Homeಮುಖಪುಟಗಣಪತಿ ಮೂರ್ತಿ ಬಳಿ ಇಟ್ಟಿದ್ದ ಬಾಳೆಹಣ್ಣು ಕೊಂಡೊಯ್ದ ಶಂಕೆ: ಮುಸ್ಲಿಂ ಯುವಕನನ್ನು ಕಂಬಕ್ಕೆ ಕಟ್ಟಿ ಥಳಿಸಿ...

ಗಣಪತಿ ಮೂರ್ತಿ ಬಳಿ ಇಟ್ಟಿದ್ದ ಬಾಳೆಹಣ್ಣು ಕೊಂಡೊಯ್ದ ಶಂಕೆ: ಮುಸ್ಲಿಂ ಯುವಕನನ್ನು ಕಂಬಕ್ಕೆ ಕಟ್ಟಿ ಥಳಿಸಿ ಹತ್ಯೆ

- Advertisement -
- Advertisement -

ಗಣಪತಿ ಮೂರ್ತಿ ಬಳಿ ನೈವೇದ್ಯಕ್ಕೆಂದು ಇಡಲಾಗಿದ್ದ ಬಾಳೆಹಣ್ಣನ್ನು ಕೊಂಡೊಯ್ದ ಶಂಕೆಯಲ್ಲಿ ಮುಸ್ಲಿಂ ಯುವಕನನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಹಾಕಿ ಅಮಾನುಷವಾಗಿ ಥಳಿಸಲಾಗಿದ್ದು, ಆತ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.

ಇಸಾರ್ ಮೊಹಮ್ಮದ್ (26) ಥಳಿತದಿಂದ ಮೃತಪಟ್ಟ ಯುವಕನಾಗಿದ್ದಾನೆ. ಈತ ದೆಹಲಿಯ ಸುಂದರ್ ನಗರಿ ಪ್ರದೇಶದಲ್ಲಿ ವಾಸಿಸುತ್ತಿದ್ದನು.

ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಇದುವರೆಗೆ 17 ವರ್ಷದ ಅಪ್ರಾಪ್ತ ಸೇರಿ 7 ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ದುಷ್ಕರ್ಮಿಗಳನ್ನು ಕಮಲ್, ಮನೋಜ್, ಯೂನಸ್, ಕಿಶನ್, ಲಕ್ಕಿ ಮತ್ತು ಪಪ್ಪು ಎಂದು ಗುರುತಿಸಲಾಗಿದೆ.

ಸುಂದರ್ ನಗರಿ ಪ್ರದೇಶದ ಜಿ4 ಬ್ಲಾಕ್‌ನಲ್ಲಿ ಗಣೇಶ ಚತುರ್ಥಿ ಆಚರಣೆಗೆ ಗಣಪತಿ ವಿಗ್ರಹವನ್ನು ಪ್ರತಿಷ್ಠಾಪಿಸಲಾಗಿತ್ತು. ಕಿರಿದಾದ ಓಣಿಯಲ್ಲಿ ವೇದಿಕೆ ಸಜ್ಜುಗೊಳಿಸಲಾಗಿತ್ತು. ಸೆ.27ರಂದು ಬೆಳಗ್ಗೆ ಗಣಪತಿ ಮೂರ್ತಿಯ ಮುಂದೆ ಇಟ್ಟಿದ್ದ ಬಾಳೆಹಣ್ಣು ಇಸಾರ್ ಎತ್ತಿಕೊಂಡು ಬಂದಿದ್ದ ಎಂದು ಆರೋಪಿಸಿ 8- 10 ಮಂದಿ ಆತನನ್ನು ಹಿಡಿದು ವೇದಿಕೆಯಿಂದ ಕೇವಲ 20 ಅಡಿ ದೂರದಲ್ಲಿರುವ ವಿದ್ಯುತ್ ಕಂಬಕ್ಕೆ ಕಟ್ಟಿ ಸುಮಾರು ಎರಡು ಗಂಟೆಗಳ ಕಾಲ ತೀವ್ರವಾಗಿ ಥಳಿಸಿದ್ದಾರೆ. ಹಲ್ಲೆಯ ವೀಡಿಯೊಗಳನ್ನು ರೆಕಾರ್ಡ್ ಮಾಡಲಾಗಿದೆ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಅದನ್ನು ವೈರಲ್‌ ಮಾಡಲಾಗಿದೆ.

G4 ಬ್ಲಾಕ್‌ನ ನಿವಾಸಿಯೊಬ್ಬರು ಈ ಬಗ್ಗೆ ಮಾತನಾಡಿದ್ದು,ಬೆಳಿಗ್ಗೆ 4.30 ರ ಸುಮಾರಿಗೆ ನಾನು ಜೋರಾಗಿ ಕಿರುಚಾಟ ಕೇಳಿ ಎಚ್ಚರಗೊಂಡೆ. ನಾನು ಹೊರಗೆ ಬಂದಾಗ ಜನರ ಗುಂಪೊಂದು ಯಾರನ್ನೋ ಅಮಾನುಷವಾಗಿ ಥಳಿಸುತ್ತಿರುವುದನ್ನು ಕಂಡು ಗಾಬರಿಯಾಯಿತು. ಈ ವೇಳೆ ನೆರೆಹೊರೆಗೆ ಎಚ್ಚರಿಸಿದೆ ಎಂದು ಹೇಳಿದ್ದಾರೆ.

ಇಸಾರ್ ಗಂಭೀರವಾಗಿ ಗಾಯಗೊಂಡು ಚಲಿಸಲು ಸಾಧ್ಯವಾಗಲಿಲ್ಲ. ಅವರನ್ನು ಮನೆಗೆ ಹೇಗೆ ಕರೆದುಕೊಂಡು ಹೋಗಲಾಗಿದೆ ಎಂದು ತಿಳಿದಿಲ್ಲ. ಘಟನೆ ನಡೆದ ಸ್ಥಳದಿಂದ ಕೇವಲ 200 ಮೀಟರ್ ದೂರದಲ್ಲಿ ಇಸಾರ್ ಅವರ ಮನೆ ಇದೆ. ಅಲ್ಲಿ ಬುಧವಾರ ಸಂಜೆ 5 ಗಂಟೆ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ.

ಇಸಾರ್ ತಂದೆ ವಾಜಿದ್ ಹಣ್ಣು ಮಾರಾಟಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಅವರಿಗೆ ನಾಲ್ವರು ಪುತ್ರಿಯರಿದ್ದಾರೆ. ಇಸಾರ್ ಅವರ ತಾಯಿ ಕೆಲವು ವರ್ಷಗಳ ಹಿಂದೆ ನಿಧನರಾಗಿದ್ದರು.

ಗಣಪತಿಗೆ ಅರ್ಪಿಸಿದ ಪ್ರಸಾದವನ್ನು ತೆಗೆದುಕೊಂಡಿದ್ದಾನೆಂದು ಅವರು ನನ್ನ ಮಗನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ನಾನು ಅರಿತುಕೊಂಡೆ. ಅವರು ನನ್ನ ಮಗನ ಕೈ ಮತ್ತು ಕಾಲುಗಳನ್ನು ಬಿಗಿಯಾಗಿ ಕಟ್ಟಿಹಾಕಿದ್ದಾರೆ. ನೀರು ಕೇಳಿದರೂ ಕೊಡದೆ ಅವರು ಅವನಿಗೆ ಅಮಾನವೀಯವಾಗಿ ಥಳಿಸಿದ್ದಾರೆ. ನಮಗೆ ನ್ಯಾಯ ಬೇಕು. ನಾನು ಹಲವು ಬಾರಿ ಪ್ರಸಾದ ತಿಂದಿದ್ದೇನೆ. ಇಲ್ಲಿನ ಹಿಂದೂ ಬಾಂಧವರು ನನಗೆ ಪ್ರಸಾದ ಕೊಟ್ಟಿದ್ದಾರೆ. ನನ್ನ ಮಗನ ಅಗಲಿಕೆ ನಮ್ಮ ಜೀವನವನ್ನು ಛಿದ್ರಗೊಳಿಸಿದೆ ಎಂದು ಇಸಾರ್ ತಂದೆ ವಾಜಿದ್ ದಿ ವೈರ್‌ ಜೊತೆ ಮಾತನಾಡುತ್ತಾ ಕಣ್ಣೀರು ಹಾಕಿದ್ದಾರೆ.

ಮತ್ತೊಬ್ಬ ಸ್ಥಳೀಯ ಶ್ಯಾಮ್ ಅವರು ಈ ಬಗ್ಗೆ ಮಾತನಾಡಿದ್ದು, ಇಸಾರ್ ಪರಿಚಿತ, ಕಳ್ಳತನ ಮಾಡಿದ್ದಾನೆಂದು ಅವನನ್ನು ಥಳಿಸಲಾಯಿತು ಎಂದು ಕೆಲವರು ಹೇಳಿಕೊಂಡಿದ್ದಾರೆ. ಅವನು ನಿರಪರಾಧಿ ಎಂದು ನಾನು ಬಲವಾಗಿ ನಂಬುತ್ತೇನೆ. ಅವನು ಇತರರಿಗೆ ಸಹಾಯ ಮಾಡುತ್ತಿದ್ದ ಮತ್ತು ಅವನು ಕಳ್ಳತನ ಈವರೆಗೆ ಮಾಡಿದ ಬಗ್ಗೆ ಯಾವುದೇ ಸಾಕ್ಷಿ ಇಲ್ಲ ಎಂದು ಹೇಳಿದ್ದಾರೆ.

ಈಶಾನ್ಯ ಡಿಸಿಪಿ ಜಾಯ್ ಎನ್ ಟಿರ್ಕಿ ಈ ಬಗ್ಗೆ ಮಾತನಾಡಿದ್ದು , ಮುಂಜಾನೆ 5 ಗಂಟೆಯ ಸುಮಾರಿಗೆ ಅವರು ಇಸಾರ್‌ನನ್ನು ಹಿಡಿದಿದ್ದಾರೆ. ಕಳ್ಳನೆಂದು ಭಾವಿಸಿ ಆತನಿಗೆ ಪ್ರಶ್ನೆಗಳನ್ನು ಕೇಳಿದರು ಆದರೆ ಅವರು ಮಾನಸಿಕವಾಗಿ ಅಸ್ವಸ್ಥರಾಗಿದ್ದರಿಂದ ಸರಿಯಾಗಿ ಉತ್ತರಿಸಲು ಸಾಧ್ಯವಾಗಲಿಲ್ಲ. ನಂತರ ವಿದ್ಯುತ್ ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದ್ದಾರೆ ಎಂದು ಹೇಳಿದ್ದಾರೆ.

ಇಸಾರ್‌ನ ನೆರೆಹೊರೆಯವರು ಮತ್ತು ಕುಟುಂಬದ ಸದಸ್ಯರು ಅವರು ಮಾನಸಿಕವಾಗಿ ಅಸ್ವಸ್ಥರಾಗಿದ್ದರು ಎಂಬ ಹೇಳಿಕೆಯನ್ನು ಸುಳ್ಳು ಎಂದು ಹೇಳಿದ್ದಾರೆ.

ನೆರೆಹೊರೆಯವರಾದ ಮೊಹಮ್ಮದ್ ಸಮೀಮ್ ಈ ಕುರಿತು ಮಾತನಾಡಿದ್ದು, ಇಸಾರ್ ಯಾವುದೇ ಮಾನಸಿಕ ಅಸ್ವಸ್ಥ ಯುವಕ ಅಲ್ಲ. ನಾನು ಅವರನ್ನು ಬಹಳ ಸಮಯದಿಂದ ಬಲ್ಲೆ. ಅವರ ಮೇಲಿನ ಕಳ್ಳತನದ ಆರೋಪ ನಿರಾಧಾರ. ಅವರು ಕೇವಲ ಮುಸ್ಲಿಂ ಮತ್ತು ಪ್ರಸಾದ ತೆಗೆದುಕೊಂಡ ಕಾರಣಕ್ಕಾಗಿ ಈ ಕ್ರೌರ್ಯಕ್ಕೆ ಒಳಗಾಗಿ ಹತ್ಯೆಯಾಗಿದ್ದಾರೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಗುಜರಾತ್‌: ದಲಿತ ಇಂಜಿನಿಯರ್‌ಗೆ ಜಾತಿ ನಿಂದಿಸಿ ಥಳಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಲ್ವರು ಬಾಲಕರಿಂದ ಬಾಲಕಿಗೆ ಕಿರುಕುಳ ಆರೋಪ : ‘ಉತ್ತಮ ಸಂಸ್ಕಾರ ಕಲಿಸಿಲ್ಲ’ ಎಂದು ತಾಯಂದಿರನ್ನು ಬಂಧಿಸಿದ ಪೊಲೀಸರು!

ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಾಲ್ವರು ಬಾಲಕರ ವಿರುದ್ಧ ಬಾಲಕಿಗೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದ್ದು, ಪೊಲೀಸರು ಬಾಲಕರ ತಾಯಂದಿರನ್ನು 'ಪ್ರಿವೆಂಟಿವ್ ಅರೆಸ್ಟ್' ಮಾಡಿದ್ದಾರೆ ಎಂದು indianexpress.com ಶನಿವಾರ (ಡಿ.20) ವರದಿ...

ಎಸ್‌ಐಆರ್‌: ಸ್ಟಾಲಿನ್ ಅವರ ಕೊಳತ್ತೂರು ಕ್ಷೇತ್ರದಲ್ಲಿ 1 ಲಕ್ಷ ಮತದಾರ ಹೆಸರು ಕರಡು ಮತದಾರರ ಪಟ್ಟಿಯಲ್ಲಿ ಡಿಲೀಟ್

ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಕೊಳತ್ತೂರು ಕ್ಷೇತ್ರದಿಂದ 1,03,812 ಕ್ಕೂ ಹೆಚ್ಚು ಮತದಾರರ ಹೆಸರು ತೆಗೆದುಹಾಕಲಾಗಿದೆ. ಇದು ತಮಿಳುನಾಡಿನಲ್ಲಿ ರಾಜ್ಯಾದ್ಯಂತ ನಡೆದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಮತದಾರರ ಪಟ್ಟಿಯಲ್ಲಿನ ಅತಿದೊಡ್ಡ ಮತದಾರರ...

ಅಸ್ಸಾಂ : 15 ಮಂದಿಗೆ 24 ಗಂಟೆಯೊಳಗೆ ದೇಶ ತೊರೆಯಲು ಆದೇಶ : ಮಾಧ್ಯಮಗಳ ಮೂಲಕ ವಿಷಯ ತಿಳಿದುಕೊಂಡ ಕುಟುಂಬಸ್ಥರು

ಅಸ್ಸಾಂನ ನಾಗಾಂವ್ ಜಿಲ್ಲಾಡಳಿತವು 15 ಘೋಷಿತ ವಿದೇಶಿಯರಿಗೆ 24 ಗಂಟೆಗಳ ಒಳಗೆ ರಾಜ್ಯ ತೊರೆಯುವಂತೆ ಆದೇಶಿಸಿದ ಬಗ್ಗೆ ವರದಿಯಾಗಿದೆ. ಬುಧವಾರ (ಡಿ.17) ಜಿಲ್ಲಾಡಳಿತ ಈ ಆದೇಶ ನೀಡಿತ್ತು. ಆದರೆ, ಇದುವರೆಗೆ (ಡಿ.20) ಈ 15...

ಸಿರಿಯಾದ ಐಸಿಸ್ ಅಡಗುತಾಣಗಳ ಮೇಲೆ ಅಮೆರಿಕ ವಾಯುದಾಳಿ

ಕಳೆದ ವಾರ ಅಮೆರಿಕದ ಸಿಬ್ಬಂದಿ ಮೇಲೆ ನಡೆದ ಮಾರಕ ದಾಳಿಗೆ ಪ್ರತೀಕಾರವಾಗಿ ಅಮೆರಿಕವು ಮಧ್ಯ ಸಿರಿಯಾದಾದ್ಯಂತ ಡಜನ್‌ಗಟ್ಟಲೆ ಇಸ್ಲಾಮಿಕ್ ಸ್ಟೇಟ್ (ಐಎಸ್) ನೆಲೆಗಳ ಮೇಲೆ ವಾಯುದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 'ಆಪರೇಷನ್ ಹಾಕೈ...

16 ಲಕ್ಷಕ್ಕೂ ಹೆಚ್ಚು ಕಾರ್ಮಿಕರನ್ನು ‘ಮನರೇಗಾ’ ಪಟ್ಟಿಯಿಂದ ಕೈಬಿಟ್ಟ ಕೇಂದ್ರ ಸರ್ಕಾರ: ವರದಿ

ಯುಪಿಎ ಸರ್ಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಹೆಸರನ್ನು ಬದಲಿಸಲು ಪ್ರಯತ್ನಿಸುವ 'ವಿಕ್ಷಿತ್ ಭಾರತ್ - ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (ವಿಬಿ–ಜಿ...

ಅಮೆರಿಕದ ಬಹು ನಿರೀಕ್ಷಿತ ‘ಎಪ್‌ಸ್ಟೀನ್ ಫೈಲ್ಸ್’ ಬಿಡುಗಡೆ : ಬಿಲ್ ಕ್ಲಿಂಟನ್, ಮೈಕಲ್ ಜಾಕ್ಸನ್ ಸೇರಿದಂತೆ ಪ್ರಮುಖರ ಫೋಟೋಗಳು ಬಹಿರಂಗ

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ(ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಕೆಲ ದಾಖಲೆಗಳನ್ನು...

ಕೋಮು ಸಾಮರಸ್ಯಕ್ಕಾಗಿ ಭಾರತದ ಮುಸ್ಲಿಮರು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು: ಜಮಾಅತ್ ಅಧ್ಯಕ್ಷ

'ಭಾರತದ ಮುಸ್ಲಿಮರು, ದೇಶದಲ್ಲಿ ಕೋಮು ಸಾಮರಸ್ಯಕ್ಕಾಗಿ ವೈಯಕ್ತಿಕ ಮತ್ತು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು' ಎಂದು ಜಮಾಅತೆ-ಇ-ಇಸ್ಲಾಮಿ ಹಿಂದ್ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೈನಿ ಅವರು ಒತ್ತಾಯಿಸಿದರು. ಕೋಮು ಸಾಮರಸ್ಯ ಇಲಾಖೆಯು ಆಯೋಜಿಸಿದ್ದ 'ಅಖಿಲ...

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...