Homeಕರ್ನಾಟಕಕೇಂದ್ರದ ವಕ್ಫ್‌ ಕಾನೂನಿನ ವಿರುದ್ಧ ನಿರ್ಣಯ ಅಂಗೀಕರಿಸುವಂತೆ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ ಮುಸ್ಲಿಂ ವೈಯಕ್ತಿಕ ಕಾನೂನು...

ಕೇಂದ್ರದ ವಕ್ಫ್‌ ಕಾನೂನಿನ ವಿರುದ್ಧ ನಿರ್ಣಯ ಅಂಗೀಕರಿಸುವಂತೆ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ

- Advertisement -
- Advertisement -

ಕೇಂದ್ರ ಸರ್ಕಾರದ ವಿವಾದಾತ್ಮಕ ವಕ್ಫ್‌ ಕಾನೂನಿನ ವಿರುದ್ಧ ನಿರ್ಣಯ ಅಂಗೀಕರಿಸುವಂತೆ ರಾಜ್ಯ ಸರ್ಕಾರವನ್ನು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ (ಎಐಎಂಪಿಎಲ್‌ಬಿ) ಆಗ್ರಹಿಸಿದೆ.

ಬೆಂಗಳೂರಿನ ಶಾಸಕರ ಭವನದಲ್ಲಿ ಸೋಮವಾರ (ಜೂ.24) ಜರುಗಿದ ಸಮಾಲೋಚನಾ ಸಭೆಯಲ್ಲಿ, ರಾಜ್ಯದ ವಿವಿಧ ಸಾಮಾಜಿಕ ಸಂಘಟನೆಗಳು, ಧಾರ್ಮಿಕ ಸಮುದಾಯಗಳ ಸಂಸ್ಥೆಗಳು ಹಾಗೂ ಪ್ರಮುಖ ಗಣ್ಯರು ಭಾಗವಹಿಸಿ, ಸರ್ವಾನುಮತದಿಂದ ಕೆಲವು ನಿರ್ಣಯಗಳನ್ನು ಘೋಷಿಸಿದರು.

“ಸಂಸತ್ತಿನಲ್ಲಿ ಅಂಗೀಕರಿಸಲ್ಪಟ್ಟಿರುವ ವಿವಾದಾತ್ಮಕ ವಕ್ಫ್‌ ತಿದ್ದುಪಡಿ ಕಾಯ್ದೆಗಳು ಕೇವಲ ಭೇದಭಾವ ಹಾಗೂ ವಿಭಜಕ ಸ್ವರೂಪದ್ದಾಗಿಲ್ಲದೆ, ಭಾರತ ಸಂವಿಧಾನದ ಮೂಲಭೂತ ಆಶಯಗಳಿಗೆ ನೇರವಾಗಿ ವಿರುದ್ಧವಾಗಿವೆ. ಈ ತಿದ್ದುಪಡಿಗಳು ಭಾರತ ಸಂವಿಧಾನದ ಮೂಲಭೂತ ಹಕ್ಕುಗಳಾದ ಕಲಂ 34, 25, 26, 29 ಮತ್ತು 30 ನ್ನು ಸ್ಪಷ್ಟವಾಗಿ ಅತಿಕ್ರಮಿಸುತ್ತವೆ” ಎಂದು ಸಭೆಯಲ್ಲಿ ಅಂಗೀಕರಿಸಲಾದ ನಿರ್ಣಯದಲ್ಲಿ ಆತಂಕ ವ್ಯಕ್ತಪಡಿಸಲಾಗಿದೆ.

“ಈ ತಿದ್ದುಪಡಿಗಳು ಮುಸ್ಲಿಂ ಸಮುದಾಯದ ವಕ್ಫ್‌ ಆಸ್ತಿಗಳಿಂದ, ಹಿಂದೂ, ಸಿಖ್‌, ಕ್ರಿಶ್ಚಿಯನ್‌ ಮತ್ತು ಬೌದ್ಧ ಮುಂತಾದ ಇತರೆ ಧಾರ್ಮಿಕ ಸಮುದಾಯಗಳ ದತ್ತಿ ಆಸ್ತಿಗಳಿಗೆ ನೀಡಿರುವ ಸಂರಕ್ಷಣೆಯನ್ನು ವಂಚಿಸುತ್ತವೆ. ಇದು ಸ್ಪಷ್ಟವಾದ ತಾರತಮ್ಯವನ್ನು ಪ್ರದರ್ಶಿಸುತ್ತದೆ. ಇವು ಮುಸ್ಲಿಮರಿಂದ ಅವರ ಧಾರ್ಮಿಕ ಸ್ವಾತಂತ್ರ್ಯ (ಕಲಂ 25) ಹಾಗೂ ತಮ್ಮ ಧಾರ್ಮಿಕ ಮತ್ತು ದತ್ತಿ ಸಂಸ್ಥೆಗಳ ವ್ಯವಸ್ಥಾಪನೆ ಮತ್ತು ಆಡಳಿತದ ಹಕ್ಕನ್ನು (ಕಲಂ 26 ಮತ್ತು 29) ಹರಣ ಮಾಡುತ್ತವೆ” ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಗಿದೆ.

“ಯಾವುದೇ ಮುಸ್ಲಿಂ ವ್ಯಕ್ತಿಯು ತನ್ನ ವೈಯಕ್ತಿಕ ಆಸ್ತಿಯನ್ನು ವಕ್ಫ್‌ಗೆ ಸಮರ್ಪಿಸಲು ಹೊಂದಿರುವ ಧಾರ್ಮಿಕ ಮತ್ತು ಸಾಂವಿಧಾನಿಕ ಸ್ವಾತಂತ್ರ್ಯವನ್ನು ಈ ತಿದ್ದುಪಡಿ ಕ್ಷೀಣಗೊಳಿಸುತ್ತದೆ. ವಿಶೇಷವಾಗಿ, ಆ ವ್ಯಕ್ತಿ ನಿರಂತರ ಐದು ವರ್ಷಗಳ ಕಾಲ ‘ನಿಷ್ಠಾವಂತ ಮುಸ್ಲಿಂ’ ಆಗಿರಬೇಕು ಎಂಬ ಷರತ್ತನ್ನು ವಿಧಿಸುತ್ತದೆ” ಎಂಬುದನ್ನು ನಿರ್ಣಯದಲ್ಲಿ ವಿರೋಧಿಸಲಾಗದೆ.

“ಯಾವುದೇ ವಕ್ಫ್‌ ಆಸ್ತಿಯ ಮೇಲೆ ಸರ್ಕಾರದ ಹಕ್ಕು ಅಥವಾ ಮಾಲೀಕತ್ವದ ಕುರಿತು ವಿವಾದವಿದ್ದಲ್ಲಿ, ಈ ತಿದ್ದುಪಡಿಯ ನಂತರ ಆ ಆಸ್ತಿಯು ಸರ್ಕಾರದ ಅಧೀನವಾಗುತ್ತದೆ. ಏಕೆಂದರೆ, ಅಂತಹ ವಿವಾದದ ನಿರ್ಣಯವನ್ನು ವಕ್ಫ್‌ ಮಂಡಳಿ ನಿರ್ಧರಿಸುವ ಬದಲಿಗೆ ಸರ್ಕಾರದ ನಿಯುಕ್ತ ಅಧಿಕಾರಿ ನಿರ್ಧರಿಸುತ್ತಾನೆ. ವಕ್ಫ್‌ ಮಂಡಳಿ ಹಾಗೂ ಕೇಂದ ವಕ್ಫ್‌ ಕೌನ್ಸಿಲ್‌ನ ಸದಸ್ಯತ್ವಕ್ಕೆ ಮುಸ್ಲಿಮನಾಗಿರಬೇಕೆಂಬ ಷರತ್ತನ್ನು ಈಗ ರದ್ದುಪಡಿಸಲಾಗಿದೆ. ಇದಲ್ಲದೆ, ಕೇಂದ್ರ ವಕ್ಫ್‌ ಕೌನ್ಸಿಲ್‌ ಮತ್ತು ರಾಜ್ಯ ವಕ್ಫ್‌ ಮಂಡಳಿಗಳ ಚುನಾವಣಾ ಪ್ರಕ್ರಿಯೆಯನ್ನು ನಾಮನಿರ್ದೇಶನದಿಂದ ಬದಲಾಯಿಸಲಾಗಿದೆ” ಎಂದು ನಿರ್ಣಯದಲ್ಲಿ ವಿವರಿಸಲಾಗಿದೆ.

‘ಬಳಕೆಯಿಂದ ವಕ್ಫ್‌ ಆಸ್ತಿಗಳನ್ನು ಕಡ್ಡಾಯವಾಗಿ ನೋಂದಾಯಿಸಬೇಕು. ಅಂತಹ ಆಸ್ತಿಗಳ ಕುರಿತು ಯಾವುದೇ ವಿವಾದವೆದ್ದರೆ, ಆ ಆಸ್ತಿಗಳು ತಮ್ಮ ವಕ್ಫ್‌ ಸ್ಥಾನಮಾನವನ್ನು ಕಳೆದುಕೊಳ್ಳುತ್ತವೆ ಎಂಬ ತಿದ್ದುಪಡಿಗಳ ಅನ್ವಯ, ಯಾವುದೇ ಅನಿವಾಸಿ ಮುಸ್ಲಿಂ ತನ್ನ ವೈಯಕ್ತಿಕ ಆಸ್ತಿಯನ್ನು ವಕ್ಫ್‌ ಗೆ ಸಮರ್ಪಿಸಲು ಅವಕಾಶವಿರುವುದಿಲ್ಲ. ವಕ್ಫ್‌ ಕಾಯ್ದೆ 2025, ಮುಸ್ಲಿಮರಿಗೆ ತಮ್ಮ ಸಂಸ್ಥೆಗಳನ್ನು ಸ್ಥಾಪಿಸಲು, ನಿರ್ವಹಿಸಲು ಮತ್ತು ಆಡಳಿತ ನಡೆಸಲು ಇರುವ
ಮೂಲಭೂತ ಸಾಂವಿಧಾನಿಕ ಹಕ್ಕಿನ ಮೇಲೆ ನಿರ್ಬಂಧ ಹೇರುವಂತಿದೆ” ಎಂದು ನಿರ್ಣಯದಲ್ಲಿ ಆತಂಕ ವ್ಯಕ್ತಪಡಿಸಲಾಗಿದೆ.

“ನಾವು ಎಲ್ಲರೂ ಈ ವಿವಾದಾತ್ಮಕ ತಿದ್ದುಪಡಿಗಳನ್ನು ನಿರ್ದಿಷ್ಟವಾಗಿ ತಿರಸ್ಕರಿಸುತ್ತೇವೆ. ಸರ್ಕಾರವು ಇವುಗಳನ್ನು ಹಿಂತೆಗೆದುಕೊಂಡು ಸಂವಿಧಾನ ಮತ್ತು ಪ್ರಜಾಪ್ರಭುತ್ವದ ತತ್ತ್ವಗಳನ್ನು ಗೌರವಿಸಬೇಕೆಂದು ದೃಢವಾಗಿ ಆಗ್ರಹಿಸುತ್ತೇವೆ” ಎಂದು ಒತ್ತಾಯಿಸಿದ್ದಾರೆ.

“ಇದಲ್ಲದೆ, ಕರ್ನಾಟಕ ರಾಜ್ಯ ಸರ್ಕಾರವೂ ಈ ವಿವಾದಾತ್ಮಕ ಕಾನೂನಿನ ವಿರುದ್ಧ ನಿರ್ಣಯವನ್ನು ಅಂಗೀಕರಿಸಬೇಕೆಂದು ನಾವು ಒತ್ತಾಯಿಸುತ್ತೇವೆ. ಜೊತೆಗೆ, ಈ ವಿವಾದಾತ್ಮಕ ಕಾಯ್ದೆಯ ವಿರುದ್ಧ ಮಾನ್ಯ ಸರ್ವೋಚ್ಚ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣದ ಅಂತಿಮ ತೀರ್ಪು ಹೊರಬೀಳುವವರೆಗೆ, ಈ ಕಾಯ್ದೆಯ ಜಾರಿಗೆ ತಾತ್ಕಾಲಿಕ ತಡೆಯಾಜ್ಞೆ ನೀಡಬೇಕೆಂದು ನಾವು ಆಗ್ರಹಿಸುತ್ತೇವೆ” ಎಂದು ಸಭೆಯಲ್ಲಿ ಒತ್ತಾಯಿಸಲಾಗಿದೆ.

Latest Update | ಇಸ್ರೇಲ್ ಮೇಲೆ ಕ್ಷಿಪಣಿ ದಾಳಿ ನಡೆಸಿದ ಇರಾನ್: ಮೂವರು ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ: ಕಣ್ಣೂರು ದಂತ ಕಾಲೇಜಿನಲ್ಲಿ ದಲಿತ ಬಿಡಿಎಸ್ ವಿದ್ಯಾರ್ಥಿ ಆತ್ಮಹತ್ಯೆ, ಕ್ರೂರ ಜಾತಿ ನಿಂದನೆ, ಅವಮಾನ ಆರೋಪ

ಕೇರಳದಲ್ಲಿ ನಡೆದ ಜಾತಿ ಆಧಾರಿತ ಕಿರುಕುಳದ ಆಘಾತಕಾರಿ ಪ್ರಕರಣದಲ್ಲಿ, ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ.   ಆರ್‌.ಎಲ್ ನಿತಿನ್ ರಾಜ್ ಅವರ ಕುಟುಂಬವು...

ಜಬ್ಬಾರ್​ರನ್ನು ಎಂಎಲ್‌ಸಿ ಮಾಡಿದ್ದು ನಾವು, ಪಕ್ಷದ ಅನ್ನ ತಿಂದ ಮೇಲೆ ಕೆಲಸ ಮಾಡಬೇಕಿತ್ತು : ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜನರ ಪ್ರತಿಕ್ರಿಯೆ ಚೆನ್ನಾಗಿತ್ತು, ನಾವು ಗೆಲುವು ಸಾಧಿಸುತ್ತೇವೆ ಎಂಬ ವಿಶ್ವಾಸವಿದೆ. ನಮ್ಮ ಮತದಾರ ಬಂಧುಗಳು ಉತ್ತಮವಾಗಿ ಮತದಾನ ಮಾಡಿದ್ದಾರೆ. ಒಳ್ಳೆಯ ಅಂತರದಲ್ಲಿ ಕಾಂಗ್ರೆಸ್‌ ಪಕ್ಷ ಗೆಲ್ಲುತ್ತೆ,...

ಧಾರವಾಡ: ಯುವ ಕಾಂಗ್ರೆಸ್ ನಾಯಕ ಫೈರೋಜ್ ಖಾನ್ ಪಠಾಣ್ ಹತ್ಯೆ; ಮೂವರು ಆರೋಪಿಗಳ ಬಂಧನ

ಧಾರವಾಡದಲ್ಲಿ ಶುಕ್ರವಾರ ತಡರಾತ್ರಿ ಯುವ ಕಾಂಗ್ರೆಸ್ ನಾಯಕನೊಬ್ಬನನ್ನು ಅವರ ನಿವಾಸದೊಳಗೆ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ನಗರದಾದ್ಯಂತ ಆಘಾತದ ಅಲೆಗಳನ್ನು ಸೃಷ್ಟಿಸಿದೆ. ಮೃತ ವ್ಯಕ್ತಿಯನ್ನು ಫೈರೋಜ್ ಖಾನ್ ಪಠಾಣ್ (34) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ,...

ಮಧ್ಯಪ್ರದೇಶದ ಕಟ್ನಿಯಲ್ಲಿ ಮಹಾರಾಷ್ಟ್ರಕ್ಕೆ ರೈಲಿನಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ 163 ಅಪ್ರಾಪ್ತ ಬಾಲಕರ ರಕ್ಷಣೆ; 8 ಮಂದಿ ಬಂಧನ

ಕಟ್ನಿ: ಬಿಹಾರದಿಂದ ಮಹಾರಾಷ್ಟ್ರಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎನ್ನಲಾದ 163 ಅಪ್ರಾಪ್ತ ಬಾಲಕರನ್ನು ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ಎಕ್ಸ್‌ಪ್ರೆಸ್ ರೈಲಿನಿಂದ ರೈಲ್ವೆ ಪೊಲೀಸರು ರಕ್ಷಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಆರು ರಿಂದ 13 ವರ್ಷದೊಳಗಿನ...

ನಗರಪಾಲಿಕೆ ಚುನಾವಣೆಯಲ್ಲಿ ನಮಗೆ ಅಧಿಕಾರಕ್ಕೆ ಬರಲು ಒಂದು ಅವಕಾಶ ನೀಡಿ: ಬೆಂಗಳೂರಿಗರಿಗೆ ಎಚ್‌.ಡಿ ಕುಮಾರಸ್ವಾಮಿ ಮನವಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಡಿಯಲ್ಲಿರುವ ಐದು ಮಹಾನಗರ ಪಾಲಿಕೆಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವ ಮೂಲಕ ಅಧಿಕಾರಕ್ಕೆ ಬರುವ ಅವಕಾಶ ನೀಡುವಂತೆ ದೇವೇಗೌಡ ನೇತೃತ್ವದ ಜೆಡಿಎಸ್ ಶನಿವಾರ ಬೆಂಗಳೂರಿನ ಜನರನ್ನು...

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿ.ಕೆ ಶಿವಕುಮಾರ್; ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ಸಮಿತಿ ವಿಸರ್ಜನೆ

ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗಕ್ಕೆ ನೀಡಿದ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಂಗೀಕರಿಸಿದ್ದಾರೆ, ಜೊತೆಗೆ ಅಲ್ಪಸಂಖ್ಯಾತ ಘಟಕ ಸಮಿತಿಯನ್ನೂ ವಿಸರ್ಜಿಸಿದ್ದಾರೆ ಎಂದು ವರದಿಯಾಗಿದೆ. ಕೆಪಿಸಿಸಿ ಅಲ್ಪಸಂಖ್ಯಾತ...

‘ಯುದ್ಧ ಭುಗಿಲೆದ್ದು ಪಾಕಿಸ್ತಾನ ಶಾಂತಿ ಸ್ಥಾಪಿಸಲು ವಿಫಲವಾದರೆ, ಇಸ್ರೇಲ್ ಮೇಲೆ ದಾಳಿ ಮಾಡುವುದು ನಮ್ಮ ಕರ್ತವ್ಯ’: ಟರ್ಕಿ ಅಧ್ಯಕ್ಷ ಎರ್ಡೋಗನ್

ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಇಸ್ರೇಲ್ ವಿರುದ್ಧ ತೀಕ್ಷ್ಣ ಎಚ್ಚರಿಕೆ ನೀಡಿದ್ದು, ನಡೆಯುತ್ತಿರುವ ಸಂಘರ್ಷವನ್ನು ಶಮನಗೊಳಿಸಲು ರಾಜತಾಂತ್ರಿಕ ಪ್ರಯತ್ನಗಳು ವಿಫಲವಾದರೆ ಸಂಭಾವ್ಯ ಕ್ರಮ ಕೈಗೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಕಠಿಣ ಪದಗಳ ಹೇಳಿಕೆಯಲ್ಲಿ,...

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನ

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ (92) ಅವರು ಭಾನುವಾರ (ಏ.12) ನಿಧನರಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯ ಡಾ. ಪ್ರತೀತ್ ಸಮ್ದಾನಿ...

‘ಸಂವಿಧಾನವನ್ನು ಕೊನೆಗೊಳಿಸುವುದು ಆರ್‌ಎಸ್‌ಎಸ್-ಬಿಜೆಪಿಯ ಮುಖ್ಯ ಉದ್ದೇಶ’: ರಾಹುಲ್ ಗಾಂಧಿ ಆರೋಪ

ನವದೆಹಲಿ: ಆರ್‌ಎಸ್‌ಎಸ್ - ಬಿಜೆಪಿ ವಿರುದ್ಧ ಭಾನುವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಭಾರತದಲ್ಲಿ ಎಲ್ಲರನ್ನೂ ಸಮಾನರು ಎಂದು ಪರಿಗಣಿಸಲು ಬಯಸದ ಕಾರಣ ಸಂವಿಧಾನವನ್ನು ಕೊನೆಗೊಳಿಸುವುದು ಅವರ ಮುಖ್ಯ...

ಗಾಝಾಗೆ ಜೀವರಕ್ಷಕ ನೆರವಿಗಾಗಿ ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ನೌಕಾಯಾನ; ನಾಗರಿಕರ ರಕ್ಷಣೆಗೆ ಕರೆ ನೀಡಿದ ಯುನೈಟೆಡ್ ಸ್ಟಾಫ್ ಫಾರ್ ಗಾಝಾ

ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ಭಾನುವಾರ ನೌಕಾಯಾನ ಮಾಡಲು ಸಿದ್ಧವಾಗುತ್ತಿದ್ದಂತೆ, ಗಾಝಾದ ಯುನೈಟೆಡ್ ಸ್ಟಾಫ್ ಅಂತರರಾಷ್ಟ್ರೀಯ ಕಾನೂನಿನ ಅಡಿಯಲ್ಲಿ ಕಾರ್ಯಾಚರಣೆಯಲ್ಲಿರುವ ನಾಗರಿಕರ ರಕ್ಷಣೆಗಾಗಿ ಕರೆ ನೀಡಿತು ಮತ್ತು ಗಾಝಾಗೆ ಮಾನವೀಯ ನೆರವು ಪ್ರಯತ್ನಗಳಿಗೆ ಬೆಂಬಲವನ್ನು...