Homeಮುಖಪುಟ'ಜೈ ಶ್ರೀ ರಾಮ್' ಹೇಳಲು ನಿರಾಕರಿಸಿದ ಮುಸ್ಲಿಂ ಚಾಲಕನಿಗೆ ಕಿರುಕುಳ; ಬಿಜೆಪಿ ಕಾರ್ಯಕರ್ತನ ಬಂಧನ

‘ಜೈ ಶ್ರೀ ರಾಮ್’ ಹೇಳಲು ನಿರಾಕರಿಸಿದ ಮುಸ್ಲಿಂ ಚಾಲಕನಿಗೆ ಕಿರುಕುಳ; ಬಿಜೆಪಿ ಕಾರ್ಯಕರ್ತನ ಬಂಧನ

- Advertisement -
- Advertisement -

ಉತ್ತರ ಪ್ರದೇಶದ ಆಗ್ರಾದ 57 ವರ್ಷದ ಮುಸ್ಲಿಂ ಟ್ಯಾಕ್ಸಿ ಚಾಲಕನೊಬ್ಬ ಜೈ ಶ್ರೀರಾಮ್ ಎಂದು ಹೇಳಲು ನಿರಾಕರಿಸಿದ್ದಕ್ಕಾಗಿ ಕಿರುಕುಳ ನೀಡಿ ಹಲ್ಲೆ ನಡೆಸಿದ ಒಂದು ವಾರದ ನಂತರ, ಪ್ರಮುಖ ಆರೋಪಿ ರೋಹಿತ್ ಠಾಕೂರ್‌ನನ್ನು ಬಂಧಿಸಲಾಗಿದೆ.

ದೇಶದ ವಿವಿಧ ಭಾಗಗಳಲ್ಲಿ ಮುಸ್ಲಿಮರ ಮೇಲೆ ನಿರಂತರ ಕಿರುಕುಳ ನಡೆಯುತ್ತಿರುವ ನಡುವೆಯೇ ಈ ಘಟನೆ ನಡೆದಿದೆ. ಮುಸ್ಲಿಂ ಸಮುದಾಯದ ಸದಸ್ಯರನ್ನು ಬೆನ್ನಟ್ಟಿ ಜೈ ಶ್ರೀರಾಮ್ ಎಂದು ಕೂಗುವಂತೆ ಒತ್ತಾಯಿಸಲಾಗುತ್ತಿದೆ.

ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದ ವೀಡಿಯೊದಲ್ಲಿ, ಬಿಜೆಪಿ ಕಾರ್ಯಕರ್ತ ಎನ್ನಲಾದ ಆರೋಪಿ ಠಾಕೂರ್, ಡ್ರೈವರ್ ರಹೀಶ್ ಖಾನ್ ಎಂಬ ವೃದ್ಧ ವ್ಯಕ್ತಿಗೆ ಜೈ ಶ್ರೀರಾಮ್ ಎಂದು ಹೇಳುವಂತೆ ಒತ್ತಾಯಿಸುತ್ತಿರುವುದು ಸೆರೆಯಾಗಿದೆ. ಕ್ಯಾಬ್ ಚಾಲಕ ದುಃಖ ವ್ಯಕ್ತಪಡಿಸಿ, “ನಿಮ್ಮ ಕೆಲಸ ನೋಡಿಕೊಳ್ಳಿ” ಎಂದು ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಠಾಕೂರ್, “ಎರಡು ಅಥವಾ ಮೂರು ದಿನಗಳಲ್ಲಿ, ನೀವು ಜೈ ಶ್ರೀರಾಮ್ ಎಂದು ಹೇಳಬೇಕಾಗುತ್ತದೆ” ಎಂದು ಹೇಳಿದ್ದಾನೆ.

ಠಾಕೂರ್ ತನ್ನ ಫೇಸ್‌ಬುಕ್ ಪುಟದಲ್ಲಿ, “ಇವರು ನಿಜವಾದ ಭಯೋತ್ಪಾದಕರು” ಎಂಬ ಶೀರ್ಷಿಕೆಯೊಂದಿಗೆ ಆತನೇ ವೀಡಿಯೊ ಅಪ್‌ಲೋಡ್ ಮಾಡಿದ್ದಾನೆ.

ವರದಿಗಳ ಪ್ರಕಾರ, ಮತ್ತೊಬ್ಬ ವ್ಯಕ್ತಿಯೊಂದಿಗೆ ಬಂದ ಠಾಕೂರ್ ಮುಸ್ಲಿಂ ಚಾಲಕರ ಮೇಲೆ ಹಲ್ಲೆ ನಡೆಸಿದ್ದಾರೆ. “… ನಾನು ಜೈ ಶ್ರೀರಾಮ್ ಎಂದು ಹೇಳಲು ನಿರಾಕರಿಸಿದಾಗ, ಅವರು ನನ್ನ ಗಡ್ಡವನ್ನು ಎಳೆದು ನನ್ನ ಕೆನ್ನೆಗೆ ಹೊಡೆದರು” ಎಂದು ಅವರು ಹೇಳಿದರು.

ಈ ಮಧ್ಯೆ, 38 ವರ್ಷಗಳಿಂದ ಕ್ಯಾಬ್ ಚಾಲಕರಾಗಿರುವ ಖಾನ್ ಒಂದು ತಿಂಗಳ ಹಿಂದೆ ಸಾಲದ ಮೇಲೆ ಸ್ವಂತ ಕಾರು ಖರೀದಿಸಿದ್ದರು ಎಂದು ಆಲ್ಟ್ ನ್ಯೂಸ್ ವರದಿ ಮಾಡಿದೆ. ಘಟನೆಯ ದಿನ, ಅವರು ಆಗ್ರಾ ಕ್ಯಾಂಟ್ ರೈಲ್ವೆ ನಿಲ್ದಾಣದಿಂದ ತಾಜ್ ಮಹಲ್ ಮೆಟ್ರೋ ಪಾರ್ಕಿಂಗ್‌ಗೆ ಪ್ರವಾಸಿಗರನ್ನು ಕರೆದುಕೊಂಡು ಹೋಗಿದ್ದರು. ಅವರು ಕಾರನ್ನು ನಿಲ್ಲಿಸುತ್ತಿದ್ದಾಗ, ಠಾಕೂರ್ ಮತ್ತು ಅವರ ಸಹಚರರು ಅವರ ಬಳಿಗೆ ಬಂದು ಕಿರುಕುಳ ನೀಡಿದ್ದಾರೆ.

ಉತ್ತರ ಪ್ರದೇಶದ ಪತ್ರಕರ್ತ ಮದನ್ ಮೋಹನ್ ಸೋನಿ ಪ್ರಕಾರ, ಡಿಸೆಂಬರ್ 2 ರಂದು ಠಾಕೂರ್ ಅವರನ್ನು ಆಗ್ರಾ ಪೊಲೀಸರು ಬಂಧಿಸಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.

ಠಾಕೂರ್ ಅವರ ಫೇಸ್‌ಬುಕ್ ಪುಟದಲ್ಲಿ, ಅವರು ಬಿಜೆಪಿ ಮತ್ತು ನರೇಂದ್ರ ಮೋದಿಗೆ ತಮ್ಮ ಬೆಂಬಲವನ್ನು ಬಹಿರಂಗವಾಗಿ ತೋರಿಸಿದ್ದಾರೆ. ಘಟನೆಯ ಸ್ವಲ್ಪ ಸಮಯದ ನಂತರ ಅವರು ಪೋಸ್ಟ್ ಮಾಡಿದ ವೀಡಿಯೊದಲ್ಲಿ, ಕೆಂಪು ಕೋಟೆಯಲ್ಲಿ ಮುಸ್ಲಿಂ ಸಂದರ್ಶಕರನ್ನು ಚಿತ್ರೀಕರಿಸುವಾಗ, ಠಾಕೂರ್ ಇಸ್ಲಾಮೋಫೋಬಿಕ್ ನಿಂದನೆ ಬಳಸುವುದು ಸೆರೆಯಾಗಿದೆ. ಒಂದು ಹಂತದಲ್ಲಿ, ಅವರು ಒಬ್ಬ ವ್ಯಕ್ತಿಯನ್ನು ನಿಲ್ಲಿಸಿ ಅದೇ ರೀತಿಯಲ್ಲಿ ಜೈ ಶ್ರೀರಾಮ್ ಎಂದು ಹೇಳಲು ಒತ್ತಾಯಿಸಿದ್ದಾನೆ.

ಆತ ತನ್ನ ಫೇಸ್‌ಬುಕ್ ಪುಟದಲ್ಲಿ ಮುಸ್ಲಿಂ ಪುರುಷರಿಗೆ ಕಿರುಕುಳ ನೀಡುವುದು, ಜೈ ಶ್ರೀರಾಮ್ ಎಂದು ಜಪಿಸುವಂತೆ ಒತ್ತಾಯಿಸುವುದು ಅಥವಾ ಇಸ್ಲಾಮೋಫೋಬಿಕ್ ನಿಂದನೆಗಳನ್ನು ಬಳಸುವುದು ಮುಂತಾದ ವೀಡಿಯೊಗಳಿವೆ. ನವೆಂಬರ್ 24 ರಂದು ಅಪ್‌ಲೋಡ್ ಮಾಡಲಾದ ಒಂದು ವೀಡಿಯೊದಲ್ಲಿ, ತಾಜ್ ಮಹಲ್ ವಾಸ್ತವವಾಗಿ ತೇಜೋ ಮಹಾಲಯ ಎಂದು ಆತ ಜೋರಾಗಿ ಹೇಳಿಕೊಳ್ಳುತ್ತಿದ್ದಾನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೌರವ್ ಗೊಗೊಯ್ ಸಹಿತ ಮೂವರು ಕಾಂಗ್ರೆಸ್ ನಾಯಕರ ವಿರುದ್ಧ 500 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಅಸ್ಸಾಂ ಸಿಎಂ

ಕಾಂಗ್ರೆಸ್ ನಾಯಕರಾದ ಜಿತೇಂದ್ರ ಸಿಂಗ್, ಭೂಪೇಶ್ ಬಘೇಲ್ ಮತ್ತು ಗೌರವ್ ಗೊಗೊಯ್ ವಿರುದ್ದ 500 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಿದ್ದೇನೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ತಿಳಿಸಿದ್ದಾರೆ. "ಪತ್ರಿಕಾಗೋಷ್ಠಿಯ ಮೂಲಕ...

ಕೇರಳದಲ್ಲಿ ಸರ್ಕಾರ ಬದಲಾವಣೆಗೆ ಕವಿ ಸಚ್ಚಿದಾನಂದನ್ ಕರೆಗೆ ಎಡಪಕ್ಷಗಳ ತೀವ್ರ ವಿರೋಧ; ಇದು ಸಾರ್ವಜನಿಕ ಭಾವನೆ ಎಂದ ವಿಪಕ್ಷಗಳು

ಕೇರಳದಲ್ಲಿ ನಿರಂತರ ಆಡಳಿತ ಅಪೇಕ್ಷಣೀಯವಲ್ಲ ಮತ್ತು ಅಧಿಕಾರವು ರಾಜಕೀಯ ರಂಗಗಳ ನಡುವೆ ಪರ್ಯಾಯವಾಗಿರಬೇಕು ಎಂದು ಹಿರಿಯ ಕವಿ ಮತ್ತು ಕೇರಳ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಕೆ. ಸಚ್ಚಿದಾನಂದನ್ ಹೇಳಿದ್ದಾರೆ. ಈ ಹೇಳಿಕೆ ಆಡಳಿತಾರೂಢ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿ ರಕ್ಷಣೆ; ದೀಪಕ್ ಕೊಂದವರಿಗೆ 2 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದ ವ್ಯಕ್ತಿ ಬಂಧನ

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿ ರಕ್ಷಿಸಿದ್ದ ಜಿಮ್ ಮಾಲೀಕ ದೀಪಕ್ ಕುಮಾರ್ (ಮೊಹಮ್ಮದ್ ದೀಪಕ್) ಅವರನ್ನು ಕೊಂದವರಿಗೆ 2 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದ ವ್ಯಕ್ತಿಯನ್ನು ಉತ್ತರಾಖಂಡ ಪೊಲೀಸರು ಸೋಮವಾರ (ಫೆ.9) ಬಂಧಿಸಿದ್ದಾರೆ. ಬಿಹಾರದ...

ಬಾಂಗ್ಲಾದೇಶ: ಚುನಾವಣೆಗೂ ಮುನ್ನ 62 ವರ್ಷದ ಹಿಂದೂ ಅಕ್ಕಿ ವ್ಯಾಪಾರಿ ಸುಶೇನ್ ಚಂದ್ರ ಸರ್ಕಾರ್ ಹತ್ಯೆ

ಬಾಂಗ್ಲಾದೇಶದ ಸಾರ್ವತ್ರಿಕ ಚುನಾವಣೆಗೆ ಮತದಾನಕ್ಕೆ ಕೆಲವೇ ಗಂಟೆಗಳ ಮೊದಲು, ಸೋಮವಾರ ತಡರಾತ್ರಿ ಬಾಂಗ್ಲಾದೇಶದ ಮೈಮೆನ್ಸಿಂಗ್ ಜಿಲ್ಲೆಯಲ್ಲಿ ಹಿಂದೂ ಅಕ್ಕಿ ವ್ಯಾಪಾರಿಯೊಬ್ಬರನ್ನು ಅವರ ಅಂಗಡಿಯೊಳಗೆ ಹತ್ಯೆಯಾಗಿದೆ.  ತ್ರಿಶಾಲ್ ಉಪಜಿಲಾದ ಬೋಗರ್ ಬಜಾರ್ ಛೇದಕದಲ್ಲಿರುವ "ಮೆಸರ್ಸ್ ಭಾಯ್...

ಹೈಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇರುವಾಗಲೇ ಮಸೀದಿ ಕೆಡವಿದ ಉತ್ತರ ಪ್ರದೇಶ ಸರ್ಕಾರ

ಹೈಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇರುವಾಗಲೇ ಉತ್ತರ ಪ್ರದೇಶ ಆಡಳಿತವು ಬರೇಲಿ ಜಿಲ್ಲೆಯ ಮಸೀದಿಯನ್ನು ನೆಲಸಮಗೊಳಿಸಿದೆ. ಮಸೀದಿ ನಿರ್ಮಾಣ ಕುರಿತಾದ ಪ್ರಕರಣ ಅಲಹಾಬಾದ್ ಹೈಕೋರ್ಟ್‌ನಲ್ಲಿ ಬಾಕಿ ಉಳಿದಿದೆ. ಭೋಜಿಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಪಿಪಾರಿಯಾ...

‘ನಾನು ಮಾಜಿ ಸೇನಾ ಮುಖ್ಯಸ್ಥರನ್ನು ನಂಬುತ್ತೇನೆ’ : ಜನರಲ್ ನರವಾಣೆ ಪುಸ್ತಕದ ಕುರಿತ ಪ್ರಕಾಶಕರ ಹೇಳಿಕೆಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಾಣೆ ಅವರ ಆತ್ಮಕಥೆಯ ಪ್ರಕಾಶಕರ ವಿರುದ್ಧ ರಾಹುಲ್ ಗಾಂಧಿ ಮಂಗಳವಾರ (ಫೆ.10) ಗಂಭೀರ ಆರೋಪ ಮಾಡಿದ್ದಾರೆ. ನರವಾಣೆ ಅವರ ನೆನಪುಗಳ ಆಧಾರಿತ ಪುಸ್ತಕವು ಈಗಾಗಲೇ ಮಾರಾಟಕ್ಕೆ...

‘ಆದಿತ್ಯನಾಥನ ಆಡಳಿತದಲ್ಲಿ ಬ್ರಾಹ್ಮಣರು ಅಸುರಕ್ಷಿತರು, ಸನಾತನಿಗಳು ಎಂದಿಗೂ ಮರೆಯುವುದಿಲ್ಲ’ ಎಂಬ ಅರ್ಥದಲ್ಲಿ ಪೋಸ್ಟ್ ಮಾಡಿದ ಪತ್ರಕರ್ತನ ಬಂಧನ

ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲೆಯ ಪತ್ರಕರ್ತರೊಬ್ಬರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕುರಿತು ಆಕ್ಷೇಪಾರ್ಹ ಮತ್ತು ಪ್ರಚೋದನಕಾರಿ ಚಿತ್ರವನ್ನು ಫೇಸ್‌ಬುಕ್‌ನಲ್ಲಿ ಅಪ್‌ಲೋಡ್ ಮಾಡಿದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ ಎಂದು...

ಹಿಮಂತ ಬಿಸ್ವಾ ಶರ್ಮಾ ‘ಗುಂಡು ಹಾರಿಸುವ’ ವಿಡಿಯೋ ವಿರುದ್ಧದ ಅರ್ಜಿ; ವಿಚಾರಣೆಗೆ ಸಮ್ಮತಿಸಿದ ಸುಪ್ರೀಂ ಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ನಿರ್ದಿಷ್ಟ ಸಮುದಾಯದ ಸದಸ್ಯರ ಮೇಲೆ ಗುರಿಯಿಟ್ಟು ರೈಫಲ್‌ನಿಂದ ಗುಂಡು ಹಾರಿಸುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಎಡಪಂಥೀಯ...

ನರವಾಣೆಯ ಅಪ್ರಕಟಿತ ಆತ್ಮಚರಿತ್ರೆ ಪ್ರಸಾರ ಆರೋಪ : ಎಫ್‌ಐಆರ್‌ ದಾಖಲಿಸಿದ ದೆಹಲಿ ಪೊಲೀಸರು

ಮಾಜಿ ಭೂಸೇನಾ ಮುಖ್ಯಸ್ಥ ಎಂ.ಎಂ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ "ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ"ಯ ಪ್ರಸಾರ ಆರೋಪದ ಮೇಲೆ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ವರದಿಯಾಗಿದೆ. ಇದೇ ಪುಸ್ತಕದ ವಿಷಯಗಳನ್ನು ಪ್ರತಿಪಕ್ಷ...

ನರವಾಣೆ ಅವರ ಆತ್ಮಚರಿತ್ರೆಯ ಯಾವುದೇ ಪ್ರತಿಗಳು ಸಾರ್ವಜನಿಕವಾಗಿ ಲಭ್ಯವಿಲ್ಲ: ಪೆಂಗ್ವಿನ್ ಪ್ರಕಾಶನ ಸ್ಪಷ್ಟನೆ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಆತ್ಮಚರಿತ್ರೆ 'ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ'ಗೆ ವಿಶೇಷ ಪ್ರಕಾಶನ ಹಕ್ಕುಗಳನ್ನು ಹೊಂದಿದ್ದೇವೆ ಎಂದು ಪೆಂಗ್ವಿನ್ ರಾಂಡಮ್ ಹೌಸ್ ಇಂಡಿಯಾ (ಪಿಆರ್‌ಎಚ್‌ಐ) ಹೇಳಿದ್ದು,...