Homeಮುಖಪುಟಧರ್ಮದ ಕಾರಣಕ್ಕೆ ಮುಸ್ಲಿಂ ಡೆಲಿವರಿ ಬಾಯ್‌ಗೆ ಹಲ್ಲೆ : ಆರೋಪ

ಧರ್ಮದ ಕಾರಣಕ್ಕೆ ಮುಸ್ಲಿಂ ಡೆಲಿವರಿ ಬಾಯ್‌ಗೆ ಹಲ್ಲೆ : ಆರೋಪ

- Advertisement -
- Advertisement -

ಮುಸ್ಲಿಂ ಎಂಬ ಕಾರಣಕ್ಕೆ ಝೊಮ್ಯಾಟೋ ಡೆಲಿವರಿ ಬಾಯ್‌ಗೆ ನಾಲ್ವರು ಥಳಿಸಿರುವ ಆರೋಪ ಉತ್ತರ ಪ್ರದೇಶದ ಲಕ್ನೋದಿಂದ ಕೇಳಿ ಬಂದಿದೆ.

ಅಸ್ಲಂ ಹಲ್ಲೆಗೊಳಗಾದ ಯುವಕ. ಈತ ರಾತ್ರಿ ಹೊತ್ತು ಆಹಾರ ತಲುಪಿಸುವ ಕೆಲಸ ಮಾಡುತ್ತಿದ್ದ. ಆಗಸ್ಟ್ 20ರಂದು ರಾತ್ರಿ ಬಂದ ಆರ್ಡರ್ ಅನುಸರಿಸಿ ಆಹಾರ ಕೊಂಡೊಯ್ದಾಗ ನಾಲ್ವರು ವ್ಯಕ್ತಿಗಳು ಅಸ್ಲಂ ಮೇಲೆ ಹಲ್ಲೆ ನಡೆಸಿ, ಮೈಮೇಲೆ ಮದ್ಯ ಸುರಿದು, ಧರ್ಮ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಹಲ್ಲೆಗೊಳಗಾದ ರಾತ್ರಿ ಅಸ್ಲಂಗೆ ಎರಡು ಆರ್ಡರ್ ಬಂದಿತ್ತು. ಈ ಪೈಕಿ ಒಂದು ಲಕ್ನೋದ ಗೋಮತಿ ನಗರದ ವಿನೀತ್ ಖಂಡ್ ಪ್ರದೇಶದಿಂದಾಗಿತ್ತು. ಆಹಾರ ಹೊತ್ತು ಮನೆ ಬಳಿ ತಲುಪಿದ ಅಸ್ಲಂ, ಆರ್ಡರ್ ಮಾಡಿದವರಿಗೆ ಕರೆ ಮಾಡಿದ್ದ. ಈ ವೇಳೆ ಆ ಕಡೆಯಿಂದ ಮಾತನಾಡಿದ ವ್ಯಕ್ತಿ ಮನೆಯ ಮೇಲಂತಸ್ತಿಗೆ ಬಂದು ಕೊಟ್ಟು ಹೋಗುವಂತೆ ಸೂಚಿಸಿದ್ದಾರೆ. ಇನ್ನೊಂದು ಆರ್ಡರ್ ತಲುಪಿಸಲು ಇದ್ದ ಕಾರಣ, ನೀವೆ ಕೆಳಗೆ ಬಂದು ತೆಗೆದುಕೊಂಡು ಹೋಗಿ ಎಂದು ಅಸ್ಲಂ ಹೇಳಿದ್ದಾನೆ. ಈ ವೇಳೆ ಆ ಕಡೆಯವರು, ನಾವು ಊಟ ಮಾಡುತಿದ್ದೇವೆ. ನೀನೆ ತಂದು ಕೊಟ್ಟು ಹೋಗು ಎಂದಿದ್ದಾರೆ. ಕೊನೆಗೆ ಅಸ್ಲಂ ಆಹಾರ ಹಿಡಿದು ಮನೆಯ ಮೇಲಂತಸ್ತಿಗೆ ತೆರಳಿದ್ದಾನೆ. ಈ ವೇಳೆ ಅಲ್ಲಿ ನಾಲ್ವರು ಮದ್ಯಪಾನ ಮಾಡುತಿದ್ದರು ಎಂದು ದಿ ವೈರ್ ವರದಿ ಮಾಡಿದೆ.

ಅಸ್ಲಂ ಅನ್ನು ನೋಡಿದ ಓರ್ವ ಆರಂಭದಲ್ಲಿ ಮೇಲೆ ಬರಲು ಏಕೆ ನಿರಾಕರಿಸಿದೆ? ಎಂದು ನಿಂದಿಸಿದ್ದಾನೆ. ಈ ವೇಳೆ ಮತ್ತೋರ್ವ ಅಸ್ಲಂನ ಕಾಲರ್ ಹಿಡಿದು ಮನೆಯೊಳಗೆ ಎಳೆದೊಯ್ದು ಥಳಿಸಿದ್ದಾನೆ. ನಿನ್ನ ಹೆಸರು ಹೇಳು ಎಂದಿದ್ದಾನೆ. ಅಸ್ಲಂ ಹೆಸರು ಹೇಳಿದಾಗ ಮುಸ್ಲಿಂ ಎಂದು ಗೊತ್ತಾಗಿ ಮತ್ತಷ್ಟು ಹಲ್ಲೆ ನಡೆಸಿದ್ದಾರೆ ಎಂದು ಲಿಖಿತ ದೂರಿನಲ್ಲಿ ಅಸ್ಲಂ ಹೇಳಿದ್ದಾಗಿ ದಿ ವೈರ್ ತಿಳಿಸಿದೆ.

“ಆರೋಪಿಗಳು ಹೆಲ್ಮೆಟ್‌ನಿಂದ ನನಗೆ ಥಳಿಸಿದ್ದಾರೆ. ನನ್ನ ಮೇಲೆ ಮದ್ಯ ಸುರಿದಿದ್ದಾರೆ. ಕುದಿಯುವ ನೀರು ಎರಚುವುದಾಗಿ ಬೆದರಿಸಿದ್ದಾರೆ. ಅಷ್ಟೇ ಅಲ್ಲದೆ, ನನ್ನನ್ನು ಸುಮಾರು ಒಂದೂವರೆ ಗಂಟೆಯ ಕಾಲ ಕೊಠಡಿಯಲ್ಲಿ ಕೂಡಿಹಾಕಿದ್ದದರು. ಇದರಿಂದ ಇತರ ಆರ್ಡರ್‌ಗಳನ್ನು ತಲುಪಿಸಲು ಆಗಲಿಲ್ಲ” ಎಂದು ಅಸ್ಲಂ ಆರೋಪಿಸಿದ್ದಾಗಿ ತಿಳಿದು ಬಂದಿದೆ.

ಹಲ್ಲೆ ನಡೆಸಿದ ಬಳಿಕ ಅಸ್ಲಂನನ್ನು ಬಿಟ್ಟ ಆರೋಪಿಗಳು, ತಾನೇ ಆಹಾರಕ್ಕೆ ಹೆಚ್ಚು ಶುಲ್ಕ ವಿಧಿಸಿದೆ. ಗ್ರಾಹಕರೊಂದಿಗೆ ಅನುಚಿತವಾಗಿ ವರ್ತಿಸಿದೆ ಮತ್ತು ಅವರು ಹಲ್ಲೆ ನಡೆಸಿದ ವಿಷಯ ಎಲ್ಲೂ ಹೇಳುವುದಿಲ್ಲ ಎಂದು ಆರೋಪಿಗಳು ಅಸ್ಲಂನಿಂದ ಸಹಿ ಹಾಕಿಸಿಕೊಂಡಿದ್ದಾರೆ ಎಂದು ವರದಿ ತಿಳಿಸಿದೆ.

ಪ್ರಕರಣ ಸಂಬಂಧ ನಾಲ್ವರು ಆರೋಪಿಗಳ ಪೈಕಿ ಓರ್ವನನ್ನು ಬಂಧಿಸಿರುವ ಪೊಲೀಸರು, ಉಳಿದ ಮೂವರಿಗಾಗಿ ಹುಡುಕಾಡುತಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ : ಆರ್‌ಎಸ್‌ಎಸ್‌ ಚಟುವಟಿಕೆಗಳಲ್ಲಿ ಭಾಗವಹಿಸುವ ಸರ್ಕಾರಿ ನೌಕರರ ಮೇಲಿನ ನಿಷೇಧ ತೆಗೆದುಹಾಕಿದ ರಾಜಸ್ಥಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...