Homeಮುಖಪುಟಶಿಕ್ಷಕಿ ವಿರುದ್ಧದ ಪ್ರಕರಣ ಹಿಂಪಡೆಯುವಂತೆ ಮುಸ್ಲಿಂ ಬಾಲಕನ ಕುಟುಂಬಕ್ಕೆ ಒತ್ತಾಯ

ಶಿಕ್ಷಕಿ ವಿರುದ್ಧದ ಪ್ರಕರಣ ಹಿಂಪಡೆಯುವಂತೆ ಮುಸ್ಲಿಂ ಬಾಲಕನ ಕುಟುಂಬಕ್ಕೆ ಒತ್ತಾಯ

- Advertisement -
- Advertisement -

ಉತ್ತರಪ್ರದೇಶದ ಮುಜಾಫರ್‌ನಗರ ಶಾಲೆಯಲ್ಲಿ  ಶಿಕ್ಷಕಿಯೊಬ್ಬರು ಅಲ್ಪಸಂಖ್ಯಾತ ಸಮುದಾಯದ  ವಿದ್ಯಾರ್ಥಿಗೆ  ಕಪಾಳಮೋಕ್ಷ  ಮಾಡಲು  ಸಹಪಾಠಿ ವಿದ್ಯಾರ್ಥಿಗಳಿಗೆ ಸೂಚಿಸಿದ  ವಿಡಿಯೋ ವೈರಲ್ ಆಗಿತ್ತು. ಬಳಿಕ ಪ್ರಕರಣ ರಾಷ್ಟ್ರೀಯ ಮಟ್ಟದಲ್ಲಿ ಭಾರೀ ಟೀಕೆಗೆ ಕಾರಣವಾಗಿತ್ತು. ಆರೋಪಿ ಶಿಕ್ಷಕಿ ವಿರುದ್ಧ ಕೇಸ್ ಕೂಡ ದಾಖಲಾಗಿತ್ತು.

ಆದರೆ ಇದೀಗ ಬಾಲಕನ ಕುಟುಂಬಕ್ಕೆ  ಪ್ರಕರಣವನ್ನು ಹಿಂತೆಗೆದಕೊಳ್ಳುವಂತೆ ಒತ್ತಡ ಹೇರಲಾಗುತ್ತಿದೆ  ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಪುರ ಗ್ರಾಮದ ಮುಖ್ಯಸ್ಥ ನರೇಶ್ ತ್ಯಾಗಿ ಬಾಲಕನ ತಂದೆಯನ್ನು ಭೇಟಿಯಾಗಿ, ಈ ನಾಟಕವನ್ನು ಈಗ ನಿಲ್ಲಿಸಿ. ನಮಗೆ ಈ ಗ್ರಾಮದಲ್ಲಿ ಮಾಧ್ಯಮಗಳು ಬೇಡ. ನೀವು ಪೊಲೀಸ್ ಠಾಣೆಗೆ ಹೋಗಿ ನಿಮಗೆ ಎಫ್‌ಐಆರ್ ಅಗತ್ಯವಿಲ್ಲ ಎಂದು ಹೇಳಬೇಕೆಂದು ಒತ್ತಡ ಹೇರಲಾಗಿದೆ ಎಂದು ವರದಿಯಾಗಿದೆ.

ಆರ್‌ಎಲ್‌ಡಿ ನಾಯಕ ಜಯಂತ್ ಚೌಧರಿ, ಐಎನ್‌ಸಿಯ ರಾಜ್ಯಸಭಾ ಸದಸ್ಯ ಇಮ್ರಾನ್ ಪ್ರತಾಪ್‌ಗರ್ಹಿ ಮತ್ತು ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಕೂಡ ಬಾಲಕನ ತಂದೆಯೊಂದಿಗೆ ಮಾತನಾಡಿದ್ದಾರೆ.

ರಾಷ್ಟ್ರವ್ಯಾಪಿ ಗಮನ ಸೆಳೆದ ಈ ಪ್ರಕರಣದಲ್ಲಿ ಮುಜಾಫರ್‌ನಗರದಲ್ಲಿ ವಾಸಿಸುವ ಈ ಕುಟುಂಬಕ್ಕೆ ತಮ್ಮ ಭವಿಷ್ಯದ ಬಗ್ಗೆ ಚಿಂತೆ ಆವರಿಸಿದೆ. ನನ್ನ ಕುಟುಂಬ ಮತ್ತು ನಾನು ಇಲ್ಲಿ ನಮ್ಮ ಭವಿಷ್ಯದ ಬಗ್ಗೆ ಚಿಂತಿತರಾಗಿದ್ದೇವೆ. ನಾನೊಬ್ಬ ಕೃಷಿ ಕೂಲಿ. ತ್ರಿಪ್ತಾ ಮೇಡಮ್ ಅವರನ್ನು ಬಂಧಿಸುವುದು ಅಥವಾ ಶಿಕ್ಷಿಸುವುದು ನನಗೆ ಇಷ್ಟವಿಲ್ಲ ಎಂದು ಹೇಳಿದ್ದಾರೆ.

ನಾವು ಶಿಕ್ಷಕಿಯಿಂದ ಕ್ಷಮೆ ಮತ್ತು ವಿವರಣೆಯನ್ನು ಮಾತ್ರ ಬಯಸಿದ್ದೇವೆ. ನನ್ನ ಮಗನನ್ನು ಅವರು  ಧರ್ಮದ ಗುರುತಿನ ಮೇಲೆ ಹೊಡೆಯುವುದನ್ನು ನೋಡಿ ನನಗೆ ಆಘಾತವಾಯಿತು. ಅವನು ಹೋಂ ವರ್ಕ್ ಮಾಡದ ಕಾರಣ ಅವಮಾನಕ್ಕೊಳಗಾದನು. ನಾವು ಹಳ್ಳಿಯಲ್ಲಿ ಇಂತಹ ಸಮಸ್ಯೆ ಎದುರಿಸಲಿಲ್ಲ. ಆದರೆ ಈಗ ಎಲ್ಲರೂ ಮಾತನಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಶಿಕ್ಷಕಿ ತ್ಯಾಗಿ ವಿರುದ್ಧ ಸಂತ್ರಸ್ತ ಬಾಲಕ ಮತ್ತು ಆತನ  ತಂದೆಯ ಹೇಳಿಕೆಗಳ ಆಧಾರದ ಮೇಲೆ ಐಪಿಸಿ ಸೆಕ್ಷನ್ 323 ಮತ್ತು 504ರಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆದರೆ ಅವರನ್ನು ಬಂಧಿಸಲಾಗಿಲ್ಲ.

ಶಿಕ್ಷಕಿ ತ್ಯಾಗಿ ನೇಹಾ ಪಬ್ಲಿಕ್ ಶಾಲೆಯ ಸಹ-ಮಾಲೀಕರಾಗಿದ್ದು, ಗ್ರಾಮದ ಏಕೈಕ ಖಾಸಗಿ ಶಾಲೆಯಾಗಿತ್ತು. ನೂತನ ಶಾಲೆಗೆ ಕಟ್ಟಡ ನಿರ್ಮಾಣವಾಗಿರುವುದರಿಂದ ಅವರು ತಮ್ಮ ನಿವಾಸದಲ್ಲಿ ತರಗತಿ ತೆಗೆದುಕೊಳ್ಳುತ್ತಿದ್ದರು.

ಇದನ್ನು ಓದಿ; ಚಂದ್ರನನ್ನು ಹಿಂದೂ ರಾಷ್ಟ್ರ ಎಂದು ಘೋಷಿಸಿ: ವಿಚಿತ್ರ ಆಗ್ರಹ ಮುಂದಿಟ್ಟ ಹಿಂದೂ ಮಹಾ ಸಭಾ ರಾಷ್ಟ್ರೀಯ ಅಧ್ಯಕ್ಷ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...