Homeಮುಖಪುಟಶಿಕ್ಷಕಿ ವಿರುದ್ಧದ ಪ್ರಕರಣ ಹಿಂಪಡೆಯುವಂತೆ ಮುಸ್ಲಿಂ ಬಾಲಕನ ಕುಟುಂಬಕ್ಕೆ ಒತ್ತಾಯ

ಶಿಕ್ಷಕಿ ವಿರುದ್ಧದ ಪ್ರಕರಣ ಹಿಂಪಡೆಯುವಂತೆ ಮುಸ್ಲಿಂ ಬಾಲಕನ ಕುಟುಂಬಕ್ಕೆ ಒತ್ತಾಯ

- Advertisement -
- Advertisement -

ಉತ್ತರಪ್ರದೇಶದ ಮುಜಾಫರ್‌ನಗರ ಶಾಲೆಯಲ್ಲಿ  ಶಿಕ್ಷಕಿಯೊಬ್ಬರು ಅಲ್ಪಸಂಖ್ಯಾತ ಸಮುದಾಯದ  ವಿದ್ಯಾರ್ಥಿಗೆ  ಕಪಾಳಮೋಕ್ಷ  ಮಾಡಲು  ಸಹಪಾಠಿ ವಿದ್ಯಾರ್ಥಿಗಳಿಗೆ ಸೂಚಿಸಿದ  ವಿಡಿಯೋ ವೈರಲ್ ಆಗಿತ್ತು. ಬಳಿಕ ಪ್ರಕರಣ ರಾಷ್ಟ್ರೀಯ ಮಟ್ಟದಲ್ಲಿ ಭಾರೀ ಟೀಕೆಗೆ ಕಾರಣವಾಗಿತ್ತು. ಆರೋಪಿ ಶಿಕ್ಷಕಿ ವಿರುದ್ಧ ಕೇಸ್ ಕೂಡ ದಾಖಲಾಗಿತ್ತು.

ಆದರೆ ಇದೀಗ ಬಾಲಕನ ಕುಟುಂಬಕ್ಕೆ  ಪ್ರಕರಣವನ್ನು ಹಿಂತೆಗೆದಕೊಳ್ಳುವಂತೆ ಒತ್ತಡ ಹೇರಲಾಗುತ್ತಿದೆ  ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಪುರ ಗ್ರಾಮದ ಮುಖ್ಯಸ್ಥ ನರೇಶ್ ತ್ಯಾಗಿ ಬಾಲಕನ ತಂದೆಯನ್ನು ಭೇಟಿಯಾಗಿ, ಈ ನಾಟಕವನ್ನು ಈಗ ನಿಲ್ಲಿಸಿ. ನಮಗೆ ಈ ಗ್ರಾಮದಲ್ಲಿ ಮಾಧ್ಯಮಗಳು ಬೇಡ. ನೀವು ಪೊಲೀಸ್ ಠಾಣೆಗೆ ಹೋಗಿ ನಿಮಗೆ ಎಫ್‌ಐಆರ್ ಅಗತ್ಯವಿಲ್ಲ ಎಂದು ಹೇಳಬೇಕೆಂದು ಒತ್ತಡ ಹೇರಲಾಗಿದೆ ಎಂದು ವರದಿಯಾಗಿದೆ.

ಆರ್‌ಎಲ್‌ಡಿ ನಾಯಕ ಜಯಂತ್ ಚೌಧರಿ, ಐಎನ್‌ಸಿಯ ರಾಜ್ಯಸಭಾ ಸದಸ್ಯ ಇಮ್ರಾನ್ ಪ್ರತಾಪ್‌ಗರ್ಹಿ ಮತ್ತು ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಕೂಡ ಬಾಲಕನ ತಂದೆಯೊಂದಿಗೆ ಮಾತನಾಡಿದ್ದಾರೆ.

ರಾಷ್ಟ್ರವ್ಯಾಪಿ ಗಮನ ಸೆಳೆದ ಈ ಪ್ರಕರಣದಲ್ಲಿ ಮುಜಾಫರ್‌ನಗರದಲ್ಲಿ ವಾಸಿಸುವ ಈ ಕುಟುಂಬಕ್ಕೆ ತಮ್ಮ ಭವಿಷ್ಯದ ಬಗ್ಗೆ ಚಿಂತೆ ಆವರಿಸಿದೆ. ನನ್ನ ಕುಟುಂಬ ಮತ್ತು ನಾನು ಇಲ್ಲಿ ನಮ್ಮ ಭವಿಷ್ಯದ ಬಗ್ಗೆ ಚಿಂತಿತರಾಗಿದ್ದೇವೆ. ನಾನೊಬ್ಬ ಕೃಷಿ ಕೂಲಿ. ತ್ರಿಪ್ತಾ ಮೇಡಮ್ ಅವರನ್ನು ಬಂಧಿಸುವುದು ಅಥವಾ ಶಿಕ್ಷಿಸುವುದು ನನಗೆ ಇಷ್ಟವಿಲ್ಲ ಎಂದು ಹೇಳಿದ್ದಾರೆ.

ನಾವು ಶಿಕ್ಷಕಿಯಿಂದ ಕ್ಷಮೆ ಮತ್ತು ವಿವರಣೆಯನ್ನು ಮಾತ್ರ ಬಯಸಿದ್ದೇವೆ. ನನ್ನ ಮಗನನ್ನು ಅವರು  ಧರ್ಮದ ಗುರುತಿನ ಮೇಲೆ ಹೊಡೆಯುವುದನ್ನು ನೋಡಿ ನನಗೆ ಆಘಾತವಾಯಿತು. ಅವನು ಹೋಂ ವರ್ಕ್ ಮಾಡದ ಕಾರಣ ಅವಮಾನಕ್ಕೊಳಗಾದನು. ನಾವು ಹಳ್ಳಿಯಲ್ಲಿ ಇಂತಹ ಸಮಸ್ಯೆ ಎದುರಿಸಲಿಲ್ಲ. ಆದರೆ ಈಗ ಎಲ್ಲರೂ ಮಾತನಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಶಿಕ್ಷಕಿ ತ್ಯಾಗಿ ವಿರುದ್ಧ ಸಂತ್ರಸ್ತ ಬಾಲಕ ಮತ್ತು ಆತನ  ತಂದೆಯ ಹೇಳಿಕೆಗಳ ಆಧಾರದ ಮೇಲೆ ಐಪಿಸಿ ಸೆಕ್ಷನ್ 323 ಮತ್ತು 504ರಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆದರೆ ಅವರನ್ನು ಬಂಧಿಸಲಾಗಿಲ್ಲ.

ಶಿಕ್ಷಕಿ ತ್ಯಾಗಿ ನೇಹಾ ಪಬ್ಲಿಕ್ ಶಾಲೆಯ ಸಹ-ಮಾಲೀಕರಾಗಿದ್ದು, ಗ್ರಾಮದ ಏಕೈಕ ಖಾಸಗಿ ಶಾಲೆಯಾಗಿತ್ತು. ನೂತನ ಶಾಲೆಗೆ ಕಟ್ಟಡ ನಿರ್ಮಾಣವಾಗಿರುವುದರಿಂದ ಅವರು ತಮ್ಮ ನಿವಾಸದಲ್ಲಿ ತರಗತಿ ತೆಗೆದುಕೊಳ್ಳುತ್ತಿದ್ದರು.

ಇದನ್ನು ಓದಿ; ಚಂದ್ರನನ್ನು ಹಿಂದೂ ರಾಷ್ಟ್ರ ಎಂದು ಘೋಷಿಸಿ: ವಿಚಿತ್ರ ಆಗ್ರಹ ಮುಂದಿಟ್ಟ ಹಿಂದೂ ಮಹಾ ಸಭಾ ರಾಷ್ಟ್ರೀಯ ಅಧ್ಯಕ್ಷ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...