Homeಮುಖಪುಟಮದ್ರಸಾಗಳಿಗೆ ಧನ ಸಹಾಯ ನಿಲ್ಲಿಸುವಂತೆ ಮಕ್ಕಳ ಹಕ್ಕುಗಳ ಆಯೋಗ ಪತ್ರ : ವಿರೋಧ ವ್ಯಕ್ತಪಡಿಸಿದ ಮುಸ್ಲಿಂ...

ಮದ್ರಸಾಗಳಿಗೆ ಧನ ಸಹಾಯ ನಿಲ್ಲಿಸುವಂತೆ ಮಕ್ಕಳ ಹಕ್ಕುಗಳ ಆಯೋಗ ಪತ್ರ : ವಿರೋಧ ವ್ಯಕ್ತಪಡಿಸಿದ ಮುಸ್ಲಿಂ ಸಂಘಟನೆಗಳು

- Advertisement -
- Advertisement -

ಮದ್ರಸಾಗಳು ಮತ್ತು ಮದ್ರಸಾ ಮಂಡಳಿಗಳಿಗೆ ಧನಸಹಾಯ ನೀಡುವುದನ್ನು ನಿಲ್ಲಿಸುವಂತೆ ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (ಎನ್‌ಸಿಪಿಸಿಆರ್‌) ಪತ್ರ ಬರೆದಿರುವುದು ಮುಸ್ಲಿಂ ಸಂಘಟನೆಗಳ ಭಾರೀ ವಿರೋಧಕ್ಕೆ ಕಾರಣವಾಗಿದೆ.

ಎನ್‌ಸಿಪಿಸಿಆರ್‌ ಮದ್ರಸಾ ಮಂಡಳಿಗಳನ್ನು ಸ್ಥಗಿತಗೊಳಿಸುವಂತೆ ಮತ್ತು ಮುಚ್ಚುವಂತೆಯೂ ಶಿಫಾರಸು ಮಾಡಿದೆ.

ದೇಶದ ವಿವಿಧ ಪ್ರಮುಖ ಮುಸ್ಲಿಂ ಸಂಘಟನೆಗಳು ಎನ್‌ಸಿಪಿಸಿಆರ್‌ ಶಿಫಾರಸನ್ನು ಕಟುವಾಗಿ ವಿರೋಧಿಸಿವೆ. ವಿಶೇಷವಾಗಿ ಕೇರಳದ ಪ್ರಭಾವಿ ಮುಸ್ಲಿಂ ಸಂಘಟನೆಗಳಾದ ಸಮಸ್ತ ಎಪಿ ಮತ್ತು ಇಕೆ ವಿಭಾಗ ವಿರೋಧ ವ್ಯಕ್ತಪಡಿಸಿವೆ.

ಕೇರಳದ ಇಸ್ಲಾಮಿಕ್ ವಿದ್ವಾಂಸರ ಅತಿದೊಡ್ಡ ಸಂಘಟನೆಯಾದ ಸಮಸ್ತ ಕೇರಳ ಜಂ-ಇಯತುಲ್ ಉಲಮಾ (ಸಮಸ್ತ) ಸದಸ್ಯರು ಎನ್‌ಸಿಪಿಸಿಆರ್ ಶಿಫಾರಸು ಸಂಘ ಪರಿವಾರದ ಸೈದ್ಧಾಂತಿಕ ಯೋಜನೆಗಳನ್ನು ಕಾರ್ಯಗತಗೊಳಿಸುವ ಕಾರ್ಯಸೂಚಿಯ ಭಾಗವಾಗಿದೆ ಎಂದು ಹೇಳಿದ್ದಾರೆ.

ಸಮಸ್ತ ಮುಶಾವರದ ಸದಸ್ಯ ಉಮರ್ ಫೈಝಿ ಮುಕ್ಕಂ ಮಾತನಾಡಿ, ಈ ಶಿಫಾರಸ್ಸು ಮುಸ್ಲಿಮರನ್ನು ಗುರಿಯಾಗಿಸುವ ದೊಡ್ಡ ಕಾರ್ಯಸೂಚಿಯ ಭಾಗವಾಗಿದೆ ಎಂದಿದ್ದಾರೆ. ಜಮಾತ್-ಎ-ಇಸ್ಲಾಮಿ ಹಿಂದ್‌ನ ಕೇರಳ ರಾಜ್ಯ ಅಮೀರ್ ಪಿ ಮುಜೀಬ್ ರೆಹಮಾನ್ ಕೂಡ ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್), ಸಿಪಿಎಂ ಮತ್ತು ಕಾಂಗ್ರೆಸ್ ನಾಯಕರು ಕೂಡ ಎನ್‌ಸಿಪಿಸಿಆರ್‌ ಪತ್ರಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.

ಎನ್‌ಸಿಪಿಸಿಆರ್‌ ಶಿಫಾರಸು ಕೇರಳದ ಮದ್ರಸಾಗಳ ಕಾರ್ಯನಿರ್ವಹಣೆಯ ಮೇಲೆ ಪರಿಣಾಮ ಬೀರುವುದಿಲ್ಲ. ಏಕೆಂದರೆ ರಾಜ್ಯ ಸರ್ಕಾರವು ಇಲ್ಲಿನ ಮದ್ರಸಗಳಿಗೆ ಯಾವುದೇ ಹಣಕಾಸಿನ ನೆರವು ನೀಡುತ್ತಿಲ್ಲ ಎಂದು ಸಮಸ್ತದ ಯುವ ಘಟಕವಾದ ಸುನ್ನಿ ಯುವಜನ ಸಂಘದ (ಎಸ್‌ವೈಎಸ್) ರಾಜ್ಯ ಕಾರ್ಯದರ್ಶಿ ಅಬ್ದುಸ್ಸಮದ್ ಪೂಕ್ಕೊಟೂರ್ ಹೇಳಿದ್ದಾರೆ.

ಎನ್‌ಸಿಪಿಸಿಆರ್‌ ಶಿಫಾರಸು ಯಾವುದೇ ಕಾರಣಕ್ಕೆ ಒಪ್ಪಲು ಸಾಧ್ಯವಿಲ್ಲ. ಅದನ್ನು ವಾಪಸ್ ಪಡೆಯಬೇಕು ಎಂದು ಸಮಸ್ತ ಎಪಿ ವಿಭಾಗದ ಮದ್ರಸಾ ಅಧ್ಯಾಪಕರ ಸಂಘಟನೆ ಸುನ್ನಿ ಜಂ-ಇಯತುಲ್ ಮುಅಲ್ಲಿಮೀನ್‌ (ಎಸ್‌ಜೆಎಂ) ಕೇರಳ ಮತ್ತು ಕರ್ನಾಟಕದ ರಾಜ್ಯ ಘಟಕ ಹೇಳಿದೆ.

ಎನ್‌ಸಿಪಿಸಿಆರ್‌ ಶಿಫಾರಸು ಕೇರಳ ಮತ್ತು ಕರ್ನಾಟಕದ ಕರಾವಳಿ ಭಾಗದ ಮದ್ರಸಾಗಳಿಗೆ ಸದ್ಯಕ್ಕೆ ಪರಿಣಾಮ ಬೀರುವುದಿಲ್ಲ. ಈ ಶಿಫಾರಸನ್ನು ರಾಜ್ಯ ಸರ್ಕಾರಗಳು ಗಂಭೀರವಾಗಿ ಪರಿಗಣಿಸಿ ಕ್ರಮ ಕೈಗೊಂಡರೆ ಉತ್ತರ ಭಾರತದ ಮದ್ರಸಾಗಳಿಗೆ ದೊಡ್ಡ ಮಟ್ಟಿನ ಪರಿಣಾಮ ಬೀರಬಹುದು. ಕರ್ನಾಟಕದಲ್ಲಿ ಉತ್ತರ ಕರ್ನಾಟಕದ ಮದ್ರಸಾಗಳಿಗೂ ಸಮಸ್ಯೆ ಆಗಬಹುದು. ಮುಂದೊಂದು ದಿನ ಕೇರಳ ಮತ್ತು ಕರ್ನಾಟಕ ಕರಾವಳಿಯ ಮದ್ರಸಾಗಳಿಗೂ ಸಮಸ್ಯೆ ಉಂಟು ಮಾಡಬಹುದು ಎಂಬುವುದು ಕೇರಳದ ಮುಸ್ಲಿಂ ಸಂಘಟನೆಗಳ ವಾದ.

ಕರಾವಳಿ ಕರ್ನಾಟಕ ಮತ್ತು ಕೇರಳದಲ್ಲಿ ಮದ್ರಸಾಗಳೆಂದರೆ ಬೆಳಿಗ್ಗೆ ಮತ್ತು ಸಂಜೆ ಒಂದೆರಡು ಗಂಟೆಗಳ ಕಾಲ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುವ ಕೇಂದ್ರಗಳಾಗಿವೆ. ಮದ್ರಸಾದ ಅವಧಿಯ ಬಳಿಕ ಮಕ್ಕಳು ಶಾಲೆಗೆ ಹೋಗಿ ಶಿಕ್ಷಣ ಪಡೆಯುತ್ತಾರೆ. ಹತ್ತನೇ ತರಗತಿ ಬಳಿಕ ವಸತಿ ಸಹಿತ ಧಾರ್ಮಿಕ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳು, ಅಲ್ಲೇ ಪಿಯುಸಿ, ಪದವಿ ಶಿಕ್ಷಣ ಪಡೆಯುತ್ತಿದ್ದಾರೆ. ಈ ಮೂಲಕ ಧಾರ್ಮಿಕ ಶಿಕ್ಷಣ ಕೇಂದ್ರಗಳು ಸಮನ್ವಯ ಶಿಕ್ಷಣ ಕೇಂದ್ರಗಳಾಗಿ ಗುರುತಿಸಿಕೊಂಡಿವೆ.

ಎನ್‌ಸಿಪಿಸಿಆರ್‌ ಪತ್ರದಲ್ಲಿ ಏನಿದೆ? 

“ಮುಸ್ಲಿಮರು ಅಥವಾ ಇನ್ಯಾರೆ ಆದರೂ, ಅವರೆಲ್ಲರೂ 2009ರ ಶಿಕ್ಷಣದ ಹಕ್ಕು ಕಾಯ್ದೆಯಡಿ ಮಾನ್ಯತೆ ಪಡೆದ ಶಾಲೆಗಳಲ್ಲಿ ಮಾತ್ರವೇ ದಾಖಲಾಗಿರಬೇಕೆಂದು” ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಪ್ರಿಯಾಂಕ್ ಕಾನೂಂಗೊ ಅವರು ಪತ್ರದಲ್ಲಿ ತಿಳಿಸಿದ್ದಾರೆ.

“ಆರ್‌ಟಿಇ ಕಾಯ್ದೆ-2009ರಿಂದ ಧಾರ್ಮಿಕ ಶಿಕ್ಷಣ ಸಂಸ್ಥೆಗಳನ್ನು ಹೊರತುಪಡಿಸಿರುವುದು, ಕೇವಲ ಧಾರ್ಮಿಕ ಶಿಕ್ಷಣಸಂಸ್ಥೆಗಳಿಗೆ ಮಾತ್ರ ಹಾಜರಾಗುತ್ತಿರುವ ಮಕ್ಕಳನ್ನು ಸಾಮಾನ್ಯ ಶಿಕ್ಷಣ ವ್ಯವಸ್ಥೆಯಿಂದ ಹೊರಗಿಟ್ಟಂತಾಗಿದೆ. ಮಕ್ಕಳನ್ನು ಸಬಲೀಕರಣಗೊಳಿಸುವ ಉದ್ದೇಶದಿಂದ ರೂಪಿಸಲಾದ ಕಾಯ್ದೆಯು ತಪ್ಪು ವ್ಯಾಖ್ಯಾನದಿಂದಾಗಿ ಅವಕಾಶ ವಂಚಿತರಾಗುವ ಹಾಗೂ ತಾರತಮ್ಯದ ಹೊಸ ಪದರಗಳು ಸೃಷ್ಟಿಯಾಗಿವೆ” ಎಂದು ಅವರು ಹೇಳಿದ್ದಾರೆ.

‘ಧರ್ಮದ ಪಾಲಕರು ಅಥವಾ ಹಕ್ಕುಗಳ ದಮನಕಾರರು : ಮಕ್ಕಳ ಸಾಂವಿಧಾನಿಕ ಹಕ್ಕುಗಳ ವರ್ಸಸ್ ಮದ್ರಸಾಗಳು ’ಎಂಬ ರಾಷ್ಟ್ರೀಯ ಮಕ್ಕಳ ಹಕ್ಕುಗಳ ಆಯೋಗದ ವರದಿಯನ್ನು ಆಧರಿಸಿ ಕಾನೂಂಗೊ ಅವರು ಈ ಪತ್ರವನ್ನು ಬರೆದಿದ್ದಾರೆ.

ಇದನ್ನೂ ಓದಿ : ಗೋಶಾಲೆ ಸ್ವಚ್ಛಗೊಳಿಸಿ, ಅಲ್ಲೇ ಮಲಗಿದರೆ ಕ್ಯಾನ್ಸರ್‌ ಗುಣಪಡಿಸಬಹುದು : ಯುಪಿ ಸಚಿವರ ಹೊಸ ಸಂಶೋಧನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...