Homeಮುಖಪುಟಮದ್ರಸಾಗಳಿಗೆ ಧನ ಸಹಾಯ ನಿಲ್ಲಿಸುವಂತೆ ಮಕ್ಕಳ ಹಕ್ಕುಗಳ ಆಯೋಗ ಪತ್ರ : ವಿರೋಧ ವ್ಯಕ್ತಪಡಿಸಿದ ಮುಸ್ಲಿಂ...

ಮದ್ರಸಾಗಳಿಗೆ ಧನ ಸಹಾಯ ನಿಲ್ಲಿಸುವಂತೆ ಮಕ್ಕಳ ಹಕ್ಕುಗಳ ಆಯೋಗ ಪತ್ರ : ವಿರೋಧ ವ್ಯಕ್ತಪಡಿಸಿದ ಮುಸ್ಲಿಂ ಸಂಘಟನೆಗಳು

- Advertisement -
- Advertisement -

ಮದ್ರಸಾಗಳು ಮತ್ತು ಮದ್ರಸಾ ಮಂಡಳಿಗಳಿಗೆ ಧನಸಹಾಯ ನೀಡುವುದನ್ನು ನಿಲ್ಲಿಸುವಂತೆ ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (ಎನ್‌ಸಿಪಿಸಿಆರ್‌) ಪತ್ರ ಬರೆದಿರುವುದು ಮುಸ್ಲಿಂ ಸಂಘಟನೆಗಳ ಭಾರೀ ವಿರೋಧಕ್ಕೆ ಕಾರಣವಾಗಿದೆ.

ಎನ್‌ಸಿಪಿಸಿಆರ್‌ ಮದ್ರಸಾ ಮಂಡಳಿಗಳನ್ನು ಸ್ಥಗಿತಗೊಳಿಸುವಂತೆ ಮತ್ತು ಮುಚ್ಚುವಂತೆಯೂ ಶಿಫಾರಸು ಮಾಡಿದೆ.

ದೇಶದ ವಿವಿಧ ಪ್ರಮುಖ ಮುಸ್ಲಿಂ ಸಂಘಟನೆಗಳು ಎನ್‌ಸಿಪಿಸಿಆರ್‌ ಶಿಫಾರಸನ್ನು ಕಟುವಾಗಿ ವಿರೋಧಿಸಿವೆ. ವಿಶೇಷವಾಗಿ ಕೇರಳದ ಪ್ರಭಾವಿ ಮುಸ್ಲಿಂ ಸಂಘಟನೆಗಳಾದ ಸಮಸ್ತ ಎಪಿ ಮತ್ತು ಇಕೆ ವಿಭಾಗ ವಿರೋಧ ವ್ಯಕ್ತಪಡಿಸಿವೆ.

ಕೇರಳದ ಇಸ್ಲಾಮಿಕ್ ವಿದ್ವಾಂಸರ ಅತಿದೊಡ್ಡ ಸಂಘಟನೆಯಾದ ಸಮಸ್ತ ಕೇರಳ ಜಂ-ಇಯತುಲ್ ಉಲಮಾ (ಸಮಸ್ತ) ಸದಸ್ಯರು ಎನ್‌ಸಿಪಿಸಿಆರ್ ಶಿಫಾರಸು ಸಂಘ ಪರಿವಾರದ ಸೈದ್ಧಾಂತಿಕ ಯೋಜನೆಗಳನ್ನು ಕಾರ್ಯಗತಗೊಳಿಸುವ ಕಾರ್ಯಸೂಚಿಯ ಭಾಗವಾಗಿದೆ ಎಂದು ಹೇಳಿದ್ದಾರೆ.

ಸಮಸ್ತ ಮುಶಾವರದ ಸದಸ್ಯ ಉಮರ್ ಫೈಝಿ ಮುಕ್ಕಂ ಮಾತನಾಡಿ, ಈ ಶಿಫಾರಸ್ಸು ಮುಸ್ಲಿಮರನ್ನು ಗುರಿಯಾಗಿಸುವ ದೊಡ್ಡ ಕಾರ್ಯಸೂಚಿಯ ಭಾಗವಾಗಿದೆ ಎಂದಿದ್ದಾರೆ. ಜಮಾತ್-ಎ-ಇಸ್ಲಾಮಿ ಹಿಂದ್‌ನ ಕೇರಳ ರಾಜ್ಯ ಅಮೀರ್ ಪಿ ಮುಜೀಬ್ ರೆಹಮಾನ್ ಕೂಡ ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್), ಸಿಪಿಎಂ ಮತ್ತು ಕಾಂಗ್ರೆಸ್ ನಾಯಕರು ಕೂಡ ಎನ್‌ಸಿಪಿಸಿಆರ್‌ ಪತ್ರಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.

ಎನ್‌ಸಿಪಿಸಿಆರ್‌ ಶಿಫಾರಸು ಕೇರಳದ ಮದ್ರಸಾಗಳ ಕಾರ್ಯನಿರ್ವಹಣೆಯ ಮೇಲೆ ಪರಿಣಾಮ ಬೀರುವುದಿಲ್ಲ. ಏಕೆಂದರೆ ರಾಜ್ಯ ಸರ್ಕಾರವು ಇಲ್ಲಿನ ಮದ್ರಸಗಳಿಗೆ ಯಾವುದೇ ಹಣಕಾಸಿನ ನೆರವು ನೀಡುತ್ತಿಲ್ಲ ಎಂದು ಸಮಸ್ತದ ಯುವ ಘಟಕವಾದ ಸುನ್ನಿ ಯುವಜನ ಸಂಘದ (ಎಸ್‌ವೈಎಸ್) ರಾಜ್ಯ ಕಾರ್ಯದರ್ಶಿ ಅಬ್ದುಸ್ಸಮದ್ ಪೂಕ್ಕೊಟೂರ್ ಹೇಳಿದ್ದಾರೆ.

ಎನ್‌ಸಿಪಿಸಿಆರ್‌ ಶಿಫಾರಸು ಯಾವುದೇ ಕಾರಣಕ್ಕೆ ಒಪ್ಪಲು ಸಾಧ್ಯವಿಲ್ಲ. ಅದನ್ನು ವಾಪಸ್ ಪಡೆಯಬೇಕು ಎಂದು ಸಮಸ್ತ ಎಪಿ ವಿಭಾಗದ ಮದ್ರಸಾ ಅಧ್ಯಾಪಕರ ಸಂಘಟನೆ ಸುನ್ನಿ ಜಂ-ಇಯತುಲ್ ಮುಅಲ್ಲಿಮೀನ್‌ (ಎಸ್‌ಜೆಎಂ) ಕೇರಳ ಮತ್ತು ಕರ್ನಾಟಕದ ರಾಜ್ಯ ಘಟಕ ಹೇಳಿದೆ.

ಎನ್‌ಸಿಪಿಸಿಆರ್‌ ಶಿಫಾರಸು ಕೇರಳ ಮತ್ತು ಕರ್ನಾಟಕದ ಕರಾವಳಿ ಭಾಗದ ಮದ್ರಸಾಗಳಿಗೆ ಸದ್ಯಕ್ಕೆ ಪರಿಣಾಮ ಬೀರುವುದಿಲ್ಲ. ಈ ಶಿಫಾರಸನ್ನು ರಾಜ್ಯ ಸರ್ಕಾರಗಳು ಗಂಭೀರವಾಗಿ ಪರಿಗಣಿಸಿ ಕ್ರಮ ಕೈಗೊಂಡರೆ ಉತ್ತರ ಭಾರತದ ಮದ್ರಸಾಗಳಿಗೆ ದೊಡ್ಡ ಮಟ್ಟಿನ ಪರಿಣಾಮ ಬೀರಬಹುದು. ಕರ್ನಾಟಕದಲ್ಲಿ ಉತ್ತರ ಕರ್ನಾಟಕದ ಮದ್ರಸಾಗಳಿಗೂ ಸಮಸ್ಯೆ ಆಗಬಹುದು. ಮುಂದೊಂದು ದಿನ ಕೇರಳ ಮತ್ತು ಕರ್ನಾಟಕ ಕರಾವಳಿಯ ಮದ್ರಸಾಗಳಿಗೂ ಸಮಸ್ಯೆ ಉಂಟು ಮಾಡಬಹುದು ಎಂಬುವುದು ಕೇರಳದ ಮುಸ್ಲಿಂ ಸಂಘಟನೆಗಳ ವಾದ.

ಕರಾವಳಿ ಕರ್ನಾಟಕ ಮತ್ತು ಕೇರಳದಲ್ಲಿ ಮದ್ರಸಾಗಳೆಂದರೆ ಬೆಳಿಗ್ಗೆ ಮತ್ತು ಸಂಜೆ ಒಂದೆರಡು ಗಂಟೆಗಳ ಕಾಲ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುವ ಕೇಂದ್ರಗಳಾಗಿವೆ. ಮದ್ರಸಾದ ಅವಧಿಯ ಬಳಿಕ ಮಕ್ಕಳು ಶಾಲೆಗೆ ಹೋಗಿ ಶಿಕ್ಷಣ ಪಡೆಯುತ್ತಾರೆ. ಹತ್ತನೇ ತರಗತಿ ಬಳಿಕ ವಸತಿ ಸಹಿತ ಧಾರ್ಮಿಕ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳು, ಅಲ್ಲೇ ಪಿಯುಸಿ, ಪದವಿ ಶಿಕ್ಷಣ ಪಡೆಯುತ್ತಿದ್ದಾರೆ. ಈ ಮೂಲಕ ಧಾರ್ಮಿಕ ಶಿಕ್ಷಣ ಕೇಂದ್ರಗಳು ಸಮನ್ವಯ ಶಿಕ್ಷಣ ಕೇಂದ್ರಗಳಾಗಿ ಗುರುತಿಸಿಕೊಂಡಿವೆ.

ಎನ್‌ಸಿಪಿಸಿಆರ್‌ ಪತ್ರದಲ್ಲಿ ಏನಿದೆ? 

“ಮುಸ್ಲಿಮರು ಅಥವಾ ಇನ್ಯಾರೆ ಆದರೂ, ಅವರೆಲ್ಲರೂ 2009ರ ಶಿಕ್ಷಣದ ಹಕ್ಕು ಕಾಯ್ದೆಯಡಿ ಮಾನ್ಯತೆ ಪಡೆದ ಶಾಲೆಗಳಲ್ಲಿ ಮಾತ್ರವೇ ದಾಖಲಾಗಿರಬೇಕೆಂದು” ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಪ್ರಿಯಾಂಕ್ ಕಾನೂಂಗೊ ಅವರು ಪತ್ರದಲ್ಲಿ ತಿಳಿಸಿದ್ದಾರೆ.

“ಆರ್‌ಟಿಇ ಕಾಯ್ದೆ-2009ರಿಂದ ಧಾರ್ಮಿಕ ಶಿಕ್ಷಣ ಸಂಸ್ಥೆಗಳನ್ನು ಹೊರತುಪಡಿಸಿರುವುದು, ಕೇವಲ ಧಾರ್ಮಿಕ ಶಿಕ್ಷಣಸಂಸ್ಥೆಗಳಿಗೆ ಮಾತ್ರ ಹಾಜರಾಗುತ್ತಿರುವ ಮಕ್ಕಳನ್ನು ಸಾಮಾನ್ಯ ಶಿಕ್ಷಣ ವ್ಯವಸ್ಥೆಯಿಂದ ಹೊರಗಿಟ್ಟಂತಾಗಿದೆ. ಮಕ್ಕಳನ್ನು ಸಬಲೀಕರಣಗೊಳಿಸುವ ಉದ್ದೇಶದಿಂದ ರೂಪಿಸಲಾದ ಕಾಯ್ದೆಯು ತಪ್ಪು ವ್ಯಾಖ್ಯಾನದಿಂದಾಗಿ ಅವಕಾಶ ವಂಚಿತರಾಗುವ ಹಾಗೂ ತಾರತಮ್ಯದ ಹೊಸ ಪದರಗಳು ಸೃಷ್ಟಿಯಾಗಿವೆ” ಎಂದು ಅವರು ಹೇಳಿದ್ದಾರೆ.

‘ಧರ್ಮದ ಪಾಲಕರು ಅಥವಾ ಹಕ್ಕುಗಳ ದಮನಕಾರರು : ಮಕ್ಕಳ ಸಾಂವಿಧಾನಿಕ ಹಕ್ಕುಗಳ ವರ್ಸಸ್ ಮದ್ರಸಾಗಳು ’ಎಂಬ ರಾಷ್ಟ್ರೀಯ ಮಕ್ಕಳ ಹಕ್ಕುಗಳ ಆಯೋಗದ ವರದಿಯನ್ನು ಆಧರಿಸಿ ಕಾನೂಂಗೊ ಅವರು ಈ ಪತ್ರವನ್ನು ಬರೆದಿದ್ದಾರೆ.

ಇದನ್ನೂ ಓದಿ : ಗೋಶಾಲೆ ಸ್ವಚ್ಛಗೊಳಿಸಿ, ಅಲ್ಲೇ ಮಲಗಿದರೆ ಕ್ಯಾನ್ಸರ್‌ ಗುಣಪಡಿಸಬಹುದು : ಯುಪಿ ಸಚಿವರ ಹೊಸ ಸಂಶೋಧನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...