Homeಕರ್ನಾಟಕಕೇಂದ್ರದ ವಕ್ಫ್‌ ಕಾನೂನಿನ ವಿರುದ್ಧ ನಿರ್ಣಯ ಅಂಗೀಕರಿಸುವಂತೆ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ ಮುಸ್ಲಿಂ ವೈಯಕ್ತಿಕ ಕಾನೂನು...

ಕೇಂದ್ರದ ವಕ್ಫ್‌ ಕಾನೂನಿನ ವಿರುದ್ಧ ನಿರ್ಣಯ ಅಂಗೀಕರಿಸುವಂತೆ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ

- Advertisement -
- Advertisement -

ಕೇಂದ್ರ ಸರ್ಕಾರದ ವಿವಾದಾತ್ಮಕ ವಕ್ಫ್‌ ಕಾನೂನಿನ ವಿರುದ್ಧ ನಿರ್ಣಯ ಅಂಗೀಕರಿಸುವಂತೆ ರಾಜ್ಯ ಸರ್ಕಾರವನ್ನು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ (ಎಐಎಂಪಿಎಲ್‌ಬಿ) ಆಗ್ರಹಿಸಿದೆ.

ಬೆಂಗಳೂರಿನ ಶಾಸಕರ ಭವನದಲ್ಲಿ ಸೋಮವಾರ (ಜೂ.24) ಜರುಗಿದ ಸಮಾಲೋಚನಾ ಸಭೆಯಲ್ಲಿ, ರಾಜ್ಯದ ವಿವಿಧ ಸಾಮಾಜಿಕ ಸಂಘಟನೆಗಳು, ಧಾರ್ಮಿಕ ಸಮುದಾಯಗಳ ಸಂಸ್ಥೆಗಳು ಹಾಗೂ ಪ್ರಮುಖ ಗಣ್ಯರು ಭಾಗವಹಿಸಿ, ಸರ್ವಾನುಮತದಿಂದ ಕೆಲವು ನಿರ್ಣಯಗಳನ್ನು ಘೋಷಿಸಿದರು.

“ಸಂಸತ್ತಿನಲ್ಲಿ ಅಂಗೀಕರಿಸಲ್ಪಟ್ಟಿರುವ ವಿವಾದಾತ್ಮಕ ವಕ್ಫ್‌ ತಿದ್ದುಪಡಿ ಕಾಯ್ದೆಗಳು ಕೇವಲ ಭೇದಭಾವ ಹಾಗೂ ವಿಭಜಕ ಸ್ವರೂಪದ್ದಾಗಿಲ್ಲದೆ, ಭಾರತ ಸಂವಿಧಾನದ ಮೂಲಭೂತ ಆಶಯಗಳಿಗೆ ನೇರವಾಗಿ ವಿರುದ್ಧವಾಗಿವೆ. ಈ ತಿದ್ದುಪಡಿಗಳು ಭಾರತ ಸಂವಿಧಾನದ ಮೂಲಭೂತ ಹಕ್ಕುಗಳಾದ ಕಲಂ 34, 25, 26, 29 ಮತ್ತು 30 ನ್ನು ಸ್ಪಷ್ಟವಾಗಿ ಅತಿಕ್ರಮಿಸುತ್ತವೆ” ಎಂದು ಸಭೆಯಲ್ಲಿ ಅಂಗೀಕರಿಸಲಾದ ನಿರ್ಣಯದಲ್ಲಿ ಆತಂಕ ವ್ಯಕ್ತಪಡಿಸಲಾಗಿದೆ.

“ಈ ತಿದ್ದುಪಡಿಗಳು ಮುಸ್ಲಿಂ ಸಮುದಾಯದ ವಕ್ಫ್‌ ಆಸ್ತಿಗಳಿಂದ, ಹಿಂದೂ, ಸಿಖ್‌, ಕ್ರಿಶ್ಚಿಯನ್‌ ಮತ್ತು ಬೌದ್ಧ ಮುಂತಾದ ಇತರೆ ಧಾರ್ಮಿಕ ಸಮುದಾಯಗಳ ದತ್ತಿ ಆಸ್ತಿಗಳಿಗೆ ನೀಡಿರುವ ಸಂರಕ್ಷಣೆಯನ್ನು ವಂಚಿಸುತ್ತವೆ. ಇದು ಸ್ಪಷ್ಟವಾದ ತಾರತಮ್ಯವನ್ನು ಪ್ರದರ್ಶಿಸುತ್ತದೆ. ಇವು ಮುಸ್ಲಿಮರಿಂದ ಅವರ ಧಾರ್ಮಿಕ ಸ್ವಾತಂತ್ರ್ಯ (ಕಲಂ 25) ಹಾಗೂ ತಮ್ಮ ಧಾರ್ಮಿಕ ಮತ್ತು ದತ್ತಿ ಸಂಸ್ಥೆಗಳ ವ್ಯವಸ್ಥಾಪನೆ ಮತ್ತು ಆಡಳಿತದ ಹಕ್ಕನ್ನು (ಕಲಂ 26 ಮತ್ತು 29) ಹರಣ ಮಾಡುತ್ತವೆ” ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಗಿದೆ.

“ಯಾವುದೇ ಮುಸ್ಲಿಂ ವ್ಯಕ್ತಿಯು ತನ್ನ ವೈಯಕ್ತಿಕ ಆಸ್ತಿಯನ್ನು ವಕ್ಫ್‌ಗೆ ಸಮರ್ಪಿಸಲು ಹೊಂದಿರುವ ಧಾರ್ಮಿಕ ಮತ್ತು ಸಾಂವಿಧಾನಿಕ ಸ್ವಾತಂತ್ರ್ಯವನ್ನು ಈ ತಿದ್ದುಪಡಿ ಕ್ಷೀಣಗೊಳಿಸುತ್ತದೆ. ವಿಶೇಷವಾಗಿ, ಆ ವ್ಯಕ್ತಿ ನಿರಂತರ ಐದು ವರ್ಷಗಳ ಕಾಲ ‘ನಿಷ್ಠಾವಂತ ಮುಸ್ಲಿಂ’ ಆಗಿರಬೇಕು ಎಂಬ ಷರತ್ತನ್ನು ವಿಧಿಸುತ್ತದೆ” ಎಂಬುದನ್ನು ನಿರ್ಣಯದಲ್ಲಿ ವಿರೋಧಿಸಲಾಗದೆ.

“ಯಾವುದೇ ವಕ್ಫ್‌ ಆಸ್ತಿಯ ಮೇಲೆ ಸರ್ಕಾರದ ಹಕ್ಕು ಅಥವಾ ಮಾಲೀಕತ್ವದ ಕುರಿತು ವಿವಾದವಿದ್ದಲ್ಲಿ, ಈ ತಿದ್ದುಪಡಿಯ ನಂತರ ಆ ಆಸ್ತಿಯು ಸರ್ಕಾರದ ಅಧೀನವಾಗುತ್ತದೆ. ಏಕೆಂದರೆ, ಅಂತಹ ವಿವಾದದ ನಿರ್ಣಯವನ್ನು ವಕ್ಫ್‌ ಮಂಡಳಿ ನಿರ್ಧರಿಸುವ ಬದಲಿಗೆ ಸರ್ಕಾರದ ನಿಯುಕ್ತ ಅಧಿಕಾರಿ ನಿರ್ಧರಿಸುತ್ತಾನೆ. ವಕ್ಫ್‌ ಮಂಡಳಿ ಹಾಗೂ ಕೇಂದ ವಕ್ಫ್‌ ಕೌನ್ಸಿಲ್‌ನ ಸದಸ್ಯತ್ವಕ್ಕೆ ಮುಸ್ಲಿಮನಾಗಿರಬೇಕೆಂಬ ಷರತ್ತನ್ನು ಈಗ ರದ್ದುಪಡಿಸಲಾಗಿದೆ. ಇದಲ್ಲದೆ, ಕೇಂದ್ರ ವಕ್ಫ್‌ ಕೌನ್ಸಿಲ್‌ ಮತ್ತು ರಾಜ್ಯ ವಕ್ಫ್‌ ಮಂಡಳಿಗಳ ಚುನಾವಣಾ ಪ್ರಕ್ರಿಯೆಯನ್ನು ನಾಮನಿರ್ದೇಶನದಿಂದ ಬದಲಾಯಿಸಲಾಗಿದೆ” ಎಂದು ನಿರ್ಣಯದಲ್ಲಿ ವಿವರಿಸಲಾಗಿದೆ.

‘ಬಳಕೆಯಿಂದ ವಕ್ಫ್‌ ಆಸ್ತಿಗಳನ್ನು ಕಡ್ಡಾಯವಾಗಿ ನೋಂದಾಯಿಸಬೇಕು. ಅಂತಹ ಆಸ್ತಿಗಳ ಕುರಿತು ಯಾವುದೇ ವಿವಾದವೆದ್ದರೆ, ಆ ಆಸ್ತಿಗಳು ತಮ್ಮ ವಕ್ಫ್‌ ಸ್ಥಾನಮಾನವನ್ನು ಕಳೆದುಕೊಳ್ಳುತ್ತವೆ ಎಂಬ ತಿದ್ದುಪಡಿಗಳ ಅನ್ವಯ, ಯಾವುದೇ ಅನಿವಾಸಿ ಮುಸ್ಲಿಂ ತನ್ನ ವೈಯಕ್ತಿಕ ಆಸ್ತಿಯನ್ನು ವಕ್ಫ್‌ ಗೆ ಸಮರ್ಪಿಸಲು ಅವಕಾಶವಿರುವುದಿಲ್ಲ. ವಕ್ಫ್‌ ಕಾಯ್ದೆ 2025, ಮುಸ್ಲಿಮರಿಗೆ ತಮ್ಮ ಸಂಸ್ಥೆಗಳನ್ನು ಸ್ಥಾಪಿಸಲು, ನಿರ್ವಹಿಸಲು ಮತ್ತು ಆಡಳಿತ ನಡೆಸಲು ಇರುವ
ಮೂಲಭೂತ ಸಾಂವಿಧಾನಿಕ ಹಕ್ಕಿನ ಮೇಲೆ ನಿರ್ಬಂಧ ಹೇರುವಂತಿದೆ” ಎಂದು ನಿರ್ಣಯದಲ್ಲಿ ಆತಂಕ ವ್ಯಕ್ತಪಡಿಸಲಾಗಿದೆ.

“ನಾವು ಎಲ್ಲರೂ ಈ ವಿವಾದಾತ್ಮಕ ತಿದ್ದುಪಡಿಗಳನ್ನು ನಿರ್ದಿಷ್ಟವಾಗಿ ತಿರಸ್ಕರಿಸುತ್ತೇವೆ. ಸರ್ಕಾರವು ಇವುಗಳನ್ನು ಹಿಂತೆಗೆದುಕೊಂಡು ಸಂವಿಧಾನ ಮತ್ತು ಪ್ರಜಾಪ್ರಭುತ್ವದ ತತ್ತ್ವಗಳನ್ನು ಗೌರವಿಸಬೇಕೆಂದು ದೃಢವಾಗಿ ಆಗ್ರಹಿಸುತ್ತೇವೆ” ಎಂದು ಒತ್ತಾಯಿಸಿದ್ದಾರೆ.

“ಇದಲ್ಲದೆ, ಕರ್ನಾಟಕ ರಾಜ್ಯ ಸರ್ಕಾರವೂ ಈ ವಿವಾದಾತ್ಮಕ ಕಾನೂನಿನ ವಿರುದ್ಧ ನಿರ್ಣಯವನ್ನು ಅಂಗೀಕರಿಸಬೇಕೆಂದು ನಾವು ಒತ್ತಾಯಿಸುತ್ತೇವೆ. ಜೊತೆಗೆ, ಈ ವಿವಾದಾತ್ಮಕ ಕಾಯ್ದೆಯ ವಿರುದ್ಧ ಮಾನ್ಯ ಸರ್ವೋಚ್ಚ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣದ ಅಂತಿಮ ತೀರ್ಪು ಹೊರಬೀಳುವವರೆಗೆ, ಈ ಕಾಯ್ದೆಯ ಜಾರಿಗೆ ತಾತ್ಕಾಲಿಕ ತಡೆಯಾಜ್ಞೆ ನೀಡಬೇಕೆಂದು ನಾವು ಆಗ್ರಹಿಸುತ್ತೇವೆ” ಎಂದು ಸಭೆಯಲ್ಲಿ ಒತ್ತಾಯಿಸಲಾಗಿದೆ.

Latest Update | ಇಸ್ರೇಲ್ ಮೇಲೆ ಕ್ಷಿಪಣಿ ದಾಳಿ ನಡೆಸಿದ ಇರಾನ್: ಮೂವರು ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...