Homeಮುಖಪುಟಮುಸ್ಲಿಂ ವ್ಯಕ್ತಿಯ ಶವ ಸುಟ್ಟ ರೀತಿಯಲ್ಲಿ ಪತ್ತೆ : ತನಿಖೆ ವೇಳೆ ಆಘಾತಕಾರಿ ಮಾಹಿತಿ ಬಯಲು

ಮುಸ್ಲಿಂ ವ್ಯಕ್ತಿಯ ಶವ ಸುಟ್ಟ ರೀತಿಯಲ್ಲಿ ಪತ್ತೆ : ತನಿಖೆ ವೇಳೆ ಆಘಾತಕಾರಿ ಮಾಹಿತಿ ಬಯಲು

- Advertisement -
- Advertisement -

ಗ್ರಾಮದ ಮಾಜಿ ಮುಖ್ಯಸ್ಥ ಮತ್ತು ಆತನ ಇಬ್ಬರು ಸಹಚರರ ವಿರುದ್ಧ ಸಾಮೂಹಿಕ ಅತ್ಯಾಚಾರ ದೂರು ದಾಖಲಿಸಿದ್ದ ಮುಸ್ಲಿಂ ವ್ಯಕ್ತಿಯೊಬ್ಬರ ಶವ ಸುಟ್ಟ ರೀತಿಯಲ್ಲಿ ಗದ್ದೆಯಲ್ಲಿ ಪತ್ತೆಯಾದ ಘಟನೆ ಉತ್ತರ ಪ್ರದೇಶದ ಮೈನ್‌ಪುರಿ ಜಿಲ್ಲೆಯಲ್ಲಿ ನಡೆದಿದೆ.

ಪ್ರಕರಣದ ತನಿಖೆ ವೇಳೆ ಆಘಾತಕಾರಿ ಮಾಹಿತಿ ಬಯಲಾಗಿದ್ದು, ಮೃತನ ಪತ್ನಿ ಮತ್ತು ಆಕೆಯ ಪ್ರಿಯತಮ ಎನ್ನಲಾದ ಪಕ್ಕದ ಮನೆಯ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

ಕೊಲೆಗೈಯ್ಯುವ ಮೊದಲು ಮಹಿಳೆ ತನ್ನ ಪತಿಗೆ ಮಾದಕ ದ್ರವ್ಯ ನೀಡಿದ್ದರು. ಬಳಿಕ ಆಕೆಯ ಪ್ರಿಯತಮ ಗದ್ದೆಗೆ ಎಳೆದೊಯ್ದು ಪ್ರಜ್ಞೆ ತಪ್ಪಿಸಿ ಸಜೀವ ದಹನ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೋಮವಾರ (ಫೆ.17) ಬೆಳಿಗ್ಗೆ 40 ವರ್ಷದ ಮೊಹಮ್ಮದ್ ಸಾಜಿದ್ ಅವರ ಸುಟ್ಟ ಶವ ಗದ್ದೆಯಲ್ಲಿ ಪತ್ತೆಯಾಗಿತ್ತು. ಅವರ ತಂದೆ ಮರುದಿನ ಪೊಲೀಸ್ ದೂರು ದಾಖಲಿಸಿ, ತನ್ನ ಮಗನನ್ನು ಕೊಂದು ಗುರುತು ಮರೆಮಾಡಲು ದೇಹವನ್ನು ಸುಟ್ಟು ಹಾಕಿದ್ದಾರೆ ಎಂದು ಆರೋಪಿಸಿದ್ದರು.

“ನನ್ನ ಮಗನ ದೇಹವನ್ನು ಗುರುತು ಹಿಡಿಯಲು ಸಾಧ್ಯವಾಗದಂತೆ ಸುಟ್ಟು ಹಾಕಲಾಗಿದೆ. ಆತನ ಪತ್ನಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರದ ಪ್ರಕರಣ ಈಗಾಗಲೇ ನ್ಯಾಯಾಲಯದಲ್ಲಿದೆ. ಅತ್ಯಾಚಾರ ಆರೋಪಿ ಗ್ರಾಮದ ಮುಖ್ಯಸ್ಥ ಭೋಲಾ ಯಾದವ್, ನ್ಯಾಯಾಲಯದ ಹೊರಗೆ ಪ್ರಕರಣವನ್ನು ಇತ್ಯರ್ಥಪಡಿಸಿಕೊಳ್ಳುವಂತೆ ನಮ್ಮ ಮೇಲೆ ಒತ್ತಡ ಹೇರುತ್ತಿದ್ದ” ಎಂದು ಸಾಜಿದ್ ತಂದೆ ಆಶಿಕ್ ಅಲಿ ತಮ್ಮ ದೂರಿನಲ್ಲಿ ತಿಳಿಸಿದ್ದರು. ದೂರು ಆಧರಿಸಿ ಪೊಲೀಸರು ಭೋಲಾ ಯಾದವ್ ವಿರುದ್ಧ ಕೊಲೆ ಪ್ರಕರಣ ದಾಖಲಿಸಿದ್ದರು.

ಆದರೆ, ತನಿಖೆ ವೇಳೆ ಸಾಜಿದ್ ಅವರ ಪತ್ನಿ ಮತ್ತು ಆಕೆ ನೆರೆ ಮನೆಯ 30ರ ಹರೆಯದ ಸುಮಿತ್ ಕುಮಾರ್ ಸಾಜಿದ್ ಅವರನ್ನು ಹತ್ಯೆ ಮಾಡಿದ್ದಾರೆ ಎಂದು ಗೊತ್ತಾಗಿದೆ.

ಬುಧವಾರ (ಫೆ.19) ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಮೈನ್‌ಪುರಿ ಎಸ್‌ಪಿ ಗಣೇಶ್ ಪ್ರಸಾದ್ ಸಹಾ ಅವರು “ಬಿಚುವಾ ಪೊಲೀಸ್ ಠಾಣೆ ವ್ಯಾಪ್ತಿಯ ಹೊಲವೊಂದರಲ್ಲಿ ಸುಟ್ಟ ಮೃತದೇಹ ಪತ್ತೆಯಾಗಿರುವ ಬಗ್ಗೆ ನಮಗೆ ಮಾಹಿತಿ ಬಂದಿತ್ತು. ಸ್ಥಳಕ್ಕೆ ತಲುಪಿದಾಗ, ಆ ಶವ ಸಾಜಿದ್ ಅವರದ್ದು ಎಂದು ಗೊತ್ತಾಯಿತು. ನಾವು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದೆವು. ಸಾಜಿದ್ ಅವರ ಕುಟುಂಬಸ್ಥರು ಭೋಲಾ ಯಾದವ್ ಮತ್ತು ಅವರ ಸಹಚರರು ಕೊಲೆ ಮಾಡಿದ್ದಾರೆ ಎಂದು ದೂರು ದಾಖಲಿಸಿದ್ದರು” ಎಂದು ತಿಳಿಸಿದ್ದಾರೆ.

“ಪ್ರಕರಣದ ತನಿಖೆಗಾಗಿ ತಂಡ ರಚಿಸಿದ್ದೆವು. ತನಿಖೆ ವ್ಯವಸ್ಥಿತವಾಗಿ ನಡೆದು ಹಂತ ಹಂತವಾಗಿ ಪ್ರಕರಣದ ಹಿನ್ನೆಲೆ ಬಹಿರಂಗಗೊಂಡಿದೆ. ಮೃತನ ಪತ್ನಿ ಹಲವು ದಿನಗಳಿಂದ ನೆರೆ ಮನೆಯ ಸುಮಿತ್ ಕುಮಾರ್ ಜೊತೆ ಸಂಪರ್ಕದಲ್ಲಿದ್ದರು. ಅವರ ಸಂಬಂಧಕ್ಕೆ ಅಡ್ಡಿಯಾದ ಪತಿ ಸಾಜಿದ್ ಅವರನ್ನು ಕೊಲೆ ಮಾಡಲು ಇಬ್ಬರು ಸಂಚು ಹೂಡಿದ್ದರು. ಆರಂಭದಲ್ಲಿ ಮಹಿಳೆ ತನ್ನ ಪತಿಗೆ ಮಾದಕ ದ್ರವ್ಯ ನೀಡಿದ್ದರು. ನಂತರ ಸುಮಿತ್ ಗದ್ದೆಗೆ ಎಳೆದೊಯ್ದು ತಲೆಗೆ ಸ್ಫ್ಯಾನರ್‌ನಿಂದ ಸಾಜಿದ್ ತಲೆಗೆ ಹೊಡೆದು ಪ್ರಜ್ಞೆ ತಪ್ಪಿಸಿದ್ದಾರೆ. ಬಳಿಕ ಪೆಟ್ರೋಲ್ ಸುರಿದು ಸಜೀವ ದಹನ ಮಾಡಿದ್ದಾರೆ” ಎಂದು ಗಣೇಶ್ ಪ್ರಸಾದ್ ಹೇಳಿದ್ದಾರೆ.

“ಗ್ರಾಮದ ಮಾಜಿ ಮುಖ್ಯಸ್ಥ ಭೋಲಾ ಯಾದವ್ ವಿರುದ್ದ ಸಾಜಿದ್ ಅತ್ಯಾಚಾರ ದೂರು ದಾಖಲಿಸಿದ್ದರು. ಹಾಗಾಗಿ, ಕೊಲೆ ಪ್ರಕರಣವನ್ನು ಯಾದವ್ ಮತ್ತು ಅವರ ಸಹಚರರ ತಲೆಗೆ ಕಟ್ಟಬಹುದು ಎಂದು ಆರೋಪಿಗಳು ಯೋಚಿಸಿದ್ದರು. ಆದರೆ, ಅವರ ಸಂಚು ವಿಫಲವಾಗಿದೆ” ಎಂದು ತಿಳಿಸಿದ್ದಾರೆ.

“ಪೊಲೀಸ್ ತಂಡ ಶ್ರದ್ಧೆಯಿಂದ ಕೆಲಸ ಮಾಡಿ 24 ಗಂಟೆಯೊಳಗೆ ಪ್ರಕರಣವನ್ನು ಬೇಧಿಸಿದೆ. ಆರೋಪಿಗಳಿಬ್ಬರನ್ನೂ ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ. ಕೊಲೆಗೆ ಬಳಸಲಾದ ಆಯುಧಗಳನ್ನು ವಶಪಡಿಸಿಕೊಳ್ಳಲಾಗಿದೆ. ಮಹಿಳೆ ಮತ್ತು ಸುಮಿತ್ ನಡುವಿನ ಕಾಲ್ ಡೀಟೇಲ್ಸ್ ವಿಶ್ಲೇಷಣೆಯು ಪೊಲೀಸರ ತನಿಖೆಗೆ ಸಹಾಯ ಮಾಡಿತು. ವಿಚಾರಣೆಯ ಸಮಯದಲ್ಲಿ ಸುಮಿತ್ ಮತ್ತು ಮಹಿಳೆ ಒಟ್ಟಾಗಿ ಸಾಜಿದ್ ಹತ್ಯೆ ಮಾಡಿರುವುದನ್ನು ಒಪ್ಪಿಕೊಂಡಿದ್ದಾರೆ” ಎಂದು ಹೇಳಿದ್ದಾರೆ.

“ಭೋಲಾ ಯಾದವ್ ವಿರುದ್ದ ಸಾಜಿದ್ ದೂರು ದಾಖಲಿಸಿದ್ದರಿಂದ ಆತನೇ ಕೊಲೆ ಮಾಡಿಸಿರಬಹುದು ಎಂದು ನನ್ನ ತಂದೆ ದೂರು ಕೊಟ್ಟಿದ್ದರು. ಆದರೆ, ಪೊಲೀಸರ ತನಿಖೆಯಲ್ಲಿ ಅತ್ತಿಗೆ ಮತ್ತು ಪಕ್ಕದ ಮನೆಯ ಸುಮಿತ್ ಕುಮಾರ್ ಕೊಲೆ ಮಾಡಿಸಿರುವುದು ಗೊತ್ತಾಗಿದೆ. ಪೊಲೀಸರ ತನಿಖೆಯಲ್ಲಿ ನಮಗೆ ತೃಪ್ತಿಯಿದೆ. ಸುಮಿತ್ ನನ್ನ ಅಣ್ಣನಿಗೆ ಪರಿಚಯಸ್ಥನಾಗಿದ್ದ. ಆಗಾಗ ನಮ್ಮ ಮನೆಗೆ ಬಂದು ಹೋಗುತ್ತಿದ್ದ. ಈ ವೇಳೆ ಅತ್ತಿಗೆ ಜೊತೆ ಸಂಪರ್ಕ ಬೆಳೆಸಿರಬಹುದು” ಎಂದು ಮೃತ ಸಾಜಿದ್‌ನ ಸಹೋದರ ಹೇಳಿದ್ದಾರೆ ಎಂದು ಟೈಮ್ಸ್‌ ಆಫ್ ಇಂಡಿಯಾ ವರದಿ ತಿಳಿಸಿದೆ.

ಅಸ್ಸಾಂ| 44 ದಿನಗಳ ನಂತರ ಗಣಿಯಿಂದ 5 ಕಾರ್ಮಿಕರ ಶವ ಹೊರತೆಗೆದ ಭದ್ರತಾ ಸಿಬ್ಬಂದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...