Homeಮುಖಪುಟಉತ್ತರಪ್ರದೇಶ: ಮುಸ್ಲಿಂ ಬಾಲಕನಿಗೆ ಕಪಾಳಮೋಕ್ಷ ಪ್ರಕರಣ; ಸರಕಾರಕ್ಕೆ ಸುಪ್ರೀಂಕೋರ್ಟ್ ತರಾಟೆ

ಉತ್ತರಪ್ರದೇಶ: ಮುಸ್ಲಿಂ ಬಾಲಕನಿಗೆ ಕಪಾಳಮೋಕ್ಷ ಪ್ರಕರಣ; ಸರಕಾರಕ್ಕೆ ಸುಪ್ರೀಂಕೋರ್ಟ್ ತರಾಟೆ

- Advertisement -
- Advertisement -

ಶಿಕ್ಷಕಿಯೋರ್ವರು ಮುಸ್ಲಿಂ ವಿದ್ಯಾರ್ಥಿಗೆ ಕಾಪಾಳಮೋಕ್ಷ ಮಾಡುವಂತೆ ಸಹಪಾಠಿ ವಿದ್ಯಾರ್ಥಿಗಳಿಗೆ ಸೂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ತನ್ನ ಆದೇಶ ಪಾಲಿಸದ ಉತ್ತರಪ್ರದೇಶ ಸರ್ಕಾರವನ್ನು ಸುಪ್ರೀಂಕೋರ್ಟ್‌ ತರಾಟಗೆ ತೆಗೆದುಕೊಂಡಿದೆ.

ಸಂತ್ರಸ್ತ ವಿದ್ಯಾರ್ಥಿ ಮತ್ತು ಕಪಾಳಕ್ಕೆ ಹೊಡಿದಿದ್ದ ಸಹಪಾಠಿಗೆ ಆಪ್ತ ಸಮಾಲೋಚನೆ ನಡೆಸಲು ಏಜೆನ್ಸಿಯನ್ನು ನೇಮಿಸುವಂತೆ ಸುಪ್ರೀಂಕೋರ್ಟ್‌ ಉತ್ತರಪ್ರದೇಶ ಸರಕಾರಕ್ಕೆ ಸೂಚಿಸಿತ್ತು. ಆದರೆ ಆದೇಶವನ್ನು ಸರ್ಕಾರ ಪಾಲಿಸಿಲ್ಲ.

ಆದೇಶ ಪಾಲನೆಯಲ್ಲಿ ಲೋಪವನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಮೂರ್ತಿ ಅಭಯ್‌ ಎಸ್‌ ಓಕಾ ಮತ್ತು ಪಂಕಜ್‌ ಮಿತ್ತಲ್‌ ಅವರಿದ್ದ ಪೀಠ, ನ್ಯಾಯಾಲಯ ಕಠಿಣ ಕ್ರಮ ಕೈಗೊಳ್ಳಬಾರದು ಎಂದಾದರೆ ಮುಂದಿನ ವಿಚಾರಣೆಗೆ ‌ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹಾಜರಾಗಬೇಕು ಎಂದು ಸೂಚಿಸಿದೆ.

ಸಂತ್ರಸ್ತ ವಿದ್ಯಾರ್ಥಿ ಮತ್ತು ಸಹಪಾಠಿಗಳಿಗೆ ಆಪ್ತ ಸಮಾಲೋಚನೆ ಒದಗಿಸುವ ಕಾರ್ಯ ವಿಧಾನವನ್ನು ರೂಪಿಸಲು ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್‌ ಆಫ್‌ ಸೋಷಿಯಲ್‌ ಸೈನ್ಸ್‌ (ಟಿಐಎಸ್‌ಎಸ್‌)ನ್ನು ಕೋರ್ಟ್‌ ಇದೇ ವೇಳೆ ನೇಮಿಸಿದೆ.

ಉತ್ತರಪ್ರದೇಶ ಸರ್ಕಾರ ಮತ್ತು ನಿರ್ದಿಷ್ಟವಾಗಿ ಶಿಕ್ಷಣ ಇಲಾಖೆಯು ಈ ಕುರಿತು ನ್ಯಾಯಾಲಯ ಕಾಲಕಾಲಕ್ಕೆ ಹೊರಡಿಸಿದ ವಿವಿಧ ಆದೇಶಗಳನ್ನು ಪಾಲಿಸಿಲ್ಲ. ಸಂತ್ರಸ್ತ ಮಗು ಮತ್ತು ಘಟನೆಯಲ್ಲಿ ಭಾಗಿಯಾಗಿರುವ ಇತರ ಮಕ್ಕಳಿಗೆ ಸರಿಯಾದ ಕೌನ್ಸೆಲಿಂಗ್ ನಡೆಸಿಲ್ಲ ಎಂದು ನ್ಯಾಯಾಲಯ ಗಮನಿಸಿದೆ.

ನಾವು ಮುಂಬೈ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸಸ್ಸ್ ಸಂಸ್ಥೆಯನ್ನು ನೇಮಿಸಿದ್ದೇವೆ.  ಟಿಐಎಸ್‌ಎಸ್‌ನ ಮೇಲ್ವಿಚಾರಣೆಯಲ್ಲಿ ಕೌನ್ಸೆಲಿಂಗ್ ನಡೆಯಲಿದೆ. ಸಂಸ್ಥೆಗೆ ಎಲ್ಲಾ ಮೂಲಸೌಕರ್ಯ, ನೆರವು ಮತ್ತು ಬೆಂಬಲವನ್ನು ಒದಗಿಸುವಂತೆ ಯುಪಿ ಸರ್ಕಾರಕ್ಕೆ ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ ಮತ್ತು ಮುಂದಿನ ವಿಚಾರಣೆಯ ಡಿ. 11 ರ ಮೊದಲು ವರದಿಯನ್ನು ಸಲ್ಲಿಸುವಂತೆ ಆದೇಶಿಸಿದೆ.

ನ್ಯಾಯಾಲಯದ ಯಾವುದೇ ಬಲವಾದ ಕ್ರಮವನ್ನು ತಪ್ಪಿಸಲು ನಾವು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ವೈಯಕ್ತಿಕವಾಗಿ ಹಾಜರಾಗುವಂತೆ ನಿರ್ದೇಶಿಸುತ್ತೇವೆ. ಅವರು ಈ ವಿಷಯವನ್ನು ವೈಯಕ್ತಿಕವಾಗಿ ಪರಿಶೀಲಿಸುತ್ತಾರೆ ಮತ್ತು ನಿರ್ದೇಶನಗಳನ್ನು ಅನುಸರಿಸುತ್ತಾರೆ ಎಂದು ನಾವು ಭಾವಿಸುತ್ತೇವೆ ಎಂದು ಪೀಠ ಹೇಳಿದೆ.

ಈ ಪ್ರಕರಣದ ತ್ವರಿತ ವಿಚಾರಣೆಗೆ ಮಹಾತ್ಮಾ ಗಾಂಧೀಜಿ ಅವರ ಮರಿಮೊಮ್ಮಗ ತುಷಾರ್‌ ಗಾಂಧಿ ಸುಪ್ರೀಂ ಕೋರ್ಟ್‌ನಲ್ಲಿ ಮನವಿ ಸಲ್ಲಿಸಿದ್ದರು.

ಮುಸ್ಲಿಂ ಸಹಪಾಠಿಗೆ ಕಪಾಳಮೋಕ್ಷ ಮಾಡುವಂತೆ ಸಹಪಾಠಿ ವಿದ್ಯಾರ್ಥಿಗಳಿಗೆ ಶಿಕ್ಷಕಿ ತೃಪ್ತಿ ತ್ಯಾಗಿ ಸೂಚಿಸಿದ್ದರು. ತ್ಯಾಗಿ 7 ವರ್ಷದ ಬಾಲಕನಿಗೆ ಕಪಾಳಮೋಕ್ಷ ಮಾಡುವಂತೆ ವಿದ್ಯಾರ್ಥಿಗಳಿಗೆ ಸೂಚಿಸಿರುವುದು, ಕೋಮುವಾದಿ ಟೀಕೆ ಮಾಡಿದ್ದು ಬಾಲಕನು ಕಣ್ಣೀರು ಸುರಿಸುತ್ತಾ ಅಸಹಾಯಕರಾಗಿ ನಿಂತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ವೈರಲ್‌ ಆಗಿತ್ತು. ಪ್ರಕರಣ ದೇಶದಾದ್ಯಂತ ಭಾರೀ ಸಂಚಲನವನ್ನು ಮೂಡಿಸಿತ್ತು. ಬಳಿಕ ಶಿಕ್ಷಕಿಯ ವಿರುದ್ಧ ಮುಜಪ್ಫರನಗರ ಪೊಲೀಸರು ಪ್ರಕರಣವನ್ನು ದಾಖಲಿಸಿದ್ದರು.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...