Homeಮುಖಪುಟಲೋಕಸಭೆ ಚುನಾವಣೆ: ಮುಸ್ಲಿಂ ಸಮುದಾಯಕ್ಕೆ ಕಡಿಮೆ ಪ್ರಾತಿನಿಧ್ಯ ನೀಡಿದ ರಾಜಕೀಯ ಪಕ್ಷಗಳು

ಲೋಕಸಭೆ ಚುನಾವಣೆ: ಮುಸ್ಲಿಂ ಸಮುದಾಯಕ್ಕೆ ಕಡಿಮೆ ಪ್ರಾತಿನಿಧ್ಯ ನೀಡಿದ ರಾಜಕೀಯ ಪಕ್ಷಗಳು

- Advertisement -
- Advertisement -

ಲೋಕಸಭೆ ಚುನಾವಣೆಯಲ್ಲಿ ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ 2019ಕ್ಕೆ ಹೋಲಿಕೆ ಮಾಡಿದರೆ ಮುಸ್ಲಿಂ ಸಮುದಾಯಕ್ಕೆ ಈ ಬಾರಿ ಕಡಿಮೆ ಪ್ರಾತಿನಿಧ್ಯ ನೀಡಿರುವುದು ಕಂಡು ಬಂದಿದೆ. ಪ್ರಮುಖ ರಾಷ್ಟ್ರೀಯ ಪಕ್ಷ ಬಿಜೆಪಿ ಕೇವಲ ಓರ್ವ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ ಎನ್‌ಡಿಎ ಮಿತ್ರ ಪಕ್ಷ ಜೆಡಿಯು ಬಿಹಾರದಲ್ಲಿ ಮತ್ತೋರ್ವ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. ಪ್ರಮುಖ ವಿರೋಧ ಪಕ್ಷಗಳಲ್ಲಿಯೂ ಸಹ ಮುಸ್ಲಿಮರ ಪ್ರಾತಿನಿಧ್ಯ ಕುಸಿದಿದ್ದು, ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್, ಸಮಾಜವಾದಿ ಪಕ್ಷ, ಆರ್‌ಜೆಡಿ, ಎನ್‌ಸಿಪಿ ಮತ್ತು ಸಿಪಿಐ(ಎಂ) ಸೇರಿ ಈ ಬಾರಿ 78 ಮುಸ್ಲಿಂ ಅಭ್ಯರ್ಥಿಗಳನ್ನು ಮಾತ್ರ ಕಣಕ್ಕಿಳಿಸಿದೆ. 2019ಕ್ಕೆ ಹೋಲಿಕೆ ಮಾಡಿದರೆ 37 ಅಂಕಿಗಳು ಈ ಬಾರಿ ಕಡಿಮೆಯಾಗಿದ್ದು, 2019ರಲ್ಲಿ 115 ಮುಸ್ಲಿಂ ಅಭ್ಯರ್ಥಿಗಳಿಗೆ ಟಿಕೆಟ್‌ ನೀಡಲಾಗಿತ್ತು.

2019ರಲ್ಲಿ 26 ಮುಸ್ಲಿಂ ಅಭ್ಯರ್ಥಿಗಳು ಸಂಸದರಾಗಿ ಆಯ್ಕೆಯಾಗಿದ್ದರು. ಅವರಲ್ಲಿ ಕಾಂಗ್ರೆಸ್ ಮತ್ತು ಟಿಎಂಸಿಯಿಂದ ತಲಾ ನಾಲ್ವರು, ಬಿಎಸ್‌ಪಿ ಮತ್ತು ಎಸ್‌ಪಿಯಿಂದ ತಲಾ ಮೂವರು ಮತ್ತು ಎನ್‌ಸಿಪಿ ಮತ್ತು ಸಿಪಿಐ(ಎಂ)ನಿಂದ ತಲಾ ಒಬ್ಬರು ಆಯ್ಕೆಯಾಗಿದ್ದರು. ಇತರರು ಅಸ್ಸಾಂನ AIUDF, ಲೋಕ ಜನಶಕ್ತಿ ಪಾಸ್ವಾನ್, IUML ಮತ್ತು J&K ನ್ಯಾಷನಲ್ ಕಾನ್ಫರೆನ್ಸ್‌ಗೆ ಸೇರಿದವರಾಗಿದ್ದಾರೆ.

2024ರ ಲೋಕಸಭೆ ಚುನಾವಣೆಯಲ್ಲಿ ಮಾಯಾವತಿ ನೇತೃತ್ವದ BSP ಪಕ್ಷವು 35 ಮುಸ್ಲಿಂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ, ಇದು ಎಲ್ಲಾ ಪಕ್ಷಗಳಿಗಿಂತ ಅತ್ಯಧಿಕವಾಗಿದೆ. ಇವುಗಳಲ್ಲಿ ಉತ್ತರ ಪ್ರದೇಶದಲ್ಲಿ ಅರ್ಧಕ್ಕಿಂತ ಹೆಚ್ಚು ಅಂದರೆ 17 ಅಭ್ಯರ್ಥಿಗಳನ್ನು ಬಿಎಸ್ಪಿ ಕಣಕ್ಕಿಳಿಸಿದೆ. ಮಧ್ಯಪ್ರದೇಶದಲ್ಲಿ ನಾಲ್ವರು, ಬಿಹಾರ ಮತ್ತು ದೆಹಲಿಯಲ್ಲಿ ತಲಾ ಮೂವರು, ಉತ್ತರಾಖಂಡದಲ್ಲಿ ಇಬ್ಬರು ಮತ್ತು ರಾಜಸ್ಥಾನ, ತಮಿಳುನಾಡು, ಪಶ್ಚಿಮ ಬಂಗಾಳ, ಜಾರ್ಖಂಡ್, ತೆಲಂಗಾಣ ಮತ್ತು ಗುಜರಾತ್‌ನಲ್ಲಿ ತಲಾ ಓರ್ವ ಮುಸ್ಲಿ ಅಭ್ಯರ್ಥಿಯನ್ನು ಬಿಎಎಸ್ಪಿ ಕಣಕ್ಕಿಳಿಸಿದೆ.

2019ರಲ್ಲಿ ಸಮಾಜವಾದಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡು ಚುನಾವಣೆಯಲ್ಲಿ ಸ್ಪರ್ಧಿಸಿದ ಬಿಎಸ್‌ಪಿ 39 ಮುಸ್ಲಿಂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು, ಅವರಲ್ಲಿ ಮೂವರು ಅಭ್ಯರ್ಥಿಗಳು ಗೆಲುವನ್ನು ಕಂಡಿದ್ದರು. ಈಗ 35 ಮುಸ್ಲಿಂ ಅಭ್ಯರ್ಥಿಗಳು  ಬಿಎಸ್ಪಿಯಿಂದ ಕಣದಲ್ಲಿದ್ದು, 2014ಕ್ಕೆ ಹೋಲಿಸಿದರೆ ಮುಸ್ಲಿಂ ಅಭ್ಯರ್ಥಿಗಳ ಅರ್ಧದಷ್ಟು ಅಂದರೆ 61 ಅಭ್ಯರ್ಥಿಗಳನ್ನು ಬಿಎಸ್ಪಿ 2014ರಲ್ಲಿ ಕಣಕ್ಕಿಳಿಸಿತ್ತು. 2014 ರಲ್ಲಿ 503 ಸ್ಥಾನಗಳಲ್ಲಿ ಬಿಎಸ್ಪಿ ಸ್ಪರ್ಧಿಸಿತ್ತು.

ಈ ಬಾರಿ ಯುಪಿಯಲ್ಲಿ ಬಿಎಸ್ಪಿ 17 ಮುಸ್ಲಿಂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ, 2019 ರಲ್ಲಿ ಅದು ಉತ್ತರಪ್ರದೇಶದಲ್ಲಿ 6 ಮಂದಿಯನ್ನು ಮಾತ್ರ ಕಣಕ್ಕಿಳಿಸಿತ್ತು, ಆ ವೇಳೆ ಎಸ್ಪಿ ದೊಡ್ಡ ಮಟ್ಟದಲ್ಲಿ ಮುಸ್ಲಿಂ ಮತಬ್ಯಾಂಕ್‌ನ್ನು ಹೊಂದಿತ್ತು. ಕಾಂಗ್ರೆಸ್ ಮತ್ತು ಎಸ್‌ಪಿಯನ್ನು ಒಳಗೊಂಡಿರುವ ಇಂಡಿಯಾ ಮೈತ್ರಿ ಪಕ್ಷಗಳು, ಬಿಎಎಸ್ಪಿ ಈ ಬಾರಿ ಯುಪಿಯಲ್ಲಿ ಬಿಜೆಪಿಗೆ ಸಹಾಯ ಮಾಡಲು ಮತ್ತು ಮುಸ್ಲಿಂ ಮತಗಳನ್ನು ವಿಭಜನೆ ಮಾಡಲು ಹೆಚ್ಚು ಮುಸ್ಲಿ ಅಭ್ಯರ್ಥಿಗಳನ್ನು ಕಾರ್ಯತಂತ್ರವಾಗಿ ಕಣಕ್ಕಿಳಿಸಿದೆ ಎಂದು ಆರೋಪಿಸಿದೆ.

ಈ ಬಾರಿ ಲೋಕಸಭೆ ಚುನಾವಣೆಯಲ್ಲಿ 19 ಮುಸ್ಲಿಂ ಅಭ್ಯರ್ಥಿಗಳನ್ನು ಕಾಂಗ್ರೆಸ್‌ ಕಣಕ್ಕಿಳಿಸಿದೆ, ಪಶ್ಚಿಮ ಬಂಗಾಳದಲ್ಲಿ ಆರು ಮಂದಿ, ಆಂಧ್ರಪ್ರದೇಶ, ಅಸ್ಸಾಂ, ಬಿಹಾರ ಮತ್ತು ಯುಪಿಯಲ್ಲಿ ತಲಾ ಇಬ್ಬರನ್ನು ಮತ್ತು ಕರ್ನಾಟಕ, ಕೇರಳ, ಒಡಿಶಾ, ತೆಲಂಗಾಣ ಮತ್ತು ಲಕ್ಷದ್ವೀಪದಲ್ಲಿ ತಲಾ ಓರ್ವ ಮುಸ್ಲಿಂ ಅಭ್ಯರ್ಥಿಯನ್ನು ಕಾಂಗ್ರೆಸ್‌ ಕಣಕ್ಕಿಳಿಸಿದೆ. 2019ರಲ್ಲಿ ಕಾಂಗ್ರೆಸ್‌ 34 ಮುಸ್ಲಿಂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು, ಅದರಲ್ಲಿ 10 ಅಭ್ಯರ್ಥಿಗಳು ಬಂಗಾಳ ಮತ್ತು 8 ಮಂದಿ ಯುಪಿಯಲ್ಲಿ ಕಣದಲ್ಲಿದ್ದರು. ಅವರಲ್ಲಿ ನಾಲ್ವರು ಗೆಲುವನ್ನು ಸಂಸತ್ತಿಗೆ ಪ್ರವೇಶಿಸಿದ್ದರು.

2014ರಲ್ಲಿ ಕಾಂಗ್ರೆಸ್ 464 ಸ್ಥಾನಗಳಲ್ಲಿ ಸ್ಪರ್ಧಿಸಿದಾಗ 31 ಮುಸ್ಲಿಂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಅದರಲ್ಲಿ ಕೇವಲ ಮೂವರು ಮಾತ್ರ ಗೆಲುವನ್ನು ಕಂಡಿದ್ದರು. ಟಿಎಂಸಿ ಈ ಬಾರಿ ಮೂರನೇ ಅತಿ ಹೆಚ್ಚು ಮುಸ್ಲಿಂ ಅಭ್ಯರ್ಥಿಗಳನ್ನು ಕಣಕ್ಕಳಿಸಿದ ಪಕ್ಷವಾಗಿದೆ. ಟಿಎಂಸಿಯ 6 ಅಭ್ಯರ್ಥಿಗಳಲ್ಲಿ ಐವರನ್ನು ತನ್ನ ತವರು ರಾಜ್ಯವಾದ ಬಂಗಾಳದಲ್ಲಿ ಕಣಕ್ಕಿಳಿಸಿದೆ. ಅಸ್ಸಾಂನಲ್ಲಿ ಓರ್ವ ಮುಸ್ಲಿಂ ಅಭ್ಯರ್ಥಿಯನ್ನು ಟಿಎಂಸಿ ಕಣಕ್ಕಿಳಿಸಿದೆ.

2019ರಲ್ಲಿ ಟಿಎಂಸಿ ಪಶ್ಚಿಮ ಬಂಗಾಳ, ಒಡಿಶಾ, ತ್ರಿಪುರ, ಅಸ್ಸಾಂ ಮತ್ತು ಬಿಹಾರ ರಾಜ್ಯಗಳಾದ್ಯಂತ 13 ಮುಸ್ಲಿಂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು, ಅವರಲ್ಲಿ ನಾಲ್ವರು ಗೆದ್ದಿದ್ದಾರೆ. 2014ರಲ್ಲಿ ಪಶ್ಚಿಮ ಬಂಗಾಳದಲ್ಲಿ ಅಧಿಕಾರಕ್ಕೆ ಬಂದ ಮೂರು ವರ್ಷಗಳ ನಂತರ ಟಿಎಂಸಿ 24 ಮುಸ್ಲಿಂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು, ಅವರಲ್ಲಿ ಮೂವರು ಗೆಲುವನ್ನು ಕಂಡಿದ್ದರು.

ಉತ್ತರಪ್ರದೇಶದಲ್ಲಿ ಮುಸ್ಲಿಂ ಸಮುದಾಯದ ಪ್ರಬಲ ಬೆಂಬಲದ ಹೊರತಾಗಿಯೂ, ಎಸ್‌ಪಿ ಈ ಬಾರಿ ಕೇವಲ ನಾಲ್ಕು ಮುಸ್ಲಿಂ ಅಭ್ಯರ್ಥಿಗಳನ್ನು ಮಾತ್ರ ಕಣಕ್ಕಿಳಿಸಿದೆ. ಇದು 2019ಕ್ಕೆ ಹೋಲಿಕೆ ಮಾಡಿದರೆ ಇದು ಅರ್ಧದಷ್ಟು ಸಂಖ್ಯೆಯಾಗಿದ್ದು,  2019ರಲ್ಲಿ ಎಸ್ಪಿಯಿಂದ ಮೂವರು ಗೆಲುವನ್ನು ಕಂಡಿದ್ದರು. ಈಗ SPಯ ಮುಸ್ಲಿಂ ಅಭ್ಯರ್ಥಿಗಳಲ್ಲಿ ಮೂವರು ಯುಪಿಯಿಂದ ಸ್ಪರ್ಧಿಸಿದ್ದರೆ, ನಾಲ್ಕನೆಯವರು ಆಂಧ್ರಪ್ರದೇಶದಿಂದ ಸ್ಪರ್ಧಿಸುತ್ತಿದ್ದಾರೆ. ಸಮಾಜವಾದಿ ಪಕ್ಷವು 2019ರಲ್ಲಿ ಮಹಾರಾಷ್ಟ್ರದಿಂದ ಮೂವರು ಮುಸ್ಲಿಂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದರೆ, ಈ ಬಾರಿ ಮಹಾರಾಷ್ಟ್ರದಲ್ಲಿ ಯಾವುದೇ ಮುಸ್ಲಿಂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿಲ್ಲ, ಎಸ್ಪಿ ನಾಯಕರು ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡುತ್ತಿದ್ದಾರೆ.

ಮುಸ್ಲಿಂ-ಯಾದವ್ ಮತ ಬ್ಯಾಂಕ್ ಹೊಂದಿರುವ ಮತ್ತೊಂದು ಪಕ್ಷವಾದ ಆರ್‌ಜೆಡಿ ಈ ಬಾರಿ ಬಿಹಾರದಲ್ಲಿ ಇಬ್ಬರು ಮುಸ್ಲಿಮ್‌ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ, 2019ರಲ್ಲಿ ಐವರು ಮುಸ್ಲಿಂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು. ಅವರಲ್ಲಿ ಯಾರೂ ಗೆಲ್ಲಲಿಲ್ಲ. 2014ರಲ್ಲಿ ಆರು ಮುಸ್ಲಿಂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ಒಬ್ಬರು ಮಾತ್ರ ಗೆಲುವನ್ನು ಕಂಡಿದ್ದರು.

ಎನ್‌ಸಿಪಿ 2019ರಲ್ಲಿ ಮೂವರು ಮುಸ್ಲಿಂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು. ಅವರಲ್ಲಿ ಒಬ್ಬರು ಗೆದ್ದಿದ್ದರು. ಈ ಬಾರಿ ಪಕ್ಷ ಎರಡು ಬಣವಾಗಿದ್ದು ಲಕ್ಷದ್ವೀಪದಲ್ಲಿ ತಲಾ ಒಬ್ಬ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸಿವೆ. 2014ರಲ್ಲಿ ಎನ್‌ಸಿಪಿ ಮೂವರು ಮುಸ್ಲಿಂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು, ಅವರಲ್ಲಿ ಇಬ್ಬರು ಗೆಲುವನ್ನು ಕಂಡಿದ್ದರು.

2019ರಲ್ಲಿ ಬಿಜೆಪಿ ಸ್ಪರ್ಧಿಸಿದ 436 ಸ್ಥಾನಗಳಲ್ಲಿ ಕೇವಲ ಮೂವರು ಮುಸ್ಲಿಂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು, ಅವರಲ್ಲಿ ಯಾರೂ ಗೆಲ್ಲಲಿಲ್ಲ. 2014ರಲ್ಲಿ ಸ್ಪರ್ಧಿಸಿದ 428 ಸ್ಥಾನಗಳಲ್ಲಿ ಬಿಜೆಪಿ 7 ಮುಸ್ಲಿಂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು, ಅವಾಗಲೂ ಯಾರೂ ಗೆದ್ದಿಲ್ಲ. ಈ ಬಾರಿ ಬಿಜೆಪಿ 440 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದ್ದು, ಓರ್ವ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ.

CPI ಮತ್ತು CPI(M) ಒಟ್ಟಾಗಿ 2019ರಲ್ಲಿ 13 ಮುಸ್ಲಿಂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ, ಇದರಲ್ಲಿ ಪಶ್ಚಿಮ ಬಂಗಾಳದಲ್ಲಿ 7 ಮತ್ತು ಲಕ್ಷದ್ವೀಪ ಮತ್ತು ಕೇರಳದ ತಲಾ ಓರ್ವ ಅಭ್ಯರ್ಥಿಗಳು ಸೇರಿದ್ದಾರೆ. ಅವರಲ್ಲಿ ಒಬ್ಬರು ಗೆದ್ದಿದ್ದಾರೆ. 2024ರಲ್ಲಿ ಸಿಪಿಐ(ಎಂ) ಬಂಗಾಳದಲ್ಲಿ ಐವರು, ಕೇರಳದಲ್ಲಿ ನಾಲ್ವರು ಮತ್ತು ತೆಲಂಗಾಣದಲ್ಲಿ ಒಬ್ಬರು ಸೇರಿದಂತೆ ಒಟ್ಟು 10 ಮಂದಿ ಮುಸ್ಲಿಂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.

ಸಣ್ಣ ಪಕ್ಷಗಳಾದ AIMIM, IUML ಮತ್ತು AIUDF ಮೂಲಭೂತವಾಗಿ ಮುಸ್ಲಿಂ ಹಿತಾಸಕ್ತಿಗಳನ್ನು ಹೊಂದಿದ ಪಕ್ಷಗಳಾಗಿದ್ದು, ವಿವಿಧ ರಾಜ್ಯಗಳಾದ್ಯಂತ ಕೆಲವು ಮುಸ್ಲಿಂ ಪ್ರಾಬಲ್ಯವಿರುವ ಕ್ಷೇತ್ರಗಳಲ್ಲಿ ಸಮುದಾಯದ ಅಭ್ಯರ್ಥಿಗಳನ್ನು ಕಣಕ್ಕಿಳಿಸಿವೆ.

ಜಮ್ಮು-ಕಾಶ್ಮೀರವನ್ನು ಹೊರತು ಪಡಿಸಿ ಉತ್ತರಪ್ರದೇಶದಲ್ಲಿ(22), ಪಶ್ಚಿಮ ಬಂಗಾಳದಲ್ಲಿ(17), ಬಿಹಾರದಲ್ಲಿ(7), ಕೇರಳ(6) ಮತ್ತು ಮಧ್ಯಪ್ರದೇಶದಲ್ಲಿ(4)  ಮುಸ್ಲಿಂ ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದಾರೆ. ಜನಸಂಖ್ಯೆಯಲ್ಲಿ ಮುಸ್ಲಿಮರ ಪಾಲಿನ ವಿಷಯದಲ್ಲಿ ಅತ್ಯಧಿಕವಾಗಿರುವ ಅಸ್ಸಾಂ, ಈ ಬಾರಿ ಮೂವರು ಮಾತ್ರ ಮುಸ್ಲಿಂ ಅಭ್ಯರ್ಥಿಗಳನ್ನು ಹೊಂದಿದ್ದು, ಕಳೆದ ಬಾರಿಗಿಂತಲೂ ಕಡಿಮೆ ಅಭ್ಯರ್ಥಿಗಳನ್ನು ಹೊಂದಿದೆ. ಅಂದರೆ ಕಳೆದ ಬಾರಿ ಅಸ್ಸಾಂನಲ್ಲಿ ನಾಲ್ವರು ಮುಸ್ಲಿಂ ಅಭ್ಯರ್ಥಿಗಳಿಗೆ ಟಿಕೆಟ್‌ ನೀಡಲಾಗಿತ್ತು. ಒಟ್ಟಿನಲ್ಲಿ ಕಳೆದ ಲೋಕಸಭೆ ಚುನಾವಣೆಯನ್ನು ಗಮನಿಸಿದಾಗ ಈ ಬಾರಿ ಮುಸ್ಲಿಮರಿಗೆ ರಾಜಕೀಯ ಪಕ್ಷಗಳು ಕಡಿಮೆ ಪ್ರಾತಿನಿಧ್ಯ ನೀಡಿರುವುದು ಕಂಡು ಬಂದಿದೆ.

ಇದನ್ನು ಓದಿ: ಮೋದಿ ಸ್ಪರ್ಧಿಸುವ ವಾರಣಾಸಿಯಲ್ಲಿ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯಲ್ಲಿ ನಡೆದಿದ್ಯಾ ಅಕ್ರಮ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...