Homeಕರ್ನಾಟಕಉಡುಪಿಯ ಶ್ರೀಕೃಷ್ಣ ಮಠ ಕಟ್ಟಲು ಜಾಗ ನೀಡಿದ್ದೇ ಮುಸ್ಲಿಂ ರಾಜ: ವಿಶ್ವೇಶತೀರ್ಥ ಪೇಜಾವರ ಸ್ವಾಮೀಜಿ ಭಾಷಣ...

ಉಡುಪಿಯ ಶ್ರೀಕೃಷ್ಣ ಮಠ ಕಟ್ಟಲು ಜಾಗ ನೀಡಿದ್ದೇ ಮುಸ್ಲಿಂ ರಾಜ: ವಿಶ್ವೇಶತೀರ್ಥ ಪೇಜಾವರ ಸ್ವಾಮೀಜಿ ಭಾಷಣ ವೈರಲ್

- Advertisement -
- Advertisement -

ರಾಜ್ಯದಲ್ಲಿ ಈಗ ಉಡುಪಿಯ ಕೃಷ್ಣ ಮಠಕ್ಕೆ ಜಾಗ ಕೊಟ್ಟಿದ್ದು ಯಾರು? ಎನ್ನುವ ಚರ್ಚೆ ಜೋರಾಗಿ ನಡೆಯುತ್ತಿದೆ. ಇತ್ತೀಚೆಗೆ ಕರಾವಳಿ ಕಾಂಗ್ರೆಸ್‌ನ ಯುವ ನಾಯಕ ಮಿಥನ್ ರೈ ಅವರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಮಸೀದಿ ನೋಡಬನ್ನಿ ಕಾರ್ಯಕ್ರಮದಲ್ಲಿ ”ಶ್ರೀಕೃಷ್ಣ ಮಠಕ್ಕೆ ಜಾಗ ಕೊಟ್ಟಿದ್ದು ಮುಸ್ಲಿಂ ರಾಜ” ಎಂದು ಹೇಳಿಕೆ ನೀಡಿದ್ದರು.

ಅವರ ಹೇಳಿಕೆಗೆ ಪೂರಕವಾಗಿ, ಈ ಹಿಂದೆ ವಿಶ್ವೇಶತೀರ್ಥ ಪೇಜಾವರ ಸ್ವಾಮೀಜಿ ಅವರು ಮಾತನಾಡಿದ್ದ ವಿಡಿಯೋವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಆ ವಿಡಿಯೋದಲ್ಲಿ ಶ್ರೀಗಳು, ಹಿಂದೂ-ಮುಸ್ಲಿಂರು ಸಾಮರಸ್ಯದಿಂದ ಇರಬೇಕು ಎಂದು ಹೇಳುತ್ತಾ, ಮಧ್ವಾಚಾರರಿಗೆ ಶ್ರೀಕೃಷ್ಣ ಮಠ ಕಟ್ಟಲು ಜಾಗ ಕೊಟ್ಟಿದ್ದೇ ಮುಸ್ಲಿಂ ರಾಜ ಎಂದು ಹೇಳಿದ್ದಾರೆ.

ಇದೀಗ, ಮಿಥನ್ ರೈ ತಮ್ಮ ಹೇಳಿಕೆ ಬಗ್ಗೆ ಸ್ಪಷ್ಟಣೆ ನೀಡಿದ್ದು,  ‘ನನ್ನ ಹೇಳಿಕೆಯು ‌ಪೇಜಾವರ ಶ್ರೀಗಳ ಭಾಷಣದಿಂದ ಉಲ್ಲೇಖಿಸಲ್ಪಟ್ಟಿದೆಯೇ ಹೊರತು ಯಾವುದು ನನ್ನ ವೈಯಕ್ತಿಕ ಹೇಳಿಕೆಯಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.

ಮಿಥುನ್ ರೈ ಸ್ಪಷ್ಟಣೆ ಹೇಳಿಕೆ:

‘ನಾನು ಪೇಜಾವರ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಅವರ ನಿಷ್ಠಾವಂತ ಅನುಯಾಯಿ ಹಾಗೂ ಅವರ ಬೋಧನೆಗಳು ಮತ್ತು ಕೋಮು ಸೌಹಾರ್ದ ಸಿದ್ಧಾಂತಗಳನ್ನು ನನ್ನ ಕೊನೆಯ ಉಸಿರು ಇರುವವರೆಗೂ ಪಾಲಿಸುತ್ತೇನೆ. ನಾನು ಏನೇ ಮಾತನಾಡಿದರೂ ಅದು ಪೇಜಾವರ ಶ್ರೀಗಳ ಭಾಷಣದಿಂದ ಉಲ್ಲೇಖಿಸಲ್ಪಟ್ಟಿದೆಯೇ ಹೊರತು ಯಾವುದು ನನ್ನ ವೈಯಕ್ತಿಕ ಹೇಳಿಕೆಯಲ್ಲ ಏಕೆಂದರೆ ನಾನು ಇತಿಹಾಸಕಾರನಲ್ಲ’ ಎಂದಿದ್ದಾರೆ.

ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿವೆ. ಇಂತಹ ವಿಷಯಗಳಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯುವುದಕ್ಕೆ, ಬಿಜೆಪಿಯವರು ಸೃಷ್ಟಿಸಿದ ಇಂತಹ ವಿವಾದಗಳು ಕೇವಲ ರಾಜಕೀಯ ಗಿಮಿಕ್ ಆಗಿದೆ ಎಂಬುವುದು ಸ್ಪಷ್ಟವಾಗಿ ಕಾಣುತ್ತಿದ್ದೆ ಎಂದು ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.

ರಕ್ಷಿತ್ ಶೆಟ್ಟಿ ಅವರ ಮಾತಿನಲ್ಲಿ ಸರಿ ಇರಬಹುದು, ಆದರೆ ನನ್ನ ದೃಷ್ಟಿಕೋನದಿಂದ ನಾನು ಕೂಡ ಸರಿ. ನಮ್ಮ ಗೌರವಾನ್ವಿತ ಶ್ರೀಗಳು ನಮಗೆ ಕಲಿಸಿದ೦ತೆಯೇ ನಾನು ಕೋಮು ಸೌಹಾರ್ದತೆಯನ್ನು ಬೋಧಿಸುತ್ತೇನೆ, ಏಕೆಂದರೆ ಉಡುಪಿ ಮತ್ತು ದಕ್ಷಿಣ ಕನ್ನಡಕ್ಕೆ ಅದರ ಅವಶ್ಯಕತೆಯಿದೆ.

ಇದನ್ನೂ ಓದಿ: ಮಿಥುನ್‌ ರೈ ಹೇಳಿಕೆ ವಿರೋಧಿಸಿದ ‘ರಕ್ಷಿತ್‌ ಶೆಟ್ಟಿ’ಗೆ ನೆಟ್ಟಿಗರಿಂದ ಇತಿಹಾಸ ಪಾಠ!

ನನ್ನ ಎಲ್ಲಾ ಅನುಯಾಯಿಗಳು ಈ ಗೊಂದಲ ಮತ್ತು ಸೃಷ್ಟಿಯಾದ ವಿವಾದವನ್ನು ಕೊನೆಗಾಣಿಸಬೇಕೆಂದು ನಾನು ತಮ್ಮಲ್ಲಿ ವಿನಂತಿಸುತ್ತೇನೆ. ಹಾಗೂ ನಮ್ಮ ಯುವ ಉದಯೋನ್ಮುಖ ನಟ ರಕ್ಷಿತ್ ಶೆಟ್ಟಿ ಅವರನ್ನು ಟಾರ್ಗೆಟ್ ಮಾಡಬೇಡಿ, ಅವರು ನಮ್ಮ ತುಳುನಾಡಿನ ಹೆಮ್ಮೆ. ಏನೇ ಅಡಚಣೆ ಬಂದರು ಸಹ ತುಳುನಾಡಿನ ಶ್ರೇಯೋಭಿವೃದ್ಧಿಗಾಗಿ ಎಲ್ಲರೂ ಒಗ್ಗಟ್ಟಾಗಿ ದುಡಿಯೋಣ ಎಂದು ಮಿಥುನ್‌ ರೈ ಅವರು ತಮ್ಮ ಹೇಳಿಕೆಯಲ್ಲಿ ಬರೆದಿದ್ದಾರೆ.

ಈ ಹೇಳಿಕೆ ಬೆನ್ನಲ್ಲೇ ಬಿಜೆಪಿ ಹಾಗೂ ಹಿಂದೂಪರ ಸಂಘಟನೆಯ ನಾಯಕರು ಮಿಥನ್ ರೈ ವಿರುದ್ಧ ಮುಗಿಬಿದ್ದು, ಅವರ ಹೇಳಿಕೆಯನ್ನು ಖಂಡಿಸಿದ್ದರು.

ಈ ವಿಚಾರವಾಗಿ ಕಾಂಗ್ರೆಸ್ ಮುಖಂಡ ಮಿಥುನ್ ರೈ ಅವರಿಗೆ ನಟ ರಕ್ಷಿತ್ ಶೆಟ್ಟಿ ಪರೋಕ್ಷವಾಗಿ ಪ್ರತಿಕ್ರಿಯಿಸಿದ್ದು ಪರ ವಿರೋಧದ ಚರ್ಚೆಗೆ ಕಾರಣವಾಗಿತ್ತು.

ನಟ ರಕ್ಷಿತ್ ಶೆಟ್ಟಿ ತಮ್ಮ ಟ್ವೀಟರ್ ಖಾತೆಯಲ್ಲಿ ಮಿಥುನ್ ರೈ ಹೆಸರನ್ನು ಬಳಸದೇ ಪ್ರತಿಕ್ರಿಯಿಸಿ, ”ಉಡುಪಿ ದೇವಸ್ಥಾನಕ್ಕೆ ಸಾವಿರಾರು ವರ್ಷದ ಇತಿಹಾಸವಿದೆ. ಮಾಹಿತಿ ಇಲ್ಲದಿದ್ದರೆ ಸಾರ್ವಜನಿಕವಾಗಿ ನಾನ್ ಸೆನ್ಸ್ ರೀತಿ ಮಾತಾಡೋದು ಯಾಕೆ?” ಎಂದು ಪ್ರಶ್ನೆ ಮಾಡಿದ್ದರು.

ಹೀಗೆ ರಕ್ಷಿತ್ ಶೆಟ್ಟಿ ಹಾಗೂ ಮಿಥುನ್‌ ರೈ ಪರ ನೆಟ್ಟಿಗರ ನಡುವೆ ಟ್ವಿಟರ್ ವಾರ್ ನಡೆಯುತ್ತಿತ್ತು. ಇದೀಗ ಮಿಥನ್ ರೈ ತಮ್ಮ ಹೇಳಿಕೆ ಬಗ್ಗೆ ಪೇಜಾವರ ಶ್ರೀಗಳ ಭಾಷಣ ಉಲ್ಲೇಖಿಸಿ ಸ್ಪಷ್ಟಣೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...