Homeಮುಖಪುಟಮದ್ರಸಾಗಳಿಗೆ ಧನ ಸಹಾಯ ನಿಲ್ಲಿಸುವಂತೆ ಮಕ್ಕಳ ಹಕ್ಕುಗಳ ಆಯೋಗ ಪತ್ರ : ವಿರೋಧ ವ್ಯಕ್ತಪಡಿಸಿದ ಮುಸ್ಲಿಂ...

ಮದ್ರಸಾಗಳಿಗೆ ಧನ ಸಹಾಯ ನಿಲ್ಲಿಸುವಂತೆ ಮಕ್ಕಳ ಹಕ್ಕುಗಳ ಆಯೋಗ ಪತ್ರ : ವಿರೋಧ ವ್ಯಕ್ತಪಡಿಸಿದ ಮುಸ್ಲಿಂ ಸಂಘಟನೆಗಳು

- Advertisement -
- Advertisement -

ಮದ್ರಸಾಗಳು ಮತ್ತು ಮದ್ರಸಾ ಮಂಡಳಿಗಳಿಗೆ ಧನಸಹಾಯ ನೀಡುವುದನ್ನು ನಿಲ್ಲಿಸುವಂತೆ ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (ಎನ್‌ಸಿಪಿಸಿಆರ್‌) ಪತ್ರ ಬರೆದಿರುವುದು ಮುಸ್ಲಿಂ ಸಂಘಟನೆಗಳ ಭಾರೀ ವಿರೋಧಕ್ಕೆ ಕಾರಣವಾಗಿದೆ.

ಎನ್‌ಸಿಪಿಸಿಆರ್‌ ಮದ್ರಸಾ ಮಂಡಳಿಗಳನ್ನು ಸ್ಥಗಿತಗೊಳಿಸುವಂತೆ ಮತ್ತು ಮುಚ್ಚುವಂತೆಯೂ ಶಿಫಾರಸು ಮಾಡಿದೆ.

ದೇಶದ ವಿವಿಧ ಪ್ರಮುಖ ಮುಸ್ಲಿಂ ಸಂಘಟನೆಗಳು ಎನ್‌ಸಿಪಿಸಿಆರ್‌ ಶಿಫಾರಸನ್ನು ಕಟುವಾಗಿ ವಿರೋಧಿಸಿವೆ. ವಿಶೇಷವಾಗಿ ಕೇರಳದ ಪ್ರಭಾವಿ ಮುಸ್ಲಿಂ ಸಂಘಟನೆಗಳಾದ ಸಮಸ್ತ ಎಪಿ ಮತ್ತು ಇಕೆ ವಿಭಾಗ ವಿರೋಧ ವ್ಯಕ್ತಪಡಿಸಿವೆ.

ಕೇರಳದ ಇಸ್ಲಾಮಿಕ್ ವಿದ್ವಾಂಸರ ಅತಿದೊಡ್ಡ ಸಂಘಟನೆಯಾದ ಸಮಸ್ತ ಕೇರಳ ಜಂ-ಇಯತುಲ್ ಉಲಮಾ (ಸಮಸ್ತ) ಸದಸ್ಯರು ಎನ್‌ಸಿಪಿಸಿಆರ್ ಶಿಫಾರಸು ಸಂಘ ಪರಿವಾರದ ಸೈದ್ಧಾಂತಿಕ ಯೋಜನೆಗಳನ್ನು ಕಾರ್ಯಗತಗೊಳಿಸುವ ಕಾರ್ಯಸೂಚಿಯ ಭಾಗವಾಗಿದೆ ಎಂದು ಹೇಳಿದ್ದಾರೆ.

ಸಮಸ್ತ ಮುಶಾವರದ ಸದಸ್ಯ ಉಮರ್ ಫೈಝಿ ಮುಕ್ಕಂ ಮಾತನಾಡಿ, ಈ ಶಿಫಾರಸ್ಸು ಮುಸ್ಲಿಮರನ್ನು ಗುರಿಯಾಗಿಸುವ ದೊಡ್ಡ ಕಾರ್ಯಸೂಚಿಯ ಭಾಗವಾಗಿದೆ ಎಂದಿದ್ದಾರೆ. ಜಮಾತ್-ಎ-ಇಸ್ಲಾಮಿ ಹಿಂದ್‌ನ ಕೇರಳ ರಾಜ್ಯ ಅಮೀರ್ ಪಿ ಮುಜೀಬ್ ರೆಹಮಾನ್ ಕೂಡ ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್), ಸಿಪಿಎಂ ಮತ್ತು ಕಾಂಗ್ರೆಸ್ ನಾಯಕರು ಕೂಡ ಎನ್‌ಸಿಪಿಸಿಆರ್‌ ಪತ್ರಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.

ಎನ್‌ಸಿಪಿಸಿಆರ್‌ ಶಿಫಾರಸು ಕೇರಳದ ಮದ್ರಸಾಗಳ ಕಾರ್ಯನಿರ್ವಹಣೆಯ ಮೇಲೆ ಪರಿಣಾಮ ಬೀರುವುದಿಲ್ಲ. ಏಕೆಂದರೆ ರಾಜ್ಯ ಸರ್ಕಾರವು ಇಲ್ಲಿನ ಮದ್ರಸಗಳಿಗೆ ಯಾವುದೇ ಹಣಕಾಸಿನ ನೆರವು ನೀಡುತ್ತಿಲ್ಲ ಎಂದು ಸಮಸ್ತದ ಯುವ ಘಟಕವಾದ ಸುನ್ನಿ ಯುವಜನ ಸಂಘದ (ಎಸ್‌ವೈಎಸ್) ರಾಜ್ಯ ಕಾರ್ಯದರ್ಶಿ ಅಬ್ದುಸ್ಸಮದ್ ಪೂಕ್ಕೊಟೂರ್ ಹೇಳಿದ್ದಾರೆ.

ಎನ್‌ಸಿಪಿಸಿಆರ್‌ ಶಿಫಾರಸು ಯಾವುದೇ ಕಾರಣಕ್ಕೆ ಒಪ್ಪಲು ಸಾಧ್ಯವಿಲ್ಲ. ಅದನ್ನು ವಾಪಸ್ ಪಡೆಯಬೇಕು ಎಂದು ಸಮಸ್ತ ಎಪಿ ವಿಭಾಗದ ಮದ್ರಸಾ ಅಧ್ಯಾಪಕರ ಸಂಘಟನೆ ಸುನ್ನಿ ಜಂ-ಇಯತುಲ್ ಮುಅಲ್ಲಿಮೀನ್‌ (ಎಸ್‌ಜೆಎಂ) ಕೇರಳ ಮತ್ತು ಕರ್ನಾಟಕದ ರಾಜ್ಯ ಘಟಕ ಹೇಳಿದೆ.

ಎನ್‌ಸಿಪಿಸಿಆರ್‌ ಶಿಫಾರಸು ಕೇರಳ ಮತ್ತು ಕರ್ನಾಟಕದ ಕರಾವಳಿ ಭಾಗದ ಮದ್ರಸಾಗಳಿಗೆ ಸದ್ಯಕ್ಕೆ ಪರಿಣಾಮ ಬೀರುವುದಿಲ್ಲ. ಈ ಶಿಫಾರಸನ್ನು ರಾಜ್ಯ ಸರ್ಕಾರಗಳು ಗಂಭೀರವಾಗಿ ಪರಿಗಣಿಸಿ ಕ್ರಮ ಕೈಗೊಂಡರೆ ಉತ್ತರ ಭಾರತದ ಮದ್ರಸಾಗಳಿಗೆ ದೊಡ್ಡ ಮಟ್ಟಿನ ಪರಿಣಾಮ ಬೀರಬಹುದು. ಕರ್ನಾಟಕದಲ್ಲಿ ಉತ್ತರ ಕರ್ನಾಟಕದ ಮದ್ರಸಾಗಳಿಗೂ ಸಮಸ್ಯೆ ಆಗಬಹುದು. ಮುಂದೊಂದು ದಿನ ಕೇರಳ ಮತ್ತು ಕರ್ನಾಟಕ ಕರಾವಳಿಯ ಮದ್ರಸಾಗಳಿಗೂ ಸಮಸ್ಯೆ ಉಂಟು ಮಾಡಬಹುದು ಎಂಬುವುದು ಕೇರಳದ ಮುಸ್ಲಿಂ ಸಂಘಟನೆಗಳ ವಾದ.

ಕರಾವಳಿ ಕರ್ನಾಟಕ ಮತ್ತು ಕೇರಳದಲ್ಲಿ ಮದ್ರಸಾಗಳೆಂದರೆ ಬೆಳಿಗ್ಗೆ ಮತ್ತು ಸಂಜೆ ಒಂದೆರಡು ಗಂಟೆಗಳ ಕಾಲ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುವ ಕೇಂದ್ರಗಳಾಗಿವೆ. ಮದ್ರಸಾದ ಅವಧಿಯ ಬಳಿಕ ಮಕ್ಕಳು ಶಾಲೆಗೆ ಹೋಗಿ ಶಿಕ್ಷಣ ಪಡೆಯುತ್ತಾರೆ. ಹತ್ತನೇ ತರಗತಿ ಬಳಿಕ ವಸತಿ ಸಹಿತ ಧಾರ್ಮಿಕ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳು, ಅಲ್ಲೇ ಪಿಯುಸಿ, ಪದವಿ ಶಿಕ್ಷಣ ಪಡೆಯುತ್ತಿದ್ದಾರೆ. ಈ ಮೂಲಕ ಧಾರ್ಮಿಕ ಶಿಕ್ಷಣ ಕೇಂದ್ರಗಳು ಸಮನ್ವಯ ಶಿಕ್ಷಣ ಕೇಂದ್ರಗಳಾಗಿ ಗುರುತಿಸಿಕೊಂಡಿವೆ.

ಎನ್‌ಸಿಪಿಸಿಆರ್‌ ಪತ್ರದಲ್ಲಿ ಏನಿದೆ? 

“ಮುಸ್ಲಿಮರು ಅಥವಾ ಇನ್ಯಾರೆ ಆದರೂ, ಅವರೆಲ್ಲರೂ 2009ರ ಶಿಕ್ಷಣದ ಹಕ್ಕು ಕಾಯ್ದೆಯಡಿ ಮಾನ್ಯತೆ ಪಡೆದ ಶಾಲೆಗಳಲ್ಲಿ ಮಾತ್ರವೇ ದಾಖಲಾಗಿರಬೇಕೆಂದು” ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಪ್ರಿಯಾಂಕ್ ಕಾನೂಂಗೊ ಅವರು ಪತ್ರದಲ್ಲಿ ತಿಳಿಸಿದ್ದಾರೆ.

“ಆರ್‌ಟಿಇ ಕಾಯ್ದೆ-2009ರಿಂದ ಧಾರ್ಮಿಕ ಶಿಕ್ಷಣ ಸಂಸ್ಥೆಗಳನ್ನು ಹೊರತುಪಡಿಸಿರುವುದು, ಕೇವಲ ಧಾರ್ಮಿಕ ಶಿಕ್ಷಣಸಂಸ್ಥೆಗಳಿಗೆ ಮಾತ್ರ ಹಾಜರಾಗುತ್ತಿರುವ ಮಕ್ಕಳನ್ನು ಸಾಮಾನ್ಯ ಶಿಕ್ಷಣ ವ್ಯವಸ್ಥೆಯಿಂದ ಹೊರಗಿಟ್ಟಂತಾಗಿದೆ. ಮಕ್ಕಳನ್ನು ಸಬಲೀಕರಣಗೊಳಿಸುವ ಉದ್ದೇಶದಿಂದ ರೂಪಿಸಲಾದ ಕಾಯ್ದೆಯು ತಪ್ಪು ವ್ಯಾಖ್ಯಾನದಿಂದಾಗಿ ಅವಕಾಶ ವಂಚಿತರಾಗುವ ಹಾಗೂ ತಾರತಮ್ಯದ ಹೊಸ ಪದರಗಳು ಸೃಷ್ಟಿಯಾಗಿವೆ” ಎಂದು ಅವರು ಹೇಳಿದ್ದಾರೆ.

‘ಧರ್ಮದ ಪಾಲಕರು ಅಥವಾ ಹಕ್ಕುಗಳ ದಮನಕಾರರು : ಮಕ್ಕಳ ಸಾಂವಿಧಾನಿಕ ಹಕ್ಕುಗಳ ವರ್ಸಸ್ ಮದ್ರಸಾಗಳು ’ಎಂಬ ರಾಷ್ಟ್ರೀಯ ಮಕ್ಕಳ ಹಕ್ಕುಗಳ ಆಯೋಗದ ವರದಿಯನ್ನು ಆಧರಿಸಿ ಕಾನೂಂಗೊ ಅವರು ಈ ಪತ್ರವನ್ನು ಬರೆದಿದ್ದಾರೆ.

ಇದನ್ನೂ ಓದಿ : ಗೋಶಾಲೆ ಸ್ವಚ್ಛಗೊಳಿಸಿ, ಅಲ್ಲೇ ಮಲಗಿದರೆ ಕ್ಯಾನ್ಸರ್‌ ಗುಣಪಡಿಸಬಹುದು : ಯುಪಿ ಸಚಿವರ ಹೊಸ ಸಂಶೋಧನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...