Homeಮುಖಪುಟಕೊರೊನಾದಿಂದ ಸತ್ತವರ ಸಮಾಧಿ ಮಾಡಬಾರದೆಂಬ ಅರ್ಜಿಗೆ ಸುಪ್ರೀಂನಲ್ಲಿ ತಕರಾರು

ಕೊರೊನಾದಿಂದ ಸತ್ತವರ ಸಮಾಧಿ ಮಾಡಬಾರದೆಂಬ ಅರ್ಜಿಗೆ ಸುಪ್ರೀಂನಲ್ಲಿ ತಕರಾರು

- Advertisement -
- Advertisement -

ಕೊರೊನಾ ವೈರಸ್ ಗೆ ಬಲಿಯಾದ ಜನರನ್ನು ತನ್ನ ನಿವಾಸದ ಬಳಿಯಿರುವ ಸ್ಮಶಾನದಲ್ಲಿ ಸಮಾಧಿ ಮಾಡುವುದನ್ನು ವಿರೋಧಿಸಿ ಮುಂಬೈ ನಿವಾಸಿ ಹಾಕಿದ್ದ ಮನವಿಯಲ್ಲಿ ಮಧ್ಯಪ್ರವೇಶಿಸಲು ಕೋರಿ ಜಮಿಯತ್ ಉಲಾಮಾ-ಇ-ಹಿಂದ್ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದೆ.

ತನ್ನ ಮನೆಯ ಪಕ್ಕದಲ್ಲಿರುವ ಸ್ಮಶಾನದಲ್ಲಿ ಕೊರೊನಾ ವೈರಸಿನಿಂದ ಮೃತಪಟ್ಟವರನ್ನು ಸಮಾಧಿ ಮಾಡಬಾರದು ಎಂದು ಕೋರಿ ಬಾಂಬೆ ಹೈಕೋರ್ಟಿಗೆ ಸ್ಥಳೀಯ ನಿವಾಸಿ ಪ್ರದೀಪ್ ಘಾಂಡಿ ಅರ್ಜಿ ಸಲ್ಲಿಸಿದ್ದರು. ಇದನ್ನು ಏಪ್ರಿಲ್ 27 ರಂದು ಬಾಂಬೆ ಹೈಕೋರ್ಟ್ ತಿರಸ್ಕರಿಸಿದ ನಂತರ ಪ್ರದೀಪ್  ಸುಪ್ರೀಂಕೋರ್ಟಿಗೆ ತೆರಳಿದ್ದರು. ಅವರು ಬಾಂದ್ರಾ ವೆಸ್ಟ್ ನ ಸ್ಮಶಾನದಲ್ಲಿ ಕೊರೊನಾ ರೋಗಿಗಳ ಸಮಾಧಿ ಮಾಡುವುದರಿಂದ ಪಕ್ಕದ ಪ್ರದೇಶಗಳಿಗೂ ಹರಡುತ್ತದೆ ಎಂದು ವಾದಿಸಿದ್ದರು.

ಮೇ 4 ರಂದು ಹೈಕೋರ್ಟ್ ಆದೇಶದ ವಿರುದ್ಧ ಪ್ರದೀಪ್ ಅವರ ಮನವಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುವ ಸಾಧ್ಯತೆ ಇದೆ. ನ್ಯಾಯಮೂರ್ತಿಗಳಾದ ಆರ್.ಎಫ್.ನಾರಿಮನ್ ಮತ್ತು ಇಂದಿರಾ ಬ್ಯಾನರ್ಜಿ ಅವರನ್ನೊಳಗೊಂಡ ನ್ಯಾಯಪೀಠದ ಮುಂದೆ ಈ ವಿಷಯವನ್ನು ಪಟ್ಟಿ ಮಾಡಲಾಗಿದೆ.

ಈ ವಿಷಯದಲ್ಲಿ ಮಧ್ಯಪ್ರವೇಶಿಸಲು ಪ್ರಯತ್ನಿಸುತ್ತಿರುವ ಜಮಿಯತ್ ಉಲಾಮಾ-ಇ-ಹಿಂದ್ ಕೊರೊನಾ ಸೋಂಕಿತರ ಶವಗಳನ್ನು ಹೂಳುವುದರಿಂದ ವೈರಸ್ ಹರಡುತ್ತದೆ ಎಂಬ ಆತಂಕವು ಆಧಾರರಹಿತವಾಗಿದೆ. ಸಮಾಧಿ ಮಾಡುವುದರಿಂದ ಯಾವುದೇ ಅಪಾಯವಿಲ್ಲ ಎಂದು ಹೇಳಿದೆ.

ಮೃತ ದೇಹಗಳನ್ನು ಸಮಾಧಿ ಮಾಡುವುದು ಇಸ್ಲಾಂ ಧರ್ಮದ ಆಚರಣೆಯಾಗಿದೆ. ಅದರಂತೆ ಕ್ರಿಶ್ಚಿಯನ್ ಧರ್ಮದಂತೆ ಇತರ ಧರ್ಮಗಳಲ್ಲೂ ಇದನ್ನು ಆಚರಿಸಲಾಗುತ್ತದೆ. ಇದು ಸಂವಿಧಾನ ನೀಡುವ ಹಕ್ಕಾಗಿದ್ದು, ಸಂವಿಧಾನದ 25 ನೇ ಪರಿಚ್ಛೇದದ ಅಡಿಯಲ್ಲಿ ಬರುವ ಧರ್ಮವನ್ನು ಆಚರಿಸುವ ಹಕ್ಕಿನ ಭಾಗವಾಗಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಕೊರನಾದಿಂದ ಸಾವನ್ನಪ್ಪಿದ ವ್ಯಕ್ತಿಗಳ ದೇಹಗಳಿಂದ ಸೋಂಕು ಹರಡುತ್ತದೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ಮನವಿಯಲ್ಲಿ ವಾದಿಸಲಾಗಿದೆ. ಅಲ್ಲದೆ ಕೊರೊನಾ ಸೋಂಕಿತ ವ್ಯಕ್ತಿಗಳ ಸಮಾಧಿ ಮಾಡಿರುವುದರಿಂದ ಅರ್ಜಿದಾರರ ನಿವಾಸವನ್ನು ಒಳಗೊಂಡಿರುವ ನೆರೆಯ ಪ್ರದೇಶಗಳಲ್ಲಿ ವೈರಲ್ ಸೋಂಕಿನ ಹರಡಿದೆ ಎಂಬುದಕ್ಕೆ ಕೂಡಾ ಯಾವುದೇ ಪುರಾವೆಗಳಿಲ್ಲ ಎಂದು ಜಮಿಯತ್ ಉಲಾಮಾ-ಇ-ಹಿಂದ್ ತನ್ನ ಮನವಿಯಲ್ಲಿ ತಿಳಿಸಿದೆ.

ಜಮಿಯತ್ ಉಲಾಮಾ-ಇ-ಹಿಂದ್ ಸಾಂಕ್ರಾಮಿಕ ಕಾಯಿಲೆಗೆ ಬಲಿಯಾದ ವ್ಯಕ್ತಿಗಳನ್ನು ದಹನ ಮಾಡಬೇಕು ಎಂಬುದು ಕಟ್ಟುಕತೆಯಲ್ಲದೆ ಮತ್ತೇನಲ್ಲ ಎಂದು ವಾದಿಸಿದೆ.


ಇದನ್ನೂ ಓದಿ: ಈ ಉನ್ಮಾದವನ್ನು ಸೃಷ್ಟಿಸಿದವರ್‍ಯಾರು? ಏನಾಗಿದೆ  ನನ್ನ ಮಂಗಳೂರಿಗೆ ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...