Homeಕರ್ನಾಟಕಮುಸ್ಲಿಂ ನಿಯೋಗಗಳಿಂದ ವಕ್ಫ್ ಕಾಯಿದೆ ರದ್ದತಿಗೆ ಒತ್ತಾಯಿಸಿ ಆಯಾ ಜಿಲ್ಲಾಧಿಕಾರಿಗಳಿಗೆ ಮನವಿ

ಮುಸ್ಲಿಂ ನಿಯೋಗಗಳಿಂದ ವಕ್ಫ್ ಕಾಯಿದೆ ರದ್ದತಿಗೆ ಒತ್ತಾಯಿಸಿ ಆಯಾ ಜಿಲ್ಲಾಧಿಕಾರಿಗಳಿಗೆ ಮನವಿ

- Advertisement -
- Advertisement -

ಬೆಂಗಳೂರು: ವಿವಾದಾತ್ಮಕ ವಕ್ಫ್ ತಿದ್ದುಪಡಿ ಕಾಯಿದೆ-2025ರ ರದ್ಧತಿಗೆ ಕೋರಿ ರಾಜ್ಯಾದ್ಯಂತ ಮುಸ್ಲಿಂ ನಿಯೋಗಗಳು ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿವೆ.

ಸೋಮವಾರದಂದು ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯ ರಾಜ್ಯ ಘಟಕವು, ಈ ಕಾಯಿದೆಯು ಸಂವಿಧಾನದ ಮೇಲಿನ ನೇರ ಆಕ್ರಮಣ ಎಂದು ಖಂಡಿಸಿದೆ. ಇದು ಪ್ರಜಾಪ್ರಭುತ್ವ ವಿರೋಧಿ, ಅಲ್ಪಸಂಖ್ಯಾತ ವಿರೋಧಿಯಾಗಿದ್ದು ಇದನ್ನು ತಕ್ಷಣವೇ ಹಿಂಪಡೆಯಲು ರಾಷ್ಟ್ರಪತಿಗಳಿಗೆ ಉದ್ದೇಶಿಸಿ ಸಲ್ಲಿಸಿದ ಮನವಿಯಲ್ಲಿ ಒತ್ತಾಯಿಸಿದೆ.

ಈ ಪತ್ರಿಕಾಗೋಷ್ಠಿಯನ್ನು ರಾಜ್ಯಾದ್ಯಂತ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದ ಅಭಿಯಾನದ ಯಶಸ್ವಿ ಮುಕ್ತಾಯದ ಭಾಗವಾಗಿ ನಡೆಸಲಾಗಿದೆ ಎಂದು ಮಂಡಳಿಯು ತಿಳಿಸಿದೆ.

ತಿದ್ದುಪಡಿಯ ಕಾಯಿದೆಯ ಧಾರ್ಮಿಕ ಪರಿಣಾಮಗಳನ್ನು ಮಂಡಳಿ ಸದಸ್ಯರು ವಿವರಿಸಿದರು. ಈ ಕಾಯಿದೆಯು ವಕ್ಫ್ ಆಸ್ತಿಗಳ ಮೇಲೆ ಸರಕಾರಕ್ಕೆ ಹೆಚ್ಚಿನ ಅಧಿಕಾರವನ್ನು ನೀಡುತ್ತದೆ. ಮುಸ್ಲಿಂ ಧಾರ್ಮಿಕ, ಶೈಕ್ಷಣಿಕ ಮತ್ತು ದತ್ತಿ ಸಂಸ್ಥೆಗಳ ಸ್ವಾಯತ್ತತೆಗೆ ತೀವ್ರ ಬೆದರಿಕೆಯನ್ನು ಒಡ್ಡುತ್ತದೆ ಎಂದು ಸಮಿತಿಯು ಎಚ್ಚರಿಸಿದೆ.

ಈ ತಿದ್ದುಪಡಿಯು 1995ರ ವಕ್ಫ್ ಕಾಯಿದೆಯ ಆಶಯವನ್ನು ಮಾತ್ರವಲ್ಲದೆ, ಸಂವಿಧಾನದ 25, 26 ಮತ್ತು 29ನೇ ವಿಧಿಗಳ ಉಲ್ಲಂಘನೆಯಾಗಿದೆ. ಈ ವಿಧಿಗಳು ಧಾರ್ಮಿಕ ಸ್ವಾತಂತ್ರ್ಯ ಮತ್ತು ಸರಕಾರದ ಹಸ್ತಕ್ಷೇಪವಿಲ್ಲದೆ ಅಲ್ಪಸಂಖ್ಯಾತರಿಗೆ ತಮ್ಮ ಸಂಸ್ಥೆಗಳನ್ನು ನಿರ್ವಹಿಸುವ ಹಕ್ಕನ್ನು ಖಾತರಿಪಡಿಸುತ್ತದೆ ಎಂದು ಸಮಿತಿಯ ಸದಸ್ಯರು ಹೇಳಿದರು.

ವಕ್ಫ್ ಆಸ್ತಿಗಳು ಖಾಸಗಿ ಆಸ್ತಿಗಳಲ್ಲ. ಅವು ಧಾರ್ಮಿಕ ಟ್ರಸ್ಟ್ ಗಳಾಗಿವೆ. ಅವು ಸಮುದಾಯದ ಪ್ರಯೋಜನಕ್ಕಾಗಿ ಮತ್ತು ಅಲ್ಲಾಹನ ಸಲುವಾಗಿ ಶಾಶ್ವತವಾಗಿ ಇರುವಂತಹವುಗಳಾಗಿವೆ. ಅವುಗಳನ್ನು ನೇರವಾಗಿ ಸರಕಾರದ ನಿಯಂತ್ರಣಕ್ಕೆ ತರುವುದು ಸಂವಿಧಾನಿಕ ಕಾನೂನು ಮತ್ತು ಇಸ್ಲಾಮಿಕ್ ನ್ಯಾಯಶಾಸ್ತ್ರ ಎರಡನ್ನೂ ಉಲ್ಲಂಘಿಸಿದಂತಾಗುತ್ತದೆ ಅವರು ತಿಳಿಸಿದರು.

ಕಾಯಿದೆಯನ್ನು ರದ್ದುಗೊಳಿಸದಿದ್ದರೆ ರಾಜ್ಯಾದ್ಯಂತ ಶಾಂತಿಯುತ  ಚಳುವಳಿಯನ್ನು ಸಮಿತಿಯು ಘೋಷಿಸಿತು.

ಸಮಿತಿಯ ಮೊಹಮ್ಮದ್ ಯೂಸುಫ್ ಕನ್ನಿ ಅವರು ಮಾತನಾಡಿ, ಜೂನ್ 23ರಂದು ಬೆಂಗಳೂರಿನಲ್ಲಿ ನಾಗರಿಕ ಸಮಾಜದ ಸಭೆಯನ್ನು ಆಯೋಜಿಸಲಾಗುವುದು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಅಭಿಯಾನದ ಕರ್ನಾಟಕ ಕ್ರಿಯಾ ಸಮಿತಿಯ ಸಂಚಾಲಕ ಮೊಹಮ್ಮದ್ ಯೂಸುಫ್ ಕನ್ನಿ, ಸಹ-ಸಂಚಾಲಕ ಸೈಯದ್ ಶಫೀವುಲ್ಲಾ, ಜಮಾಅತೆ ಇಸ್ಲಾಮಿ ಹಿಂದ್ (ಕರ್ನಾಟಕ) ಅಧ್ಯಕ್ಷ ಡಾ. ಮೊಹಮ್ಮದ್ ಸಾದ್ ಬೆಳಗಾಮಿ, ಎಐಎಂಪಿಎಲ್‌ಬಿ ಸದಸ್ಯ ಆಸಿಮ್ ಅಫ್ರೋಜ್ ಸೇಠ್ ಮತ್ತು ಮಾಧ್ಯಮ ಉಸ್ತುವಾರಿ ಮೊಹಮ್ಮದ್ ಫರ್ಕಾನ್ ಅವರು ಉಪಸ್ಥಿತರಿದ್ದರು.

ಏರ್ ಇಂಡಿಯಾ ಪತನ: 90 ದಿನಗಳಲ್ಲಿ ವರದಿ ಸಲ್ಲಿಸಲು ಉನ್ನತ ಮಟ್ಟದ ಸಮಿತಿ ರಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...