Homeಮುಖಪುಟನ್ಯಾಯಾಲಯದಲ್ಲೇ ಮುಸ್ಲಿಂ ಯುವಕನಿಗೆ ಥಳಿಸಿದ ಹಿಂದುತ್ವ ಸಂಘಟನೆ ದುಷ್ಕರ್ಮಿಗಳು! : ವರದಿ

ನ್ಯಾಯಾಲಯದಲ್ಲೇ ಮುಸ್ಲಿಂ ಯುವಕನಿಗೆ ಥಳಿಸಿದ ಹಿಂದುತ್ವ ಸಂಘಟನೆ ದುಷ್ಕರ್ಮಿಗಳು! : ವರದಿ

- Advertisement -
- Advertisement -

ವಿಶೇಷ ವಿವಾಹ ಕಾಯ್ದೆಯಡಿ ಮದುವೆ ನೋಂದಣಿ ಮಾಡಿಕೊಳ್ಳಲು ನೆರೆಮನೆಯ ಬ್ರಾಹ್ಮಣ ಯುವತಿಯೊಂದಿಗೆ ಆಗಮಿಸಿದ್ದ ಮುಸ್ಲಿಂ ಯುವಕನಿಗೆ ಬಲಪಂಥೀಯ ಹಿಂದುತ್ವ ಸಂಘಟನೆಯ ದುಷ್ಕರ್ಮಿಗಳು ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಶುಕ್ರವಾರ (ಫೆ.7) ಮಧ್ಯಪ್ರದೇಶದ ಭೋಪಾಲ್ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ನಡೆದಿದೆ.

ನರ್ಮದಾಪುರಂ ಜಿಲ್ಲೆಯ ಪಿಪರಿಯಾ ಪ್ರದೇಶದ ಯುವಕ ಮತ್ತು ಯುವತಿ ತಮ್ಮ ವಿವಾಹ ನೋಂದಣಿಗೆ ನ್ಯಾಯಾಲಯಕ್ಕೆ ಆಗಮಿಸಿದ್ದರು. ಈ ವೇಳೆ ವಿಶ್ವ ಹಿಂದೂ ಪರಿಷತ್ (ವಿಹೆಚ್‌ಪಿ), ಸಂಸ್ಕೃತಿ ಬಚಾವೊ ಮಂಚ್ ಸೇರಿದಂತೆ ಬಲಪಂಥೀಯ ಹಿಂದುತ್ವ ಸಂಘಟನೆಯವರು ಯುವಕನಿಗೆ ಹಲ್ಲೆ ನಡೆಸಿದ್ದಾರೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಯುವಕನ ಮೇಲೆ ಹಲ್ಲೆ ನಡೆಸಿದ್ದು ಎನ್ನಲಾದ ವಿಡಿಯೋವೊಂದು ವೈರಲ್ ಆಗಿದ್ದು, ಅದರಲ್ಲಿ ಇಬ್ಬರು ವ್ಯಕ್ತಿಗಳು ಯುವಕನನ್ನು ನೆಲಕ್ಕೆ ಕೆಡವಿ, ಬೂಟುಗಾಲಿನಿಂದ ಆತನ ಮುಖಕ್ಕೆ ತುಳಿಯುತ್ತಿರುವ ದೃಶ್ಯವಿದೆ.

ಘಟನೆಗೆ ಸಂಬಂಧಿಸಿದಂತೆ ಮತ್ತೊಂದು ವಿಡಿಯೋ ವೈರಲ್ ಆಗಿದ್ದು, ಅದರಲ್ಲಿ ಯುವಕನ ಬಲ ಹುಬ್ಬಿನ ಬಳಿ ರಕ್ತಸ್ರಾವವಾಗುತ್ತಿರುವುದು ಕಂಡು ಬಂದಿದೆ. ವಿಡಿಯೋದಲ್ಲಿ “ನೀವು ಹಿಂದೂ ಹುಡುಗಿಯರ ಹಿಂದೆ ಏಕೆ ಇದ್ದೀರಿ? ಮತ್ತೆ ಲವ್ ಜಿಹಾದ್ ಮಾಡ್ತಿದ್ದೀರಾ? ನೀವು ಸುರಕ್ಷಿತವಾಗಿರಲು ಬಯಸಿದರೆ ಮುಸ್ಲಿಂ ಹುಡುಗಿಯನ್ನು ಮದುವೆಯಾಗಿ” ಎಂದು ದುಷ್ಕರ್ಮಿಗಳು ಹೇಳುವುದನ್ನು ಕೇಳಬಹುದು ಎಂದು ದಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ತಿಳಿಸಿದೆ.

ಮಗದೊಂದು ವಿಡಿಯೋದಲ್ಲಿ ಪೊಲೀಸರು ಹಲ್ಲೆಗೊಳಗಾದ ಯುವಕನನ್ನು ಸ್ಥಳೀಯ ಎಂಪಿ ನಗರ ಪೊಲೀಸ್ ಠಾಣೆಗೆ ಕರೆದೊಯ್ಯಲು ವಾಹನದ ಕಡೆಗೆ ಕರೆದೊಯ್ಯುವಾಗಲೂ, ದುಷ್ಕರ್ಮಿಗಳು ಆತನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸುವುದನ್ನು ಕಾಣಬಹುದು ಎಂದು ವರದಿ ಹೇಳಿದೆ.

ಸ್ಥಳೀಯ ಹಿಂದುತ್ವ ಸಂಘಟನೆ ಸಂಸ್ಕೃತಿ ಬಚಾವೋ ಮಂಚ್‌ ಅನ್ನು ಪ್ರತಿನಿಧಿಸುವ ಚಂದ್ರಶೇಖರ್ ತಿವಾರಿ ಎಂಬಾತ “ಹಿಂದೂ ಯುವತಿಯನ್ನು ಮದುವೆಯಾಗಲು ಮುಂದಾಗಿದ್ದ ಮುಸ್ಲಿಂ ಯುವಕನ ಪ್ರಯತ್ನವನ್ನು ತಂತ್ರದ ಮೂಲಕ ವಿಫಲಗೊಳಿಸಿದ್ದೇವೆ” ಎಂದು ಹೇಳಿಕೊಂಡಿದ್ದಾರೆ.

“ಆತ ಲವ್ ಜಿಹಾದ್‌ನಲ್ಲಿ ತೊಡಗಿದ್ದ. ನಕಲಿ ಐಡಿ ಮೂಲಕ ಚಾಟ್ ಮಾಡಿ ಹಿಂದೂ ಯುವತಿಯನ್ನು ವಂಚಿಸಿದ್ದ. ಮದುವೆ ಮತ್ತು ನಂತರದ ಧಾರ್ಮಿಕ ಮತಾಂತರಕ್ಕಾಗಿ ಆಕೆಯನ್ನು ಅಕ್ರಮ ಸಂಬಂಧಕ್ಕೆ ಒತ್ತಾಯಿಸಿದ್ದ. ಮಧ್ಯಪ್ರದೇಶ ಧಾರ್ಮಿಕ ಸ್ವಾತಂತ್ರ್ಯ ಕಾಯ್ದೆಯಡಿ ನಾವು ಆತನ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ” ಎಂದು ತಿವಾರಿ ಹೇಳಿದ್ದಾಗಿ ವರದಿ ವಿವರಿಸಿದೆ.

ಹಿಂದುತ್ವ ಗುಂಪಿನ ಜೊತೆಗಿದ್ದ ವಕೀಲರೊಬ್ಬರು, “ಮುಸ್ಲಿಂ ಯುವಕ ನಕಲಿ ಅಫಿಡವಿಟ್ ಆಧಾರದ ಮೇಲೆ ಹಿಂದೂ ಯುವತಿಯನ್ನು ಮದುವೆಯಾಗಲು ಪ್ರಯತ್ನಿಸಿದ್ದಾನೆ” ಎಂದು ಆರೋಪಿಸಿದ್ದಾರೆ.

“ಹಿಂದೂ ಅರ್ಚಕನ ಮಗಳಾದ ಯುವತಿಯನ್ನು ಧಾರ್ಮಿಕ ಮತಾಂತರದ ಏಕೈಕ ಉದ್ದೇಶಕ್ಕಾಗಿ ಮುಸ್ಲಿಂ ವ್ಯಕ್ತಿ ಲವ್ ಜಿಹಾದ್ ಮಾಡಿ ವಂಚಿಸಿದ್ದಾನೆ. ಆತನ ಮೇಲಿನ ಹಲ್ಲೆಯ ಬಗ್ಗೆ ಕೇಳುವ ಮೊದಲು, ಲವ್ ಜಿಹಾದ್ ಮೂಲಕ ಧಾರ್ಮಿಕ ಮತಾಂತರಕ್ಕಾಗಿ ಹಿಂದೂ ಅರ್ಚಕನ ಮಗಳನ್ನು ತನ್ನೊಂದಿಗೆ ಏಕೆ ಕರೆತಂದಿದ್ದಾನೆ ಎಂದು ಕೇಳಿ” ಎಂದು ವಕೀಲ ಹೇಳಿದ್ದಾರೆ.

“ಭಿನ್ನ ಧರ್ಮದ ಯುವಕ ಮತ್ತು ಯುವತಿ ವಿವಾಹ ನೋಂದಣಿ ಮಾಡಿಕೊಳ್ಳಲು ನ್ಯಾಯಾಲಯಕ್ಕೆ ಬರುತ್ತಿರುವ ಬಗ್ಗೆ ಕೆಲ ವಕೀಲರು ಪೊಲೀಸರಿಗೆ ಮಾಹಿತಿ ನೀಡಿದ್ದರು. ನಾವು ಅಂತರ್ಧರ್ಮೀಯ ದಂಪತಿಗಳ ಹೇಳಿಕೆಗಳನ್ನು ದಾಖಲಿಸುತ್ತಿದ್ದೇವೆ. ಅವರ ಹೇಳಿಕೆಯ ಆಧಾರದ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು” ಎಂದು ಸಹಾಯಕ ಪೊಲೀಸ್ ಆಯುಕ್ತ (ಎಂಪಿ ನಗರ) ಅಕ್ಷಯ್ ಚೌಧರಿ ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಯುವಕ ಮೇಲಿನ ಹಲ್ಲೆಯ ವಿಡಿಯೋ ಹಂಚಿಕೊಂಡಿರುವವರು ಪೊಲೀಸರು ಹಲ್ಲೆ ನಡೆಸಿದ ದುಷ್ಕರ್ಮಿಗಳ ಬದಲು, ಹಲ್ಲೆಗೊಳಗಾದ ಯುವಕನನ್ನೇ ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ತಮಿಳುನಾಡು| ಗರ್ಭಿಣಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ; ರೈಲಿನಿಂದ ಹೊರಗೆ ತಳ್ಳಿದ ವಿಕೃತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...