Homeಮುಖಪುಟಕೊರೊನಾದಿಂದ ಸತ್ತವರ ಸಮಾಧಿ ಮಾಡಬಾರದೆಂಬ ಅರ್ಜಿಗೆ ಸುಪ್ರೀಂನಲ್ಲಿ ತಕರಾರು

ಕೊರೊನಾದಿಂದ ಸತ್ತವರ ಸಮಾಧಿ ಮಾಡಬಾರದೆಂಬ ಅರ್ಜಿಗೆ ಸುಪ್ರೀಂನಲ್ಲಿ ತಕರಾರು

- Advertisement -
- Advertisement -

ಕೊರೊನಾ ವೈರಸ್ ಗೆ ಬಲಿಯಾದ ಜನರನ್ನು ತನ್ನ ನಿವಾಸದ ಬಳಿಯಿರುವ ಸ್ಮಶಾನದಲ್ಲಿ ಸಮಾಧಿ ಮಾಡುವುದನ್ನು ವಿರೋಧಿಸಿ ಮುಂಬೈ ನಿವಾಸಿ ಹಾಕಿದ್ದ ಮನವಿಯಲ್ಲಿ ಮಧ್ಯಪ್ರವೇಶಿಸಲು ಕೋರಿ ಜಮಿಯತ್ ಉಲಾಮಾ-ಇ-ಹಿಂದ್ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದೆ.

ತನ್ನ ಮನೆಯ ಪಕ್ಕದಲ್ಲಿರುವ ಸ್ಮಶಾನದಲ್ಲಿ ಕೊರೊನಾ ವೈರಸಿನಿಂದ ಮೃತಪಟ್ಟವರನ್ನು ಸಮಾಧಿ ಮಾಡಬಾರದು ಎಂದು ಕೋರಿ ಬಾಂಬೆ ಹೈಕೋರ್ಟಿಗೆ ಸ್ಥಳೀಯ ನಿವಾಸಿ ಪ್ರದೀಪ್ ಘಾಂಡಿ ಅರ್ಜಿ ಸಲ್ಲಿಸಿದ್ದರು. ಇದನ್ನು ಏಪ್ರಿಲ್ 27 ರಂದು ಬಾಂಬೆ ಹೈಕೋರ್ಟ್ ತಿರಸ್ಕರಿಸಿದ ನಂತರ ಪ್ರದೀಪ್  ಸುಪ್ರೀಂಕೋರ್ಟಿಗೆ ತೆರಳಿದ್ದರು. ಅವರು ಬಾಂದ್ರಾ ವೆಸ್ಟ್ ನ ಸ್ಮಶಾನದಲ್ಲಿ ಕೊರೊನಾ ರೋಗಿಗಳ ಸಮಾಧಿ ಮಾಡುವುದರಿಂದ ಪಕ್ಕದ ಪ್ರದೇಶಗಳಿಗೂ ಹರಡುತ್ತದೆ ಎಂದು ವಾದಿಸಿದ್ದರು.

ಮೇ 4 ರಂದು ಹೈಕೋರ್ಟ್ ಆದೇಶದ ವಿರುದ್ಧ ಪ್ರದೀಪ್ ಅವರ ಮನವಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುವ ಸಾಧ್ಯತೆ ಇದೆ. ನ್ಯಾಯಮೂರ್ತಿಗಳಾದ ಆರ್.ಎಫ್.ನಾರಿಮನ್ ಮತ್ತು ಇಂದಿರಾ ಬ್ಯಾನರ್ಜಿ ಅವರನ್ನೊಳಗೊಂಡ ನ್ಯಾಯಪೀಠದ ಮುಂದೆ ಈ ವಿಷಯವನ್ನು ಪಟ್ಟಿ ಮಾಡಲಾಗಿದೆ.

ಈ ವಿಷಯದಲ್ಲಿ ಮಧ್ಯಪ್ರವೇಶಿಸಲು ಪ್ರಯತ್ನಿಸುತ್ತಿರುವ ಜಮಿಯತ್ ಉಲಾಮಾ-ಇ-ಹಿಂದ್ ಕೊರೊನಾ ಸೋಂಕಿತರ ಶವಗಳನ್ನು ಹೂಳುವುದರಿಂದ ವೈರಸ್ ಹರಡುತ್ತದೆ ಎಂಬ ಆತಂಕವು ಆಧಾರರಹಿತವಾಗಿದೆ. ಸಮಾಧಿ ಮಾಡುವುದರಿಂದ ಯಾವುದೇ ಅಪಾಯವಿಲ್ಲ ಎಂದು ಹೇಳಿದೆ.

ಮೃತ ದೇಹಗಳನ್ನು ಸಮಾಧಿ ಮಾಡುವುದು ಇಸ್ಲಾಂ ಧರ್ಮದ ಆಚರಣೆಯಾಗಿದೆ. ಅದರಂತೆ ಕ್ರಿಶ್ಚಿಯನ್ ಧರ್ಮದಂತೆ ಇತರ ಧರ್ಮಗಳಲ್ಲೂ ಇದನ್ನು ಆಚರಿಸಲಾಗುತ್ತದೆ. ಇದು ಸಂವಿಧಾನ ನೀಡುವ ಹಕ್ಕಾಗಿದ್ದು, ಸಂವಿಧಾನದ 25 ನೇ ಪರಿಚ್ಛೇದದ ಅಡಿಯಲ್ಲಿ ಬರುವ ಧರ್ಮವನ್ನು ಆಚರಿಸುವ ಹಕ್ಕಿನ ಭಾಗವಾಗಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಕೊರನಾದಿಂದ ಸಾವನ್ನಪ್ಪಿದ ವ್ಯಕ್ತಿಗಳ ದೇಹಗಳಿಂದ ಸೋಂಕು ಹರಡುತ್ತದೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ಮನವಿಯಲ್ಲಿ ವಾದಿಸಲಾಗಿದೆ. ಅಲ್ಲದೆ ಕೊರೊನಾ ಸೋಂಕಿತ ವ್ಯಕ್ತಿಗಳ ಸಮಾಧಿ ಮಾಡಿರುವುದರಿಂದ ಅರ್ಜಿದಾರರ ನಿವಾಸವನ್ನು ಒಳಗೊಂಡಿರುವ ನೆರೆಯ ಪ್ರದೇಶಗಳಲ್ಲಿ ವೈರಲ್ ಸೋಂಕಿನ ಹರಡಿದೆ ಎಂಬುದಕ್ಕೆ ಕೂಡಾ ಯಾವುದೇ ಪುರಾವೆಗಳಿಲ್ಲ ಎಂದು ಜಮಿಯತ್ ಉಲಾಮಾ-ಇ-ಹಿಂದ್ ತನ್ನ ಮನವಿಯಲ್ಲಿ ತಿಳಿಸಿದೆ.

ಜಮಿಯತ್ ಉಲಾಮಾ-ಇ-ಹಿಂದ್ ಸಾಂಕ್ರಾಮಿಕ ಕಾಯಿಲೆಗೆ ಬಲಿಯಾದ ವ್ಯಕ್ತಿಗಳನ್ನು ದಹನ ಮಾಡಬೇಕು ಎಂಬುದು ಕಟ್ಟುಕತೆಯಲ್ಲದೆ ಮತ್ತೇನಲ್ಲ ಎಂದು ವಾದಿಸಿದೆ.


ಇದನ್ನೂ ಓದಿ: ಈ ಉನ್ಮಾದವನ್ನು ಸೃಷ್ಟಿಸಿದವರ್‍ಯಾರು? ಏನಾಗಿದೆ  ನನ್ನ ಮಂಗಳೂರಿಗೆ ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...