ್ ಉಲಮಾ (ಸಮಸ್ತ) ಸದಸ್ಯರು ಎನ್‌ಸಿಪಿಸಿಆರ್ ಶಿಫಾರಸು ಸಂಘ ಪರಿವಾರದ ಸೈದ್ಧಾಂತಿಕ ಯೋಜನೆಗಳನ್ನು ಕಾರ್ಯಗತಗೊಳಿಸುವ ಕಾರ್ಯಸೂಚಿಯ ಭಾಗವಾಗಿದೆ ಎಂದು ಹೇಳಿದ್ದಾರೆ.

ಸಮಸ್ತ ಮುಶಾವರದ ಸದಸ್ಯ ಉಮರ್ ಫೈಝಿ ಮುಕ್ಕಂ ಮಾತನಾಡಿ, ಈ ಶಿಫಾರಸ್ಸು ಮುಸ್ಲಿಮರನ್ನು ಗುರಿಯಾಗಿಸುವ ದೊಡ್ಡ ಕಾರ್ಯಸೂಚಿಯ ಭಾಗವಾಗಿದೆ ಎಂದಿದ್ದಾರೆ. ಜಮಾತ್-ಎ-ಇಸ್ಲಾಮಿ ಹಿಂದ್‌ನ ಕೇರಳ ರಾಜ್ಯ ಅಮೀರ್ ಪಿ ಮುಜೀಬ್ ರೆಹಮಾನ್ ಕೂಡ ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್), ಸಿಪಿಎಂ ಮತ್ತು ಕಾಂಗ್ರೆಸ್ ನಾಯಕರು ಕೂಡ ಎನ್‌ಸಿಪಿಸಿಆರ್‌ ಪತ್ರಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.

ಎನ್‌ಸಿಪಿಸಿಆರ್‌ ಶಿಫಾರಸು ಕೇರಳದ ಮದ್ರಸಾಗಳ ಕಾರ್ಯನಿರ್ವಹಣೆಯ ಮೇಲೆ ಪರಿಣಾಮ ಬೀರುವುದಿಲ್ಲ. ಏಕೆಂದರೆ ರಾಜ್ಯ ಸರ್ಕಾರವು ಇಲ್ಲಿನ ಮದ್ರಸಗಳಿಗೆ ಯಾವುದೇ ಹಣಕಾಸಿನ ನೆರವು ನೀಡುತ್ತಿಲ್ಲ ಎಂದು ಸಮಸ್ತದ ಯುವ ಘಟಕವಾದ ಸುನ್ನಿ ಯುವಜನ ಸಂಘದ (ಎಸ್‌ವೈಎಸ್) ರಾಜ್ಯ ಕಾರ್ಯದರ್ಶಿ ಅಬ್ದುಸ್ಸಮದ್ ಪೂಕ್ಕೊಟೂರ್ ಹೇಳಿದ್ದಾರೆ.

ಎನ್‌ಸಿಪಿಸಿಆರ್‌ ಶಿಫಾರಸು ಯಾವುದೇ ಕಾರಣಕ್ಕೆ ಒಪ್ಪಲು ಸಾಧ್ಯವಿಲ್ಲ. ಅದನ್ನು ವಾಪಸ್ ಪಡೆಯಬೇಕು ಎಂದು ಸಮಸ್ತ ಎಪಿ ವಿಭಾಗದ ಮದ್ರಸಾ ಅಧ್ಯಾಪಕರ ಸಂಘಟನೆ ಸುನ್ನಿ ಜಂ-ಇಯತುಲ್ ಮುಅಲ್ಲಿಮೀನ್‌ (ಎಸ್‌ಜೆಎಂ) ಕೇರಳ ಮತ್ತು ಕರ್ನಾಟಕದ ರಾಜ್ಯ ಘಟಕ ಹೇಳಿದೆ.

ಎನ್‌ಸಿಪಿಸಿಆರ್‌ ಶಿಫಾರಸು ಕೇರಳ ಮತ್ತು ಕರ್ನಾಟಕದ ಕರಾವಳಿ ಭಾಗದ ಮದ್ರಸಾಗಳಿಗೆ ಸದ್ಯಕ್ಕೆ ಪರಿಣಾಮ ಬೀರುವುದಿಲ್ಲ. ಈ ಶಿಫಾರಸನ್ನು ರಾಜ್ಯ ಸರ್ಕಾರಗಳು ಗಂಭೀರವಾಗಿ ಪರಿಗಣಿಸಿ ಕ್ರಮ ಕೈಗೊಂಡರೆ ಉತ್ತರ ಭಾರತದ ಮದ್ರಸಾಗಳಿಗೆ ದೊಡ್ಡ ಮಟ್ಟಿನ ಪರಿಣಾಮ ಬೀರಬಹುದು. ಕರ್ನಾಟಕದಲ್ಲಿ ಉತ್ತರ ಕರ್ನಾಟಕದ ಮದ್ರಸಾಗಳಿಗೂ ಸಮಸ್ಯೆ ಆಗಬಹುದು. ಮುಂದೊಂದು ದಿನ ಕೇರಳ ಮತ್ತು ಕರ್ನಾಟಕ ಕರಾವಳಿಯ ಮದ್ರಸಾಗಳಿಗೂ ಸಮಸ್ಯೆ ಉಂಟು ಮಾಡಬಹುದು ಎಂಬುವುದು ಕೇರಳದ ಮುಸ್ಲಿಂ ಸಂಘಟನೆಗಳ ವಾದ.

ಕರಾವಳಿ ಕರ್ನಾಟಕ ಮತ್ತು ಕೇರಳದಲ್ಲಿ ಮದ್ರಸಾಗಳೆಂದರೆ ಬೆಳಿಗ್ಗೆ ಮತ್ತು ಸಂಜೆ ಒಂದೆರಡು ಗಂಟೆಗಳ ಕಾಲ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುವ ಕೇಂದ್ರಗಳಾಗಿವೆ. ಮದ್ರಸಾದ ಅವಧಿಯ ಬಳಿಕ ಮಕ್ಕಳು ಶಾಲೆಗೆ ಹೋಗಿ ಶಿಕ್ಷಣ ಪಡೆಯುತ್ತಾರೆ. ಹತ್ತನೇ ತರಗತಿ ಬಳಿಕ ವಸತಿ ಸಹಿತ ಧಾರ್ಮಿಕ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳು, ಅಲ್ಲೇ ಪಿಯುಸಿ, ಪದವಿ ಶಿಕ್ಷಣ ಪಡೆಯುತ್ತಿದ್ದಾರೆ. ಈ ಮೂಲಕ ಧಾರ್ಮಿಕ ಶಿಕ್ಷಣ ಕೇಂದ್ರಗಳು ಸಮನ್ವಯ ಶಿಕ್ಷಣ ಕೇಂದ್ರಗಳಾಗಿ ಗುರುತಿಸಿಕೊಂಡಿವೆ.

ಎನ್‌ಸಿಪಿಸಿಆರ್‌ ಪತ್ರದಲ್ಲಿ ಏನಿದೆ? 

“ಮುಸ್ಲಿಮರು ಅಥವಾ ಇನ್ಯಾರೆ ಆದರೂ, ಅವರೆಲ್ಲರೂ 2009ರ ಶಿಕ್ಷಣದ ಹಕ್ಕು ಕಾಯ್ದೆಯಡಿ ಮಾನ್ಯತೆ ಪಡೆದ ಶಾಲೆಗಳಲ್ಲಿ ಮಾತ್ರವೇ ದಾಖಲಾಗಿರಬೇಕೆಂದು” ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಪ್ರಿಯಾಂಕ್ ಕಾನೂಂಗೊ ಅವರು ಪತ್ರದಲ್ಲಿ ತಿಳಿಸಿದ್ದಾರೆ.

“ಆರ್‌ಟಿಇ ಕಾಯ್ದೆ-2009ರಿಂದ ಧಾರ್ಮಿಕ ಶಿಕ್ಷಣ ಸಂಸ್ಥೆಗಳನ್ನು ಹೊರತುಪಡಿಸಿರುವುದು, ಕೇವಲ ಧಾರ್ಮಿಕ ಶಿಕ್ಷಣಸಂಸ್ಥೆಗಳಿಗೆ ಮಾತ್ರ ಹಾಜರಾಗುತ್ತಿರುವ ಮಕ್ಕಳನ್ನು ಸಾಮಾನ್ಯ ಶಿಕ್ಷಣ ವ್ಯವಸ್ಥೆಯಿಂದ ಹೊರಗಿಟ್ಟಂತಾಗಿದೆ. ಮಕ್ಕಳನ್ನು ಸಬಲೀಕರಣಗೊಳಿಸುವ ಉದ್ದೇಶದಿಂದ ರೂಪಿಸಲಾದ ಕಾಯ್ದೆಯು ತಪ್ಪು ವ್ಯಾಖ್ಯಾನದಿಂದಾಗಿ ಅವಕಾಶ ವಂಚಿತರಾಗುವ ಹಾಗೂ ತಾರತಮ್ಯದ ಹೊಸ ಪದರಗಳು ಸೃಷ್ಟಿಯಾಗಿವೆ” ಎಂದು ಅವರು ಹೇಳಿದ್ದಾರೆ.

‘ಧರ್ಮದ ಪಾಲಕರು ಅಥವಾ ಹಕ್ಕುಗಳ ದಮನಕಾರರು : ಮಕ್ಕಳ ಸಾಂವಿಧಾನಿಕ ಹಕ್ಕುಗಳ ವರ್ಸಸ್ ಮದ್ರಸಾಗಳು ’ಎಂಬ ರಾಷ್ಟ್ರೀಯ ಮಕ್ಕಳ ಹಕ್ಕುಗಳ ಆಯೋಗದ ವರದಿಯನ್ನು ಆಧರಿಸಿ ಕಾನೂಂಗೊ ಅವರು ಈ ಪತ್ರವನ್ನು ಬರೆದಿದ್ದಾರೆ.

ಇದನ್ನೂ ಓದಿ : ಗೋಶಾಲೆ ಸ್ವಚ್ಛಗೊಳಿಸಿ, ಅಲ್ಲೇ ಮಲಗಿದರೆ ಕ್ಯಾನ್ಸರ್‌ ಗುಣಪಡಿಸಬಹುದು : ಯುಪಿ ಸಚಿವರ ಹೊಸ ಸಂಶೋಧನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...