Homeಮುಖಪುಟರಾಜಸ್ಥಾನ: ಪಾಕಿಸ್ತಾನಕ್ಕೆ ಹೋಗು ಎಂದು ಮುಸ್ಲಿಂ ವ್ಯಕ್ತಿ ಮೇಲೆ ಹಲ್ಲೆ, ಐವರ ಬಂಧನ

ರಾಜಸ್ಥಾನ: ಪಾಕಿಸ್ತಾನಕ್ಕೆ ಹೋಗು ಎಂದು ಮುಸ್ಲಿಂ ವ್ಯಕ್ತಿ ಮೇಲೆ ಹಲ್ಲೆ, ಐವರ ಬಂಧನ

- Advertisement -
- Advertisement -

ರಾಜಸ್ಥಾನದ ಅಜ್ಮೀರ್‌ನಲ್ಲಿ ಐದು ಜನರ ಗುಂಪೊಂದು ಮುಸ್ಲಿಂ ವ್ಯಕ್ತಿಯೊಬ್ಬರನ್ನು ಥಳಿಸಿ ಪಾಕಿಸ್ತಾನಕ್ಕೆ ಹೋಗುವಂತೆ ಹೇಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವ್ಯಕ್ತಿಯನ್ನು ಥಳಿಸಿ ಆತನ ಕುಟುಂಬದವರನ್ನು ನಿಂದಿಸಲಾಗಿತ್ತು.

ಘಟನೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ಐವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಲಲಿತ್ ಶರ್ಮಾ (40), ಸುರೇಂದ್ರ (32), ತೇಜಪಾಲ್ (27), ರೋಹಿತ್ ಶರ್ಮಾ(32), ಮತ್ತು ಶೈಲೇಂದ್ರ (31) ಎಂಬ  ಐದು ಮಂದಿ ಆರೋಪಿಗಳನ್ನು ಸೆಕ್ಷನ್ 151 ಸಿಆರ್‌ಪಿಸಿ ಅಡಿಯಲ್ಲಿ ಬಂಧಿಸಲಾಗಿದೆ.

ಆರೋಪಿಗಳು ಮುಸ್ಲಿಂ ವ್ಯಕ್ತಿಗೆ, “ನೀವು ಉತ್ತರ ಪ್ರದೇಶದಿಂದ ಏಕೆ ಬಂದಿದ್ದೀರಿ? ನೀವು ಚಿನ್ನದ ಆಭರಣಗಳನ್ನು ಕದ್ದಿದ್ದಿರಿ. ನಿಮ್ಮದು ಒಂದು ಗ್ಯಾಂಗ್ ಇದೆ. ನೀವು ಒಂದು ಕೆಲಸ ಮಾಡಿ. ಪಾಕಿಸ್ತಾನಕ್ಕೆ ಹೋಗಿ” ಎಂದು ಭಿಕ್ಷೆ ಬೇಡುತ್ತಿದ್ದವರ ಮೇಲೆ ಹಲ್ಲೆ ಮಾಡಿದ್ದಾರೆ. ವೀಡಿಯೊದಲ್ಲಿ, ಒಬ್ಬ ಆರೋಪಿಯು ಸಂತ್ರಸ್ತೆಯ ಜೊತೆಗಿದ್ದ ಹುಡುಗನ ತಲೆಗೆ ಕಾಲಿನಿಂದ ಒದೆಯುವುದನ್ನು ಸಹ ಕಾಣಬಹುದು.

ಇದನ್ನೂ ಓದಿ: ಮುಸ್ಲಿಂ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ, ಆರೋಪಿಗಳಿಗೆ 24 ಗಂಟೆಯೊಳಗೆ ಜಾಮೀನು!

“ಆಗಸ್ಟ್ 20 ರಂದು (ಶುಕ್ರವಾರ) ಚಿತ್ರೀಕರಿಸಲಾದ ವಿಡಿಯೋದಲ್ಲಿ ಭಿಕ್ಷುಕರನ್ನು ಕೆಲವು ವ್ಯಕ್ತಿಗಳು ಥಳಿಸಿದ್ದಾರೆ. ಈ ಪ್ರಕರಣದಲ್ಲಿ ಯಾವುದೇ ಎಫ್‌ಐಆರ್ (ಪ್ರಥಮ ಮಾಹಿತಿ ವರದಿ) ದಾಖಲಾಗದಿದ್ದರೂ, ನಾವು ಘಟನೆಯನ್ನು ಗಮನಿಸಿದ್ದೇವೆ. ತನಿಖೆಗೆ ಆದೇಶಿಸಲಾಗಿದೆ” ಎಂದು ಪೊಲೀಸ್ ಅಧಿಕಾರಿ ಹೇಳಿದ್ದರು.

“ತನಿಖೆಯ ಸಮಯದಲ್ಲಿ, ಬಲಪಂಥೀಯ ಸಂಘಟನೆ ವಿಶ್ವ ಹಿಂದೂ ಪರಿಷತ್‌ನ ಸದಸ್ಯ ಎನ್ನಲಾಗಿರುವ ಲಲಿತ್ ಶರ್ಮಾ, ಇತರ ನಾಲ್ಕು ಜನರೊಂದಿಗೆ ಭಿಕ್ಷುಕನ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ನಮಗೆ ತಿಳಿಯಿತು. ಆತನನ್ನು ಆಗಸ್ಟ್ 20 ರಂದು ಬಂಧಿಸಲಾಯಿತು. ಮರುದಿನ ಇತರ ನಾಲ್ವರನ್ನು ಬಂಧಿಸಲಾಯಿತು. ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು” ಎಂದಿದ್ದಾರೆ.

’ಸಂತ್ರಸ್ತ ವ್ಯಕ್ತಿ ಕೆಲವು ಕ್ರಿಮಿನಲ್ ಚಟುವಟಿಕೆಯಲ್ಲಿ ಭಾಗಿಯಾಗಿದ್ದರಿಂದ ಆ ವ್ಯಕ್ತಿಯ ಮೇಲೆ ಹಲ್ಲೆ ಮಾಡಿದ್ದೇವೆ. ಗುರುತು ಸಿಗದಿರಲು ಅವರು ಭಿಕ್ಷೆ ಬೇಡುತ್ತಿದ್ದರು’ ಎಂದು ಆರೋಪಿಗಳು ತಿಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಎಲ್ಲಾ ಐವರು ಆರೋಪಿಗಳು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.


ಇದನ್ನೂ ಓದಿ: ಮುಸ್ಲಿಂ ಬಳೆ ವ್ಯಾಪಾರಿ ಮೇಲೆ ಗುಂಪು ಹಲ್ಲೆ; ಸುಳ್ಳು ಹೆಸರು ಹೇಳಿದ್ದಕ್ಕೆ ಥಳಿಸಿದ್ದಾರೆ ಎಂದ ಸಚಿವ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...