Homeಮುಖಪುಟಮುಸ್ಲಿಂ ವ್ಯಕ್ತಿಯ ಶವ ಸುಟ್ಟ ರೀತಿಯಲ್ಲಿ ಪತ್ತೆ : ತನಿಖೆ ವೇಳೆ ಆಘಾತಕಾರಿ ಮಾಹಿತಿ ಬಯಲು

ಮುಸ್ಲಿಂ ವ್ಯಕ್ತಿಯ ಶವ ಸುಟ್ಟ ರೀತಿಯಲ್ಲಿ ಪತ್ತೆ : ತನಿಖೆ ವೇಳೆ ಆಘಾತಕಾರಿ ಮಾಹಿತಿ ಬಯಲು

- Advertisement -
- Advertisement -

ಗ್ರಾಮದ ಮಾಜಿ ಮುಖ್ಯಸ್ಥ ಮತ್ತು ಆತನ ಇಬ್ಬರು ಸಹಚರರ ವಿರುದ್ಧ ಸಾಮೂಹಿಕ ಅತ್ಯಾಚಾರ ದೂರು ದಾಖಲಿಸಿದ್ದ ಮುಸ್ಲಿಂ ವ್ಯಕ್ತಿಯೊಬ್ಬರ ಶವ ಸುಟ್ಟ ರೀತಿಯಲ್ಲಿ ಗದ್ದೆಯಲ್ಲಿ ಪತ್ತೆಯಾದ ಘಟನೆ ಉತ್ತರ ಪ್ರದೇಶದ ಮೈನ್‌ಪುರಿ ಜಿಲ್ಲೆಯಲ್ಲಿ ನಡೆದಿದೆ.

ಪ್ರಕರಣದ ತನಿಖೆ ವೇಳೆ ಆಘಾತಕಾರಿ ಮಾಹಿತಿ ಬಯಲಾಗಿದ್ದು, ಮೃತನ ಪತ್ನಿ ಮತ್ತು ಆಕೆಯ ಪ್ರಿಯತಮ ಎನ್ನಲಾದ ಪಕ್ಕದ ಮನೆಯ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

ಕೊಲೆಗೈಯ್ಯುವ ಮೊದಲು ಮಹಿಳೆ ತನ್ನ ಪತಿಗೆ ಮಾದಕ ದ್ರವ್ಯ ನೀಡಿದ್ದರು. ಬಳಿಕ ಆಕೆಯ ಪ್ರಿಯತಮ ಗದ್ದೆಗೆ ಎಳೆದೊಯ್ದು ಪ್ರಜ್ಞೆ ತಪ್ಪಿಸಿ ಸಜೀವ ದಹನ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೋಮವಾರ (ಫೆ.17) ಬೆಳಿಗ್ಗೆ 40 ವರ್ಷದ ಮೊಹಮ್ಮದ್ ಸಾಜಿದ್ ಅವರ ಸುಟ್ಟ ಶವ ಗದ್ದೆಯಲ್ಲಿ ಪತ್ತೆಯಾಗಿತ್ತು. ಅವರ ತಂದೆ ಮರುದಿನ ಪೊಲೀಸ್ ದೂರು ದಾಖಲಿಸಿ, ತನ್ನ ಮಗನನ್ನು ಕೊಂದು ಗುರುತು ಮರೆಮಾಡಲು ದೇಹವನ್ನು ಸುಟ್ಟು ಹಾಕಿದ್ದಾರೆ ಎಂದು ಆರೋಪಿಸಿದ್ದರು.

“ನನ್ನ ಮಗನ ದೇಹವನ್ನು ಗುರುತು ಹಿಡಿಯಲು ಸಾಧ್ಯವಾಗದಂತೆ ಸುಟ್ಟು ಹಾಕಲಾಗಿದೆ. ಆತನ ಪತ್ನಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರದ ಪ್ರಕರಣ ಈಗಾಗಲೇ ನ್ಯಾಯಾಲಯದಲ್ಲಿದೆ. ಅತ್ಯಾಚಾರ ಆರೋಪಿ ಗ್ರಾಮದ ಮುಖ್ಯಸ್ಥ ಭೋಲಾ ಯಾದವ್, ನ್ಯಾಯಾಲಯದ ಹೊರಗೆ ಪ್ರಕರಣವನ್ನು ಇತ್ಯರ್ಥಪಡಿಸಿಕೊಳ್ಳುವಂತೆ ನಮ್ಮ ಮೇಲೆ ಒತ್ತಡ ಹೇರುತ್ತಿದ್ದ” ಎಂದು ಸಾಜಿದ್ ತಂದೆ ಆಶಿಕ್ ಅಲಿ ತಮ್ಮ ದೂರಿನಲ್ಲಿ ತಿಳಿಸಿದ್ದರು. ದೂರು ಆಧರಿಸಿ ಪೊಲೀಸರು ಭೋಲಾ ಯಾದವ್ ವಿರುದ್ಧ ಕೊಲೆ ಪ್ರಕರಣ ದಾಖಲಿಸಿದ್ದರು.

ಆದರೆ, ತನಿಖೆ ವೇಳೆ ಸಾಜಿದ್ ಅವರ ಪತ್ನಿ ಮತ್ತು ಆಕೆ ನೆರೆ ಮನೆಯ 30ರ ಹರೆಯದ ಸುಮಿತ್ ಕುಮಾರ್ ಸಾಜಿದ್ ಅವರನ್ನು ಹತ್ಯೆ ಮಾಡಿದ್ದಾರೆ ಎಂದು ಗೊತ್ತಾಗಿದೆ.

ಬುಧವಾರ (ಫೆ.19) ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಮೈನ್‌ಪುರಿ ಎಸ್‌ಪಿ ಗಣೇಶ್ ಪ್ರಸಾದ್ ಸಹಾ ಅವರು “ಬಿಚುವಾ ಪೊಲೀಸ್ ಠಾಣೆ ವ್ಯಾಪ್ತಿಯ ಹೊಲವೊಂದರಲ್ಲಿ ಸುಟ್ಟ ಮೃತದೇಹ ಪತ್ತೆಯಾಗಿರುವ ಬಗ್ಗೆ ನಮಗೆ ಮಾಹಿತಿ ಬಂದಿತ್ತು. ಸ್ಥಳಕ್ಕೆ ತಲುಪಿದಾಗ, ಆ ಶವ ಸಾಜಿದ್ ಅವರದ್ದು ಎಂದು ಗೊತ್ತಾಯಿತು. ನಾವು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದೆವು. ಸಾಜಿದ್ ಅವರ ಕುಟುಂಬಸ್ಥರು ಭೋಲಾ ಯಾದವ್ ಮತ್ತು ಅವರ ಸಹಚರರು ಕೊಲೆ ಮಾಡಿದ್ದಾರೆ ಎಂದು ದೂರು ದಾಖಲಿಸಿದ್ದರು” ಎಂದು ತಿಳಿಸಿದ್ದಾರೆ.

“ಪ್ರಕರಣದ ತನಿಖೆಗಾಗಿ ತಂಡ ರಚಿಸಿದ್ದೆವು. ತನಿಖೆ ವ್ಯವಸ್ಥಿತವಾಗಿ ನಡೆದು ಹಂತ ಹಂತವಾಗಿ ಪ್ರಕರಣದ ಹಿನ್ನೆಲೆ ಬಹಿರಂಗಗೊಂಡಿದೆ. ಮೃತನ ಪತ್ನಿ ಹಲವು ದಿನಗಳಿಂದ ನೆರೆ ಮನೆಯ ಸುಮಿತ್ ಕುಮಾರ್ ಜೊತೆ ಸಂಪರ್ಕದಲ್ಲಿದ್ದರು. ಅವರ ಸಂಬಂಧಕ್ಕೆ ಅಡ್ಡಿಯಾದ ಪತಿ ಸಾಜಿದ್ ಅವರನ್ನು ಕೊಲೆ ಮಾಡಲು ಇಬ್ಬರು ಸಂಚು ಹೂಡಿದ್ದರು. ಆರಂಭದಲ್ಲಿ ಮಹಿಳೆ ತನ್ನ ಪತಿಗೆ ಮಾದಕ ದ್ರವ್ಯ ನೀಡಿದ್ದರು. ನಂತರ ಸುಮಿತ್ ಗದ್ದೆಗೆ ಎಳೆದೊಯ್ದು ತಲೆಗೆ ಸ್ಫ್ಯಾನರ್‌ನಿಂದ ಸಾಜಿದ್ ತಲೆಗೆ ಹೊಡೆದು ಪ್ರಜ್ಞೆ ತಪ್ಪಿಸಿದ್ದಾರೆ. ಬಳಿಕ ಪೆಟ್ರೋಲ್ ಸುರಿದು ಸಜೀವ ದಹನ ಮಾಡಿದ್ದಾರೆ” ಎಂದು ಗಣೇಶ್ ಪ್ರಸಾದ್ ಹೇಳಿದ್ದಾರೆ.

“ಗ್ರಾಮದ ಮಾಜಿ ಮುಖ್ಯಸ್ಥ ಭೋಲಾ ಯಾದವ್ ವಿರುದ್ದ ಸಾಜಿದ್ ಅತ್ಯಾಚಾರ ದೂರು ದಾಖಲಿಸಿದ್ದರು. ಹಾಗಾಗಿ, ಕೊಲೆ ಪ್ರಕರಣವನ್ನು ಯಾದವ್ ಮತ್ತು ಅವರ ಸಹಚರರ ತಲೆಗೆ ಕಟ್ಟಬಹುದು ಎಂದು ಆರೋಪಿಗಳು ಯೋಚಿಸಿದ್ದರು. ಆದರೆ, ಅವರ ಸಂಚು ವಿಫಲವಾಗಿದೆ” ಎಂದು ತಿಳಿಸಿದ್ದಾರೆ.

“ಪೊಲೀಸ್ ತಂಡ ಶ್ರದ್ಧೆಯಿಂದ ಕೆಲಸ ಮಾಡಿ 24 ಗಂಟೆಯೊಳಗೆ ಪ್ರಕರಣವನ್ನು ಬೇಧಿಸಿದೆ. ಆರೋಪಿಗಳಿಬ್ಬರನ್ನೂ ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ. ಕೊಲೆಗೆ ಬಳಸಲಾದ ಆಯುಧಗಳನ್ನು ವಶಪಡಿಸಿಕೊಳ್ಳಲಾಗಿದೆ. ಮಹಿಳೆ ಮತ್ತು ಸುಮಿತ್ ನಡುವಿನ ಕಾಲ್ ಡೀಟೇಲ್ಸ್ ವಿಶ್ಲೇಷಣೆಯು ಪೊಲೀಸರ ತನಿಖೆಗೆ ಸಹಾಯ ಮಾಡಿತು. ವಿಚಾರಣೆಯ ಸಮಯದಲ್ಲಿ ಸುಮಿತ್ ಮತ್ತು ಮಹಿಳೆ ಒಟ್ಟಾಗಿ ಸಾಜಿದ್ ಹತ್ಯೆ ಮಾಡಿರುವುದನ್ನು ಒಪ್ಪಿಕೊಂಡಿದ್ದಾರೆ” ಎಂದು ಹೇಳಿದ್ದಾರೆ.

“ಭೋಲಾ ಯಾದವ್ ವಿರುದ್ದ ಸಾಜಿದ್ ದೂರು ದಾಖಲಿಸಿದ್ದರಿಂದ ಆತನೇ ಕೊಲೆ ಮಾಡಿಸಿರಬಹುದು ಎಂದು ನನ್ನ ತಂದೆ ದೂರು ಕೊಟ್ಟಿದ್ದರು. ಆದರೆ, ಪೊಲೀಸರ ತನಿಖೆಯಲ್ಲಿ ಅತ್ತಿಗೆ ಮತ್ತು ಪಕ್ಕದ ಮನೆಯ ಸುಮಿತ್ ಕುಮಾರ್ ಕೊಲೆ ಮಾಡಿಸಿರುವುದು ಗೊತ್ತಾಗಿದೆ. ಪೊಲೀಸರ ತನಿಖೆಯಲ್ಲಿ ನಮಗೆ ತೃಪ್ತಿಯಿದೆ. ಸುಮಿತ್ ನನ್ನ ಅಣ್ಣನಿಗೆ ಪರಿಚಯಸ್ಥನಾಗಿದ್ದ. ಆಗಾಗ ನಮ್ಮ ಮನೆಗೆ ಬಂದು ಹೋಗುತ್ತಿದ್ದ. ಈ ವೇಳೆ ಅತ್ತಿಗೆ ಜೊತೆ ಸಂಪರ್ಕ ಬೆಳೆಸಿರಬಹುದು” ಎಂದು ಮೃತ ಸಾಜಿದ್‌ನ ಸಹೋದರ ಹೇಳಿದ್ದಾರೆ ಎಂದು ಟೈಮ್ಸ್‌ ಆಫ್ ಇಂಡಿಯಾ ವರದಿ ತಿಳಿಸಿದೆ.

ಅಸ್ಸಾಂ| 44 ದಿನಗಳ ನಂತರ ಗಣಿಯಿಂದ 5 ಕಾರ್ಮಿಕರ ಶವ ಹೊರತೆಗೆದ ಭದ್ರತಾ ಸಿಬ್ಬಂದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...