Homeಕರ್ನಾಟಕಉಡುಪಿಯ ಶ್ರೀಕೃಷ್ಣ ಮಠ ಕಟ್ಟಲು ಜಾಗ ನೀಡಿದ್ದೇ ಮುಸ್ಲಿಂ ರಾಜ: ವಿಶ್ವೇಶತೀರ್ಥ ಪೇಜಾವರ ಸ್ವಾಮೀಜಿ ಭಾಷಣ...

ಉಡುಪಿಯ ಶ್ರೀಕೃಷ್ಣ ಮಠ ಕಟ್ಟಲು ಜಾಗ ನೀಡಿದ್ದೇ ಮುಸ್ಲಿಂ ರಾಜ: ವಿಶ್ವೇಶತೀರ್ಥ ಪೇಜಾವರ ಸ್ವಾಮೀಜಿ ಭಾಷಣ ವೈರಲ್

- Advertisement -
- Advertisement -

ರಾಜ್ಯದಲ್ಲಿ ಈಗ ಉಡುಪಿಯ ಕೃಷ್ಣ ಮಠಕ್ಕೆ ಜಾಗ ಕೊಟ್ಟಿದ್ದು ಯಾರು? ಎನ್ನುವ ಚರ್ಚೆ ಜೋರಾಗಿ ನಡೆಯುತ್ತಿದೆ. ಇತ್ತೀಚೆಗೆ ಕರಾವಳಿ ಕಾಂಗ್ರೆಸ್‌ನ ಯುವ ನಾಯಕ ಮಿಥನ್ ರೈ ಅವರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಮಸೀದಿ ನೋಡಬನ್ನಿ ಕಾರ್ಯಕ್ರಮದಲ್ಲಿ ”ಶ್ರೀಕೃಷ್ಣ ಮಠಕ್ಕೆ ಜಾಗ ಕೊಟ್ಟಿದ್ದು ಮುಸ್ಲಿಂ ರಾಜ” ಎಂದು ಹೇಳಿಕೆ ನೀಡಿದ್ದರು.

ಅವರ ಹೇಳಿಕೆಗೆ ಪೂರಕವಾಗಿ, ಈ ಹಿಂದೆ ವಿಶ್ವೇಶತೀರ್ಥ ಪೇಜಾವರ ಸ್ವಾಮೀಜಿ ಅವರು ಮಾತನಾಡಿದ್ದ ವಿಡಿಯೋವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಆ ವಿಡಿಯೋದಲ್ಲಿ ಶ್ರೀಗಳು, ಹಿಂದೂ-ಮುಸ್ಲಿಂರು ಸಾಮರಸ್ಯದಿಂದ ಇರಬೇಕು ಎಂದು ಹೇಳುತ್ತಾ, ಮಧ್ವಾಚಾರರಿಗೆ ಶ್ರೀಕೃಷ್ಣ ಮಠ ಕಟ್ಟಲು ಜಾಗ ಕೊಟ್ಟಿದ್ದೇ ಮುಸ್ಲಿಂ ರಾಜ ಎಂದು ಹೇಳಿದ್ದಾರೆ.

ಇದೀಗ, ಮಿಥನ್ ರೈ ತಮ್ಮ ಹೇಳಿಕೆ ಬಗ್ಗೆ ಸ್ಪಷ್ಟಣೆ ನೀಡಿದ್ದು,  ‘ನನ್ನ ಹೇಳಿಕೆಯು ‌ಪೇಜಾವರ ಶ್ರೀಗಳ ಭಾಷಣದಿಂದ ಉಲ್ಲೇಖಿಸಲ್ಪಟ್ಟಿದೆಯೇ ಹೊರತು ಯಾವುದು ನನ್ನ ವೈಯಕ್ತಿಕ ಹೇಳಿಕೆಯಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.

ಮಿಥುನ್ ರೈ ಸ್ಪಷ್ಟಣೆ ಹೇಳಿಕೆ:

‘ನಾನು ಪೇಜಾವರ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಅವರ ನಿಷ್ಠಾವಂತ ಅನುಯಾಯಿ ಹಾಗೂ ಅವರ ಬೋಧನೆಗಳು ಮತ್ತು ಕೋಮು ಸೌಹಾರ್ದ ಸಿದ್ಧಾಂತಗಳನ್ನು ನನ್ನ ಕೊನೆಯ ಉಸಿರು ಇರುವವರೆಗೂ ಪಾಲಿಸುತ್ತೇನೆ. ನಾನು ಏನೇ ಮಾತನಾಡಿದರೂ ಅದು ಪೇಜಾವರ ಶ್ರೀಗಳ ಭಾಷಣದಿಂದ ಉಲ್ಲೇಖಿಸಲ್ಪಟ್ಟಿದೆಯೇ ಹೊರತು ಯಾವುದು ನನ್ನ ವೈಯಕ್ತಿಕ ಹೇಳಿಕೆಯಲ್ಲ ಏಕೆಂದರೆ ನಾನು ಇತಿಹಾಸಕಾರನಲ್ಲ’ ಎಂದಿದ್ದಾರೆ.

ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿವೆ. ಇಂತಹ ವಿಷಯಗಳಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯುವುದಕ್ಕೆ, ಬಿಜೆಪಿಯವರು ಸೃಷ್ಟಿಸಿದ ಇಂತಹ ವಿವಾದಗಳು ಕೇವಲ ರಾಜಕೀಯ ಗಿಮಿಕ್ ಆಗಿದೆ ಎಂಬುವುದು ಸ್ಪಷ್ಟವಾಗಿ ಕಾಣುತ್ತಿದ್ದೆ ಎಂದು ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.

ರಕ್ಷಿತ್ ಶೆಟ್ಟಿ ಅವರ ಮಾತಿನಲ್ಲಿ ಸರಿ ಇರಬಹುದು, ಆದರೆ ನನ್ನ ದೃಷ್ಟಿಕೋನದಿಂದ ನಾನು ಕೂಡ ಸರಿ. ನಮ್ಮ ಗೌರವಾನ್ವಿತ ಶ್ರೀಗಳು ನಮಗೆ ಕಲಿಸಿದ೦ತೆಯೇ ನಾನು ಕೋಮು ಸೌಹಾರ್ದತೆಯನ್ನು ಬೋಧಿಸುತ್ತೇನೆ, ಏಕೆಂದರೆ ಉಡುಪಿ ಮತ್ತು ದಕ್ಷಿಣ ಕನ್ನಡಕ್ಕೆ ಅದರ ಅವಶ್ಯಕತೆಯಿದೆ.

ಇದನ್ನೂ ಓದಿ: ಮಿಥುನ್‌ ರೈ ಹೇಳಿಕೆ ವಿರೋಧಿಸಿದ ‘ರಕ್ಷಿತ್‌ ಶೆಟ್ಟಿ’ಗೆ ನೆಟ್ಟಿಗರಿಂದ ಇತಿಹಾಸ ಪಾಠ!

ನನ್ನ ಎಲ್ಲಾ ಅನುಯಾಯಿಗಳು ಈ ಗೊಂದಲ ಮತ್ತು ಸೃಷ್ಟಿಯಾದ ವಿವಾದವನ್ನು ಕೊನೆಗಾಣಿಸಬೇಕೆಂದು ನಾನು ತಮ್ಮಲ್ಲಿ ವಿನಂತಿಸುತ್ತೇನೆ. ಹಾಗೂ ನಮ್ಮ ಯುವ ಉದಯೋನ್ಮುಖ ನಟ ರಕ್ಷಿತ್ ಶೆಟ್ಟಿ ಅವರನ್ನು ಟಾರ್ಗೆಟ್ ಮಾಡಬೇಡಿ, ಅವರು ನಮ್ಮ ತುಳುನಾಡಿನ ಹೆಮ್ಮೆ. ಏನೇ ಅಡಚಣೆ ಬಂದರು ಸಹ ತುಳುನಾಡಿನ ಶ್ರೇಯೋಭಿವೃದ್ಧಿಗಾಗಿ ಎಲ್ಲರೂ ಒಗ್ಗಟ್ಟಾಗಿ ದುಡಿಯೋಣ ಎಂದು ಮಿಥುನ್‌ ರೈ ಅವರು ತಮ್ಮ ಹೇಳಿಕೆಯಲ್ಲಿ ಬರೆದಿದ್ದಾರೆ.

ಈ ಹೇಳಿಕೆ ಬೆನ್ನಲ್ಲೇ ಬಿಜೆಪಿ ಹಾಗೂ ಹಿಂದೂಪರ ಸಂಘಟನೆಯ ನಾಯಕರು ಮಿಥನ್ ರೈ ವಿರುದ್ಧ ಮುಗಿಬಿದ್ದು, ಅವರ ಹೇಳಿಕೆಯನ್ನು ಖಂಡಿಸಿದ್ದರು.

ಈ ವಿಚಾರವಾಗಿ ಕಾಂಗ್ರೆಸ್ ಮುಖಂಡ ಮಿಥುನ್ ರೈ ಅವರಿಗೆ ನಟ ರಕ್ಷಿತ್ ಶೆಟ್ಟಿ ಪರೋಕ್ಷವಾಗಿ ಪ್ರತಿಕ್ರಿಯಿಸಿದ್ದು ಪರ ವಿರೋಧದ ಚರ್ಚೆಗೆ ಕಾರಣವಾಗಿತ್ತು.

ನಟ ರಕ್ಷಿತ್ ಶೆಟ್ಟಿ ತಮ್ಮ ಟ್ವೀಟರ್ ಖಾತೆಯಲ್ಲಿ ಮಿಥುನ್ ರೈ ಹೆಸರನ್ನು ಬಳಸದೇ ಪ್ರತಿಕ್ರಿಯಿಸಿ, ”ಉಡುಪಿ ದೇವಸ್ಥಾನಕ್ಕೆ ಸಾವಿರಾರು ವರ್ಷದ ಇತಿಹಾಸವಿದೆ. ಮಾಹಿತಿ ಇಲ್ಲದಿದ್ದರೆ ಸಾರ್ವಜನಿಕವಾಗಿ ನಾನ್ ಸೆನ್ಸ್ ರೀತಿ ಮಾತಾಡೋದು ಯಾಕೆ?” ಎಂದು ಪ್ರಶ್ನೆ ಮಾಡಿದ್ದರು.

ಹೀಗೆ ರಕ್ಷಿತ್ ಶೆಟ್ಟಿ ಹಾಗೂ ಮಿಥುನ್‌ ರೈ ಪರ ನೆಟ್ಟಿಗರ ನಡುವೆ ಟ್ವಿಟರ್ ವಾರ್ ನಡೆಯುತ್ತಿತ್ತು. ಇದೀಗ ಮಿಥನ್ ರೈ ತಮ್ಮ ಹೇಳಿಕೆ ಬಗ್ಗೆ ಪೇಜಾವರ ಶ್ರೀಗಳ ಭಾಷಣ ಉಲ್ಲೇಖಿಸಿ ಸ್ಪಷ್ಟಣೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...