Homeಮುಖಪುಟಮುಸ್ಲಿಂ ವ್ಯಕ್ತಿಯ ಶವ ಸುಟ್ಟ ರೀತಿಯಲ್ಲಿ ಪತ್ತೆ : ತನಿಖೆ ವೇಳೆ ಆಘಾತಕಾರಿ ಮಾಹಿತಿ ಬಯಲು

ಮುಸ್ಲಿಂ ವ್ಯಕ್ತಿಯ ಶವ ಸುಟ್ಟ ರೀತಿಯಲ್ಲಿ ಪತ್ತೆ : ತನಿಖೆ ವೇಳೆ ಆಘಾತಕಾರಿ ಮಾಹಿತಿ ಬಯಲು

- Advertisement -
- Advertisement -

ಗ್ರಾಮದ ಮಾಜಿ ಮುಖ್ಯಸ್ಥ ಮತ್ತು ಆತನ ಇಬ್ಬರು ಸಹಚರರ ವಿರುದ್ಧ ಸಾಮೂಹಿಕ ಅತ್ಯಾಚಾರ ದೂರು ದಾಖಲಿಸಿದ್ದ ಮುಸ್ಲಿಂ ವ್ಯಕ್ತಿಯೊಬ್ಬರ ಶವ ಸುಟ್ಟ ರೀತಿಯಲ್ಲಿ ಗದ್ದೆಯಲ್ಲಿ ಪತ್ತೆಯಾದ ಘಟನೆ ಉತ್ತರ ಪ್ರದೇಶದ ಮೈನ್‌ಪುರಿ ಜಿಲ್ಲೆಯಲ್ಲಿ ನಡೆದಿದೆ.

ಪ್ರಕರಣದ ತನಿಖೆ ವೇಳೆ ಆಘಾತಕಾರಿ ಮಾಹಿತಿ ಬಯಲಾಗಿದ್ದು, ಮೃತನ ಪತ್ನಿ ಮತ್ತು ಆಕೆಯ ಪ್ರಿಯತಮ ಎನ್ನಲಾದ ಪಕ್ಕದ ಮನೆಯ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

ಕೊಲೆಗೈಯ್ಯುವ ಮೊದಲು ಮಹಿಳೆ ತನ್ನ ಪತಿಗೆ ಮಾದಕ ದ್ರವ್ಯ ನೀಡಿದ್ದರು. ಬಳಿಕ ಆಕೆಯ ಪ್ರಿಯತಮ ಗದ್ದೆಗೆ ಎಳೆದೊಯ್ದು ಪ್ರಜ್ಞೆ ತಪ್ಪಿಸಿ ಸಜೀವ ದಹನ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೋಮವಾರ (ಫೆ.17) ಬೆಳಿಗ್ಗೆ 40 ವರ್ಷದ ಮೊಹಮ್ಮದ್ ಸಾಜಿದ್ ಅವರ ಸುಟ್ಟ ಶವ ಗದ್ದೆಯಲ್ಲಿ ಪತ್ತೆಯಾಗಿತ್ತು. ಅವರ ತಂದೆ ಮರುದಿನ ಪೊಲೀಸ್ ದೂರು ದಾಖಲಿಸಿ, ತನ್ನ ಮಗನನ್ನು ಕೊಂದು ಗುರುತು ಮರೆಮಾಡಲು ದೇಹವನ್ನು ಸುಟ್ಟು ಹಾಕಿದ್ದಾರೆ ಎಂದು ಆರೋಪಿಸಿದ್ದರು.

“ನನ್ನ ಮಗನ ದೇಹವನ್ನು ಗುರುತು ಹಿಡಿಯಲು ಸಾಧ್ಯವಾಗದಂತೆ ಸುಟ್ಟು ಹಾಕಲಾಗಿದೆ. ಆತನ ಪತ್ನಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರದ ಪ್ರಕರಣ ಈಗಾಗಲೇ ನ್ಯಾಯಾಲಯದಲ್ಲಿದೆ. ಅತ್ಯಾಚಾರ ಆರೋಪಿ ಗ್ರಾಮದ ಮುಖ್ಯಸ್ಥ ಭೋಲಾ ಯಾದವ್, ನ್ಯಾಯಾಲಯದ ಹೊರಗೆ ಪ್ರಕರಣವನ್ನು ಇತ್ಯರ್ಥಪಡಿಸಿಕೊಳ್ಳುವಂತೆ ನಮ್ಮ ಮೇಲೆ ಒತ್ತಡ ಹೇರುತ್ತಿದ್ದ” ಎಂದು ಸಾಜಿದ್ ತಂದೆ ಆಶಿಕ್ ಅಲಿ ತಮ್ಮ ದೂರಿನಲ್ಲಿ ತಿಳಿಸಿದ್ದರು. ದೂರು ಆಧರಿಸಿ ಪೊಲೀಸರು ಭೋಲಾ ಯಾದವ್ ವಿರುದ್ಧ ಕೊಲೆ ಪ್ರಕರಣ ದಾಖಲಿಸಿದ್ದರು.

ಆದರೆ, ತನಿಖೆ ವೇಳೆ ಸಾಜಿದ್ ಅವರ ಪತ್ನಿ ಮತ್ತು ಆಕೆ ನೆರೆ ಮನೆಯ 30ರ ಹರೆಯದ ಸುಮಿತ್ ಕುಮಾರ್ ಸಾಜಿದ್ ಅವರನ್ನು ಹತ್ಯೆ ಮಾಡಿದ್ದಾರೆ ಎಂದು ಗೊತ್ತಾಗಿದೆ.

ಬುಧವಾರ (ಫೆ.19) ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಮೈನ್‌ಪುರಿ ಎಸ್‌ಪಿ ಗಣೇಶ್ ಪ್ರಸಾದ್ ಸಹಾ ಅವರು “ಬಿಚುವಾ ಪೊಲೀಸ್ ಠಾಣೆ ವ್ಯಾಪ್ತಿಯ ಹೊಲವೊಂದರಲ್ಲಿ ಸುಟ್ಟ ಮೃತದೇಹ ಪತ್ತೆಯಾಗಿರುವ ಬಗ್ಗೆ ನಮಗೆ ಮಾಹಿತಿ ಬಂದಿತ್ತು. ಸ್ಥಳಕ್ಕೆ ತಲುಪಿದಾಗ, ಆ ಶವ ಸಾಜಿದ್ ಅವರದ್ದು ಎಂದು ಗೊತ್ತಾಯಿತು. ನಾವು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದೆವು. ಸಾಜಿದ್ ಅವರ ಕುಟುಂಬಸ್ಥರು ಭೋಲಾ ಯಾದವ್ ಮತ್ತು ಅವರ ಸಹಚರರು ಕೊಲೆ ಮಾಡಿದ್ದಾರೆ ಎಂದು ದೂರು ದಾಖಲಿಸಿದ್ದರು” ಎಂದು ತಿಳಿಸಿದ್ದಾರೆ.

“ಪ್ರಕರಣದ ತನಿಖೆಗಾಗಿ ತಂಡ ರಚಿಸಿದ್ದೆವು. ತನಿಖೆ ವ್ಯವಸ್ಥಿತವಾಗಿ ನಡೆದು ಹಂತ ಹಂತವಾಗಿ ಪ್ರಕರಣದ ಹಿನ್ನೆಲೆ ಬಹಿರಂಗಗೊಂಡಿದೆ. ಮೃತನ ಪತ್ನಿ ಹಲವು ದಿನಗಳಿಂದ ನೆರೆ ಮನೆಯ ಸುಮಿತ್ ಕುಮಾರ್ ಜೊತೆ ಸಂಪರ್ಕದಲ್ಲಿದ್ದರು. ಅವರ ಸಂಬಂಧಕ್ಕೆ ಅಡ್ಡಿಯಾದ ಪತಿ ಸಾಜಿದ್ ಅವರನ್ನು ಕೊಲೆ ಮಾಡಲು ಇಬ್ಬರು ಸಂಚು ಹೂಡಿದ್ದರು. ಆರಂಭದಲ್ಲಿ ಮಹಿಳೆ ತನ್ನ ಪತಿಗೆ ಮಾದಕ ದ್ರವ್ಯ ನೀಡಿದ್ದರು. ನಂತರ ಸುಮಿತ್ ಗದ್ದೆಗೆ ಎಳೆದೊಯ್ದು ತಲೆಗೆ ಸ್ಫ್ಯಾನರ್‌ನಿಂದ ಸಾಜಿದ್ ತಲೆಗೆ ಹೊಡೆದು ಪ್ರಜ್ಞೆ ತಪ್ಪಿಸಿದ್ದಾರೆ. ಬಳಿಕ ಪೆಟ್ರೋಲ್ ಸುರಿದು ಸಜೀವ ದಹನ ಮಾಡಿದ್ದಾರೆ” ಎಂದು ಗಣೇಶ್ ಪ್ರಸಾದ್ ಹೇಳಿದ್ದಾರೆ.

“ಗ್ರಾಮದ ಮಾಜಿ ಮುಖ್ಯಸ್ಥ ಭೋಲಾ ಯಾದವ್ ವಿರುದ್ದ ಸಾಜಿದ್ ಅತ್ಯಾಚಾರ ದೂರು ದಾಖಲಿಸಿದ್ದರು. ಹಾಗಾಗಿ, ಕೊಲೆ ಪ್ರಕರಣವನ್ನು ಯಾದವ್ ಮತ್ತು ಅವರ ಸಹಚರರ ತಲೆಗೆ ಕಟ್ಟಬಹುದು ಎಂದು ಆರೋಪಿಗಳು ಯೋಚಿಸಿದ್ದರು. ಆದರೆ, ಅವರ ಸಂಚು ವಿಫಲವಾಗಿದೆ” ಎಂದು ತಿಳಿಸಿದ್ದಾರೆ.

“ಪೊಲೀಸ್ ತಂಡ ಶ್ರದ್ಧೆಯಿಂದ ಕೆಲಸ ಮಾಡಿ 24 ಗಂಟೆಯೊಳಗೆ ಪ್ರಕರಣವನ್ನು ಬೇಧಿಸಿದೆ. ಆರೋಪಿಗಳಿಬ್ಬರನ್ನೂ ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ. ಕೊಲೆಗೆ ಬಳಸಲಾದ ಆಯುಧಗಳನ್ನು ವಶಪಡಿಸಿಕೊಳ್ಳಲಾಗಿದೆ. ಮಹಿಳೆ ಮತ್ತು ಸುಮಿತ್ ನಡುವಿನ ಕಾಲ್ ಡೀಟೇಲ್ಸ್ ವಿಶ್ಲೇಷಣೆಯು ಪೊಲೀಸರ ತನಿಖೆಗೆ ಸಹಾಯ ಮಾಡಿತು. ವಿಚಾರಣೆಯ ಸಮಯದಲ್ಲಿ ಸುಮಿತ್ ಮತ್ತು ಮಹಿಳೆ ಒಟ್ಟಾಗಿ ಸಾಜಿದ್ ಹತ್ಯೆ ಮಾಡಿರುವುದನ್ನು ಒಪ್ಪಿಕೊಂಡಿದ್ದಾರೆ” ಎಂದು ಹೇಳಿದ್ದಾರೆ.

“ಭೋಲಾ ಯಾದವ್ ವಿರುದ್ದ ಸಾಜಿದ್ ದೂರು ದಾಖಲಿಸಿದ್ದರಿಂದ ಆತನೇ ಕೊಲೆ ಮಾಡಿಸಿರಬಹುದು ಎಂದು ನನ್ನ ತಂದೆ ದೂರು ಕೊಟ್ಟಿದ್ದರು. ಆದರೆ, ಪೊಲೀಸರ ತನಿಖೆಯಲ್ಲಿ ಅತ್ತಿಗೆ ಮತ್ತು ಪಕ್ಕದ ಮನೆಯ ಸುಮಿತ್ ಕುಮಾರ್ ಕೊಲೆ ಮಾಡಿಸಿರುವುದು ಗೊತ್ತಾಗಿದೆ. ಪೊಲೀಸರ ತನಿಖೆಯಲ್ಲಿ ನಮಗೆ ತೃಪ್ತಿಯಿದೆ. ಸುಮಿತ್ ನನ್ನ ಅಣ್ಣನಿಗೆ ಪರಿಚಯಸ್ಥನಾಗಿದ್ದ. ಆಗಾಗ ನಮ್ಮ ಮನೆಗೆ ಬಂದು ಹೋಗುತ್ತಿದ್ದ. ಈ ವೇಳೆ ಅತ್ತಿಗೆ ಜೊತೆ ಸಂಪರ್ಕ ಬೆಳೆಸಿರಬಹುದು” ಎಂದು ಮೃತ ಸಾಜಿದ್‌ನ ಸಹೋದರ ಹೇಳಿದ್ದಾರೆ ಎಂದು ಟೈಮ್ಸ್‌ ಆಫ್ ಇಂಡಿಯಾ ವರದಿ ತಿಳಿಸಿದೆ.

ಅಸ್ಸಾಂ| 44 ದಿನಗಳ ನಂತರ ಗಣಿಯಿಂದ 5 ಕಾರ್ಮಿಕರ ಶವ ಹೊರತೆಗೆದ ಭದ್ರತಾ ಸಿಬ್ಬಂದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...