Homeಮುಖಪುಟಧರ್ಮದ ಕಾರಣಕ್ಕೆ ಮುಸ್ಲಿಂ ಡೆಲಿವರಿ ಬಾಯ್‌ಗೆ ಹಲ್ಲೆ : ಆರೋಪ

ಧರ್ಮದ ಕಾರಣಕ್ಕೆ ಮುಸ್ಲಿಂ ಡೆಲಿವರಿ ಬಾಯ್‌ಗೆ ಹಲ್ಲೆ : ಆರೋಪ

- Advertisement -
- Advertisement -

ಮುಸ್ಲಿಂ ಎಂಬ ಕಾರಣಕ್ಕೆ ಝೊಮ್ಯಾಟೋ ಡೆಲಿವರಿ ಬಾಯ್‌ಗೆ ನಾಲ್ವರು ಥಳಿಸಿರುವ ಆರೋಪ ಉತ್ತರ ಪ್ರದೇಶದ ಲಕ್ನೋದಿಂದ ಕೇಳಿ ಬಂದಿದೆ.

ಅಸ್ಲಂ ಹಲ್ಲೆಗೊಳಗಾದ ಯುವಕ. ಈತ ರಾತ್ರಿ ಹೊತ್ತು ಆಹಾರ ತಲುಪಿಸುವ ಕೆಲಸ ಮಾಡುತ್ತಿದ್ದ. ಆಗಸ್ಟ್ 20ರಂದು ರಾತ್ರಿ ಬಂದ ಆರ್ಡರ್ ಅನುಸರಿಸಿ ಆಹಾರ ಕೊಂಡೊಯ್ದಾಗ ನಾಲ್ವರು ವ್ಯಕ್ತಿಗಳು ಅಸ್ಲಂ ಮೇಲೆ ಹಲ್ಲೆ ನಡೆಸಿ, ಮೈಮೇಲೆ ಮದ್ಯ ಸುರಿದು, ಧರ್ಮ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಹಲ್ಲೆಗೊಳಗಾದ ರಾತ್ರಿ ಅಸ್ಲಂಗೆ ಎರಡು ಆರ್ಡರ್ ಬಂದಿತ್ತು. ಈ ಪೈಕಿ ಒಂದು ಲಕ್ನೋದ ಗೋಮತಿ ನಗರದ ವಿನೀತ್ ಖಂಡ್ ಪ್ರದೇಶದಿಂದಾಗಿತ್ತು. ಆಹಾರ ಹೊತ್ತು ಮನೆ ಬಳಿ ತಲುಪಿದ ಅಸ್ಲಂ, ಆರ್ಡರ್ ಮಾಡಿದವರಿಗೆ ಕರೆ ಮಾಡಿದ್ದ. ಈ ವೇಳೆ ಆ ಕಡೆಯಿಂದ ಮಾತನಾಡಿದ ವ್ಯಕ್ತಿ ಮನೆಯ ಮೇಲಂತಸ್ತಿಗೆ ಬಂದು ಕೊಟ್ಟು ಹೋಗುವಂತೆ ಸೂಚಿಸಿದ್ದಾರೆ. ಇನ್ನೊಂದು ಆರ್ಡರ್ ತಲುಪಿಸಲು ಇದ್ದ ಕಾರಣ, ನೀವೆ ಕೆಳಗೆ ಬಂದು ತೆಗೆದುಕೊಂಡು ಹೋಗಿ ಎಂದು ಅಸ್ಲಂ ಹೇಳಿದ್ದಾನೆ. ಈ ವೇಳೆ ಆ ಕಡೆಯವರು, ನಾವು ಊಟ ಮಾಡುತಿದ್ದೇವೆ. ನೀನೆ ತಂದು ಕೊಟ್ಟು ಹೋಗು ಎಂದಿದ್ದಾರೆ. ಕೊನೆಗೆ ಅಸ್ಲಂ ಆಹಾರ ಹಿಡಿದು ಮನೆಯ ಮೇಲಂತಸ್ತಿಗೆ ತೆರಳಿದ್ದಾನೆ. ಈ ವೇಳೆ ಅಲ್ಲಿ ನಾಲ್ವರು ಮದ್ಯಪಾನ ಮಾಡುತಿದ್ದರು ಎಂದು ದಿ ವೈರ್ ವರದಿ ಮಾಡಿದೆ.

ಅಸ್ಲಂ ಅನ್ನು ನೋಡಿದ ಓರ್ವ ಆರಂಭದಲ್ಲಿ ಮೇಲೆ ಬರಲು ಏಕೆ ನಿರಾಕರಿಸಿದೆ? ಎಂದು ನಿಂದಿಸಿದ್ದಾನೆ. ಈ ವೇಳೆ ಮತ್ತೋರ್ವ ಅಸ್ಲಂನ ಕಾಲರ್ ಹಿಡಿದು ಮನೆಯೊಳಗೆ ಎಳೆದೊಯ್ದು ಥಳಿಸಿದ್ದಾನೆ. ನಿನ್ನ ಹೆಸರು ಹೇಳು ಎಂದಿದ್ದಾನೆ. ಅಸ್ಲಂ ಹೆಸರು ಹೇಳಿದಾಗ ಮುಸ್ಲಿಂ ಎಂದು ಗೊತ್ತಾಗಿ ಮತ್ತಷ್ಟು ಹಲ್ಲೆ ನಡೆಸಿದ್ದಾರೆ ಎಂದು ಲಿಖಿತ ದೂರಿನಲ್ಲಿ ಅಸ್ಲಂ ಹೇಳಿದ್ದಾಗಿ ದಿ ವೈರ್ ತಿಳಿಸಿದೆ.

“ಆರೋಪಿಗಳು ಹೆಲ್ಮೆಟ್‌ನಿಂದ ನನಗೆ ಥಳಿಸಿದ್ದಾರೆ. ನನ್ನ ಮೇಲೆ ಮದ್ಯ ಸುರಿದಿದ್ದಾರೆ. ಕುದಿಯುವ ನೀರು ಎರಚುವುದಾಗಿ ಬೆದರಿಸಿದ್ದಾರೆ. ಅಷ್ಟೇ ಅಲ್ಲದೆ, ನನ್ನನ್ನು ಸುಮಾರು ಒಂದೂವರೆ ಗಂಟೆಯ ಕಾಲ ಕೊಠಡಿಯಲ್ಲಿ ಕೂಡಿಹಾಕಿದ್ದದರು. ಇದರಿಂದ ಇತರ ಆರ್ಡರ್‌ಗಳನ್ನು ತಲುಪಿಸಲು ಆಗಲಿಲ್ಲ” ಎಂದು ಅಸ್ಲಂ ಆರೋಪಿಸಿದ್ದಾಗಿ ತಿಳಿದು ಬಂದಿದೆ.

ಹಲ್ಲೆ ನಡೆಸಿದ ಬಳಿಕ ಅಸ್ಲಂನನ್ನು ಬಿಟ್ಟ ಆರೋಪಿಗಳು, ತಾನೇ ಆಹಾರಕ್ಕೆ ಹೆಚ್ಚು ಶುಲ್ಕ ವಿಧಿಸಿದೆ. ಗ್ರಾಹಕರೊಂದಿಗೆ ಅನುಚಿತವಾಗಿ ವರ್ತಿಸಿದೆ ಮತ್ತು ಅವರು ಹಲ್ಲೆ ನಡೆಸಿದ ವಿಷಯ ಎಲ್ಲೂ ಹೇಳುವುದಿಲ್ಲ ಎಂದು ಆರೋಪಿಗಳು ಅಸ್ಲಂನಿಂದ ಸಹಿ ಹಾಕಿಸಿಕೊಂಡಿದ್ದಾರೆ ಎಂದು ವರದಿ ತಿಳಿಸಿದೆ.

ಪ್ರಕರಣ ಸಂಬಂಧ ನಾಲ್ವರು ಆರೋಪಿಗಳ ಪೈಕಿ ಓರ್ವನನ್ನು ಬಂಧಿಸಿರುವ ಪೊಲೀಸರು, ಉಳಿದ ಮೂವರಿಗಾಗಿ ಹುಡುಕಾಡುತಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ : ಆರ್‌ಎಸ್‌ಎಸ್‌ ಚಟುವಟಿಕೆಗಳಲ್ಲಿ ಭಾಗವಹಿಸುವ ಸರ್ಕಾರಿ ನೌಕರರ ಮೇಲಿನ ನಿಷೇಧ ತೆಗೆದುಹಾಕಿದ ರಾಜಸ್ಥಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...