Homeಮುಖಪುಟಮದ್ರಸಾಗಳಿಗೆ ಧನ ಸಹಾಯ ನಿಲ್ಲಿಸುವಂತೆ ಮಕ್ಕಳ ಹಕ್ಕುಗಳ ಆಯೋಗ ಪತ್ರ : ವಿರೋಧ ವ್ಯಕ್ತಪಡಿಸಿದ ಮುಸ್ಲಿಂ...

ಮದ್ರಸಾಗಳಿಗೆ ಧನ ಸಹಾಯ ನಿಲ್ಲಿಸುವಂತೆ ಮಕ್ಕಳ ಹಕ್ಕುಗಳ ಆಯೋಗ ಪತ್ರ : ವಿರೋಧ ವ್ಯಕ್ತಪಡಿಸಿದ ಮುಸ್ಲಿಂ ಸಂಘಟನೆಗಳು

- Advertisement -
- Advertisement -

ಮದ್ರಸಾಗಳು ಮತ್ತು ಮದ್ರಸಾ ಮಂಡಳಿಗಳಿಗೆ ಧನಸಹಾಯ ನೀಡುವುದನ್ನು ನಿಲ್ಲಿಸುವಂತೆ ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (ಎನ್‌ಸಿಪಿಸಿಆರ್‌) ಪತ್ರ ಬರೆದಿರುವುದು ಮುಸ್ಲಿಂ ಸಂಘಟನೆಗಳ ಭಾರೀ ವಿರೋಧಕ್ಕೆ ಕಾರಣವಾಗಿದೆ.

ಎನ್‌ಸಿಪಿಸಿಆರ್‌ ಮದ್ರಸಾ ಮಂಡಳಿಗಳನ್ನು ಸ್ಥಗಿತಗೊಳಿಸುವಂತೆ ಮತ್ತು ಮುಚ್ಚುವಂತೆಯೂ ಶಿಫಾರಸು ಮಾಡಿದೆ.

ದೇಶದ ವಿವಿಧ ಪ್ರಮುಖ ಮುಸ್ಲಿಂ ಸಂಘಟನೆಗಳು ಎನ್‌ಸಿಪಿಸಿಆರ್‌ ಶಿಫಾರಸನ್ನು ಕಟುವಾಗಿ ವಿರೋಧಿಸಿವೆ. ವಿಶೇಷವಾಗಿ ಕೇರಳದ ಪ್ರಭಾವಿ ಮುಸ್ಲಿಂ ಸಂಘಟನೆಗಳಾದ ಸಮಸ್ತ ಎಪಿ ಮತ್ತು ಇಕೆ ವಿಭಾಗ ವಿರೋಧ ವ್ಯಕ್ತಪಡಿಸಿವೆ.

ಕೇರಳದ ಇಸ್ಲಾಮಿಕ್ ವಿದ್ವಾಂಸರ ಅತಿದೊಡ್ಡ ಸಂಘಟನೆಯಾದ ಸಮಸ್ತ ಕೇರಳ ಜಂ-ಇಯತುಲ್ ಉಲಮಾ (ಸಮಸ್ತ) ಸದಸ್ಯರು ಎನ್‌ಸಿಪಿಸಿಆರ್ ಶಿಫಾರಸು ಸಂಘ ಪರಿವಾರದ ಸೈದ್ಧಾಂತಿಕ ಯೋಜನೆಗಳನ್ನು ಕಾರ್ಯಗತಗೊಳಿಸುವ ಕಾರ್ಯಸೂಚಿಯ ಭಾಗವಾಗಿದೆ ಎಂದು ಹೇಳಿದ್ದಾರೆ.

ಸಮಸ್ತ ಮುಶಾವರದ ಸದಸ್ಯ ಉಮರ್ ಫೈಝಿ ಮುಕ್ಕಂ ಮಾತನಾಡಿ, ಈ ಶಿಫಾರಸ್ಸು ಮುಸ್ಲಿಮರನ್ನು ಗುರಿಯಾಗಿಸುವ ದೊಡ್ಡ ಕಾರ್ಯಸೂಚಿಯ ಭಾಗವಾಗಿದೆ ಎಂದಿದ್ದಾರೆ. ಜಮಾತ್-ಎ-ಇಸ್ಲಾಮಿ ಹಿಂದ್‌ನ ಕೇರಳ ರಾಜ್ಯ ಅಮೀರ್ ಪಿ ಮುಜೀಬ್ ರೆಹಮಾನ್ ಕೂಡ ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್), ಸಿಪಿಎಂ ಮತ್ತು ಕಾಂಗ್ರೆಸ್ ನಾಯಕರು ಕೂಡ ಎನ್‌ಸಿಪಿಸಿಆರ್‌ ಪತ್ರಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.

ಎನ್‌ಸಿಪಿಸಿಆರ್‌ ಶಿಫಾರಸು ಕೇರಳದ ಮದ್ರಸಾಗಳ ಕಾರ್ಯನಿರ್ವಹಣೆಯ ಮೇಲೆ ಪರಿಣಾಮ ಬೀರುವುದಿಲ್ಲ. ಏಕೆಂದರೆ ರಾಜ್ಯ ಸರ್ಕಾರವು ಇಲ್ಲಿನ ಮದ್ರಸಗಳಿಗೆ ಯಾವುದೇ ಹಣಕಾಸಿನ ನೆರವು ನೀಡುತ್ತಿಲ್ಲ ಎಂದು ಸಮಸ್ತದ ಯುವ ಘಟಕವಾದ ಸುನ್ನಿ ಯುವಜನ ಸಂಘದ (ಎಸ್‌ವೈಎಸ್) ರಾಜ್ಯ ಕಾರ್ಯದರ್ಶಿ ಅಬ್ದುಸ್ಸಮದ್ ಪೂಕ್ಕೊಟೂರ್ ಹೇಳಿದ್ದಾರೆ.

ಎನ್‌ಸಿಪಿಸಿಆರ್‌ ಶಿಫಾರಸು ಯಾವುದೇ ಕಾರಣಕ್ಕೆ ಒಪ್ಪಲು ಸಾಧ್ಯವಿಲ್ಲ. ಅದನ್ನು ವಾಪಸ್ ಪಡೆಯಬೇಕು ಎಂದು ಸಮಸ್ತ ಎಪಿ ವಿಭಾಗದ ಮದ್ರಸಾ ಅಧ್ಯಾಪಕರ ಸಂಘಟನೆ ಸುನ್ನಿ ಜಂ-ಇಯತುಲ್ ಮುಅಲ್ಲಿಮೀನ್‌ (ಎಸ್‌ಜೆಎಂ) ಕೇರಳ ಮತ್ತು ಕರ್ನಾಟಕದ ರಾಜ್ಯ ಘಟಕ ಹೇಳಿದೆ.

ಎನ್‌ಸಿಪಿಸಿಆರ್‌ ಶಿಫಾರಸು ಕೇರಳ ಮತ್ತು ಕರ್ನಾಟಕದ ಕರಾವಳಿ ಭಾಗದ ಮದ್ರಸಾಗಳಿಗೆ ಸದ್ಯಕ್ಕೆ ಪರಿಣಾಮ ಬೀರುವುದಿಲ್ಲ. ಈ ಶಿಫಾರಸನ್ನು ರಾಜ್ಯ ಸರ್ಕಾರಗಳು ಗಂಭೀರವಾಗಿ ಪರಿಗಣಿಸಿ ಕ್ರಮ ಕೈಗೊಂಡರೆ ಉತ್ತರ ಭಾರತದ ಮದ್ರಸಾಗಳಿಗೆ ದೊಡ್ಡ ಮಟ್ಟಿನ ಪರಿಣಾಮ ಬೀರಬಹುದು. ಕರ್ನಾಟಕದಲ್ಲಿ ಉತ್ತರ ಕರ್ನಾಟಕದ ಮದ್ರಸಾಗಳಿಗೂ ಸಮಸ್ಯೆ ಆಗಬಹುದು. ಮುಂದೊಂದು ದಿನ ಕೇರಳ ಮತ್ತು ಕರ್ನಾಟಕ ಕರಾವಳಿಯ ಮದ್ರಸಾಗಳಿಗೂ ಸಮಸ್ಯೆ ಉಂಟು ಮಾಡಬಹುದು ಎಂಬುವುದು ಕೇರಳದ ಮುಸ್ಲಿಂ ಸಂಘಟನೆಗಳ ವಾದ.

ಕರಾವಳಿ ಕರ್ನಾಟಕ ಮತ್ತು ಕೇರಳದಲ್ಲಿ ಮದ್ರಸಾಗಳೆಂದರೆ ಬೆಳಿಗ್ಗೆ ಮತ್ತು ಸಂಜೆ ಒಂದೆರಡು ಗಂಟೆಗಳ ಕಾಲ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುವ ಕೇಂದ್ರಗಳಾಗಿವೆ. ಮದ್ರಸಾದ ಅವಧಿಯ ಬಳಿಕ ಮಕ್ಕಳು ಶಾಲೆಗೆ ಹೋಗಿ ಶಿಕ್ಷಣ ಪಡೆಯುತ್ತಾರೆ. ಹತ್ತನೇ ತರಗತಿ ಬಳಿಕ ವಸತಿ ಸಹಿತ ಧಾರ್ಮಿಕ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳು, ಅಲ್ಲೇ ಪಿಯುಸಿ, ಪದವಿ ಶಿಕ್ಷಣ ಪಡೆಯುತ್ತಿದ್ದಾರೆ. ಈ ಮೂಲಕ ಧಾರ್ಮಿಕ ಶಿಕ್ಷಣ ಕೇಂದ್ರಗಳು ಸಮನ್ವಯ ಶಿಕ್ಷಣ ಕೇಂದ್ರಗಳಾಗಿ ಗುರುತಿಸಿಕೊಂಡಿವೆ.

ಎನ್‌ಸಿಪಿಸಿಆರ್‌ ಪತ್ರದಲ್ಲಿ ಏನಿದೆ? 

“ಮುಸ್ಲಿಮರು ಅಥವಾ ಇನ್ಯಾರೆ ಆದರೂ, ಅವರೆಲ್ಲರೂ 2009ರ ಶಿಕ್ಷಣದ ಹಕ್ಕು ಕಾಯ್ದೆಯಡಿ ಮಾನ್ಯತೆ ಪಡೆದ ಶಾಲೆಗಳಲ್ಲಿ ಮಾತ್ರವೇ ದಾಖಲಾಗಿರಬೇಕೆಂದು” ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಪ್ರಿಯಾಂಕ್ ಕಾನೂಂಗೊ ಅವರು ಪತ್ರದಲ್ಲಿ ತಿಳಿಸಿದ್ದಾರೆ.

“ಆರ್‌ಟಿಇ ಕಾಯ್ದೆ-2009ರಿಂದ ಧಾರ್ಮಿಕ ಶಿಕ್ಷಣ ಸಂಸ್ಥೆಗಳನ್ನು ಹೊರತುಪಡಿಸಿರುವುದು, ಕೇವಲ ಧಾರ್ಮಿಕ ಶಿಕ್ಷಣಸಂಸ್ಥೆಗಳಿಗೆ ಮಾತ್ರ ಹಾಜರಾಗುತ್ತಿರುವ ಮಕ್ಕಳನ್ನು ಸಾಮಾನ್ಯ ಶಿಕ್ಷಣ ವ್ಯವಸ್ಥೆಯಿಂದ ಹೊರಗಿಟ್ಟಂತಾಗಿದೆ. ಮಕ್ಕಳನ್ನು ಸಬಲೀಕರಣಗೊಳಿಸುವ ಉದ್ದೇಶದಿಂದ ರೂಪಿಸಲಾದ ಕಾಯ್ದೆಯು ತಪ್ಪು ವ್ಯಾಖ್ಯಾನದಿಂದಾಗಿ ಅವಕಾಶ ವಂಚಿತರಾಗುವ ಹಾಗೂ ತಾರತಮ್ಯದ ಹೊಸ ಪದರಗಳು ಸೃಷ್ಟಿಯಾಗಿವೆ” ಎಂದು ಅವರು ಹೇಳಿದ್ದಾರೆ.

‘ಧರ್ಮದ ಪಾಲಕರು ಅಥವಾ ಹಕ್ಕುಗಳ ದಮನಕಾರರು : ಮಕ್ಕಳ ಸಾಂವಿಧಾನಿಕ ಹಕ್ಕುಗಳ ವರ್ಸಸ್ ಮದ್ರಸಾಗಳು ’ಎಂಬ ರಾಷ್ಟ್ರೀಯ ಮಕ್ಕಳ ಹಕ್ಕುಗಳ ಆಯೋಗದ ವರದಿಯನ್ನು ಆಧರಿಸಿ ಕಾನೂಂಗೊ ಅವರು ಈ ಪತ್ರವನ್ನು ಬರೆದಿದ್ದಾರೆ.

ಇದನ್ನೂ ಓದಿ : ಗೋಶಾಲೆ ಸ್ವಚ್ಛಗೊಳಿಸಿ, ಅಲ್ಲೇ ಮಲಗಿದರೆ ಕ್ಯಾನ್ಸರ್‌ ಗುಣಪಡಿಸಬಹುದು : ಯುಪಿ ಸಚಿವರ ಹೊಸ ಸಂಶೋಧನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...