Homeಮುಖಪುಟಗಣಪತಿ ಮೂರ್ತಿ ಬಳಿ ಇಟ್ಟಿದ್ದ ಬಾಳೆಹಣ್ಣು ಕೊಂಡೊಯ್ದ ಶಂಕೆ: ಮುಸ್ಲಿಂ ಯುವಕನನ್ನು ಕಂಬಕ್ಕೆ ಕಟ್ಟಿ ಥಳಿಸಿ...

ಗಣಪತಿ ಮೂರ್ತಿ ಬಳಿ ಇಟ್ಟಿದ್ದ ಬಾಳೆಹಣ್ಣು ಕೊಂಡೊಯ್ದ ಶಂಕೆ: ಮುಸ್ಲಿಂ ಯುವಕನನ್ನು ಕಂಬಕ್ಕೆ ಕಟ್ಟಿ ಥಳಿಸಿ ಹತ್ಯೆ

- Advertisement -
- Advertisement -

ಗಣಪತಿ ಮೂರ್ತಿ ಬಳಿ ನೈವೇದ್ಯಕ್ಕೆಂದು ಇಡಲಾಗಿದ್ದ ಬಾಳೆಹಣ್ಣನ್ನು ಕೊಂಡೊಯ್ದ ಶಂಕೆಯಲ್ಲಿ ಮುಸ್ಲಿಂ ಯುವಕನನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಹಾಕಿ ಅಮಾನುಷವಾಗಿ ಥಳಿಸಲಾಗಿದ್ದು, ಆತ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.

ಇಸಾರ್ ಮೊಹಮ್ಮದ್ (26) ಥಳಿತದಿಂದ ಮೃತಪಟ್ಟ ಯುವಕನಾಗಿದ್ದಾನೆ. ಈತ ದೆಹಲಿಯ ಸುಂದರ್ ನಗರಿ ಪ್ರದೇಶದಲ್ಲಿ ವಾಸಿಸುತ್ತಿದ್ದನು.

ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಇದುವರೆಗೆ 17 ವರ್ಷದ ಅಪ್ರಾಪ್ತ ಸೇರಿ 7 ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ದುಷ್ಕರ್ಮಿಗಳನ್ನು ಕಮಲ್, ಮನೋಜ್, ಯೂನಸ್, ಕಿಶನ್, ಲಕ್ಕಿ ಮತ್ತು ಪಪ್ಪು ಎಂದು ಗುರುತಿಸಲಾಗಿದೆ.

ಸುಂದರ್ ನಗರಿ ಪ್ರದೇಶದ ಜಿ4 ಬ್ಲಾಕ್‌ನಲ್ಲಿ ಗಣೇಶ ಚತುರ್ಥಿ ಆಚರಣೆಗೆ ಗಣಪತಿ ವಿಗ್ರಹವನ್ನು ಪ್ರತಿಷ್ಠಾಪಿಸಲಾಗಿತ್ತು. ಕಿರಿದಾದ ಓಣಿಯಲ್ಲಿ ವೇದಿಕೆ ಸಜ್ಜುಗೊಳಿಸಲಾಗಿತ್ತು. ಸೆ.27ರಂದು ಬೆಳಗ್ಗೆ ಗಣಪತಿ ಮೂರ್ತಿಯ ಮುಂದೆ ಇಟ್ಟಿದ್ದ ಬಾಳೆಹಣ್ಣು ಇಸಾರ್ ಎತ್ತಿಕೊಂಡು ಬಂದಿದ್ದ ಎಂದು ಆರೋಪಿಸಿ 8- 10 ಮಂದಿ ಆತನನ್ನು ಹಿಡಿದು ವೇದಿಕೆಯಿಂದ ಕೇವಲ 20 ಅಡಿ ದೂರದಲ್ಲಿರುವ ವಿದ್ಯುತ್ ಕಂಬಕ್ಕೆ ಕಟ್ಟಿ ಸುಮಾರು ಎರಡು ಗಂಟೆಗಳ ಕಾಲ ತೀವ್ರವಾಗಿ ಥಳಿಸಿದ್ದಾರೆ. ಹಲ್ಲೆಯ ವೀಡಿಯೊಗಳನ್ನು ರೆಕಾರ್ಡ್ ಮಾಡಲಾಗಿದೆ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಅದನ್ನು ವೈರಲ್‌ ಮಾಡಲಾಗಿದೆ.

G4 ಬ್ಲಾಕ್‌ನ ನಿವಾಸಿಯೊಬ್ಬರು ಈ ಬಗ್ಗೆ ಮಾತನಾಡಿದ್ದು,ಬೆಳಿಗ್ಗೆ 4.30 ರ ಸುಮಾರಿಗೆ ನಾನು ಜೋರಾಗಿ ಕಿರುಚಾಟ ಕೇಳಿ ಎಚ್ಚರಗೊಂಡೆ. ನಾನು ಹೊರಗೆ ಬಂದಾಗ ಜನರ ಗುಂಪೊಂದು ಯಾರನ್ನೋ ಅಮಾನುಷವಾಗಿ ಥಳಿಸುತ್ತಿರುವುದನ್ನು ಕಂಡು ಗಾಬರಿಯಾಯಿತು. ಈ ವೇಳೆ ನೆರೆಹೊರೆಗೆ ಎಚ್ಚರಿಸಿದೆ ಎಂದು ಹೇಳಿದ್ದಾರೆ.

ಇಸಾರ್ ಗಂಭೀರವಾಗಿ ಗಾಯಗೊಂಡು ಚಲಿಸಲು ಸಾಧ್ಯವಾಗಲಿಲ್ಲ. ಅವರನ್ನು ಮನೆಗೆ ಹೇಗೆ ಕರೆದುಕೊಂಡು ಹೋಗಲಾಗಿದೆ ಎಂದು ತಿಳಿದಿಲ್ಲ. ಘಟನೆ ನಡೆದ ಸ್ಥಳದಿಂದ ಕೇವಲ 200 ಮೀಟರ್ ದೂರದಲ್ಲಿ ಇಸಾರ್ ಅವರ ಮನೆ ಇದೆ. ಅಲ್ಲಿ ಬುಧವಾರ ಸಂಜೆ 5 ಗಂಟೆ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ.

ಇಸಾರ್ ತಂದೆ ವಾಜಿದ್ ಹಣ್ಣು ಮಾರಾಟಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಅವರಿಗೆ ನಾಲ್ವರು ಪುತ್ರಿಯರಿದ್ದಾರೆ. ಇಸಾರ್ ಅವರ ತಾಯಿ ಕೆಲವು ವರ್ಷಗಳ ಹಿಂದೆ ನಿಧನರಾಗಿದ್ದರು.

ಗಣಪತಿಗೆ ಅರ್ಪಿಸಿದ ಪ್ರಸಾದವನ್ನು ತೆಗೆದುಕೊಂಡಿದ್ದಾನೆಂದು ಅವರು ನನ್ನ ಮಗನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ನಾನು ಅರಿತುಕೊಂಡೆ. ಅವರು ನನ್ನ ಮಗನ ಕೈ ಮತ್ತು ಕಾಲುಗಳನ್ನು ಬಿಗಿಯಾಗಿ ಕಟ್ಟಿಹಾಕಿದ್ದಾರೆ. ನೀರು ಕೇಳಿದರೂ ಕೊಡದೆ ಅವರು ಅವನಿಗೆ ಅಮಾನವೀಯವಾಗಿ ಥಳಿಸಿದ್ದಾರೆ. ನಮಗೆ ನ್ಯಾಯ ಬೇಕು. ನಾನು ಹಲವು ಬಾರಿ ಪ್ರಸಾದ ತಿಂದಿದ್ದೇನೆ. ಇಲ್ಲಿನ ಹಿಂದೂ ಬಾಂಧವರು ನನಗೆ ಪ್ರಸಾದ ಕೊಟ್ಟಿದ್ದಾರೆ. ನನ್ನ ಮಗನ ಅಗಲಿಕೆ ನಮ್ಮ ಜೀವನವನ್ನು ಛಿದ್ರಗೊಳಿಸಿದೆ ಎಂದು ಇಸಾರ್ ತಂದೆ ವಾಜಿದ್ ದಿ ವೈರ್‌ ಜೊತೆ ಮಾತನಾಡುತ್ತಾ ಕಣ್ಣೀರು ಹಾಕಿದ್ದಾರೆ.

ಮತ್ತೊಬ್ಬ ಸ್ಥಳೀಯ ಶ್ಯಾಮ್ ಅವರು ಈ ಬಗ್ಗೆ ಮಾತನಾಡಿದ್ದು, ಇಸಾರ್ ಪರಿಚಿತ, ಕಳ್ಳತನ ಮಾಡಿದ್ದಾನೆಂದು ಅವನನ್ನು ಥಳಿಸಲಾಯಿತು ಎಂದು ಕೆಲವರು ಹೇಳಿಕೊಂಡಿದ್ದಾರೆ. ಅವನು ನಿರಪರಾಧಿ ಎಂದು ನಾನು ಬಲವಾಗಿ ನಂಬುತ್ತೇನೆ. ಅವನು ಇತರರಿಗೆ ಸಹಾಯ ಮಾಡುತ್ತಿದ್ದ ಮತ್ತು ಅವನು ಕಳ್ಳತನ ಈವರೆಗೆ ಮಾಡಿದ ಬಗ್ಗೆ ಯಾವುದೇ ಸಾಕ್ಷಿ ಇಲ್ಲ ಎಂದು ಹೇಳಿದ್ದಾರೆ.

ಈಶಾನ್ಯ ಡಿಸಿಪಿ ಜಾಯ್ ಎನ್ ಟಿರ್ಕಿ ಈ ಬಗ್ಗೆ ಮಾತನಾಡಿದ್ದು , ಮುಂಜಾನೆ 5 ಗಂಟೆಯ ಸುಮಾರಿಗೆ ಅವರು ಇಸಾರ್‌ನನ್ನು ಹಿಡಿದಿದ್ದಾರೆ. ಕಳ್ಳನೆಂದು ಭಾವಿಸಿ ಆತನಿಗೆ ಪ್ರಶ್ನೆಗಳನ್ನು ಕೇಳಿದರು ಆದರೆ ಅವರು ಮಾನಸಿಕವಾಗಿ ಅಸ್ವಸ್ಥರಾಗಿದ್ದರಿಂದ ಸರಿಯಾಗಿ ಉತ್ತರಿಸಲು ಸಾಧ್ಯವಾಗಲಿಲ್ಲ. ನಂತರ ವಿದ್ಯುತ್ ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದ್ದಾರೆ ಎಂದು ಹೇಳಿದ್ದಾರೆ.

ಇಸಾರ್‌ನ ನೆರೆಹೊರೆಯವರು ಮತ್ತು ಕುಟುಂಬದ ಸದಸ್ಯರು ಅವರು ಮಾನಸಿಕವಾಗಿ ಅಸ್ವಸ್ಥರಾಗಿದ್ದರು ಎಂಬ ಹೇಳಿಕೆಯನ್ನು ಸುಳ್ಳು ಎಂದು ಹೇಳಿದ್ದಾರೆ.

ನೆರೆಹೊರೆಯವರಾದ ಮೊಹಮ್ಮದ್ ಸಮೀಮ್ ಈ ಕುರಿತು ಮಾತನಾಡಿದ್ದು, ಇಸಾರ್ ಯಾವುದೇ ಮಾನಸಿಕ ಅಸ್ವಸ್ಥ ಯುವಕ ಅಲ್ಲ. ನಾನು ಅವರನ್ನು ಬಹಳ ಸಮಯದಿಂದ ಬಲ್ಲೆ. ಅವರ ಮೇಲಿನ ಕಳ್ಳತನದ ಆರೋಪ ನಿರಾಧಾರ. ಅವರು ಕೇವಲ ಮುಸ್ಲಿಂ ಮತ್ತು ಪ್ರಸಾದ ತೆಗೆದುಕೊಂಡ ಕಾರಣಕ್ಕಾಗಿ ಈ ಕ್ರೌರ್ಯಕ್ಕೆ ಒಳಗಾಗಿ ಹತ್ಯೆಯಾಗಿದ್ದಾರೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಗುಜರಾತ್‌: ದಲಿತ ಇಂಜಿನಿಯರ್‌ಗೆ ಜಾತಿ ನಿಂದಿಸಿ ಥಳಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...