Homeಮುಖಪುಟಮುಸ್ಲಿಂ ವ್ಯಕ್ತಿಯ ಶವ ಸುಟ್ಟ ರೀತಿಯಲ್ಲಿ ಪತ್ತೆ : ತನಿಖೆ ವೇಳೆ ಆಘಾತಕಾರಿ ಮಾಹಿತಿ ಬಯಲು

ಮುಸ್ಲಿಂ ವ್ಯಕ್ತಿಯ ಶವ ಸುಟ್ಟ ರೀತಿಯಲ್ಲಿ ಪತ್ತೆ : ತನಿಖೆ ವೇಳೆ ಆಘಾತಕಾರಿ ಮಾಹಿತಿ ಬಯಲು

- Advertisement -
- Advertisement -

ಗ್ರಾಮದ ಮಾಜಿ ಮುಖ್ಯಸ್ಥ ಮತ್ತು ಆತನ ಇಬ್ಬರು ಸಹಚರರ ವಿರುದ್ಧ ಸಾಮೂಹಿಕ ಅತ್ಯಾಚಾರ ದೂರು ದಾಖಲಿಸಿದ್ದ ಮುಸ್ಲಿಂ ವ್ಯಕ್ತಿಯೊಬ್ಬರ ಶವ ಸುಟ್ಟ ರೀತಿಯಲ್ಲಿ ಗದ್ದೆಯಲ್ಲಿ ಪತ್ತೆಯಾದ ಘಟನೆ ಉತ್ತರ ಪ್ರದೇಶದ ಮೈನ್‌ಪುರಿ ಜಿಲ್ಲೆಯಲ್ಲಿ ನಡೆದಿದೆ.

ಪ್ರಕರಣದ ತನಿಖೆ ವೇಳೆ ಆಘಾತಕಾರಿ ಮಾಹಿತಿ ಬಯಲಾಗಿದ್ದು, ಮೃತನ ಪತ್ನಿ ಮತ್ತು ಆಕೆಯ ಪ್ರಿಯತಮ ಎನ್ನಲಾದ ಪಕ್ಕದ ಮನೆಯ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

ಕೊಲೆಗೈಯ್ಯುವ ಮೊದಲು ಮಹಿಳೆ ತನ್ನ ಪತಿಗೆ ಮಾದಕ ದ್ರವ್ಯ ನೀಡಿದ್ದರು. ಬಳಿಕ ಆಕೆಯ ಪ್ರಿಯತಮ ಗದ್ದೆಗೆ ಎಳೆದೊಯ್ದು ಪ್ರಜ್ಞೆ ತಪ್ಪಿಸಿ ಸಜೀವ ದಹನ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೋಮವಾರ (ಫೆ.17) ಬೆಳಿಗ್ಗೆ 40 ವರ್ಷದ ಮೊಹಮ್ಮದ್ ಸಾಜಿದ್ ಅವರ ಸುಟ್ಟ ಶವ ಗದ್ದೆಯಲ್ಲಿ ಪತ್ತೆಯಾಗಿತ್ತು. ಅವರ ತಂದೆ ಮರುದಿನ ಪೊಲೀಸ್ ದೂರು ದಾಖಲಿಸಿ, ತನ್ನ ಮಗನನ್ನು ಕೊಂದು ಗುರುತು ಮರೆಮಾಡಲು ದೇಹವನ್ನು ಸುಟ್ಟು ಹಾಕಿದ್ದಾರೆ ಎಂದು ಆರೋಪಿಸಿದ್ದರು.

“ನನ್ನ ಮಗನ ದೇಹವನ್ನು ಗುರುತು ಹಿಡಿಯಲು ಸಾಧ್ಯವಾಗದಂತೆ ಸುಟ್ಟು ಹಾಕಲಾಗಿದೆ. ಆತನ ಪತ್ನಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರದ ಪ್ರಕರಣ ಈಗಾಗಲೇ ನ್ಯಾಯಾಲಯದಲ್ಲಿದೆ. ಅತ್ಯಾಚಾರ ಆರೋಪಿ ಗ್ರಾಮದ ಮುಖ್ಯಸ್ಥ ಭೋಲಾ ಯಾದವ್, ನ್ಯಾಯಾಲಯದ ಹೊರಗೆ ಪ್ರಕರಣವನ್ನು ಇತ್ಯರ್ಥಪಡಿಸಿಕೊಳ್ಳುವಂತೆ ನಮ್ಮ ಮೇಲೆ ಒತ್ತಡ ಹೇರುತ್ತಿದ್ದ” ಎಂದು ಸಾಜಿದ್ ತಂದೆ ಆಶಿಕ್ ಅಲಿ ತಮ್ಮ ದೂರಿನಲ್ಲಿ ತಿಳಿಸಿದ್ದರು. ದೂರು ಆಧರಿಸಿ ಪೊಲೀಸರು ಭೋಲಾ ಯಾದವ್ ವಿರುದ್ಧ ಕೊಲೆ ಪ್ರಕರಣ ದಾಖಲಿಸಿದ್ದರು.

ಆದರೆ, ತನಿಖೆ ವೇಳೆ ಸಾಜಿದ್ ಅವರ ಪತ್ನಿ ಮತ್ತು ಆಕೆ ನೆರೆ ಮನೆಯ 30ರ ಹರೆಯದ ಸುಮಿತ್ ಕುಮಾರ್ ಸಾಜಿದ್ ಅವರನ್ನು ಹತ್ಯೆ ಮಾಡಿದ್ದಾರೆ ಎಂದು ಗೊತ್ತಾಗಿದೆ.

ಬುಧವಾರ (ಫೆ.19) ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಮೈನ್‌ಪುರಿ ಎಸ್‌ಪಿ ಗಣೇಶ್ ಪ್ರಸಾದ್ ಸಹಾ ಅವರು “ಬಿಚುವಾ ಪೊಲೀಸ್ ಠಾಣೆ ವ್ಯಾಪ್ತಿಯ ಹೊಲವೊಂದರಲ್ಲಿ ಸುಟ್ಟ ಮೃತದೇಹ ಪತ್ತೆಯಾಗಿರುವ ಬಗ್ಗೆ ನಮಗೆ ಮಾಹಿತಿ ಬಂದಿತ್ತು. ಸ್ಥಳಕ್ಕೆ ತಲುಪಿದಾಗ, ಆ ಶವ ಸಾಜಿದ್ ಅವರದ್ದು ಎಂದು ಗೊತ್ತಾಯಿತು. ನಾವು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದೆವು. ಸಾಜಿದ್ ಅವರ ಕುಟುಂಬಸ್ಥರು ಭೋಲಾ ಯಾದವ್ ಮತ್ತು ಅವರ ಸಹಚರರು ಕೊಲೆ ಮಾಡಿದ್ದಾರೆ ಎಂದು ದೂರು ದಾಖಲಿಸಿದ್ದರು” ಎಂದು ತಿಳಿಸಿದ್ದಾರೆ.

“ಪ್ರಕರಣದ ತನಿಖೆಗಾಗಿ ತಂಡ ರಚಿಸಿದ್ದೆವು. ತನಿಖೆ ವ್ಯವಸ್ಥಿತವಾಗಿ ನಡೆದು ಹಂತ ಹಂತವಾಗಿ ಪ್ರಕರಣದ ಹಿನ್ನೆಲೆ ಬಹಿರಂಗಗೊಂಡಿದೆ. ಮೃತನ ಪತ್ನಿ ಹಲವು ದಿನಗಳಿಂದ ನೆರೆ ಮನೆಯ ಸುಮಿತ್ ಕುಮಾರ್ ಜೊತೆ ಸಂಪರ್ಕದಲ್ಲಿದ್ದರು. ಅವರ ಸಂಬಂಧಕ್ಕೆ ಅಡ್ಡಿಯಾದ ಪತಿ ಸಾಜಿದ್ ಅವರನ್ನು ಕೊಲೆ ಮಾಡಲು ಇಬ್ಬರು ಸಂಚು ಹೂಡಿದ್ದರು. ಆರಂಭದಲ್ಲಿ ಮಹಿಳೆ ತನ್ನ ಪತಿಗೆ ಮಾದಕ ದ್ರವ್ಯ ನೀಡಿದ್ದರು. ನಂತರ ಸುಮಿತ್ ಗದ್ದೆಗೆ ಎಳೆದೊಯ್ದು ತಲೆಗೆ ಸ್ಫ್ಯಾನರ್‌ನಿಂದ ಸಾಜಿದ್ ತಲೆಗೆ ಹೊಡೆದು ಪ್ರಜ್ಞೆ ತಪ್ಪಿಸಿದ್ದಾರೆ. ಬಳಿಕ ಪೆಟ್ರೋಲ್ ಸುರಿದು ಸಜೀವ ದಹನ ಮಾಡಿದ್ದಾರೆ” ಎಂದು ಗಣೇಶ್ ಪ್ರಸಾದ್ ಹೇಳಿದ್ದಾರೆ.

“ಗ್ರಾಮದ ಮಾಜಿ ಮುಖ್ಯಸ್ಥ ಭೋಲಾ ಯಾದವ್ ವಿರುದ್ದ ಸಾಜಿದ್ ಅತ್ಯಾಚಾರ ದೂರು ದಾಖಲಿಸಿದ್ದರು. ಹಾಗಾಗಿ, ಕೊಲೆ ಪ್ರಕರಣವನ್ನು ಯಾದವ್ ಮತ್ತು ಅವರ ಸಹಚರರ ತಲೆಗೆ ಕಟ್ಟಬಹುದು ಎಂದು ಆರೋಪಿಗಳು ಯೋಚಿಸಿದ್ದರು. ಆದರೆ, ಅವರ ಸಂಚು ವಿಫಲವಾಗಿದೆ” ಎಂದು ತಿಳಿಸಿದ್ದಾರೆ.

“ಪೊಲೀಸ್ ತಂಡ ಶ್ರದ್ಧೆಯಿಂದ ಕೆಲಸ ಮಾಡಿ 24 ಗಂಟೆಯೊಳಗೆ ಪ್ರಕರಣವನ್ನು ಬೇಧಿಸಿದೆ. ಆರೋಪಿಗಳಿಬ್ಬರನ್ನೂ ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ. ಕೊಲೆಗೆ ಬಳಸಲಾದ ಆಯುಧಗಳನ್ನು ವಶಪಡಿಸಿಕೊಳ್ಳಲಾಗಿದೆ. ಮಹಿಳೆ ಮತ್ತು ಸುಮಿತ್ ನಡುವಿನ ಕಾಲ್ ಡೀಟೇಲ್ಸ್ ವಿಶ್ಲೇಷಣೆಯು ಪೊಲೀಸರ ತನಿಖೆಗೆ ಸಹಾಯ ಮಾಡಿತು. ವಿಚಾರಣೆಯ ಸಮಯದಲ್ಲಿ ಸುಮಿತ್ ಮತ್ತು ಮಹಿಳೆ ಒಟ್ಟಾಗಿ ಸಾಜಿದ್ ಹತ್ಯೆ ಮಾಡಿರುವುದನ್ನು ಒಪ್ಪಿಕೊಂಡಿದ್ದಾರೆ” ಎಂದು ಹೇಳಿದ್ದಾರೆ.

“ಭೋಲಾ ಯಾದವ್ ವಿರುದ್ದ ಸಾಜಿದ್ ದೂರು ದಾಖಲಿಸಿದ್ದರಿಂದ ಆತನೇ ಕೊಲೆ ಮಾಡಿಸಿರಬಹುದು ಎಂದು ನನ್ನ ತಂದೆ ದೂರು ಕೊಟ್ಟಿದ್ದರು. ಆದರೆ, ಪೊಲೀಸರ ತನಿಖೆಯಲ್ಲಿ ಅತ್ತಿಗೆ ಮತ್ತು ಪಕ್ಕದ ಮನೆಯ ಸುಮಿತ್ ಕುಮಾರ್ ಕೊಲೆ ಮಾಡಿಸಿರುವುದು ಗೊತ್ತಾಗಿದೆ. ಪೊಲೀಸರ ತನಿಖೆಯಲ್ಲಿ ನಮಗೆ ತೃಪ್ತಿಯಿದೆ. ಸುಮಿತ್ ನನ್ನ ಅಣ್ಣನಿಗೆ ಪರಿಚಯಸ್ಥನಾಗಿದ್ದ. ಆಗಾಗ ನಮ್ಮ ಮನೆಗೆ ಬಂದು ಹೋಗುತ್ತಿದ್ದ. ಈ ವೇಳೆ ಅತ್ತಿಗೆ ಜೊತೆ ಸಂಪರ್ಕ ಬೆಳೆಸಿರಬಹುದು” ಎಂದು ಮೃತ ಸಾಜಿದ್‌ನ ಸಹೋದರ ಹೇಳಿದ್ದಾರೆ ಎಂದು ಟೈಮ್ಸ್‌ ಆಫ್ ಇಂಡಿಯಾ ವರದಿ ತಿಳಿಸಿದೆ.

ಅಸ್ಸಾಂ| 44 ದಿನಗಳ ನಂತರ ಗಣಿಯಿಂದ 5 ಕಾರ್ಮಿಕರ ಶವ ಹೊರತೆಗೆದ ಭದ್ರತಾ ಸಿಬ್ಬಂದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...