Homeಕರ್ನಾಟಕವೈಯಕ್ತಿಕ ದ್ವೇಷದ ಪ್ರಕರಣಕ್ಕೆ ಕೋಮು ಆಯಾಮ ನೀಡಿ ‘ಮುಸ್ಲಿಂ ದ್ವೇಷ’ ಹರಡಿದ ದಿಗ್ವಿಜಯ & ಪಬ್ಲಿಕ್...

ವೈಯಕ್ತಿಕ ದ್ವೇಷದ ಪ್ರಕರಣಕ್ಕೆ ಕೋಮು ಆಯಾಮ ನೀಡಿ ‘ಮುಸ್ಲಿಂ ದ್ವೇಷ’ ಹರಡಿದ ದಿಗ್ವಿಜಯ & ಪಬ್ಲಿಕ್ ಟಿವಿ

- Advertisement -
- Advertisement -

ಹಣಕಾಸಿನ ವಿಚಾರವಾಗಿ ಪರಸ್ಪರ ದ್ವೇಷದಿಂದ ಸಂಚಿನಲ್ಲಿ ಭಾಗಿಯಾಗಿದ್ದ ಮೂವರು ಆರೋಪಿಗಳನ್ನು ಸೋಮವಾರದಂದು ಬೆಂಗಳೂರಿನ ಹೆಣ್ಣೂರು ಪೊಲೀಸರು ಬಂಧಿಸಿದ್ದಾರೆ. ಆದರೆ ಕನ್ನಡ ಸುದ್ದಿ ಚಾನೆಲ್‌ಗಳಾದ ದಿಗ್ವಿಜಯ ನ್ಯೂಸ್ ಮತ್ತು ಪಬ್ಲಿಕ್ ಟಿವಿ ಘಟನೆಗೆ ‘ಕೋಮು ಆಯಾಮ’ವನ್ನು ಸೇರಿಸಿ ಮುಸ್ಲಿಮರ ವಿರುದ್ಧ ದ್ವೇಷ ಹರಡುವ ಹಲವಾರು ವರದಿ ಮಾಡುವ ಮೂಲಕ ‘ಕೋಮು ಗಲಭೆ’ಗೆ ಕುಮ್ಮಕ್ಕು ನೀಡಿವೆ.

ಘಟನೆಯ ವಿವರ

ಹೆಣ್ಣೂರು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ, ಫಯಾಝ್‌ ಎಂಬುವರು 35 ಲಕ್ಷಕ್ಕೆ ಮನೆಯೊಂದನ್ನು ಮಾರಿದ್ದರು. ಈ ಮನೆಯನ್ನು ಅಝೀಮ್‌ ಎಂಬ ವ್ಯಕ್ತಿ ಮಾರಾಟ ಮಾಡಿಸಿದ್ದ. ಇದರ ನಂತರ ಮನೆಗೆ 40 ಲಕ್ಷ ನೀಡಬೇಕು ಎಂದು ಫಯಾಝ್‌‌ ಹಣಕ್ಕೆ ಬೇಡಿಕೆ ಇಟ್ಟಿದ್ದ. ಹೀಗಾಗಿ ಇಬ್ಬರ ನಡುವೆ ದ್ವೇಷ ಸೃಷ್ಟಿಯಾಗಿತ್ತು. ಈ ಹಿನ್ನಲೆಯಲ್ಲಿ ಫಯಾಝ್, ಮುನಾವರ್‌ ಮತ್ತು ಅಸ್ಗರ್‌ ಎಂಬವರು ಸೇರಿ, ಅಝೀಮ್‌ ಮತ್ತು ಆತನ ಸಂಗಡಿಗರ ವಿರುದ್ದ ದ್ವೇಷದಿಂದ ಸಂಚೊಂದನ್ನು ರೂಪಿಸಿದ್ದರು. ಇದೀಗ ಪೊಲೀಸರು ಮೂವರೂ ಆರೋಪಿಗಳನ್ನು ಬಂಧಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆರೋಪಿಗಳ ಬಳಿ ಹಲವು ಬಾಟಲ್‌‌ಗಳಷ್ಟು ಪೆಟ್ರೋಲ್ ಬಾಂಬ್‌, ನಾಡಾ ಪಿಸ್ತೂಲ್, ಜೀವಂತ ಗುಂಡು ಮತ್ತು ಇತರ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದಿಕೊಳ್ಳಲಾಗಿದೆ. ಮೂವರು ಆರೋಪಿಗಳು ಸರಾಯಿ ಪಾಳ್ಯದ ನಿವಾಸಿಗಳು ಎಂದು ವರದಿಯಾಗಿದೆ.

ಕೋಮು ಗಲಭೆಗೆ ಕುಮ್ಮಕ್ಕು ನೀಡಿದ ಪಬ್ಲಿಕ್ ಟಿವಿ ಮತ್ತು ದಿಗ್ವಿಜಯ ಟಿವಿ

ಆರೋಪಿಗಳ ಬಂಧನ ನಡೆಯುತ್ತಿದ್ದಂತೆ ಪಬ್ಲಿಕ್ ಟಿವಿ ತನ್ನ ಒಂದು ವಿಡಿಯೊ ಸುದ್ದಿಯಲ್ಲಿ, “ಬೆಂಗಳೂರಿನಲ್ಲಿ ಹಿಂದೂ ಕಾರ್ಯಕರ್ತರ ಹತ್ಯೆಗೆ ಸಂಚು. ಹನುಮಾನ್ ಚಾಲಿಸಾಗೆ ಪ್ರತಿಯಾಗಿ ಪೆಟ್ರೋಲ್ ಬಾಂಬ್. ಹಿಂದೂ ದೇವಸ್ಥಾನಗಳ ಮೇಲೆ ಪೆಟ್ರೋಲ್ ಬಾಂಬ್ ಹುನ್ನಾರ. ಹತ್ತು ಬಿಯರ್‌ ಬಾಟಲಿಗಳಲ್ಲಿ ಪೆಟ್ರೋಲ್ ದಾಳಿಗೆ ಪ್ಲಾನ್ ಮಾಡಿದ್ದಾರೆ” ಎಂದು ಕಪೋಲಕಲ್ಪಿತ ಸುಳ್ಳು ವರದಿ ಮಾಡಿದೆ.

ಇದನ್ನೂ ಓದಿ: ಗಲಭೆಗೆ ಪ್ರಚೋದನೆ: ಪಬ್ಲಿಕ್ ಟಿವಿ ರಂಗನಾಥ್‌ ವಿರುದ್ಧ ಜಾಮೀನು ರಹಿತ ಕೇಸ್‌ ದಾಖಲಿಸುವಂತೆ ಕೋರ್ಟ್‌ ಸೂಚನೆ

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್‌‌ ಕೂಡಾ, ಯಾವುದೆ ಆಧಾರವಿಲ್ಲದೆ ಕೋಮು ಗಲಭೆಗೆ ಕುಮ್ಮಕ್ಕು ನೀಡುವಂತೆ ಮಾತನಾಡುತ್ತಾ ಮುಸ್ಲಿಂ ದ್ವೇಷ ಹರಡುವಂತೆ ಮಾತನಾಡಿದ್ದಾರೆ. ಅವರು ನಿರೂಪಣೆ ಮಾಡುತ್ತಾ, ಕುರಾನ್‌, ಹರಾಂ ವಿಚಾರ ಹೇಳುತ್ತಾ, ಘಟನೆಗೆ ಇಡೀ ಮುಸ್ಲಿಂ ಸಮುದಾಯ ಕಾರಣ ಹಾಗೂ ಕೋಮು ಗಲಭೆಗೆ ಅವರೇ ಹೇಳಿಕೊಡುತ್ತಾರೆ ಎಂಬಂತೆ ವೀಕ್ಷಕರನ್ನು ದಾರಿ ತಪ್ಪಿಸಿದ್ದಾರೆ.

ಪಬ್ಲಿಕ್ ಟಿವಿ ಯಾವುದೆ ಆಧಾರವಿಲ್ಲದೆ, ಕೋಮು ದ್ವೇಷ ಹರಡುವ ಇಂತಹ ಹಲವು ವಿಡಿಯೊ ಸುದ್ದಿಗಳನ್ನು ಇದೇ ಪ್ರಕರಣದ ವಿಚಾರವಾಗಿ ಮಾಡಿದೆ. ಅವುಗಳನ್ನು ಇಲ್ಲಿ, ಇಲ್ಲಿ, ಇಲ್ಲಿ, ಇಲ್ಲಿ, ಇಲ್ಲಿ, ಇಲ್ಲಿ, ಇಲ್ಲಿ, ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಕನ್ನಡ ಮತ್ತೊಂದು ಸುದ್ದಿ ಮಾಧ್ಯಮವಾದ ದಿಗ್ವಿಜಯ ನ್ಯೂಸ್ ಕೂಡಾ ಇದೇ ರೀತಿಯ ಸುದ್ದಿಯನ್ನು ಮಾಡಿದೆ. ಅದನ್ನು ಕೆಳಗೆ ನೋಡಬಹುದು.

ಪೊಲೀಸರು ಹೇಳಿದ್ದೇನು?

ವೈಯಕ್ತಿಕ ದ್ವೇಷ ಹಿನ್ನಲೆಯಲ್ಲಿ ನಡೆದ ಸಂಚನ್ನು ವಿಫಲಗೊಳಿಸಿ ಆರೋಪಿಗಳನ್ನು ಬಂಧಿಸುತ್ತಿದ್ದಂತೆ, ಕನ್ನಡ ಸುದ್ದಿ ಮಾಧ್ಯಮಗಳಲ್ಲಿ ಘಟನೆಗೆ ಕೋಮು ಆಯಾಮ ನೀಡಿ ಮುಸ್ಲಿಮರ ವಿರುದ್ಧ ದ್ವೇಷ ಹರಡುವಲ್ಲಿ ನಿರತವಾಗಿದ್ದವು. ಈ ವೇಳೆ ಪತ್ರಿಕಾಗೋಷ್ಠಿ ನಡೆಸಿದ ಡಿಸಿಪಿ ಭೀಮಾ ಶಂಕರ್ ಗುಳೇದ್, “ಪ್ರಕರಣವು ವೈಯಕ್ತಿಕ ದ್ವೇಷದ್ದಾಗಿದ್ದು, ಯಾವುದೆ ಕೋಮು ಆಯಾಮದಿಂದ ನಡೆದಿಲ್ಲ” ಎಂದು ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಪ್ಯಾಲೆಸ್ತೀನ್‌‌ನ ದಿಟ್ಟ ಬಾಲಕಿಯನ್ನು ಉಕ್ರೇನ್‌‌‌ನವರು ಎಂದು ವರದಿ ಮಾಡಿದ ಪಬ್ಲಿಕ್ ಟಿವಿ ಮತ್ತು ಸುವರ್ಣ ಟಿವಿ!

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಡಿಸಿಪಿ, “ಫಯಾಝ್‌ ಎಂಬುವರು 35 ಲಕ್ಷಕ್ಕೆ ಮನೆಯೊಂದನ್ನು ಮಾರಿದ್ದರು. ಈ ಮನೆಯನ್ನು ಅಝೀಮ್‌ ಎಂಬ ವ್ಯಕ್ತಿ ಮಾರಾಟ ಮಾಡಿಸಿದ್ದ. ಇದರ ನಂತರ ಮನೆಗೆ 40 ಲಕ್ಷ ನೀಡಬೇಕು ಎಂದು ಫಯಾಝ್‌‌ ಹಣಕ್ಕೆ ಬೇಡಿಕೆ ಇಟ್ಟಿದ್ದ. ಹೀಗಾಗಿ ಇಬ್ಬರ ನಡುವೆ ದ್ವೇಷ ಸೃಷ್ಟಿಯಾಗಿತ್ತು. ಈ ಹಿನ್ನಲೆಯಲ್ಲಿ ಫಯಾಝ್, ಮುನಾವರ್‌ ಮತ್ತು ಅಸ್ಗರ್‌ ಎಂಬವರು ಸೇರಿ, ಅಝೀಮ್‌ ಮತ್ತು ಆತನ ಸಂಗಡಿಗರ ವಿರುದ್ದ ದ್ವೇಷದಿಂದ ಸಂಚೊಂದನ್ನು ರೂಪಿಸಿದ್ದರು. ಆದರೆ ಪೊಲೀಸರು ಮೂವರೂ ಆರೋಪಿಗಳನ್ನು ಬಂಧಿಸಿದ್ದಾರೆ”ಎಂದು ತಿಳಿಸಿದ್ದಾರೆ.

ಪ್ರಕರಣಕ್ಕೂ, ಹಿಂದೂಗಳ ಕೊಲೆಗೆ ಸಂಚು ಎಂಬ ಮಾಧ್ಯಮ ವರದಿಗೂ ಯಾವುದೇ ಸಂಬಂಧವಿಲ್ಲ ಎಂದು ಭೀಮಾ ಶಂಕರ್ ಗುಳೇದ್ ಹೇಳಿದ್ದು, “ಯಾವುದೇ ದೇವಸ್ಥಾನಕ್ಕೂ ದಾಳಿ ಮಾಡಲು ಸಂಚು ರೂಪಿಸಿರಲಿಲ್ಲ. ಇದು ವೈಯಕ್ತಿಕ ದ್ವೇಷ ಹಿನ್ನಲೆಯಲ್ಲಿ ನಡೆದ ಘಟನೆ. ಯಾವುದೆ ಸಂಘಟನೆಯ ಕೈವಾಡ ಪ್ರಕರಣದಲ್ಲಿ ಇಲ್ಲ. ಅಲ್ಲದೆ ಪೆಟ್ರೋಲ್ ಬಾಂಬ್ ಹಾಕುವ ಯಾವುದೆ ಉದ್ದೇಶ ಇರಲಿಲ್ಲ. ಪೆಟ್ರೋಲ್ ಬಾಂಬ್ ರೆಡಿ ಮಾಡಿಟ್ಟು, ಅದನ್ನು ವಿರೋಧಿ ಗುಂಪಿನ ಮೇಲೆ ಗೂಬೆ ಕೂರಿಸುವ ಉದ್ದೇಶ ಅವರಿಗೆ ಇತ್ತು” ಎಂದು ತಿಳಿಸಿದ್ದಾರೆ.

ಕೋಮು ದ್ವೇಷ ಹರಡಿದ ಪಬ್ಲಿಕ್ ಟಿವಿ ವರದಿಗಾರನ ಮೇಲೆ ಡಿಸಿಪಿ ಆಕ್ರೋಶ

ಪತ್ರಿಕಾಗೋಷ್ಠಿಯ ವೇಳೆ ಪಬ್ಲಿಕ್ ಟಿವಿ ವರದಿಗಾರ ಮುರಳಿ ಎಂಬವರ ಮೇಲೆ ಡಿಸಿಪಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ಕೂಡಾ ನಡೆದಿದೆ. ವರದಿಗಾರ ಮುರಳಿ ಎಂಬವರು ಘಟನೆಗೆ, ಕೋಮು ಆಯಾಮ ಇದೆಯೆ ಎಂಬಂತ ಪ್ರಶ್ನೆಗಳನ್ನು ಪದೇ ಪದೇ ಕೇಳಿದಾಗ ಆಕ್ರೋಶ ಭರಿತರಾದ ಡಿಸಿಪಿ, “ಘಟನೆಗೆ ಯಾವುದೆ ಕೋಮು ಆಯಾಮ ಇಲ್ಲ ಎಂಬ ಬಗ್ಗೆ ನಾನು ಬೆಳಿಗ್ಗೆಯೆ ನಿಮಗೆ ಸ್ಪಷ್ಟವಾಗಿ ಹೇಳಿದ್ದೇನೆ. ಆದರೂ ನೀವು ಆ ತರ ಬರೆಯುತ್ತೀರಲ್ಲ. ನಾನು ನಿಮಗೆ ತುಂಬಾ ತುಂಬಾ ನಿರ್ದಿಷ್ಠವಾಗಿ ಹೇಳಿದ್ದೇನೆ” ಎಂದು ಹೇಳಿದ್ದಾರೆ.

“ಈ ಘಟನೆಗೂ ಹಿಂದೂಗಳ ಭಜನೆಗೂ ಯಾವುದೆ ಸಂಬಂಧವಿಲ್ಲ ಎಂದು ಹೇಳಿದ್ದೇನೆ. ಬಾಯಿಗೆ ಬಂದಿದ್ದು ಬರೀತಿರಾ ನೀವು. ಏನು ಬರೆದಿದ್ದೀರಾ ನೀವು? ನೋಡಿ” ಎಂದು ಕಿಡಿ ಕಾರಿದ್ದಾರೆ.

ಇದನ್ನೂ ಓದಿ: 2000 ನೋಟಲ್ಲಿ ‘ಚಿಪ್‌ ವರದಿ’ಯ ಮೂಲವನ್ನು ಬಿಚ್ಚಿಟ್ಟ ಪಬ್ಲಿಕ್ ಟಿವಿ ನಿರೂಪಕ?

‘ನಾನು ಆಂಕರ್‌, ನೀವು ವರದಿಗಾರನೊಂದಿಗೆ ವಿಚಾರಿಸಿ’: ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್‌

ಯಾವುದೆ ಆಧಾರವಿಲ್ಲದೆ ವರದಿ ನಿರೂಪಿಸಿದ ಪತ್ರಕರ್ತ ಅರುಣ್ ಬಡಿಗೇರ್‌ ಬಳಿ ನಾನುಗೌರಿ.ಕಾಂ ಪ್ರತಿಕ್ರಿಯೆ ಕೇಳಿದಾಗ ಅವರು, “ನಾನು ನಿರೂಪಕ ಮಾತ್ರ, ನೀವು ವರದಿಗಾರನೊಂದಿಗೆ ವಿಚಾರಿಸಿ” ಎಂದು ಹೇಳಿದ್ದಾರೆ.

ಪಬ್ಲಿಕ್ ಟಿವಿ ಸಂಪಾದಕ ಎಚ್‌.ಆರ್‌. ರಂಗನಾಥ್ ಮತ್ತು ನಿರೂಪಕ ಅರುಣ್ ಬಡಿಗೇರ್‌ ವಿರುದ್ದ ಈ ಹಿಂದೆ ಕೂಡಾ ಕೋಮು ಗಲಭೆಗೆ ಪ್ರಚೋದನೆ ನೀಡಿದ್ದರು. ಅವರ ವಿರುದ್ದ ಎಫ್‌ಐಆ‌ರ್‌ ದಾಖಲಿಸಲು ನ್ಯಾಯಾಲಯ ಆದೇಶ ಕೂಡಾ ನೀಡಿತ್ತು. ಹಿಜಾಬ್‌ ವಿಚಾರದ ಕಾರ್ಯಕ್ರಮವನ್ನು ನಿರೂಪಣೆ ಮಾಡುತ್ತಿರುವಾಗ ‘ಭಾರತವು ಹಿಂದೂ ಧರ್ಮದ ಆಧಾರಲ್ಲಿ ನಿರ್ಮಾಣವಾಗಿದೆ’ ಎಂದು ಹೇಳಿದ್ದರು. ಹೀಗಾಗಿ ಪಬ್ಲಿಕ್ ಟಿವಿಯ ಮುಖ್ಯಸ್ಥ ಎಚ್.ಆರ್. ರಂಗನಾಥ್ ಹಾಗೂ ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯವು ಪೊಲೀಸರಿಗೆ ಸೂಚಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...