Homeಮುಖಪುಟನ್ಯಾಯಾಲಯದಲ್ಲೇ ಮುಸ್ಲಿಂ ಯುವಕನಿಗೆ ಥಳಿಸಿದ ಹಿಂದುತ್ವ ಸಂಘಟನೆ ದುಷ್ಕರ್ಮಿಗಳು! : ವರದಿ

ನ್ಯಾಯಾಲಯದಲ್ಲೇ ಮುಸ್ಲಿಂ ಯುವಕನಿಗೆ ಥಳಿಸಿದ ಹಿಂದುತ್ವ ಸಂಘಟನೆ ದುಷ್ಕರ್ಮಿಗಳು! : ವರದಿ

- Advertisement -
- Advertisement -

ವಿಶೇಷ ವಿವಾಹ ಕಾಯ್ದೆಯಡಿ ಮದುವೆ ನೋಂದಣಿ ಮಾಡಿಕೊಳ್ಳಲು ನೆರೆಮನೆಯ ಬ್ರಾಹ್ಮಣ ಯುವತಿಯೊಂದಿಗೆ ಆಗಮಿಸಿದ್ದ ಮುಸ್ಲಿಂ ಯುವಕನಿಗೆ ಬಲಪಂಥೀಯ ಹಿಂದುತ್ವ ಸಂಘಟನೆಯ ದುಷ್ಕರ್ಮಿಗಳು ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಶುಕ್ರವಾರ (ಫೆ.7) ಮಧ್ಯಪ್ರದೇಶದ ಭೋಪಾಲ್ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ನಡೆದಿದೆ.

ನರ್ಮದಾಪುರಂ ಜಿಲ್ಲೆಯ ಪಿಪರಿಯಾ ಪ್ರದೇಶದ ಯುವಕ ಮತ್ತು ಯುವತಿ ತಮ್ಮ ವಿವಾಹ ನೋಂದಣಿಗೆ ನ್ಯಾಯಾಲಯಕ್ಕೆ ಆಗಮಿಸಿದ್ದರು. ಈ ವೇಳೆ ವಿಶ್ವ ಹಿಂದೂ ಪರಿಷತ್ (ವಿಹೆಚ್‌ಪಿ), ಸಂಸ್ಕೃತಿ ಬಚಾವೊ ಮಂಚ್ ಸೇರಿದಂತೆ ಬಲಪಂಥೀಯ ಹಿಂದುತ್ವ ಸಂಘಟನೆಯವರು ಯುವಕನಿಗೆ ಹಲ್ಲೆ ನಡೆಸಿದ್ದಾರೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಯುವಕನ ಮೇಲೆ ಹಲ್ಲೆ ನಡೆಸಿದ್ದು ಎನ್ನಲಾದ ವಿಡಿಯೋವೊಂದು ವೈರಲ್ ಆಗಿದ್ದು, ಅದರಲ್ಲಿ ಇಬ್ಬರು ವ್ಯಕ್ತಿಗಳು ಯುವಕನನ್ನು ನೆಲಕ್ಕೆ ಕೆಡವಿ, ಬೂಟುಗಾಲಿನಿಂದ ಆತನ ಮುಖಕ್ಕೆ ತುಳಿಯುತ್ತಿರುವ ದೃಶ್ಯವಿದೆ.

ಘಟನೆಗೆ ಸಂಬಂಧಿಸಿದಂತೆ ಮತ್ತೊಂದು ವಿಡಿಯೋ ವೈರಲ್ ಆಗಿದ್ದು, ಅದರಲ್ಲಿ ಯುವಕನ ಬಲ ಹುಬ್ಬಿನ ಬಳಿ ರಕ್ತಸ್ರಾವವಾಗುತ್ತಿರುವುದು ಕಂಡು ಬಂದಿದೆ. ವಿಡಿಯೋದಲ್ಲಿ “ನೀವು ಹಿಂದೂ ಹುಡುಗಿಯರ ಹಿಂದೆ ಏಕೆ ಇದ್ದೀರಿ? ಮತ್ತೆ ಲವ್ ಜಿಹಾದ್ ಮಾಡ್ತಿದ್ದೀರಾ? ನೀವು ಸುರಕ್ಷಿತವಾಗಿರಲು ಬಯಸಿದರೆ ಮುಸ್ಲಿಂ ಹುಡುಗಿಯನ್ನು ಮದುವೆಯಾಗಿ” ಎಂದು ದುಷ್ಕರ್ಮಿಗಳು ಹೇಳುವುದನ್ನು ಕೇಳಬಹುದು ಎಂದು ದಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ತಿಳಿಸಿದೆ.

ಮಗದೊಂದು ವಿಡಿಯೋದಲ್ಲಿ ಪೊಲೀಸರು ಹಲ್ಲೆಗೊಳಗಾದ ಯುವಕನನ್ನು ಸ್ಥಳೀಯ ಎಂಪಿ ನಗರ ಪೊಲೀಸ್ ಠಾಣೆಗೆ ಕರೆದೊಯ್ಯಲು ವಾಹನದ ಕಡೆಗೆ ಕರೆದೊಯ್ಯುವಾಗಲೂ, ದುಷ್ಕರ್ಮಿಗಳು ಆತನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸುವುದನ್ನು ಕಾಣಬಹುದು ಎಂದು ವರದಿ ಹೇಳಿದೆ.

ಸ್ಥಳೀಯ ಹಿಂದುತ್ವ ಸಂಘಟನೆ ಸಂಸ್ಕೃತಿ ಬಚಾವೋ ಮಂಚ್‌ ಅನ್ನು ಪ್ರತಿನಿಧಿಸುವ ಚಂದ್ರಶೇಖರ್ ತಿವಾರಿ ಎಂಬಾತ “ಹಿಂದೂ ಯುವತಿಯನ್ನು ಮದುವೆಯಾಗಲು ಮುಂದಾಗಿದ್ದ ಮುಸ್ಲಿಂ ಯುವಕನ ಪ್ರಯತ್ನವನ್ನು ತಂತ್ರದ ಮೂಲಕ ವಿಫಲಗೊಳಿಸಿದ್ದೇವೆ” ಎಂದು ಹೇಳಿಕೊಂಡಿದ್ದಾರೆ.

“ಆತ ಲವ್ ಜಿಹಾದ್‌ನಲ್ಲಿ ತೊಡಗಿದ್ದ. ನಕಲಿ ಐಡಿ ಮೂಲಕ ಚಾಟ್ ಮಾಡಿ ಹಿಂದೂ ಯುವತಿಯನ್ನು ವಂಚಿಸಿದ್ದ. ಮದುವೆ ಮತ್ತು ನಂತರದ ಧಾರ್ಮಿಕ ಮತಾಂತರಕ್ಕಾಗಿ ಆಕೆಯನ್ನು ಅಕ್ರಮ ಸಂಬಂಧಕ್ಕೆ ಒತ್ತಾಯಿಸಿದ್ದ. ಮಧ್ಯಪ್ರದೇಶ ಧಾರ್ಮಿಕ ಸ್ವಾತಂತ್ರ್ಯ ಕಾಯ್ದೆಯಡಿ ನಾವು ಆತನ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ” ಎಂದು ತಿವಾರಿ ಹೇಳಿದ್ದಾಗಿ ವರದಿ ವಿವರಿಸಿದೆ.

ಹಿಂದುತ್ವ ಗುಂಪಿನ ಜೊತೆಗಿದ್ದ ವಕೀಲರೊಬ್ಬರು, “ಮುಸ್ಲಿಂ ಯುವಕ ನಕಲಿ ಅಫಿಡವಿಟ್ ಆಧಾರದ ಮೇಲೆ ಹಿಂದೂ ಯುವತಿಯನ್ನು ಮದುವೆಯಾಗಲು ಪ್ರಯತ್ನಿಸಿದ್ದಾನೆ” ಎಂದು ಆರೋಪಿಸಿದ್ದಾರೆ.

“ಹಿಂದೂ ಅರ್ಚಕನ ಮಗಳಾದ ಯುವತಿಯನ್ನು ಧಾರ್ಮಿಕ ಮತಾಂತರದ ಏಕೈಕ ಉದ್ದೇಶಕ್ಕಾಗಿ ಮುಸ್ಲಿಂ ವ್ಯಕ್ತಿ ಲವ್ ಜಿಹಾದ್ ಮಾಡಿ ವಂಚಿಸಿದ್ದಾನೆ. ಆತನ ಮೇಲಿನ ಹಲ್ಲೆಯ ಬಗ್ಗೆ ಕೇಳುವ ಮೊದಲು, ಲವ್ ಜಿಹಾದ್ ಮೂಲಕ ಧಾರ್ಮಿಕ ಮತಾಂತರಕ್ಕಾಗಿ ಹಿಂದೂ ಅರ್ಚಕನ ಮಗಳನ್ನು ತನ್ನೊಂದಿಗೆ ಏಕೆ ಕರೆತಂದಿದ್ದಾನೆ ಎಂದು ಕೇಳಿ” ಎಂದು ವಕೀಲ ಹೇಳಿದ್ದಾರೆ.

“ಭಿನ್ನ ಧರ್ಮದ ಯುವಕ ಮತ್ತು ಯುವತಿ ವಿವಾಹ ನೋಂದಣಿ ಮಾಡಿಕೊಳ್ಳಲು ನ್ಯಾಯಾಲಯಕ್ಕೆ ಬರುತ್ತಿರುವ ಬಗ್ಗೆ ಕೆಲ ವಕೀಲರು ಪೊಲೀಸರಿಗೆ ಮಾಹಿತಿ ನೀಡಿದ್ದರು. ನಾವು ಅಂತರ್ಧರ್ಮೀಯ ದಂಪತಿಗಳ ಹೇಳಿಕೆಗಳನ್ನು ದಾಖಲಿಸುತ್ತಿದ್ದೇವೆ. ಅವರ ಹೇಳಿಕೆಯ ಆಧಾರದ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು” ಎಂದು ಸಹಾಯಕ ಪೊಲೀಸ್ ಆಯುಕ್ತ (ಎಂಪಿ ನಗರ) ಅಕ್ಷಯ್ ಚೌಧರಿ ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಯುವಕ ಮೇಲಿನ ಹಲ್ಲೆಯ ವಿಡಿಯೋ ಹಂಚಿಕೊಂಡಿರುವವರು ಪೊಲೀಸರು ಹಲ್ಲೆ ನಡೆಸಿದ ದುಷ್ಕರ್ಮಿಗಳ ಬದಲು, ಹಲ್ಲೆಗೊಳಗಾದ ಯುವಕನನ್ನೇ ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ತಮಿಳುನಾಡು| ಗರ್ಭಿಣಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ; ರೈಲಿನಿಂದ ಹೊರಗೆ ತಳ್ಳಿದ ವಿಕೃತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...