Homeಮುಖಪುಟ'ಜೈ ಶ್ರೀ ರಾಮ್' ಹೇಳಲು ನಿರಾಕರಿಸಿದ ಮುಸ್ಲಿಂ ಚಾಲಕನಿಗೆ ಕಿರುಕುಳ; ಬಿಜೆಪಿ ಕಾರ್ಯಕರ್ತನ ಬಂಧನ

‘ಜೈ ಶ್ರೀ ರಾಮ್’ ಹೇಳಲು ನಿರಾಕರಿಸಿದ ಮುಸ್ಲಿಂ ಚಾಲಕನಿಗೆ ಕಿರುಕುಳ; ಬಿಜೆಪಿ ಕಾರ್ಯಕರ್ತನ ಬಂಧನ

- Advertisement -
- Advertisement -

ಉತ್ತರ ಪ್ರದೇಶದ ಆಗ್ರಾದ 57 ವರ್ಷದ ಮುಸ್ಲಿಂ ಟ್ಯಾಕ್ಸಿ ಚಾಲಕನೊಬ್ಬ ಜೈ ಶ್ರೀರಾಮ್ ಎಂದು ಹೇಳಲು ನಿರಾಕರಿಸಿದ್ದಕ್ಕಾಗಿ ಕಿರುಕುಳ ನೀಡಿ ಹಲ್ಲೆ ನಡೆಸಿದ ಒಂದು ವಾರದ ನಂತರ, ಪ್ರಮುಖ ಆರೋಪಿ ರೋಹಿತ್ ಠಾಕೂರ್‌ನನ್ನು ಬಂಧಿಸಲಾಗಿದೆ.

ದೇಶದ ವಿವಿಧ ಭಾಗಗಳಲ್ಲಿ ಮುಸ್ಲಿಮರ ಮೇಲೆ ನಿರಂತರ ಕಿರುಕುಳ ನಡೆಯುತ್ತಿರುವ ನಡುವೆಯೇ ಈ ಘಟನೆ ನಡೆದಿದೆ. ಮುಸ್ಲಿಂ ಸಮುದಾಯದ ಸದಸ್ಯರನ್ನು ಬೆನ್ನಟ್ಟಿ ಜೈ ಶ್ರೀರಾಮ್ ಎಂದು ಕೂಗುವಂತೆ ಒತ್ತಾಯಿಸಲಾಗುತ್ತಿದೆ.

ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದ ವೀಡಿಯೊದಲ್ಲಿ, ಬಿಜೆಪಿ ಕಾರ್ಯಕರ್ತ ಎನ್ನಲಾದ ಆರೋಪಿ ಠಾಕೂರ್, ಡ್ರೈವರ್ ರಹೀಶ್ ಖಾನ್ ಎಂಬ ವೃದ್ಧ ವ್ಯಕ್ತಿಗೆ ಜೈ ಶ್ರೀರಾಮ್ ಎಂದು ಹೇಳುವಂತೆ ಒತ್ತಾಯಿಸುತ್ತಿರುವುದು ಸೆರೆಯಾಗಿದೆ. ಕ್ಯಾಬ್ ಚಾಲಕ ದುಃಖ ವ್ಯಕ್ತಪಡಿಸಿ, “ನಿಮ್ಮ ಕೆಲಸ ನೋಡಿಕೊಳ್ಳಿ” ಎಂದು ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಠಾಕೂರ್, “ಎರಡು ಅಥವಾ ಮೂರು ದಿನಗಳಲ್ಲಿ, ನೀವು ಜೈ ಶ್ರೀರಾಮ್ ಎಂದು ಹೇಳಬೇಕಾಗುತ್ತದೆ” ಎಂದು ಹೇಳಿದ್ದಾನೆ.

ಠಾಕೂರ್ ತನ್ನ ಫೇಸ್‌ಬುಕ್ ಪುಟದಲ್ಲಿ, “ಇವರು ನಿಜವಾದ ಭಯೋತ್ಪಾದಕರು” ಎಂಬ ಶೀರ್ಷಿಕೆಯೊಂದಿಗೆ ಆತನೇ ವೀಡಿಯೊ ಅಪ್‌ಲೋಡ್ ಮಾಡಿದ್ದಾನೆ.

ವರದಿಗಳ ಪ್ರಕಾರ, ಮತ್ತೊಬ್ಬ ವ್ಯಕ್ತಿಯೊಂದಿಗೆ ಬಂದ ಠಾಕೂರ್ ಮುಸ್ಲಿಂ ಚಾಲಕರ ಮೇಲೆ ಹಲ್ಲೆ ನಡೆಸಿದ್ದಾರೆ. “… ನಾನು ಜೈ ಶ್ರೀರಾಮ್ ಎಂದು ಹೇಳಲು ನಿರಾಕರಿಸಿದಾಗ, ಅವರು ನನ್ನ ಗಡ್ಡವನ್ನು ಎಳೆದು ನನ್ನ ಕೆನ್ನೆಗೆ ಹೊಡೆದರು” ಎಂದು ಅವರು ಹೇಳಿದರು.

ಈ ಮಧ್ಯೆ, 38 ವರ್ಷಗಳಿಂದ ಕ್ಯಾಬ್ ಚಾಲಕರಾಗಿರುವ ಖಾನ್ ಒಂದು ತಿಂಗಳ ಹಿಂದೆ ಸಾಲದ ಮೇಲೆ ಸ್ವಂತ ಕಾರು ಖರೀದಿಸಿದ್ದರು ಎಂದು ಆಲ್ಟ್ ನ್ಯೂಸ್ ವರದಿ ಮಾಡಿದೆ. ಘಟನೆಯ ದಿನ, ಅವರು ಆಗ್ರಾ ಕ್ಯಾಂಟ್ ರೈಲ್ವೆ ನಿಲ್ದಾಣದಿಂದ ತಾಜ್ ಮಹಲ್ ಮೆಟ್ರೋ ಪಾರ್ಕಿಂಗ್‌ಗೆ ಪ್ರವಾಸಿಗರನ್ನು ಕರೆದುಕೊಂಡು ಹೋಗಿದ್ದರು. ಅವರು ಕಾರನ್ನು ನಿಲ್ಲಿಸುತ್ತಿದ್ದಾಗ, ಠಾಕೂರ್ ಮತ್ತು ಅವರ ಸಹಚರರು ಅವರ ಬಳಿಗೆ ಬಂದು ಕಿರುಕುಳ ನೀಡಿದ್ದಾರೆ.

ಉತ್ತರ ಪ್ರದೇಶದ ಪತ್ರಕರ್ತ ಮದನ್ ಮೋಹನ್ ಸೋನಿ ಪ್ರಕಾರ, ಡಿಸೆಂಬರ್ 2 ರಂದು ಠಾಕೂರ್ ಅವರನ್ನು ಆಗ್ರಾ ಪೊಲೀಸರು ಬಂಧಿಸಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.

ಠಾಕೂರ್ ಅವರ ಫೇಸ್‌ಬುಕ್ ಪುಟದಲ್ಲಿ, ಅವರು ಬಿಜೆಪಿ ಮತ್ತು ನರೇಂದ್ರ ಮೋದಿಗೆ ತಮ್ಮ ಬೆಂಬಲವನ್ನು ಬಹಿರಂಗವಾಗಿ ತೋರಿಸಿದ್ದಾರೆ. ಘಟನೆಯ ಸ್ವಲ್ಪ ಸಮಯದ ನಂತರ ಅವರು ಪೋಸ್ಟ್ ಮಾಡಿದ ವೀಡಿಯೊದಲ್ಲಿ, ಕೆಂಪು ಕೋಟೆಯಲ್ಲಿ ಮುಸ್ಲಿಂ ಸಂದರ್ಶಕರನ್ನು ಚಿತ್ರೀಕರಿಸುವಾಗ, ಠಾಕೂರ್ ಇಸ್ಲಾಮೋಫೋಬಿಕ್ ನಿಂದನೆ ಬಳಸುವುದು ಸೆರೆಯಾಗಿದೆ. ಒಂದು ಹಂತದಲ್ಲಿ, ಅವರು ಒಬ್ಬ ವ್ಯಕ್ತಿಯನ್ನು ನಿಲ್ಲಿಸಿ ಅದೇ ರೀತಿಯಲ್ಲಿ ಜೈ ಶ್ರೀರಾಮ್ ಎಂದು ಹೇಳಲು ಒತ್ತಾಯಿಸಿದ್ದಾನೆ.

ಆತ ತನ್ನ ಫೇಸ್‌ಬುಕ್ ಪುಟದಲ್ಲಿ ಮುಸ್ಲಿಂ ಪುರುಷರಿಗೆ ಕಿರುಕುಳ ನೀಡುವುದು, ಜೈ ಶ್ರೀರಾಮ್ ಎಂದು ಜಪಿಸುವಂತೆ ಒತ್ತಾಯಿಸುವುದು ಅಥವಾ ಇಸ್ಲಾಮೋಫೋಬಿಕ್ ನಿಂದನೆಗಳನ್ನು ಬಳಸುವುದು ಮುಂತಾದ ವೀಡಿಯೊಗಳಿವೆ. ನವೆಂಬರ್ 24 ರಂದು ಅಪ್‌ಲೋಡ್ ಮಾಡಲಾದ ಒಂದು ವೀಡಿಯೊದಲ್ಲಿ, ತಾಜ್ ಮಹಲ್ ವಾಸ್ತವವಾಗಿ ತೇಜೋ ಮಹಾಲಯ ಎಂದು ಆತ ಜೋರಾಗಿ ಹೇಳಿಕೊಳ್ಳುತ್ತಿದ್ದಾನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂಡಿಗೋ ಏರ್‌ಲೈನ್ಸ್‌ ಕಾರ್ಯಾಚರಣೆ ಅಸ್ತವ್ಯಸ್ತ; ತನಿಖೆಗೆ ಆದೇಶಿಸಿದ ಕೇಂದ್ರ ಸರ್ಕಾರ

ಇಂಡಿಗೋದ ದೊಡ್ಡ ಪ್ರಮಾಣದ ವಿಮಾನ ರದ್ದತಿಯಿಂದ ಉಂಟಾದ ಬೃಹತ್ ಅಡಚಣೆಯ ಬಗ್ಗೆ ಕೇಂದ್ರ ಸರ್ಕಾರ ಉನ್ನತ ಮಟ್ಟದ ತನಿಖೆಗೆ ಆದೇಶಿಸಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ ಶುಕ್ರವಾರ ಘೋಷಿಸಿದೆ. ಸಾವಿರಾರು ಪ್ರಯಾಣಿಕರು ದೇಶಾದ್ಯಂತ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ಗರ್ಭಿಣಿ ಮಹಿಳೆ, ಮಗನನ್ನು ವಾಪಸ್ ಕರೆ ತಂದ ಅಧಿಕಾರಿಗಳು

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶಕ್ಕೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ಗರ್ಭಿಣಿ ಮಹಿಳೆ ಮತ್ತು ಅವರ ಎಂಟು ವರ್ಷದ ಮಗನನ್ನು ಶುಕ್ರವಾರ (ಡಿಸೆಂಬರ್ 5) ಭಾರತಕ್ಕೆ ಮರಳಿ ಕರೆತರಲಾಗಿದೆ. ಸುನಾಲಿ ಖಾತೂನ್ ಎಂಬ ಮಹಿಳೆ...

ಇಂಡಿಗೋ ವಿಮಾನ ಸೇವೆಯಲ್ಲಿ ವ್ಯತ್ಯಯ : ಪೈಲಟ್‌ಗಳಿಗೆ ವಾರದ ವಿಶ್ರಾಂತಿ ನಿಯಮ ಹಿಂಪಡೆದ ಡಿಜಿಸಿಎ

ಡಿಸೆಂಬರ್ 4 ಗುರುವಾರ ದೇಶದಾದ್ಯಂತ 1,000ಕ್ಕೂ ಹೆಚ್ಚು ಇಂಡಿಗೋ ವಿಮಾನಗಳ ಹಾರಾಟ ರದ್ದಾಗಿದ್ದು ಮತ್ತು ದೆಹಲಿಯಿಂದ ಎಲ್ಲಾ 235 ದೇಶೀಯ ನಿರ್ಗಮನಗಳು 24 ಗಂಟೆಗಳ ಕಾಲ ಸ್ಥಗಿತಗೊಂಡಿತ್ತು. ಪರಿಣಾಮ ಬೆಂಗಳೂರು ಸೇರಿದಂತೆ ದೇಶದ...

​ಚನ್ನರಾಯಪಟ್ಟಣ ರೈತರಿಗೆ ಅಂತಿಮ ವಿಜಯ; ​ಬೆಂಬಲಕ್ಕೆ ನಿಂತವರಿಗೆ ಧನ್ಯವಾದ ತಿಳಿಸಿದ ‘ಹೋರಾಟ ಸಮಿತಿ’

​ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ ರೈತರ ಭೂ ಹೋರಾಟ ಕೊನೆಗೂ ಸುಖಾಂತ್ಯವಾಗಿದೆ. ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ ಜೊತೆಗೆ ರಾಜ್ಯದ ಹತ್ತಾರು ಜನಪರ ಸಂಘಟನೆಗಳು ನಡೆಸಿದ ಸುದೀರ್ಘ ಹೋರಾಟ...

ಸಚಿವ ಸಂಪುಟ ಸಭೆಯಲ್ಲಿ ಅಲೆಮಾರಿಗಳ ಬಗ್ಗೆ ತುಟಿ ಬಿಚ್ಚದ ಸರ್ಕಾರ; ‘ಬೆಳಗಾವಿ ಚಲೋ’ ಹೋರಾಟಕ್ಕೆ ಕರೆ

ಗುರುವಾರ (ಡಿ.4) ನಡೆದ ಸಚಿವ ಸಂಪುಟ ಸಭೆಯಲ್ಲಿ ಅಲೆಮಾರಿಗಳ ಮೀಸಲಾತಿ ಬಗ್ಗೆ ತುಟಿ ಬಿಚ್ಚದ ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತವಾಗಿದ್ದು, 'ಕರ್ನಾಟಕ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ' 'ಬೆಳಗಾವಿ ಚಲೋ'...

ಅಖಂಡ ಕರ್ನಾಟಕದ ಪ್ರದೇಶಗಳನ್ನು ಸಾಂಸ್ಕೃತಿಕವಾಗಿ ವಿಲೀನಗೊಳಿಸಲು ಇದು ಸಕಾಲ: ಡಾ.ಪುರುಷೋತ್ತಮ ಬಿಳಿಮಲೆ

ಕರ್ನಾಟಕ ಮತ್ತು ನೆರೆ ರಾಜ್ಯಗಳ ಅಚ್ಚ ಕನ್ನಡ ಪ್ರದೇಶಗಳ ನಡುವಿನ ಭೌತಿಕ ಗಡಿಗಳು ಇದ್ದಂತೆ ಇದ್ದರೂ ಸಾಂಸ್ಕೃತಿಕವಾಗಿ ಹೇರಲಾಗುತ್ತಿರುವ ಗಡಿಗಳನ್ನು ಅಪ್ರಸ್ತುತವಾಗಿಸುವುದು ಸಾಧ್ಯವಿದೆ. ಇಂತಹ ಪ್ರದೇಶಗಳೊಂದಿಗೆ ಕರ್ನಾಟಕದ ಭಾವನಾತ್ಮಕ ಸಂಬಂಧದ ವಿಸ್ತರಣೆಗೆ ಇದು...

ಅರುಂಧತಿ ರಾಯ್ ಅವರ ಪುಸ್ತಕದ ಮುಖಪುಟ ವಿರೋಧಿಸಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಖ್ಯಾತ ಲೇಖಕಿ ಅರುಂಧತಿ ರಾಯ್ ಅವರ 'ಮದರ್ ಮೇರಿ ಕಮ್ಸ್ ಟು ಮಿ' ಪುಸ್ತಕದ ಮುಖಪುಟ ಚಿತ್ರದ ಪ್ರಸಾರದ ವಿರುದ್ಧ ಸಲ್ಲಿಸಲಾದ ಅರ್ಜಿಯನ್ನು ಸುಪ್ರಿಂ ಕೋರ್ಟ್‌ ಶುಕ್ರವಾರ ತಿರಸ್ಕರಿಸಿದೆ. ಏಕೆಂದರೆ, ಲೇಖಕರು ಧೂಮಪಾನವನ್ನು...

ರೋಹಿಂಗ್ಯಾ ಕುರಿತು ಆಕ್ಷೇಪಾರ್ಹ ಹೇಳಿಕೆ: ಸಿಐಜೆ ಸೂರ್ಯಕಾಂತ್ ಅವರಿಗೆ ಮಾಜಿ ನ್ಯಾಯಾದೀಶರು, ವಕೀಲರು, ಶಿಕ್ಷಣ ತಜ್ಞರಿಂದ ಮುಕ್ತ ಪತ್ರ

ರೋಹಿಂಗ್ಯಾಗಳ ವಿರುದ್ಧ ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರು ನೀಡಿದ್ದ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿ ಮಾಜಿ ನ್ಯಾಯಾಧೀಶರು, ವಕೀಲರು ಮತ್ತು ಶಿಕ್ಷಣ ತಜ್ಞರು ಸೂರ್ಯಕಾಂತ್ ಅವರಿಗೆ ಮುಕ್ತ ಪತ್ರ ಬರೆದಿದ್ದಾರೆ.  ಕಿರುಕುಳದಿಂದ ಪಲಾಯನ ಮಾಡಿದ...

ಛತ್ತೀಸ್‌ಗಢ: ‘ಎಸ್‌ಇಸಿಎಲ್‌ ಅಮೇರಾ’ ಕಲ್ಲಿದ್ದಲು ಗಣಿ ವಿಸ್ತರಣೆ ವಿರೋಧಿಸಿ ಪರ್ಸೋಡಿ ಕಲಾನ್ ಗ್ರಾಮದಲ್ಲಿ ಪ್ರತಿಭಟನೆ

ಛತ್ತೀಸ್‌ಗಢದ ಸೌತ್ ಈಸ್ಟರ್ನ್ ಕೋಲ್‌ಫೀಲ್ಡ್ಸ್ ಲಿಮಿಟೆಡ್‌ನ (ಎಸ್‌ಇಸಿಎಲ್‌) ಅಮೇರಾ ಕಲ್ಲಿದ್ದಲು ಗಣಿಗಾರಿಕೆ ವಿಸ್ತರಣೆ ವಿರೋಧಿಸಿ ಡಿ.3 ರಂದು ಅಂಬಿಕಾಪುರದ ಪರ್ಸೋಡಿ ಕಲಾನ್ ಗ್ರಾಮದಲ್ಲಿ ಪ್ರತಿಭಟನೆ ಭುಗಿಲೆದ್ದಿದೆ. ಪ್ರತಿಭಟನೆ ಸಂದರ್ಭದಲ್ಲಿ ಪೊಲೀಸರ ಮೇಲೆ ಗ್ರಾಮಸ್ಥರು...

ಗಂಟೆಗಟ್ಟಲೆ ಇಂಡಿಗೋ ವಿಮಾನ ವಿಳಂಬ: ‘ನನ್ನ ಮಗಳಿಗೆ ಸ್ಯಾನಿಟರಿ ಪ್ಯಾಡ್‌ ಕೊಡಿ..’ ಎಂದು ಬೇಡಿಕೊಂಡ ತಂದೆ

ದೇಶಾದ್ಯಂತ ಇಂಡಿಗೋ ಪ್ರಯಾಣಿಕರು ಭಾರಿ ಅನಾನುಕೂಲತೆಯನ್ನು ಎದುರಿಸುತ್ತಿದ್ದಾರೆ. ಏಕೆಂದರೆ, ವಿಮಾನಯಾನ ಸಂಸ್ಥೆಯ ವಿಳಂಬ ಮತ್ತು ರದ್ದತಿ ನಿರ್ಧಾರವು ಸತತ ನಾಲ್ಕನೇ ದಿನವೂ (ಡಿ. 5) ಮುಂದುವರೆದಿದೆ. ಅವ್ಯವಸ್ಥೆಯ ನಡುವೆಯೇ, ವಿಮಾನ ನಿಲ್ದಾಣದಿಂದ ಬಂದ...