Homeಕರ್ನಾಟಕಮುಸ್ಲಿಂ ನಿಯೋಗಗಳಿಂದ ವಕ್ಫ್ ಕಾಯಿದೆ ರದ್ದತಿಗೆ ಒತ್ತಾಯಿಸಿ ಆಯಾ ಜಿಲ್ಲಾಧಿಕಾರಿಗಳಿಗೆ ಮನವಿ

ಮುಸ್ಲಿಂ ನಿಯೋಗಗಳಿಂದ ವಕ್ಫ್ ಕಾಯಿದೆ ರದ್ದತಿಗೆ ಒತ್ತಾಯಿಸಿ ಆಯಾ ಜಿಲ್ಲಾಧಿಕಾರಿಗಳಿಗೆ ಮನವಿ

- Advertisement -
- Advertisement -

ಬೆಂಗಳೂರು: ವಿವಾದಾತ್ಮಕ ವಕ್ಫ್ ತಿದ್ದುಪಡಿ ಕಾಯಿದೆ-2025ರ ರದ್ಧತಿಗೆ ಕೋರಿ ರಾಜ್ಯಾದ್ಯಂತ ಮುಸ್ಲಿಂ ನಿಯೋಗಗಳು ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿವೆ.

ಸೋಮವಾರದಂದು ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯ ರಾಜ್ಯ ಘಟಕವು, ಈ ಕಾಯಿದೆಯು ಸಂವಿಧಾನದ ಮೇಲಿನ ನೇರ ಆಕ್ರಮಣ ಎಂದು ಖಂಡಿಸಿದೆ. ಇದು ಪ್ರಜಾಪ್ರಭುತ್ವ ವಿರೋಧಿ, ಅಲ್ಪಸಂಖ್ಯಾತ ವಿರೋಧಿಯಾಗಿದ್ದು ಇದನ್ನು ತಕ್ಷಣವೇ ಹಿಂಪಡೆಯಲು ರಾಷ್ಟ್ರಪತಿಗಳಿಗೆ ಉದ್ದೇಶಿಸಿ ಸಲ್ಲಿಸಿದ ಮನವಿಯಲ್ಲಿ ಒತ್ತಾಯಿಸಿದೆ.

ಈ ಪತ್ರಿಕಾಗೋಷ್ಠಿಯನ್ನು ರಾಜ್ಯಾದ್ಯಂತ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದ ಅಭಿಯಾನದ ಯಶಸ್ವಿ ಮುಕ್ತಾಯದ ಭಾಗವಾಗಿ ನಡೆಸಲಾಗಿದೆ ಎಂದು ಮಂಡಳಿಯು ತಿಳಿಸಿದೆ.

ತಿದ್ದುಪಡಿಯ ಕಾಯಿದೆಯ ಧಾರ್ಮಿಕ ಪರಿಣಾಮಗಳನ್ನು ಮಂಡಳಿ ಸದಸ್ಯರು ವಿವರಿಸಿದರು. ಈ ಕಾಯಿದೆಯು ವಕ್ಫ್ ಆಸ್ತಿಗಳ ಮೇಲೆ ಸರಕಾರಕ್ಕೆ ಹೆಚ್ಚಿನ ಅಧಿಕಾರವನ್ನು ನೀಡುತ್ತದೆ. ಮುಸ್ಲಿಂ ಧಾರ್ಮಿಕ, ಶೈಕ್ಷಣಿಕ ಮತ್ತು ದತ್ತಿ ಸಂಸ್ಥೆಗಳ ಸ್ವಾಯತ್ತತೆಗೆ ತೀವ್ರ ಬೆದರಿಕೆಯನ್ನು ಒಡ್ಡುತ್ತದೆ ಎಂದು ಸಮಿತಿಯು ಎಚ್ಚರಿಸಿದೆ.

ಈ ತಿದ್ದುಪಡಿಯು 1995ರ ವಕ್ಫ್ ಕಾಯಿದೆಯ ಆಶಯವನ್ನು ಮಾತ್ರವಲ್ಲದೆ, ಸಂವಿಧಾನದ 25, 26 ಮತ್ತು 29ನೇ ವಿಧಿಗಳ ಉಲ್ಲಂಘನೆಯಾಗಿದೆ. ಈ ವಿಧಿಗಳು ಧಾರ್ಮಿಕ ಸ್ವಾತಂತ್ರ್ಯ ಮತ್ತು ಸರಕಾರದ ಹಸ್ತಕ್ಷೇಪವಿಲ್ಲದೆ ಅಲ್ಪಸಂಖ್ಯಾತರಿಗೆ ತಮ್ಮ ಸಂಸ್ಥೆಗಳನ್ನು ನಿರ್ವಹಿಸುವ ಹಕ್ಕನ್ನು ಖಾತರಿಪಡಿಸುತ್ತದೆ ಎಂದು ಸಮಿತಿಯ ಸದಸ್ಯರು ಹೇಳಿದರು.

ವಕ್ಫ್ ಆಸ್ತಿಗಳು ಖಾಸಗಿ ಆಸ್ತಿಗಳಲ್ಲ. ಅವು ಧಾರ್ಮಿಕ ಟ್ರಸ್ಟ್ ಗಳಾಗಿವೆ. ಅವು ಸಮುದಾಯದ ಪ್ರಯೋಜನಕ್ಕಾಗಿ ಮತ್ತು ಅಲ್ಲಾಹನ ಸಲುವಾಗಿ ಶಾಶ್ವತವಾಗಿ ಇರುವಂತಹವುಗಳಾಗಿವೆ. ಅವುಗಳನ್ನು ನೇರವಾಗಿ ಸರಕಾರದ ನಿಯಂತ್ರಣಕ್ಕೆ ತರುವುದು ಸಂವಿಧಾನಿಕ ಕಾನೂನು ಮತ್ತು ಇಸ್ಲಾಮಿಕ್ ನ್ಯಾಯಶಾಸ್ತ್ರ ಎರಡನ್ನೂ ಉಲ್ಲಂಘಿಸಿದಂತಾಗುತ್ತದೆ ಅವರು ತಿಳಿಸಿದರು.

ಕಾಯಿದೆಯನ್ನು ರದ್ದುಗೊಳಿಸದಿದ್ದರೆ ರಾಜ್ಯಾದ್ಯಂತ ಶಾಂತಿಯುತ  ಚಳುವಳಿಯನ್ನು ಸಮಿತಿಯು ಘೋಷಿಸಿತು.

ಸಮಿತಿಯ ಮೊಹಮ್ಮದ್ ಯೂಸುಫ್ ಕನ್ನಿ ಅವರು ಮಾತನಾಡಿ, ಜೂನ್ 23ರಂದು ಬೆಂಗಳೂರಿನಲ್ಲಿ ನಾಗರಿಕ ಸಮಾಜದ ಸಭೆಯನ್ನು ಆಯೋಜಿಸಲಾಗುವುದು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಅಭಿಯಾನದ ಕರ್ನಾಟಕ ಕ್ರಿಯಾ ಸಮಿತಿಯ ಸಂಚಾಲಕ ಮೊಹಮ್ಮದ್ ಯೂಸುಫ್ ಕನ್ನಿ, ಸಹ-ಸಂಚಾಲಕ ಸೈಯದ್ ಶಫೀವುಲ್ಲಾ, ಜಮಾಅತೆ ಇಸ್ಲಾಮಿ ಹಿಂದ್ (ಕರ್ನಾಟಕ) ಅಧ್ಯಕ್ಷ ಡಾ. ಮೊಹಮ್ಮದ್ ಸಾದ್ ಬೆಳಗಾಮಿ, ಎಐಎಂಪಿಎಲ್‌ಬಿ ಸದಸ್ಯ ಆಸಿಮ್ ಅಫ್ರೋಜ್ ಸೇಠ್ ಮತ್ತು ಮಾಧ್ಯಮ ಉಸ್ತುವಾರಿ ಮೊಹಮ್ಮದ್ ಫರ್ಕಾನ್ ಅವರು ಉಪಸ್ಥಿತರಿದ್ದರು.

ಏರ್ ಇಂಡಿಯಾ ಪತನ: 90 ದಿನಗಳಲ್ಲಿ ವರದಿ ಸಲ್ಲಿಸಲು ಉನ್ನತ ಮಟ್ಟದ ಸಮಿತಿ ರಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...