Homeಮುಖಪುಟಉತ್ತರಪ್ರದೇಶ: ಮುಸ್ಲಿಂ ಬಾಲಕನಿಗೆ ಕಪಾಳಮೋಕ್ಷ ಪ್ರಕರಣ; ಸರಕಾರಕ್ಕೆ ಸುಪ್ರೀಂಕೋರ್ಟ್ ತರಾಟೆ

ಉತ್ತರಪ್ರದೇಶ: ಮುಸ್ಲಿಂ ಬಾಲಕನಿಗೆ ಕಪಾಳಮೋಕ್ಷ ಪ್ರಕರಣ; ಸರಕಾರಕ್ಕೆ ಸುಪ್ರೀಂಕೋರ್ಟ್ ತರಾಟೆ

- Advertisement -
- Advertisement -

ಶಿಕ್ಷಕಿಯೋರ್ವರು ಮುಸ್ಲಿಂ ವಿದ್ಯಾರ್ಥಿಗೆ ಕಾಪಾಳಮೋಕ್ಷ ಮಾಡುವಂತೆ ಸಹಪಾಠಿ ವಿದ್ಯಾರ್ಥಿಗಳಿಗೆ ಸೂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ತನ್ನ ಆದೇಶ ಪಾಲಿಸದ ಉತ್ತರಪ್ರದೇಶ ಸರ್ಕಾರವನ್ನು ಸುಪ್ರೀಂಕೋರ್ಟ್‌ ತರಾಟಗೆ ತೆಗೆದುಕೊಂಡಿದೆ.

ಸಂತ್ರಸ್ತ ವಿದ್ಯಾರ್ಥಿ ಮತ್ತು ಕಪಾಳಕ್ಕೆ ಹೊಡಿದಿದ್ದ ಸಹಪಾಠಿಗೆ ಆಪ್ತ ಸಮಾಲೋಚನೆ ನಡೆಸಲು ಏಜೆನ್ಸಿಯನ್ನು ನೇಮಿಸುವಂತೆ ಸುಪ್ರೀಂಕೋರ್ಟ್‌ ಉತ್ತರಪ್ರದೇಶ ಸರಕಾರಕ್ಕೆ ಸೂಚಿಸಿತ್ತು. ಆದರೆ ಆದೇಶವನ್ನು ಸರ್ಕಾರ ಪಾಲಿಸಿಲ್ಲ.

ಆದೇಶ ಪಾಲನೆಯಲ್ಲಿ ಲೋಪವನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಮೂರ್ತಿ ಅಭಯ್‌ ಎಸ್‌ ಓಕಾ ಮತ್ತು ಪಂಕಜ್‌ ಮಿತ್ತಲ್‌ ಅವರಿದ್ದ ಪೀಠ, ನ್ಯಾಯಾಲಯ ಕಠಿಣ ಕ್ರಮ ಕೈಗೊಳ್ಳಬಾರದು ಎಂದಾದರೆ ಮುಂದಿನ ವಿಚಾರಣೆಗೆ ‌ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹಾಜರಾಗಬೇಕು ಎಂದು ಸೂಚಿಸಿದೆ.

ಸಂತ್ರಸ್ತ ವಿದ್ಯಾರ್ಥಿ ಮತ್ತು ಸಹಪಾಠಿಗಳಿಗೆ ಆಪ್ತ ಸಮಾಲೋಚನೆ ಒದಗಿಸುವ ಕಾರ್ಯ ವಿಧಾನವನ್ನು ರೂಪಿಸಲು ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್‌ ಆಫ್‌ ಸೋಷಿಯಲ್‌ ಸೈನ್ಸ್‌ (ಟಿಐಎಸ್‌ಎಸ್‌)ನ್ನು ಕೋರ್ಟ್‌ ಇದೇ ವೇಳೆ ನೇಮಿಸಿದೆ.

ಉತ್ತರಪ್ರದೇಶ ಸರ್ಕಾರ ಮತ್ತು ನಿರ್ದಿಷ್ಟವಾಗಿ ಶಿಕ್ಷಣ ಇಲಾಖೆಯು ಈ ಕುರಿತು ನ್ಯಾಯಾಲಯ ಕಾಲಕಾಲಕ್ಕೆ ಹೊರಡಿಸಿದ ವಿವಿಧ ಆದೇಶಗಳನ್ನು ಪಾಲಿಸಿಲ್ಲ. ಸಂತ್ರಸ್ತ ಮಗು ಮತ್ತು ಘಟನೆಯಲ್ಲಿ ಭಾಗಿಯಾಗಿರುವ ಇತರ ಮಕ್ಕಳಿಗೆ ಸರಿಯಾದ ಕೌನ್ಸೆಲಿಂಗ್ ನಡೆಸಿಲ್ಲ ಎಂದು ನ್ಯಾಯಾಲಯ ಗಮನಿಸಿದೆ.

ನಾವು ಮುಂಬೈ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸಸ್ಸ್ ಸಂಸ್ಥೆಯನ್ನು ನೇಮಿಸಿದ್ದೇವೆ.  ಟಿಐಎಸ್‌ಎಸ್‌ನ ಮೇಲ್ವಿಚಾರಣೆಯಲ್ಲಿ ಕೌನ್ಸೆಲಿಂಗ್ ನಡೆಯಲಿದೆ. ಸಂಸ್ಥೆಗೆ ಎಲ್ಲಾ ಮೂಲಸೌಕರ್ಯ, ನೆರವು ಮತ್ತು ಬೆಂಬಲವನ್ನು ಒದಗಿಸುವಂತೆ ಯುಪಿ ಸರ್ಕಾರಕ್ಕೆ ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ ಮತ್ತು ಮುಂದಿನ ವಿಚಾರಣೆಯ ಡಿ. 11 ರ ಮೊದಲು ವರದಿಯನ್ನು ಸಲ್ಲಿಸುವಂತೆ ಆದೇಶಿಸಿದೆ.

ನ್ಯಾಯಾಲಯದ ಯಾವುದೇ ಬಲವಾದ ಕ್ರಮವನ್ನು ತಪ್ಪಿಸಲು ನಾವು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ವೈಯಕ್ತಿಕವಾಗಿ ಹಾಜರಾಗುವಂತೆ ನಿರ್ದೇಶಿಸುತ್ತೇವೆ. ಅವರು ಈ ವಿಷಯವನ್ನು ವೈಯಕ್ತಿಕವಾಗಿ ಪರಿಶೀಲಿಸುತ್ತಾರೆ ಮತ್ತು ನಿರ್ದೇಶನಗಳನ್ನು ಅನುಸರಿಸುತ್ತಾರೆ ಎಂದು ನಾವು ಭಾವಿಸುತ್ತೇವೆ ಎಂದು ಪೀಠ ಹೇಳಿದೆ.

ಈ ಪ್ರಕರಣದ ತ್ವರಿತ ವಿಚಾರಣೆಗೆ ಮಹಾತ್ಮಾ ಗಾಂಧೀಜಿ ಅವರ ಮರಿಮೊಮ್ಮಗ ತುಷಾರ್‌ ಗಾಂಧಿ ಸುಪ್ರೀಂ ಕೋರ್ಟ್‌ನಲ್ಲಿ ಮನವಿ ಸಲ್ಲಿಸಿದ್ದರು.

ಮುಸ್ಲಿಂ ಸಹಪಾಠಿಗೆ ಕಪಾಳಮೋಕ್ಷ ಮಾಡುವಂತೆ ಸಹಪಾಠಿ ವಿದ್ಯಾರ್ಥಿಗಳಿಗೆ ಶಿಕ್ಷಕಿ ತೃಪ್ತಿ ತ್ಯಾಗಿ ಸೂಚಿಸಿದ್ದರು. ತ್ಯಾಗಿ 7 ವರ್ಷದ ಬಾಲಕನಿಗೆ ಕಪಾಳಮೋಕ್ಷ ಮಾಡುವಂತೆ ವಿದ್ಯಾರ್ಥಿಗಳಿಗೆ ಸೂಚಿಸಿರುವುದು, ಕೋಮುವಾದಿ ಟೀಕೆ ಮಾಡಿದ್ದು ಬಾಲಕನು ಕಣ್ಣೀರು ಸುರಿಸುತ್ತಾ ಅಸಹಾಯಕರಾಗಿ ನಿಂತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ವೈರಲ್‌ ಆಗಿತ್ತು. ಪ್ರಕರಣ ದೇಶದಾದ್ಯಂತ ಭಾರೀ ಸಂಚಲನವನ್ನು ಮೂಡಿಸಿತ್ತು. ಬಳಿಕ ಶಿಕ್ಷಕಿಯ ವಿರುದ್ಧ ಮುಜಪ್ಫರನಗರ ಪೊಲೀಸರು ಪ್ರಕರಣವನ್ನು ದಾಖಲಿಸಿದ್ದರು.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...