Homeಮುಖಪುಟಸಿಎಎ ಜಾರಿಗೆ ತಡೆ ಕೋರಿ ಸುಪ್ರೀಂಕೋರ್ಟ್‌ ಮೊರೆ ಹೋದ ಮುಸ್ಲಿಂ ಲೀಗ್

ಸಿಎಎ ಜಾರಿಗೆ ತಡೆ ಕೋರಿ ಸುಪ್ರೀಂಕೋರ್ಟ್‌ ಮೊರೆ ಹೋದ ಮುಸ್ಲಿಂ ಲೀಗ್

- Advertisement -
- Advertisement -

ಕೇಂದ್ರ ಸರಕಾರ ಜಾರಿಗೆ ತಂದ ಪೌರತ್ವ ತಿದ್ದುಪಡಿ ಕಾಯ್ದೆಗೆ ತಡೆ ಕೋರಿ ಭಾರತೀಯ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ಮಂಗಳವಾರ ಸುಪ್ರೀಂ ಕೋರ್ಟ್‌ಗೆ ತುರ್ತು ಅರ್ಜಿ ಸಲ್ಲಿಸಿದೆ.

ಕೇಂದ್ರ ಸರ್ಕಾರವು ಪೌರತ್ವ (ತಿದ್ದುಪಡಿ) ಕಾಯ್ದೆ ಜಾರಿ ಕುರಿತು ಅಧಿಸೂಚನೆ ಹೊರಡಿಸಿದ ಒಂದು ದಿನದ ನಂತರ ಈ ಬೆಳವಣಿಗೆ ನಡೆದಿದೆ. ಈ ಕಾನೂನಿನ ಪ್ರಯೋಜನದಿಂದ ವಂಚಿತರಾದ ಮುಸ್ಲಿಂ ಸಮುದಾಯಕ್ಕೆ ಸೇರಿದ ವ್ಯಕ್ತಿಗಳ ವಿರುದ್ಧ ಯಾವುದೇ ದಬ್ಬಾಳಿಕೆಯ ಕ್ರಮಗಳನ್ನು ತೆಗೆದುಕೊಳ್ಳಬಾರದು ಮತ್ತು ಕಾನೂನು ಮತ್ತು ನಿಬಂಧನೆಗಳನ್ನು ತಡೆಹಿಡಿಯಬೇಕು ಎಂದು IUML ಅರ್ಜಿಯಲ್ಲಿ ಆಗ್ರಹಿಸಿದೆ.

ಯೂನಿಯನ್ ಮುಸ್ಲಿಂ ಲೀಗ್ ತನ್ನ ಅರ್ಜಿಯಲ್ಲಿ, CAA ಅಸಂವಿಧಾನಿಕ ಮತ್ತು ತಾರತಮ್ಯದಿಂದ ಕೂಡಿದೆ, ವಿಶೇಷವಾಗಿ ಮುಸ್ಲಿಮರ ವಿರುದ್ಧವಾಗಿದೆ ಎಂದು ವಾದಿಸಿದೆ. ಈ ತಿದ್ದುಪಡಿಯನ್ನು ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (IUML) 2020ರಲ್ಲಿ ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಿತ್ತು. ಸಿಎಎಯನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ 200ಕ್ಕೂ ಹೆಚ್ಚು ಅರ್ಜಿಗಳನ್ನು ಸಲ್ಲಿಸಲಾಗಿದೆ. ಇವುಗಳಲ್ಲಿ ಅಸಾದುದ್ದೀನ್ ಓವೈಸಿ, ಜೈರಾಮ್ ರಮೇಶ್, ರಮೇಶ್ ಚೆನ್ನಿತಲಾ ಮತ್ತು ಮಹುವಾ ಮೊಯಿತ್ರಾ ಮತ್ತು ರಾಜಕೀಯ ಸಂಘಟನೆಗಳಾದ ಅಸ್ಸಾಂ ಪ್ರದೇಶ ಕಾಂಗ್ರೆಸ್ ಸಮಿತಿ, ಡಿಎಂಕೆ, ಅಸೋಮ್ ಗಣ ಪರಿಷತ್ (ಎಜಿಪಿ), ನ್ಯಾಷನಲ್ ಪೀಪಲ್ಸ್ ಪಾರ್ಟಿ (ಅಸ್ಸಾಂ), ಮುಸ್ಲಿಂ ವಿದ್ಯಾರ್ಥಿಗಳ ಒಕ್ಕೂಟಗಳ (ಅಸ್ಸಾಂ) ಅರ್ಜಿಗಳು ಕೂಡ ಸೇರಿದೆ.

ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ, ಸಿಎಎ ಅಡಿಯಲ್ಲಿ ಪೌರತ್ವ ನೀಡುವ ಸರ್ಕಾರದ ನಿರ್ಧಾರವು ಮತ್ತೆ ವಿವಾದಕ್ಕೆ ಕಾರಣವಾಗಿದೆ. ಡಿಸೆಂಬರ್ 11, 2019ರಂದು ಸಂಸತ್ತಿನಲ್ಲಿ ಅಂಗೀಕರಿಸಲ್ಪಟ್ಟ CAA ಭಾರತದಾದ್ಯಂತ ವ್ಯಾಪಕ ಪ್ರತಿಭಟನೆಗೆ ಕಾರಣವಾಯಿತು. ದೆಹಲಿ ಪ್ರತಿಭಟನೆಯ ಕೇಂದ್ರ ಬಿಂದುವಾಗಿತ್ತು. ಅಲ್ಲಿ ತಿಂಗಳುಗಳ ಕಾಲ ಪ್ರತಿಭಟನೆಗಳು ನಡೆದವು, ವಿಶೇಷವಾಗಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ಮತ್ತು ಶಾಹೀನ್ ಬಾಗ್ ಪ್ರದೇಶಗಳಲ್ಲಿ ವ್ಯಾಪಕವಾದ ಪ್ರತಿಭಟನೆ ನಡೆದಿತ್ತು. ಪ್ರತಿಭಟನೆಗಳ ಜೊತೆಗೆ, CAA ಕೋಮು ಉದ್ವಿಗ್ನತೆಗೆ ಕಾರಣವಾಗಿದೆ, 2020ರ ಆರಂಭದಲ್ಲಿ ಈಶಾನ್ಯ ದೆಹಲಿಯಲ್ಲಿ ಹಿಂಸಾತ್ಮಕ ಗಲಭೆಗಳು ನಡೆದಿದೆ.  ಈ ವೇಳೆ 100ಕ್ಕೂ ಅಧಿಕ ಮಂದಿ ಪ್ರಾಣವನ್ನು ಕಳೆದುಕೊಂಡಿದ್ದಾರೆ. ಇದಾದ ಬಳಿಕ ಸಿಎಎ ಜಾರಿಯಿಂದ ಕೇಂದ್ರ ಸರಕಾರ ಹಿಂದೆ ಸರಿದಿತ್ತು. ಇದೀಗ ಲೋಕಸಭೆ ಚುನಾವಣೆ ಹಿನ್ನೆಲೆ ಸಿಎಎಯನ್ನು ಜಾರಿಗೊಳಿಸಲಾಗಿದೆ.

ಈ ಕಾಯ್ದೆಯಡಿಯಲ್ಲಿ ಅಫ್ಘಾನಿಸ್ತಾನ, ಬಾಂಗ್ಲಾದೇಶ ಅಥವಾ ಪಾಕಿಸ್ತಾನದಿಂದ ಭಾರತಕ್ಕೆ ಬಂದಿರುವ ಮುಸ್ಲಿಮೇತರರು ಅಂದರೆ ಹಿಂದೂ, ಸಿಖ್, ಬೌದ್ಧ, ಜೈನ್, ಪಾರ್ಸಿ ಅಥವಾ ಕ್ರಿಶ್ಚಿಯನ್ ಧಾರ್ಮಿಕ ಸಮುದಾಯಗಳಿಗೆ ಸೇರಿದ ಅಕ್ರಮ ವಲಸಿಗರು ಡಿಸೆಂಬರ್ 31, 2014ರಂದು ಅಥವಾ ಅದಕ್ಕೂ ಮೊದಲು ಭಾರತಕ್ಕೆ ಪ್ರವೇಶಿಸಿದರೆ ಅವರಿಗೆ ಪೌರತ್ವವನ್ನು ನೀಡಬಹುದು. ಕಾಯಿದೆಯ ಮೂರನೇ ಶೆಡ್ಯೂಲ್‌ನ ಸೆಕ್ಷನ್ 5 ರ ಅಡಿಯಲ್ಲಿನ ಷರತ್ತುಗಳಿಗೆ ಸಮ್ಮತಿಸಿದರೆ ಒಬ್ಬ ವ್ಯಕ್ತಿಗೆ ನೋಂದಣಿ ಪ್ರಮಾಣಪತ್ರ ನೀಡಬಹುದು.

ಸಿಎಎ ನಿಯಮಗಳನ್ನು ಅಧಿಸೂಚನೆ ಹೊರಡಿಸಿದ್ದಕ್ಕಾಗಿ ವಿರೋಧ ಪಕ್ಷದ ನಾಯಕರು ಕೇಂದ್ರವನ್ನು ತರಾಟೆಗೆ ತೆಗೆದುಕೊಂಡಿದ್ದು,  ಬಿಜೆಪಿಯು ಸಮಾಜವನ್ನು ವಿಭಜಿಸಲು ಮತ್ತು ಸಾರ್ವತ್ರಿಕ ಚುನಾವಣೆಗೆ ಮುನ್ನ ಜನರನ್ನು ವಿಭಜಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದೆ.

ಇದನ್ನು ಓದಿ: CAA: ಕಾನೂನು ಸವಾಲು ಏನಾಯ್ತು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

24 ವರ್ಷಗಳ ಮೋದಿ ವರ್ಚಸ್ಸನ್ನು 2 ವಾರಗಳಲ್ಲಿ ಧೂಳೀಪಟ ಮಾಡಿದ ಸಿಜೆಪಿ: CJP ಆಂದೋಲನಕ್ಕೆ ಅರುಂಧತಿ ರಾಯ್ ಮೆಚ್ಚುಗೆ

ಪ್ರಧಾನಿ ನರೇಂದ್ರ ಮೋದಿ ಅವರ ಎರಡು ದಶಕಗಳಿಗೂ ಹೆಚ್ಚಿನ ಸುದೀರ್ಘ ರಾಜಕೀಯ ವರ್ಚಸ್ಸನ್ನು ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸಿದ ಪ್ರತಿಭಟನಾ ಆಂದೋಲನವು ಕೇವಲ ಎರಡು ವಾರಗಳಲ್ಲಿ ಬುಡಸಮೇತ ಅಲ್ಲಾಡಿಸಿದೆ. ಇದು ಯಾವುದೇ...

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...