Homeಕರ್ನಾಟಕಉಡುಪಿಯ ಶ್ರೀಕೃಷ್ಣ ಮಠ ಕಟ್ಟಲು ಜಾಗ ನೀಡಿದ್ದೇ ಮುಸ್ಲಿಂ ರಾಜ: ವಿಶ್ವೇಶತೀರ್ಥ ಪೇಜಾವರ ಸ್ವಾಮೀಜಿ ಭಾಷಣ...

ಉಡುಪಿಯ ಶ್ರೀಕೃಷ್ಣ ಮಠ ಕಟ್ಟಲು ಜಾಗ ನೀಡಿದ್ದೇ ಮುಸ್ಲಿಂ ರಾಜ: ವಿಶ್ವೇಶತೀರ್ಥ ಪೇಜಾವರ ಸ್ವಾಮೀಜಿ ಭಾಷಣ ವೈರಲ್

- Advertisement -
- Advertisement -

ರಾಜ್ಯದಲ್ಲಿ ಈಗ ಉಡುಪಿಯ ಕೃಷ್ಣ ಮಠಕ್ಕೆ ಜಾಗ ಕೊಟ್ಟಿದ್ದು ಯಾರು? ಎನ್ನುವ ಚರ್ಚೆ ಜೋರಾಗಿ ನಡೆಯುತ್ತಿದೆ. ಇತ್ತೀಚೆಗೆ ಕರಾವಳಿ ಕಾಂಗ್ರೆಸ್‌ನ ಯುವ ನಾಯಕ ಮಿಥನ್ ರೈ ಅವರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಮಸೀದಿ ನೋಡಬನ್ನಿ ಕಾರ್ಯಕ್ರಮದಲ್ಲಿ ”ಶ್ರೀಕೃಷ್ಣ ಮಠಕ್ಕೆ ಜಾಗ ಕೊಟ್ಟಿದ್ದು ಮುಸ್ಲಿಂ ರಾಜ” ಎಂದು ಹೇಳಿಕೆ ನೀಡಿದ್ದರು.

ಅವರ ಹೇಳಿಕೆಗೆ ಪೂರಕವಾಗಿ, ಈ ಹಿಂದೆ ವಿಶ್ವೇಶತೀರ್ಥ ಪೇಜಾವರ ಸ್ವಾಮೀಜಿ ಅವರು ಮಾತನಾಡಿದ್ದ ವಿಡಿಯೋವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಆ ವಿಡಿಯೋದಲ್ಲಿ ಶ್ರೀಗಳು, ಹಿಂದೂ-ಮುಸ್ಲಿಂರು ಸಾಮರಸ್ಯದಿಂದ ಇರಬೇಕು ಎಂದು ಹೇಳುತ್ತಾ, ಮಧ್ವಾಚಾರರಿಗೆ ಶ್ರೀಕೃಷ್ಣ ಮಠ ಕಟ್ಟಲು ಜಾಗ ಕೊಟ್ಟಿದ್ದೇ ಮುಸ್ಲಿಂ ರಾಜ ಎಂದು ಹೇಳಿದ್ದಾರೆ.

ಇದೀಗ, ಮಿಥನ್ ರೈ ತಮ್ಮ ಹೇಳಿಕೆ ಬಗ್ಗೆ ಸ್ಪಷ್ಟಣೆ ನೀಡಿದ್ದು,  ‘ನನ್ನ ಹೇಳಿಕೆಯು ‌ಪೇಜಾವರ ಶ್ರೀಗಳ ಭಾಷಣದಿಂದ ಉಲ್ಲೇಖಿಸಲ್ಪಟ್ಟಿದೆಯೇ ಹೊರತು ಯಾವುದು ನನ್ನ ವೈಯಕ್ತಿಕ ಹೇಳಿಕೆಯಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.

ಮಿಥುನ್ ರೈ ಸ್ಪಷ್ಟಣೆ ಹೇಳಿಕೆ:

‘ನಾನು ಪೇಜಾವರ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಅವರ ನಿಷ್ಠಾವಂತ ಅನುಯಾಯಿ ಹಾಗೂ ಅವರ ಬೋಧನೆಗಳು ಮತ್ತು ಕೋಮು ಸೌಹಾರ್ದ ಸಿದ್ಧಾಂತಗಳನ್ನು ನನ್ನ ಕೊನೆಯ ಉಸಿರು ಇರುವವರೆಗೂ ಪಾಲಿಸುತ್ತೇನೆ. ನಾನು ಏನೇ ಮಾತನಾಡಿದರೂ ಅದು ಪೇಜಾವರ ಶ್ರೀಗಳ ಭಾಷಣದಿಂದ ಉಲ್ಲೇಖಿಸಲ್ಪಟ್ಟಿದೆಯೇ ಹೊರತು ಯಾವುದು ನನ್ನ ವೈಯಕ್ತಿಕ ಹೇಳಿಕೆಯಲ್ಲ ಏಕೆಂದರೆ ನಾನು ಇತಿಹಾಸಕಾರನಲ್ಲ’ ಎಂದಿದ್ದಾರೆ.

ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿವೆ. ಇಂತಹ ವಿಷಯಗಳಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯುವುದಕ್ಕೆ, ಬಿಜೆಪಿಯವರು ಸೃಷ್ಟಿಸಿದ ಇಂತಹ ವಿವಾದಗಳು ಕೇವಲ ರಾಜಕೀಯ ಗಿಮಿಕ್ ಆಗಿದೆ ಎಂಬುವುದು ಸ್ಪಷ್ಟವಾಗಿ ಕಾಣುತ್ತಿದ್ದೆ ಎಂದು ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.

ರಕ್ಷಿತ್ ಶೆಟ್ಟಿ ಅವರ ಮಾತಿನಲ್ಲಿ ಸರಿ ಇರಬಹುದು, ಆದರೆ ನನ್ನ ದೃಷ್ಟಿಕೋನದಿಂದ ನಾನು ಕೂಡ ಸರಿ. ನಮ್ಮ ಗೌರವಾನ್ವಿತ ಶ್ರೀಗಳು ನಮಗೆ ಕಲಿಸಿದ೦ತೆಯೇ ನಾನು ಕೋಮು ಸೌಹಾರ್ದತೆಯನ್ನು ಬೋಧಿಸುತ್ತೇನೆ, ಏಕೆಂದರೆ ಉಡುಪಿ ಮತ್ತು ದಕ್ಷಿಣ ಕನ್ನಡಕ್ಕೆ ಅದರ ಅವಶ್ಯಕತೆಯಿದೆ.

ಇದನ್ನೂ ಓದಿ: ಮಿಥುನ್‌ ರೈ ಹೇಳಿಕೆ ವಿರೋಧಿಸಿದ ‘ರಕ್ಷಿತ್‌ ಶೆಟ್ಟಿ’ಗೆ ನೆಟ್ಟಿಗರಿಂದ ಇತಿಹಾಸ ಪಾಠ!

ನನ್ನ ಎಲ್ಲಾ ಅನುಯಾಯಿಗಳು ಈ ಗೊಂದಲ ಮತ್ತು ಸೃಷ್ಟಿಯಾದ ವಿವಾದವನ್ನು ಕೊನೆಗಾಣಿಸಬೇಕೆಂದು ನಾನು ತಮ್ಮಲ್ಲಿ ವಿನಂತಿಸುತ್ತೇನೆ. ಹಾಗೂ ನಮ್ಮ ಯುವ ಉದಯೋನ್ಮುಖ ನಟ ರಕ್ಷಿತ್ ಶೆಟ್ಟಿ ಅವರನ್ನು ಟಾರ್ಗೆಟ್ ಮಾಡಬೇಡಿ, ಅವರು ನಮ್ಮ ತುಳುನಾಡಿನ ಹೆಮ್ಮೆ. ಏನೇ ಅಡಚಣೆ ಬಂದರು ಸಹ ತುಳುನಾಡಿನ ಶ್ರೇಯೋಭಿವೃದ್ಧಿಗಾಗಿ ಎಲ್ಲರೂ ಒಗ್ಗಟ್ಟಾಗಿ ದುಡಿಯೋಣ ಎಂದು ಮಿಥುನ್‌ ರೈ ಅವರು ತಮ್ಮ ಹೇಳಿಕೆಯಲ್ಲಿ ಬರೆದಿದ್ದಾರೆ.

ಈ ಹೇಳಿಕೆ ಬೆನ್ನಲ್ಲೇ ಬಿಜೆಪಿ ಹಾಗೂ ಹಿಂದೂಪರ ಸಂಘಟನೆಯ ನಾಯಕರು ಮಿಥನ್ ರೈ ವಿರುದ್ಧ ಮುಗಿಬಿದ್ದು, ಅವರ ಹೇಳಿಕೆಯನ್ನು ಖಂಡಿಸಿದ್ದರು.

ಈ ವಿಚಾರವಾಗಿ ಕಾಂಗ್ರೆಸ್ ಮುಖಂಡ ಮಿಥುನ್ ರೈ ಅವರಿಗೆ ನಟ ರಕ್ಷಿತ್ ಶೆಟ್ಟಿ ಪರೋಕ್ಷವಾಗಿ ಪ್ರತಿಕ್ರಿಯಿಸಿದ್ದು ಪರ ವಿರೋಧದ ಚರ್ಚೆಗೆ ಕಾರಣವಾಗಿತ್ತು.

ನಟ ರಕ್ಷಿತ್ ಶೆಟ್ಟಿ ತಮ್ಮ ಟ್ವೀಟರ್ ಖಾತೆಯಲ್ಲಿ ಮಿಥುನ್ ರೈ ಹೆಸರನ್ನು ಬಳಸದೇ ಪ್ರತಿಕ್ರಿಯಿಸಿ, ”ಉಡುಪಿ ದೇವಸ್ಥಾನಕ್ಕೆ ಸಾವಿರಾರು ವರ್ಷದ ಇತಿಹಾಸವಿದೆ. ಮಾಹಿತಿ ಇಲ್ಲದಿದ್ದರೆ ಸಾರ್ವಜನಿಕವಾಗಿ ನಾನ್ ಸೆನ್ಸ್ ರೀತಿ ಮಾತಾಡೋದು ಯಾಕೆ?” ಎಂದು ಪ್ರಶ್ನೆ ಮಾಡಿದ್ದರು.

ಹೀಗೆ ರಕ್ಷಿತ್ ಶೆಟ್ಟಿ ಹಾಗೂ ಮಿಥುನ್‌ ರೈ ಪರ ನೆಟ್ಟಿಗರ ನಡುವೆ ಟ್ವಿಟರ್ ವಾರ್ ನಡೆಯುತ್ತಿತ್ತು. ಇದೀಗ ಮಿಥನ್ ರೈ ತಮ್ಮ ಹೇಳಿಕೆ ಬಗ್ಗೆ ಪೇಜಾವರ ಶ್ರೀಗಳ ಭಾಷಣ ಉಲ್ಲೇಖಿಸಿ ಸ್ಪಷ್ಟಣೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...