Homeಕರ್ನಾಟಕಮುಸ್ಲಿಂ ನಿಯೋಗಗಳಿಂದ ವಕ್ಫ್ ಕಾಯಿದೆ ರದ್ದತಿಗೆ ಒತ್ತಾಯಿಸಿ ಆಯಾ ಜಿಲ್ಲಾಧಿಕಾರಿಗಳಿಗೆ ಮನವಿ

ಮುಸ್ಲಿಂ ನಿಯೋಗಗಳಿಂದ ವಕ್ಫ್ ಕಾಯಿದೆ ರದ್ದತಿಗೆ ಒತ್ತಾಯಿಸಿ ಆಯಾ ಜಿಲ್ಲಾಧಿಕಾರಿಗಳಿಗೆ ಮನವಿ

- Advertisement -
- Advertisement -

ಬೆಂಗಳೂರು: ವಿವಾದಾತ್ಮಕ ವಕ್ಫ್ ತಿದ್ದುಪಡಿ ಕಾಯಿದೆ-2025ರ ರದ್ಧತಿಗೆ ಕೋರಿ ರಾಜ್ಯಾದ್ಯಂತ ಮುಸ್ಲಿಂ ನಿಯೋಗಗಳು ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿವೆ.

ಸೋಮವಾರದಂದು ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯ ರಾಜ್ಯ ಘಟಕವು, ಈ ಕಾಯಿದೆಯು ಸಂವಿಧಾನದ ಮೇಲಿನ ನೇರ ಆಕ್ರಮಣ ಎಂದು ಖಂಡಿಸಿದೆ. ಇದು ಪ್ರಜಾಪ್ರಭುತ್ವ ವಿರೋಧಿ, ಅಲ್ಪಸಂಖ್ಯಾತ ವಿರೋಧಿಯಾಗಿದ್ದು ಇದನ್ನು ತಕ್ಷಣವೇ ಹಿಂಪಡೆಯಲು ರಾಷ್ಟ್ರಪತಿಗಳಿಗೆ ಉದ್ದೇಶಿಸಿ ಸಲ್ಲಿಸಿದ ಮನವಿಯಲ್ಲಿ ಒತ್ತಾಯಿಸಿದೆ.

ಈ ಪತ್ರಿಕಾಗೋಷ್ಠಿಯನ್ನು ರಾಜ್ಯಾದ್ಯಂತ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದ ಅಭಿಯಾನದ ಯಶಸ್ವಿ ಮುಕ್ತಾಯದ ಭಾಗವಾಗಿ ನಡೆಸಲಾಗಿದೆ ಎಂದು ಮಂಡಳಿಯು ತಿಳಿಸಿದೆ.

ತಿದ್ದುಪಡಿಯ ಕಾಯಿದೆಯ ಧಾರ್ಮಿಕ ಪರಿಣಾಮಗಳನ್ನು ಮಂಡಳಿ ಸದಸ್ಯರು ವಿವರಿಸಿದರು. ಈ ಕಾಯಿದೆಯು ವಕ್ಫ್ ಆಸ್ತಿಗಳ ಮೇಲೆ ಸರಕಾರಕ್ಕೆ ಹೆಚ್ಚಿನ ಅಧಿಕಾರವನ್ನು ನೀಡುತ್ತದೆ. ಮುಸ್ಲಿಂ ಧಾರ್ಮಿಕ, ಶೈಕ್ಷಣಿಕ ಮತ್ತು ದತ್ತಿ ಸಂಸ್ಥೆಗಳ ಸ್ವಾಯತ್ತತೆಗೆ ತೀವ್ರ ಬೆದರಿಕೆಯನ್ನು ಒಡ್ಡುತ್ತದೆ ಎಂದು ಸಮಿತಿಯು ಎಚ್ಚರಿಸಿದೆ.

ಈ ತಿದ್ದುಪಡಿಯು 1995ರ ವಕ್ಫ್ ಕಾಯಿದೆಯ ಆಶಯವನ್ನು ಮಾತ್ರವಲ್ಲದೆ, ಸಂವಿಧಾನದ 25, 26 ಮತ್ತು 29ನೇ ವಿಧಿಗಳ ಉಲ್ಲಂಘನೆಯಾಗಿದೆ. ಈ ವಿಧಿಗಳು ಧಾರ್ಮಿಕ ಸ್ವಾತಂತ್ರ್ಯ ಮತ್ತು ಸರಕಾರದ ಹಸ್ತಕ್ಷೇಪವಿಲ್ಲದೆ ಅಲ್ಪಸಂಖ್ಯಾತರಿಗೆ ತಮ್ಮ ಸಂಸ್ಥೆಗಳನ್ನು ನಿರ್ವಹಿಸುವ ಹಕ್ಕನ್ನು ಖಾತರಿಪಡಿಸುತ್ತದೆ ಎಂದು ಸಮಿತಿಯ ಸದಸ್ಯರು ಹೇಳಿದರು.

ವಕ್ಫ್ ಆಸ್ತಿಗಳು ಖಾಸಗಿ ಆಸ್ತಿಗಳಲ್ಲ. ಅವು ಧಾರ್ಮಿಕ ಟ್ರಸ್ಟ್ ಗಳಾಗಿವೆ. ಅವು ಸಮುದಾಯದ ಪ್ರಯೋಜನಕ್ಕಾಗಿ ಮತ್ತು ಅಲ್ಲಾಹನ ಸಲುವಾಗಿ ಶಾಶ್ವತವಾಗಿ ಇರುವಂತಹವುಗಳಾಗಿವೆ. ಅವುಗಳನ್ನು ನೇರವಾಗಿ ಸರಕಾರದ ನಿಯಂತ್ರಣಕ್ಕೆ ತರುವುದು ಸಂವಿಧಾನಿಕ ಕಾನೂನು ಮತ್ತು ಇಸ್ಲಾಮಿಕ್ ನ್ಯಾಯಶಾಸ್ತ್ರ ಎರಡನ್ನೂ ಉಲ್ಲಂಘಿಸಿದಂತಾಗುತ್ತದೆ ಅವರು ತಿಳಿಸಿದರು.

ಕಾಯಿದೆಯನ್ನು ರದ್ದುಗೊಳಿಸದಿದ್ದರೆ ರಾಜ್ಯಾದ್ಯಂತ ಶಾಂತಿಯುತ  ಚಳುವಳಿಯನ್ನು ಸಮಿತಿಯು ಘೋಷಿಸಿತು.

ಸಮಿತಿಯ ಮೊಹಮ್ಮದ್ ಯೂಸುಫ್ ಕನ್ನಿ ಅವರು ಮಾತನಾಡಿ, ಜೂನ್ 23ರಂದು ಬೆಂಗಳೂರಿನಲ್ಲಿ ನಾಗರಿಕ ಸಮಾಜದ ಸಭೆಯನ್ನು ಆಯೋಜಿಸಲಾಗುವುದು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಅಭಿಯಾನದ ಕರ್ನಾಟಕ ಕ್ರಿಯಾ ಸಮಿತಿಯ ಸಂಚಾಲಕ ಮೊಹಮ್ಮದ್ ಯೂಸುಫ್ ಕನ್ನಿ, ಸಹ-ಸಂಚಾಲಕ ಸೈಯದ್ ಶಫೀವುಲ್ಲಾ, ಜಮಾಅತೆ ಇಸ್ಲಾಮಿ ಹಿಂದ್ (ಕರ್ನಾಟಕ) ಅಧ್ಯಕ್ಷ ಡಾ. ಮೊಹಮ್ಮದ್ ಸಾದ್ ಬೆಳಗಾಮಿ, ಎಐಎಂಪಿಎಲ್‌ಬಿ ಸದಸ್ಯ ಆಸಿಮ್ ಅಫ್ರೋಜ್ ಸೇಠ್ ಮತ್ತು ಮಾಧ್ಯಮ ಉಸ್ತುವಾರಿ ಮೊಹಮ್ಮದ್ ಫರ್ಕಾನ್ ಅವರು ಉಪಸ್ಥಿತರಿದ್ದರು.

ಏರ್ ಇಂಡಿಯಾ ಪತನ: 90 ದಿನಗಳಲ್ಲಿ ವರದಿ ಸಲ್ಲಿಸಲು ಉನ್ನತ ಮಟ್ಟದ ಸಮಿತಿ ರಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...