Homeಮುಖಪುಟಗಣಪತಿ ಮೂರ್ತಿ ಬಳಿ ಇಟ್ಟಿದ್ದ ಬಾಳೆಹಣ್ಣು ಕೊಂಡೊಯ್ದ ಶಂಕೆ: ಮುಸ್ಲಿಂ ಯುವಕನನ್ನು ಕಂಬಕ್ಕೆ ಕಟ್ಟಿ ಥಳಿಸಿ...

ಗಣಪತಿ ಮೂರ್ತಿ ಬಳಿ ಇಟ್ಟಿದ್ದ ಬಾಳೆಹಣ್ಣು ಕೊಂಡೊಯ್ದ ಶಂಕೆ: ಮುಸ್ಲಿಂ ಯುವಕನನ್ನು ಕಂಬಕ್ಕೆ ಕಟ್ಟಿ ಥಳಿಸಿ ಹತ್ಯೆ

- Advertisement -
- Advertisement -

ಗಣಪತಿ ಮೂರ್ತಿ ಬಳಿ ನೈವೇದ್ಯಕ್ಕೆಂದು ಇಡಲಾಗಿದ್ದ ಬಾಳೆಹಣ್ಣನ್ನು ಕೊಂಡೊಯ್ದ ಶಂಕೆಯಲ್ಲಿ ಮುಸ್ಲಿಂ ಯುವಕನನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಹಾಕಿ ಅಮಾನುಷವಾಗಿ ಥಳಿಸಲಾಗಿದ್ದು, ಆತ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.

ಇಸಾರ್ ಮೊಹಮ್ಮದ್ (26) ಥಳಿತದಿಂದ ಮೃತಪಟ್ಟ ಯುವಕನಾಗಿದ್ದಾನೆ. ಈತ ದೆಹಲಿಯ ಸುಂದರ್ ನಗರಿ ಪ್ರದೇಶದಲ್ಲಿ ವಾಸಿಸುತ್ತಿದ್ದನು.

ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಇದುವರೆಗೆ 17 ವರ್ಷದ ಅಪ್ರಾಪ್ತ ಸೇರಿ 7 ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ದುಷ್ಕರ್ಮಿಗಳನ್ನು ಕಮಲ್, ಮನೋಜ್, ಯೂನಸ್, ಕಿಶನ್, ಲಕ್ಕಿ ಮತ್ತು ಪಪ್ಪು ಎಂದು ಗುರುತಿಸಲಾಗಿದೆ.

ಸುಂದರ್ ನಗರಿ ಪ್ರದೇಶದ ಜಿ4 ಬ್ಲಾಕ್‌ನಲ್ಲಿ ಗಣೇಶ ಚತುರ್ಥಿ ಆಚರಣೆಗೆ ಗಣಪತಿ ವಿಗ್ರಹವನ್ನು ಪ್ರತಿಷ್ಠಾಪಿಸಲಾಗಿತ್ತು. ಕಿರಿದಾದ ಓಣಿಯಲ್ಲಿ ವೇದಿಕೆ ಸಜ್ಜುಗೊಳಿಸಲಾಗಿತ್ತು. ಸೆ.27ರಂದು ಬೆಳಗ್ಗೆ ಗಣಪತಿ ಮೂರ್ತಿಯ ಮುಂದೆ ಇಟ್ಟಿದ್ದ ಬಾಳೆಹಣ್ಣು ಇಸಾರ್ ಎತ್ತಿಕೊಂಡು ಬಂದಿದ್ದ ಎಂದು ಆರೋಪಿಸಿ 8- 10 ಮಂದಿ ಆತನನ್ನು ಹಿಡಿದು ವೇದಿಕೆಯಿಂದ ಕೇವಲ 20 ಅಡಿ ದೂರದಲ್ಲಿರುವ ವಿದ್ಯುತ್ ಕಂಬಕ್ಕೆ ಕಟ್ಟಿ ಸುಮಾರು ಎರಡು ಗಂಟೆಗಳ ಕಾಲ ತೀವ್ರವಾಗಿ ಥಳಿಸಿದ್ದಾರೆ. ಹಲ್ಲೆಯ ವೀಡಿಯೊಗಳನ್ನು ರೆಕಾರ್ಡ್ ಮಾಡಲಾಗಿದೆ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಅದನ್ನು ವೈರಲ್‌ ಮಾಡಲಾಗಿದೆ.

G4 ಬ್ಲಾಕ್‌ನ ನಿವಾಸಿಯೊಬ್ಬರು ಈ ಬಗ್ಗೆ ಮಾತನಾಡಿದ್ದು,ಬೆಳಿಗ್ಗೆ 4.30 ರ ಸುಮಾರಿಗೆ ನಾನು ಜೋರಾಗಿ ಕಿರುಚಾಟ ಕೇಳಿ ಎಚ್ಚರಗೊಂಡೆ. ನಾನು ಹೊರಗೆ ಬಂದಾಗ ಜನರ ಗುಂಪೊಂದು ಯಾರನ್ನೋ ಅಮಾನುಷವಾಗಿ ಥಳಿಸುತ್ತಿರುವುದನ್ನು ಕಂಡು ಗಾಬರಿಯಾಯಿತು. ಈ ವೇಳೆ ನೆರೆಹೊರೆಗೆ ಎಚ್ಚರಿಸಿದೆ ಎಂದು ಹೇಳಿದ್ದಾರೆ.

ಇಸಾರ್ ಗಂಭೀರವಾಗಿ ಗಾಯಗೊಂಡು ಚಲಿಸಲು ಸಾಧ್ಯವಾಗಲಿಲ್ಲ. ಅವರನ್ನು ಮನೆಗೆ ಹೇಗೆ ಕರೆದುಕೊಂಡು ಹೋಗಲಾಗಿದೆ ಎಂದು ತಿಳಿದಿಲ್ಲ. ಘಟನೆ ನಡೆದ ಸ್ಥಳದಿಂದ ಕೇವಲ 200 ಮೀಟರ್ ದೂರದಲ್ಲಿ ಇಸಾರ್ ಅವರ ಮನೆ ಇದೆ. ಅಲ್ಲಿ ಬುಧವಾರ ಸಂಜೆ 5 ಗಂಟೆ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ.

ಇಸಾರ್ ತಂದೆ ವಾಜಿದ್ ಹಣ್ಣು ಮಾರಾಟಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಅವರಿಗೆ ನಾಲ್ವರು ಪುತ್ರಿಯರಿದ್ದಾರೆ. ಇಸಾರ್ ಅವರ ತಾಯಿ ಕೆಲವು ವರ್ಷಗಳ ಹಿಂದೆ ನಿಧನರಾಗಿದ್ದರು.

ಗಣಪತಿಗೆ ಅರ್ಪಿಸಿದ ಪ್ರಸಾದವನ್ನು ತೆಗೆದುಕೊಂಡಿದ್ದಾನೆಂದು ಅವರು ನನ್ನ ಮಗನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ನಾನು ಅರಿತುಕೊಂಡೆ. ಅವರು ನನ್ನ ಮಗನ ಕೈ ಮತ್ತು ಕಾಲುಗಳನ್ನು ಬಿಗಿಯಾಗಿ ಕಟ್ಟಿಹಾಕಿದ್ದಾರೆ. ನೀರು ಕೇಳಿದರೂ ಕೊಡದೆ ಅವರು ಅವನಿಗೆ ಅಮಾನವೀಯವಾಗಿ ಥಳಿಸಿದ್ದಾರೆ. ನಮಗೆ ನ್ಯಾಯ ಬೇಕು. ನಾನು ಹಲವು ಬಾರಿ ಪ್ರಸಾದ ತಿಂದಿದ್ದೇನೆ. ಇಲ್ಲಿನ ಹಿಂದೂ ಬಾಂಧವರು ನನಗೆ ಪ್ರಸಾದ ಕೊಟ್ಟಿದ್ದಾರೆ. ನನ್ನ ಮಗನ ಅಗಲಿಕೆ ನಮ್ಮ ಜೀವನವನ್ನು ಛಿದ್ರಗೊಳಿಸಿದೆ ಎಂದು ಇಸಾರ್ ತಂದೆ ವಾಜಿದ್ ದಿ ವೈರ್‌ ಜೊತೆ ಮಾತನಾಡುತ್ತಾ ಕಣ್ಣೀರು ಹಾಕಿದ್ದಾರೆ.

ಮತ್ತೊಬ್ಬ ಸ್ಥಳೀಯ ಶ್ಯಾಮ್ ಅವರು ಈ ಬಗ್ಗೆ ಮಾತನಾಡಿದ್ದು, ಇಸಾರ್ ಪರಿಚಿತ, ಕಳ್ಳತನ ಮಾಡಿದ್ದಾನೆಂದು ಅವನನ್ನು ಥಳಿಸಲಾಯಿತು ಎಂದು ಕೆಲವರು ಹೇಳಿಕೊಂಡಿದ್ದಾರೆ. ಅವನು ನಿರಪರಾಧಿ ಎಂದು ನಾನು ಬಲವಾಗಿ ನಂಬುತ್ತೇನೆ. ಅವನು ಇತರರಿಗೆ ಸಹಾಯ ಮಾಡುತ್ತಿದ್ದ ಮತ್ತು ಅವನು ಕಳ್ಳತನ ಈವರೆಗೆ ಮಾಡಿದ ಬಗ್ಗೆ ಯಾವುದೇ ಸಾಕ್ಷಿ ಇಲ್ಲ ಎಂದು ಹೇಳಿದ್ದಾರೆ.

ಈಶಾನ್ಯ ಡಿಸಿಪಿ ಜಾಯ್ ಎನ್ ಟಿರ್ಕಿ ಈ ಬಗ್ಗೆ ಮಾತನಾಡಿದ್ದು , ಮುಂಜಾನೆ 5 ಗಂಟೆಯ ಸುಮಾರಿಗೆ ಅವರು ಇಸಾರ್‌ನನ್ನು ಹಿಡಿದಿದ್ದಾರೆ. ಕಳ್ಳನೆಂದು ಭಾವಿಸಿ ಆತನಿಗೆ ಪ್ರಶ್ನೆಗಳನ್ನು ಕೇಳಿದರು ಆದರೆ ಅವರು ಮಾನಸಿಕವಾಗಿ ಅಸ್ವಸ್ಥರಾಗಿದ್ದರಿಂದ ಸರಿಯಾಗಿ ಉತ್ತರಿಸಲು ಸಾಧ್ಯವಾಗಲಿಲ್ಲ. ನಂತರ ವಿದ್ಯುತ್ ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದ್ದಾರೆ ಎಂದು ಹೇಳಿದ್ದಾರೆ.

ಇಸಾರ್‌ನ ನೆರೆಹೊರೆಯವರು ಮತ್ತು ಕುಟುಂಬದ ಸದಸ್ಯರು ಅವರು ಮಾನಸಿಕವಾಗಿ ಅಸ್ವಸ್ಥರಾಗಿದ್ದರು ಎಂಬ ಹೇಳಿಕೆಯನ್ನು ಸುಳ್ಳು ಎಂದು ಹೇಳಿದ್ದಾರೆ.

ನೆರೆಹೊರೆಯವರಾದ ಮೊಹಮ್ಮದ್ ಸಮೀಮ್ ಈ ಕುರಿತು ಮಾತನಾಡಿದ್ದು, ಇಸಾರ್ ಯಾವುದೇ ಮಾನಸಿಕ ಅಸ್ವಸ್ಥ ಯುವಕ ಅಲ್ಲ. ನಾನು ಅವರನ್ನು ಬಹಳ ಸಮಯದಿಂದ ಬಲ್ಲೆ. ಅವರ ಮೇಲಿನ ಕಳ್ಳತನದ ಆರೋಪ ನಿರಾಧಾರ. ಅವರು ಕೇವಲ ಮುಸ್ಲಿಂ ಮತ್ತು ಪ್ರಸಾದ ತೆಗೆದುಕೊಂಡ ಕಾರಣಕ್ಕಾಗಿ ಈ ಕ್ರೌರ್ಯಕ್ಕೆ ಒಳಗಾಗಿ ಹತ್ಯೆಯಾಗಿದ್ದಾರೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಗುಜರಾತ್‌: ದಲಿತ ಇಂಜಿನಿಯರ್‌ಗೆ ಜಾತಿ ನಿಂದಿಸಿ ಥಳಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...