Homeಮುಖಪುಟ'ಜೈ ಶ್ರೀ ರಾಮ್' ಹೇಳಲು ನಿರಾಕರಿಸಿದ ಮುಸ್ಲಿಂ ಚಾಲಕನಿಗೆ ಕಿರುಕುಳ; ಬಿಜೆಪಿ ಕಾರ್ಯಕರ್ತನ ಬಂಧನ

‘ಜೈ ಶ್ರೀ ರಾಮ್’ ಹೇಳಲು ನಿರಾಕರಿಸಿದ ಮುಸ್ಲಿಂ ಚಾಲಕನಿಗೆ ಕಿರುಕುಳ; ಬಿಜೆಪಿ ಕಾರ್ಯಕರ್ತನ ಬಂಧನ

- Advertisement -
- Advertisement -

ಉತ್ತರ ಪ್ರದೇಶದ ಆಗ್ರಾದ 57 ವರ್ಷದ ಮುಸ್ಲಿಂ ಟ್ಯಾಕ್ಸಿ ಚಾಲಕನೊಬ್ಬ ಜೈ ಶ್ರೀರಾಮ್ ಎಂದು ಹೇಳಲು ನಿರಾಕರಿಸಿದ್ದಕ್ಕಾಗಿ ಕಿರುಕುಳ ನೀಡಿ ಹಲ್ಲೆ ನಡೆಸಿದ ಒಂದು ವಾರದ ನಂತರ, ಪ್ರಮುಖ ಆರೋಪಿ ರೋಹಿತ್ ಠಾಕೂರ್‌ನನ್ನು ಬಂಧಿಸಲಾಗಿದೆ.

ದೇಶದ ವಿವಿಧ ಭಾಗಗಳಲ್ಲಿ ಮುಸ್ಲಿಮರ ಮೇಲೆ ನಿರಂತರ ಕಿರುಕುಳ ನಡೆಯುತ್ತಿರುವ ನಡುವೆಯೇ ಈ ಘಟನೆ ನಡೆದಿದೆ. ಮುಸ್ಲಿಂ ಸಮುದಾಯದ ಸದಸ್ಯರನ್ನು ಬೆನ್ನಟ್ಟಿ ಜೈ ಶ್ರೀರಾಮ್ ಎಂದು ಕೂಗುವಂತೆ ಒತ್ತಾಯಿಸಲಾಗುತ್ತಿದೆ.

ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದ ವೀಡಿಯೊದಲ್ಲಿ, ಬಿಜೆಪಿ ಕಾರ್ಯಕರ್ತ ಎನ್ನಲಾದ ಆರೋಪಿ ಠಾಕೂರ್, ಡ್ರೈವರ್ ರಹೀಶ್ ಖಾನ್ ಎಂಬ ವೃದ್ಧ ವ್ಯಕ್ತಿಗೆ ಜೈ ಶ್ರೀರಾಮ್ ಎಂದು ಹೇಳುವಂತೆ ಒತ್ತಾಯಿಸುತ್ತಿರುವುದು ಸೆರೆಯಾಗಿದೆ. ಕ್ಯಾಬ್ ಚಾಲಕ ದುಃಖ ವ್ಯಕ್ತಪಡಿಸಿ, “ನಿಮ್ಮ ಕೆಲಸ ನೋಡಿಕೊಳ್ಳಿ” ಎಂದು ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಠಾಕೂರ್, “ಎರಡು ಅಥವಾ ಮೂರು ದಿನಗಳಲ್ಲಿ, ನೀವು ಜೈ ಶ್ರೀರಾಮ್ ಎಂದು ಹೇಳಬೇಕಾಗುತ್ತದೆ” ಎಂದು ಹೇಳಿದ್ದಾನೆ.

ಠಾಕೂರ್ ತನ್ನ ಫೇಸ್‌ಬುಕ್ ಪುಟದಲ್ಲಿ, “ಇವರು ನಿಜವಾದ ಭಯೋತ್ಪಾದಕರು” ಎಂಬ ಶೀರ್ಷಿಕೆಯೊಂದಿಗೆ ಆತನೇ ವೀಡಿಯೊ ಅಪ್‌ಲೋಡ್ ಮಾಡಿದ್ದಾನೆ.

ವರದಿಗಳ ಪ್ರಕಾರ, ಮತ್ತೊಬ್ಬ ವ್ಯಕ್ತಿಯೊಂದಿಗೆ ಬಂದ ಠಾಕೂರ್ ಮುಸ್ಲಿಂ ಚಾಲಕರ ಮೇಲೆ ಹಲ್ಲೆ ನಡೆಸಿದ್ದಾರೆ. “… ನಾನು ಜೈ ಶ್ರೀರಾಮ್ ಎಂದು ಹೇಳಲು ನಿರಾಕರಿಸಿದಾಗ, ಅವರು ನನ್ನ ಗಡ್ಡವನ್ನು ಎಳೆದು ನನ್ನ ಕೆನ್ನೆಗೆ ಹೊಡೆದರು” ಎಂದು ಅವರು ಹೇಳಿದರು.

ಈ ಮಧ್ಯೆ, 38 ವರ್ಷಗಳಿಂದ ಕ್ಯಾಬ್ ಚಾಲಕರಾಗಿರುವ ಖಾನ್ ಒಂದು ತಿಂಗಳ ಹಿಂದೆ ಸಾಲದ ಮೇಲೆ ಸ್ವಂತ ಕಾರು ಖರೀದಿಸಿದ್ದರು ಎಂದು ಆಲ್ಟ್ ನ್ಯೂಸ್ ವರದಿ ಮಾಡಿದೆ. ಘಟನೆಯ ದಿನ, ಅವರು ಆಗ್ರಾ ಕ್ಯಾಂಟ್ ರೈಲ್ವೆ ನಿಲ್ದಾಣದಿಂದ ತಾಜ್ ಮಹಲ್ ಮೆಟ್ರೋ ಪಾರ್ಕಿಂಗ್‌ಗೆ ಪ್ರವಾಸಿಗರನ್ನು ಕರೆದುಕೊಂಡು ಹೋಗಿದ್ದರು. ಅವರು ಕಾರನ್ನು ನಿಲ್ಲಿಸುತ್ತಿದ್ದಾಗ, ಠಾಕೂರ್ ಮತ್ತು ಅವರ ಸಹಚರರು ಅವರ ಬಳಿಗೆ ಬಂದು ಕಿರುಕುಳ ನೀಡಿದ್ದಾರೆ.

ಉತ್ತರ ಪ್ರದೇಶದ ಪತ್ರಕರ್ತ ಮದನ್ ಮೋಹನ್ ಸೋನಿ ಪ್ರಕಾರ, ಡಿಸೆಂಬರ್ 2 ರಂದು ಠಾಕೂರ್ ಅವರನ್ನು ಆಗ್ರಾ ಪೊಲೀಸರು ಬಂಧಿಸಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.

ಠಾಕೂರ್ ಅವರ ಫೇಸ್‌ಬುಕ್ ಪುಟದಲ್ಲಿ, ಅವರು ಬಿಜೆಪಿ ಮತ್ತು ನರೇಂದ್ರ ಮೋದಿಗೆ ತಮ್ಮ ಬೆಂಬಲವನ್ನು ಬಹಿರಂಗವಾಗಿ ತೋರಿಸಿದ್ದಾರೆ. ಘಟನೆಯ ಸ್ವಲ್ಪ ಸಮಯದ ನಂತರ ಅವರು ಪೋಸ್ಟ್ ಮಾಡಿದ ವೀಡಿಯೊದಲ್ಲಿ, ಕೆಂಪು ಕೋಟೆಯಲ್ಲಿ ಮುಸ್ಲಿಂ ಸಂದರ್ಶಕರನ್ನು ಚಿತ್ರೀಕರಿಸುವಾಗ, ಠಾಕೂರ್ ಇಸ್ಲಾಮೋಫೋಬಿಕ್ ನಿಂದನೆ ಬಳಸುವುದು ಸೆರೆಯಾಗಿದೆ. ಒಂದು ಹಂತದಲ್ಲಿ, ಅವರು ಒಬ್ಬ ವ್ಯಕ್ತಿಯನ್ನು ನಿಲ್ಲಿಸಿ ಅದೇ ರೀತಿಯಲ್ಲಿ ಜೈ ಶ್ರೀರಾಮ್ ಎಂದು ಹೇಳಲು ಒತ್ತಾಯಿಸಿದ್ದಾನೆ.

ಆತ ತನ್ನ ಫೇಸ್‌ಬುಕ್ ಪುಟದಲ್ಲಿ ಮುಸ್ಲಿಂ ಪುರುಷರಿಗೆ ಕಿರುಕುಳ ನೀಡುವುದು, ಜೈ ಶ್ರೀರಾಮ್ ಎಂದು ಜಪಿಸುವಂತೆ ಒತ್ತಾಯಿಸುವುದು ಅಥವಾ ಇಸ್ಲಾಮೋಫೋಬಿಕ್ ನಿಂದನೆಗಳನ್ನು ಬಳಸುವುದು ಮುಂತಾದ ವೀಡಿಯೊಗಳಿವೆ. ನವೆಂಬರ್ 24 ರಂದು ಅಪ್‌ಲೋಡ್ ಮಾಡಲಾದ ಒಂದು ವೀಡಿಯೊದಲ್ಲಿ, ತಾಜ್ ಮಹಲ್ ವಾಸ್ತವವಾಗಿ ತೇಜೋ ಮಹಾಲಯ ಎಂದು ಆತ ಜೋರಾಗಿ ಹೇಳಿಕೊಳ್ಳುತ್ತಿದ್ದಾನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...