Homeಕರ್ನಾಟಕಹಿಜಾಬ್ ವಿವಾದದ ನಂತರ ಮುಸ್ಲಿಂ ವಿದ್ಯಾರ್ಥಿನಿಯರು ಸಾಮಾಜಿಕ ಪ್ರತ್ಯೇಕತೆ ಅನುಭವಿಸುತ್ತಿದ್ದಾರೆ: ಪಿಯುಸಿಎಲ್ ವರದಿ

ಹಿಜಾಬ್ ವಿವಾದದ ನಂತರ ಮುಸ್ಲಿಂ ವಿದ್ಯಾರ್ಥಿನಿಯರು ಸಾಮಾಜಿಕ ಪ್ರತ್ಯೇಕತೆ ಅನುಭವಿಸುತ್ತಿದ್ದಾರೆ: ಪಿಯುಸಿಎಲ್ ವರದಿ

- Advertisement -
- Advertisement -

ರಾಜ್ಯದಲ್ಲಿ ನಡೆದ ಹಿಬಾಬ್ ವಿವಾದದಿಂದಾಗಿ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಕಾಲೇಜುಗಳು ಅವರಿಗೆ ಪರೀಕ್ಷೆಗೆ ಹಾಜರಾಗುವ ಅವಕಾಶವನ್ನು ನಿರಾಕರಿಸಿದ್ದು ಮಾತ್ರವಲ್ಲದೆ, ಅವರಿಗೆ ನೀಡಬೇಕಾದ ವಿವಿಧ ಪ್ರಮಾಣ ಪತ್ರಗಳನ್ನೂ ನೀಡುತ್ತಿಲ್ಲ ಎಂದು ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ – ಕರ್ನಾಟಕ (PUCL-K) ಗುರುವಾರ ಬಿಡುಗಡೆ ಮಾಡಿರುವ ವರದಿ ಬಹಿರಂಗಪಡಿಸಿದೆ. ಹಿಜಾಬ್‌‌ ವಿವಾದ ಪ್ರಾರಂಭವಾದಾಗಿನಿಂದ ಮುಸ್ಲಿಂ ಮಹಿಳಾ ವಿದ್ಯಾರ್ಥಿನಿಯರು ಸಾಮಾಜಿಕ ಪ್ರತ್ಯೇಕತೆಯನ್ನು ಅನುಭವಿಸುತ್ತಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.

‘PUCL ಕರ್ನಾಟಕ’ದ ತಂಡವು ರಾಜ್ಯದಲ್ಲಿ ಹಿಜಾಬ್ ವಿವಾದ ತಳಮಟ್ಟದಲ್ಲಿ ಯಾವ ಪರಿಣಾಮ ಬೀರಿದೆ ಎಂದು ಅಧ್ಯಯನ ನಡೆಸಿದ್ದು, ‘ಕರ್ನಾಟಕದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧದ ಪರಿಣಾಮ: ಅಧ್ಯಯನದ ಮಧ್ಯಂತರ ವರದಿ’ ಎಂಬ ಹೆಸರಿನಲ್ಲಿ ಸಾರ್ವಜನಿಕವಾಗಿ ಬಿಡುಗಡೆ ಮಾಡಿದೆ. ಅಧ್ಯಯನದ ಭಾಗವಾಗಿ ಪಿಯುಸಿಎಲ್ ರಾಜ್ಯದ ಹಾಸನ ಗ್ರಾಮಾಂತರ ಜಿಲ್ಲೆಯ ಒಂದು ಗ್ರಾಮ, ಹಾಸನ ಪಟ್ಟಣ, ಮಂಗಳೂರು ನಗರ, ಉಳ್ಳಾಲ , ಹೂಡೆ , ಉಡುಪಿ ಪಟ್ಟಣ ಮತ್ತು ರಾಯಚೂರು ಪಟ್ಟಣಗಳಿಗೆ ಭೇಟಿ ನೀಡಿ ಮಹಿಳಾ ವಿದ್ಯಾರ್ಥಿಗಳೊಂದಿಗೆ ಚರ್ಚಿಸಿ ಈ ವರದಿಯನ್ನು ಸಿದ್ದಪಡಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅಧ್ಯಯನ ನಿರತ ಪಿಯುಸಿಎಲ್‌ ತಂಡವು ಕಾಲೇಜುಗಳ ಆಡಳಿತಾಧಿಕಾರಿಗಳನ್ನೂ, ಸಂಬಂಧಿತ ಸರ್ಕಾರಿ ಇಲಾಖೆಗಳ ಅಧಿಕಾರಿಗಳನ್ನೂ, ಸ್ಥಳೀಯ ಪೊಲೀಸ್‌ ಅಧಿಕಾರಿಗಳನ್ನೂ ಮತ್ತು ಮುಸ್ಲಿಂ ನಾಗರಿಕ ಸಮಾಜದ ಸದಸ್ಯರನ್ನು ಭೇಟಿ ಮಾಡಿದೆ. ರಾಜ್ಯದ ವಿವಿಧ ಭಾಗಗಳಿಗೆ ಭೇಟಿ ನೀಡಿ, ಗ್ರಾಮೀಣ ಮತ್ತು ನಗರ ಪ್ರದೇಶದ ವಿದ್ಯಾರ್ಥಿಗಳನ್ನು ಭೇಟಿ ಮಾಡಿದೆ.

ಇದನ್ನೂ ಓದಿ: ಹಿಜಾಬ್ ವಿಚಾರಣೆ ಮುಂದೂಡಲು ಒಪ್ಪದ ಸುಪ್ರೀಂ: ರಾಜ್ಯ ಸರ್ಕಾರಕ್ಕೆ ನೋಟಿಸ್

ಪಿಯುಸಿಎಲ್‌ ವರದಿಯು ಹಿಜಾಬ್ ಸಮಸ್ಯೆಯನ್ನು ಉಲ್ಬಣಗೊಳಿಸಿದ ಮಾಧ್ಯಮದ ಪಾತ್ರವನ್ನು ವಿಮರ್ಶಾತ್ಮಕವಾಗಿ ವಿಶ್ಲೇಷಿಸಿದೆ. ಜೊತೆಗೆ ಬಿಕ್ಕಟ್ಟಿಗೆ ಅಧಿಕಾರಶಾಹಿಯ ಪ್ರತಿಕ್ರಿಯೆ ಹಾಗೂ ರಾಜ್ಯ ಹೈಕೋರ್ಟ್‌ನ ಆದೇಶದ ಪರಿಣಾಮವನ್ನು ಶೈಕ್ಷಣಿಕ, ಸಾಮಾಜಿಕ ಮತ್ತು ಮಾನಸಿಕ ದೃಷ್ಟಿಕೋನಗಳಿಂದ ಅರ್ಥೈಸಿ ವಿಶ್ಲೇಷಿಸಿದೆ. ಮುಸ್ಲಿಂ ವಿದ್ಯಾರ್ಥಿನಿಯರಿಗೆ ಶಿಕ್ಷಣವು ಅವರನ್ನು ಸಾಮಾಜಿಕ ಚಲನಶೀಲತೆಯತ್ತ, ಉದ್ಯೋಗದತ್ತ ಮತ್ತು ಸಬಲೀಕರಣದತ್ತ ಕೊಂಡೊಯ್ಯುವ ಹಾದಿಯೂ ಆಗಿದೆ ಎಂದು ಪಿಯುಸಿಎಲ್‌ ಹೇಳಿದೆ.

ಹಿಜಾಬ್‌ನ ಸುತ್ತಲಿನ ಸಮಸ್ಯೆಯು ಪ್ರಾರಂಭವಾದಾಗಿನಿಂದಲೂ, ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಅದರಲ್ಲೂ ವಿಶೇಷವಾಗಿ ಮುಸ್ಲಿಂ ಮಹಿಳಾ ವಿದ್ಯಾರ್ಥಿಗಳು ಸಾಮಾಜಿಕ ಪ್ರತ್ಯೇಕತೆಯನ್ನು ಅನುಭವಿಸುತ್ತಿದ್ದಾರೆ ಎಂದು ವರದಿಯು ಉಲ್ಲೇಖಿಸಿದೆ. ಇಷ್ಟೆ ಅಲ್ಲದೆ, ಇತರ ಸಮುದಾಯಗಳ ವಿದ್ಯಾರ್ಥಿಗಳ ಜೊತೆಗಿನ ಅವರ ಸ್ನೇಹ ಮತ್ತು ಸಂಪರ್ಕವನ್ನು ಕಳೆದುಕೊಳ್ಳುತ್ತಿದ್ದು, ಇದು ತೀವ್ರವಾದ ಪ್ರತ್ಯೇಕತೆ ಮತ್ತು ಖಿನ್ನತೆಯ ಭಾವನೆಯನ್ನು ಮೂಡಿಸಿದೆ ಎಂದು ಪಿಯುಸಿಎಲ್ ವರದಿ ಹೇಳಿದೆ.

ರಾಜ್ಯ ಹೈಕೋರ್ಟ್‌ನ ಆದೇಶದ ಜೊತೆಗೆ ರಾಜ್ಯ ಸರ್ಕಾರದ ನಿಷ್ಕ್ರಿಯತೆಯೂ ಸೇರಿ ಮುಸ್ಲಿಂ ವಿದ್ಯಾರ್ಥಿನಿಯರ ಹಕ್ಕುಗಳಾದ ತಾರತಮ್ಯ ರಹಿತ ಶಿಕ್ಷಣ ಪಡೆಯುವ ಹಕ್ಕು, ಸಮಾನತೆಯ ಹಕ್ಕು, ಘನತೆಯ ಹಕ್ಕು, ಖಾಸಗಿತನದ ಹಕ್ಕು, ಅಭಿವ್ಯಕ್ತಿಯ ಹಕ್ಕು, ತಾರತಮ್ಯ ರಹಿತವಾಗಿ ಜೀವಿಸುವ ಹಕ್ಕುಗಳು ಸೇರಿದಂತೆ ಅನೇಕ ಹಕ್ಕುಗಳು, ಪ್ರಭುತ್ವದ ಸ್ವೇಚ್ಛಾಚಾರದ ನಡೆಗಳಿಂದ ಮುಸ್ಲಿಂ ವಿದ್ಯಾರ್ಥಿನಿಯರು ತಮ್ಮ ಸ್ವಾತಂತ್ರ್ಯವನ್ನು ಸಂಪೂರ್ಣವಾಗಿ ಉಲ್ಲಂಘಿಸಿದೆ ಎಂದು ಪಿಯುಸಿಎಲ್‌ ಹೇಳಿದೆ.

ಇದನ್ನೂ ಓದಿ: ಖಿನ್ನತೆಯ ನಂತರ ಹಿಜಾಬ್ ಧರಿಸಲು ನಿರ್ಧಾರ: ಕಾರಣ ಬಿಚ್ಚಿಟ್ಟ ನಟಿ ಸನಾ ಖಾನ್

“ಶಿಕ್ಷಣವು, ಮೂಲಭೂತ ಹಕ್ಕು ಮಾತ್ರವಾಗಿರದೆ, ರಾಜ್ಯ ನೀತಿಯ ನಿರ್ದೇಶನ ತತ್ವಗಳ (Directive Principles of State Policy) ಅಡಿಯಲ್ಲಿ ರಾಜ್ಯದ ಬಾಧ್ಯತೆಯೂ ಆಗಿದೆ. ಅನುಚ್ಛೇದ 41ರ ಅಡಿಯಲ್ಲಿ, ರಾಜ್ಯವು ತನ್ನ ಆರ್ಥಿಕ ಸಾಮರ್ಥ್ಯ ಮತ್ತು ಅಭಿವೃದ್ಧಿಯ ಮಿತಿಯೊಳಗೆ, ಇತರ ಹಕ್ಕುಗಳೊಂದಿಗೆಯೇ ಶಿಕ್ಷಣದ ಹಕ್ಕನ್ನು ಕೂಡ ಖಚಿತ ಪಡಿಸಿಕೊಳ್ಳಬೇಕಿದೆ” ಎಂದು ಪಿಯುಸಿಎಲ್‌ ತಿಳಿಸಿದೆ.

“ಹಿಜಾಬ್ ಧರಿಸುವ ಹಕ್ಕು ಮತ್ತು ಶಿಕ್ಷಣದ ಹಕ್ಕುಗಳನ್ನು ಕೃತಕವಾಗಿಯೇ ಬೇರ್ಪಡಿಸಿ ಅವೆರಡರಲ್ಲಿ ಒಂದನ್ನು ಮಾತ್ರ ಆಯ್ದು ಕೊಳ್ಳಲು ದೂಡುವ ಮೂಲಕ ಮುಸ್ಲಿಂ ಮಹಿಳೆಯರೇನಾದರು ಹಿಜಾಬ್ ಅನ್ನು ಆಯ್ದುಕೊಂಡರೆ ಅವರ ಕನಸು ಹಾಗೂ ಅಕಾಂಕ್ಷೆಗಳು ನುಚ್ಚು ನೂರಾಗುವ ರೀತ್ಯ ಪರಿಸ್ಥಿತಿಯನ್ನು ಸೃಷ್ಠಿಸಲಾಗಿದೆ” ಎಂದು ಪಿಯುಸಿಎಲ್‌ ಆರೋಪ ಮಾಡಿದೆ.

“ಸರ್ಕಾರಿ ಸಮೀಕ್ಷೆಗಳು ಪದೇ ಪದೇ ಶಾಲೆ ಮತ್ತು ಕಾಲೇಜಿಗೆ ಸೇರುವ ಮುಸ್ಲಿಂ ಮಹಿಳೆಯರ ಶೇಕಡಾವಾರು ಪ್ರಮಾಣವು ಸ್ಥಿರವಾದ ಏರಿಕೆಯನ್ನು ಕಾಣುತ್ತಿದೆ ಎಂಬುದನ್ನು ಸಾಬೀತುಪಡಿಸಿದೆ. ಆದರೂ ಪ್ರಸ್ತುತ ಹಿಜಾಬ್ ಮೇಲಿನ ನಿರ್ಬಂಧಗಳು ಹೇಗೆ ಶಾಲೆ ಮತ್ತು ಕಾಲೇಜಿಗೆ ಹೋಗುವ ಮುಸ್ಲಿಂ ಮಹಿಳೆಯರ ಶಿಕ್ಷಣದ ಕಾರಣಕ್ಕೆ ಹಾನಿಯುಂಟುಮಾಡಬಹುದು” ಎಂದು ಪಿಯುಸಿಎಲ್‌‌ ಆತಂಕ ವ್ಯಕ್ತಪಡಿಸಿದೆ. ಹಿಜಾಬ್ ವಿವಾದವೂ ಸಚಾರ್ ಸಮಿತಿಯ ವರದಿಯ ನಂತರ ಉಂಟಾಗಿರುವ ಅಲ್ಪ ಪ್ರಗತಿಯನ್ನೂ ಇಲ್ಲವಾಗಿಸುವುದಕ್ಕೆ ಕಾರಣವಾಗುತ್ತದೆ ಎಂದು ಶಿಕ್ಷಣ ತಜ್ಞರು ಎಚ್ಚರಿಸಿದ್ದಾರೆ ಎಂಬುವುದನ್ನು ಪಿಯುಸಿಎಲ್ ಒತ್ತಿ ಹೇಳಿದೆ.

ಇದನ್ನೂ ಓದಿ: ಬುಲ್ಡೋಜರ್‌‌, ಹಿಜಾಬ್‌, ಬಾಬ್ರಿ ಮಸೀದಿ ಪ್ರಕರಣ: ಲಂಡನ್‌ನಲ್ಲಿ ಜಸ್ಟೀಸ್ ಚಂದ್ರಚೂಡ್‌ ಹೇಳಿದ್ದೇನು?

ಪಿಯುಸಿಎಲ್‌-ಕರ್ನಾಟಕ ಬಿಡುಗಡೆ ಮಾಡಿರುವ ವರದಿಯು ಕೆಲವು ಶಿಫಾರಸುಗಳು ಮಾಡಿವೆ:

  1. 2022 ಫೆಬ್ರವರಿ 5ರ ಸರ್ಕಾರಿ ಅಧಿಸೂಚನೆಯನ್ನು ತಕ್ಷಣವೇ ರದ್ದುಗೊಳಿಸಬೇಕು.
  2. ಈ ಆದೇಶದ ಪರಿಣಾಮವಾಗಿ ಮುಸ್ಲಿಂ ಮಹಿಳೆಯರು ಮತ್ತವರ ಕುಟುಂಬವು ಭರಿಸಿದ ನಷ್ಟಗಳ ಬಗ್ಗೆ ಸಮಗ್ರವಾದ ತನಿಖೆಯನ್ನು ನಡೆಸಿ ಪರಿಹಾರವನ್ನು ನೀಡುವಂತೆ ನ್ಯಾಯಾಲಯವು ಸರ್ಕಾರಕ್ಕೆ ನಿರ್ದೇಶಿಸಬೇಕು.
  3. ಸರಕಾರ ಕೂಡಲೇ ವಿದ್ಯಾರ್ಥಿಗಳಿಗೆ ತರಗತಿಗೆ ಪ್ರವೇಶಿಸಲು ಅವಕಾಶ ನೀಡಬೇಕು ಮತ್ತು ವಿದ್ಯಾರ್ಥಿಗಳೊಂದಿಗೆ ಸಮಾಲೋಚನೆ ನಡೆಸಿ ಅವರಿಗೆ ಸೂಕ್ತವೆನಿಸುವ ರೀತಿಯಲ್ಲಿ ವಿಶೇಷ ತರಗತಿಗಳನ್ನು ಏರ್ಪಡಿಸಬೇಕು.
  4. ರಾಜ್ಯ ಮಾನವ ಹಕ್ಕುಗಳ ಆಯೋಗ ಮತ್ತು ಅಲ್ಪಸಂಖ್ಯಾತ ಆಯೋಗವು ಸಂಬಂಧಪಟ್ಟ ವಿದ್ಯಾರ್ಥಿಗಳ ಮೂಲಭೂತ ಹಕ್ಕುಗಳ ಉಲ್ಲಂಘನೆಗಾಗಿ ಕಾಲೇಜುಗಳ ಪ್ರಾಂಶುಪಾಲರು ಮತ್ತು ಕಾಲೇಜು ಅಭಿವೃದ್ಧಿ ಸಮಿತಿಗಳ ವಿರುದ್ಧ ಸ್ವಯಂ-ಪ್ರೇರಿತ ದೂರುಗಳನ್ನು ದಾಖಲಿಸಿ ತಪ್ಪಿತಸ್ಥರ ವಿರುದ್ಧ ಶೀಘ್ರವಾಗಿ ಕ್ರಮವನ್ನು ಜರುಗಿಸಬೇಕು.
  5. ಕೆಳಗೆ ನೀಡಲಾಗಿರುವ ಎರಡೂ ರೀತಿಯಲ್ಲಿ ಕಾಲೇಜು ಅಭಿವೃದ್ಧಿ ಸಮಿತಿಗಳನ್ನು ಉತ್ತರದಾಯಿಯಾಗಿಸಲು ನ್ಯಾಯಾಲಯವು ನಿರ್ದೇಶನಗಳನ್ನು ನೀಡಬೇಕು:
    a. ಎಲ್ಲಾ ಸಮುದಾಯಗಳ ಸದಸ್ಯರು, ವಿದ್ಯಾರ್ಥಿಗಳು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ನಾಗರಿಕ ಸಮಾಜದ ಸದಸ್ಯರು ಮತ್ತು ಮಹಿಳೆಯರು ಸೇರಿದಂತೆ ಎಲ್ಲರ ಪ್ರತಿನಿಧಿತ್ವವನ್ನು ಹೊಂದಿರುವ ರೀತಿಯಲ್ಲಿ ಮತ್ತು ಅವರೆಲ್ಲರಿಗೂ ಕಾಲೇಜು ಅಭಿವೃದ್ಧಿ ಸಮಿತಿಗಳು ಉತ್ತರದಾಯಿಯಾಗಿಸಬೇಕು.
    b. ಕಾಲೇಜು ಅಭಿವೃದ್ಧಿ ಸಮಿತಿಗಳು ತನ್ನ ಆದೇಶವನ್ನು ಮೀರಿದ ಮತ್ತು ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಲಿಖಿತ ರೂಪದಲ್ಲಿ ಸೂಕ್ತ ಪರಿಹಾರವನ್ನು ಒದಗಿಸದಿರುವ ಪ್ರಕರಣಗಳಲ್ಲಿ ವಿಚಾರಣೆ ನಡೆಸಿ ಕಾನೂನು ರೀತಿಯಾಗಿ ಸೂಕ್ತ ಕ್ರಮವನ್ನು ಜರುಗಿಸಬೇಕು
  6. ಕರ್ನಾಟಕ ಸರ್ಕಾರವು ಕಾಲೇಜುಗಳಲ್ಲಿ ಜಾತ್ಯತೀತ ಮತ್ತು ತಾರತಮ್ಯವಿಲ್ಲದ ಕಲಿಕೆಯ ವಾತಾವರಣವನ್ನು ಖಾತ್ರಿಪಡಿಸಲು ಸೂಕ್ತ ರೀತಿಯ ಮತ್ತು ಸಾಕಷ್ಟು ಕ್ರಮಗಳನ್ನು ತೆಗೆದುಕೊಳ್ಳಬೇಕು. ವಿದ್ಯಾರ್ಥಿಗಳು ತಮ್ಮ ನಂಬಿಕೆ ಮತ್ತು ಅಸ್ಮಿತೆಗಳನ್ನು ಸಂಪೂರ್ಣವಾಗಿ ವ್ಯಕ್ತಪಡಿಸಲು ಅವಕಾಶ ಮಾಡಿಕೊಡಬೇಕು ಮತ್ತು ಈ ರೀತಿಯ ಹಕ್ಕುಗಳ ಉಲ್ಲಂಘನೆಗಳು ಮರುಕಳಿಸದಂತೆ ಕ್ರಮವಹಿಸಬೇಕು.

ಪಿಯುಸಿಎಲ್-ಕರ್ನಾಟಕ ತಂಡವು ಬಿಡುಗಡೆ ಮಾಡಿರುವ ವರದಿಯನ್ನು ಸಂಪೂರ್ಣವಾಗಿ ಓದಲು ಇಲ್ಲಿ ಕ್ಲಿಕ್ ಮಾಡಿ.

ಇದನ್ನೂ ಓದಿ: ಉಪ್ಪಿನಂಗಡಿ: ಹಿಜಾಬ್‌ಗೆ ಅವಕಾಶ ನೀಡಿ ಎಂದು ಪ್ರತಿಭಟಿಸಿದ್ದ 23 ವಿದ್ಯಾರ್ಥಿನಿಯರ ಅಮಾನತು

2021ರ ಡಿಸೆಂಬರ್ ತಿಂಗಳ ಅಂತ್ಯದಲ್ಲಿ ಉಡುಪಿಯ ಸರ್ಕಾರಿ ಪದವಿ ಪೂರ್ವ ಕಾಲೇಜು ಹಿಜಾಬ್ ಧರಿಸಿ ಬಂದ ಕಾರಣಕ್ಕೆ ಆರು ಹುಡುಗಿಯರನ್ನು ತರಗತಿಗಳಿಂದ ನಿಷೇಧಿಸಿತ್ತು. ಇದರ ಬೆನ್ನಲ್ಲಿಯೇ ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಇತರೆ ಕಾಲೇಜುಗಳೂ ಕೂಡ ಈ ರೀತಿ ನಿರ್ಬಂಧಗಳನ್ನು ಹೇರಲು ಪ್ರಾರಂಭಿಸಿದವು. ಪ್ರಕರಣಗಳು ಉಲ್ಬಣಗೊಂಡು ರಾಜ್ಯದಾದ್ಯಂತ ವ್ಯಾಪಿಸಿ ವ್ಯಾಪಕ ಹಿಂಸಾಚಾರವನ್ನೂ ಹುಟ್ಟು ಹಾಕಿತ್ತು.

ಈ ನಡುವೆ 2022ರ ಫೆಬ್ರವರಿ 5 ರಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿ ಶಿಕ್ಷಣ ಸಂಸ್ಥೆಗಳಲ್ಲಿ ತಲೆಗೆ ಸ್ಕಾರ್ಫ್‌ ಧರಿಸುವುದರ ಬಗ್ಗೆ ನಿರ್ಬಂಧ ಹೇರಿತ್ತು. ಜೊತೆಗೆ ಸಂವಿಧಾನದ 25 ನೇ ವಿಧಿಯ ಅಡಿಯಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಹಕ್ಕನ್ನು ಉಲ್ಲಂಘಿಸುವುದಿಲ್ಲ ಎಂದು ವಾದಿಸಿ ಈ ನಿರ್ಬಂಧಗಳನ್ನು ಸಮರ್ಥಿಸಿತ್ತು.

ಇದಾದ ಐದು ದಿನಗಳ ನಂತರ ಅಂದರೆ 2022 ಫೆಬ್ರವತಿ 10 ರಂದು ರಾಜ್ಯ ಹೈಕೋರ್ಟ್‌ ವಿಶ್ವವಿದ್ಯಾನಿಲಯಗಳನ್ನು ಪುನಃ ತೆರೆಯುವಂತೆ ನಿರ್ದೇಶಿಸಿ ಮುಂದಿನ ಆದೇಶದವರೆಗೆ ಯಾವುದೇ ಧರ್ಮವನ್ನು ಆಚರಿಸುವ ವಿದ್ಯಾರ್ಥಿಗಳು ಕೇಸರಿ ಶಾಲುಗಳು, ಸ್ಕಾರ್ಫ್‌ಗಳು, ಹಿಜಾಬ್, ಧಾರ್ಮಿಕ ಧ್ವಜಗಳು ಅಥವಾ ಇನ್ನಿತರೆ ಧಾರ್ಮಿಕ ನಂಬಿಕೆಗಳನ್ನು ತರಗತಿಯೊಳಗೆ ಧರಿಸಬಾರದೆಂದು ನಿರ್ದೇಶಿಸಿತು. 2022ರ ಮಾರ್ಚ್ 15ರಂದು ಪ್ರಕರಣದ ಬಗ್ಗೆ ತೀರ್ಪು ನೀಡಿ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಮೇಲಿನ ನಿರ್ಬಂಧವನ್ನು ಎತ್ತಿಹಿಡಿಯಿತು.

ಇದನ್ನೂ ಓದಿ: ಶಾಲೆಗಳಲ್ಲಿ ಹಿಜಾಬ್‌‌‌‌ ನಿಷೇಧಿಸುವಂತೆ ಕೋರಿ ಸಲ್ಲಿಸಿದ್ದ ಮನವಿಯನ್ನು ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್

ಇಡೀ ರಾಜ್ಯವನ್ನೇ ಇಕ್ಕಟ್ಟಿಗೆ ದೂಡಿದ ಈ ಸರಣಿ ಘಟನಾವಳಿಗಳ ಹಿನ್ನಲೆಯಲ್ಲಿ ಪಿಯುಸಿಎಲ್‌-ಕರ್ನಾಟಕ ತಂಡವು, ಪ್ರಕರಣದಲ್ಲಿ ಹೈಕೋರ್ಟ್‌ ನೀಡಿದ ತೀರ್ಪು ತಳಮಟ್ಟದಲ್ಲಿ ಯಾವ ರೀತಿಯ ಪರಿಣಾಮವನ್ನು ಉಂಟುಮಾಡಿದೆ ಎಂಬುದನ್ನು ಅರಿಯಲು ಈ ಅಧ್ಯಯನ ನಡೆಸಲು ತೀರ್ಮಾನಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...