Homeಕರ್ನಾಟಕಕೇಂದ್ರದ ವಕ್ಫ್‌ ಕಾನೂನಿನ ವಿರುದ್ಧ ನಿರ್ಣಯ ಅಂಗೀಕರಿಸುವಂತೆ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ ಮುಸ್ಲಿಂ ವೈಯಕ್ತಿಕ ಕಾನೂನು...

ಕೇಂದ್ರದ ವಕ್ಫ್‌ ಕಾನೂನಿನ ವಿರುದ್ಧ ನಿರ್ಣಯ ಅಂಗೀಕರಿಸುವಂತೆ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ

- Advertisement -
- Advertisement -

ಕೇಂದ್ರ ಸರ್ಕಾರದ ವಿವಾದಾತ್ಮಕ ವಕ್ಫ್‌ ಕಾನೂನಿನ ವಿರುದ್ಧ ನಿರ್ಣಯ ಅಂಗೀಕರಿಸುವಂತೆ ರಾಜ್ಯ ಸರ್ಕಾರವನ್ನು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ (ಎಐಎಂಪಿಎಲ್‌ಬಿ) ಆಗ್ರಹಿಸಿದೆ.

ಬೆಂಗಳೂರಿನ ಶಾಸಕರ ಭವನದಲ್ಲಿ ಸೋಮವಾರ (ಜೂ.24) ಜರುಗಿದ ಸಮಾಲೋಚನಾ ಸಭೆಯಲ್ಲಿ, ರಾಜ್ಯದ ವಿವಿಧ ಸಾಮಾಜಿಕ ಸಂಘಟನೆಗಳು, ಧಾರ್ಮಿಕ ಸಮುದಾಯಗಳ ಸಂಸ್ಥೆಗಳು ಹಾಗೂ ಪ್ರಮುಖ ಗಣ್ಯರು ಭಾಗವಹಿಸಿ, ಸರ್ವಾನುಮತದಿಂದ ಕೆಲವು ನಿರ್ಣಯಗಳನ್ನು ಘೋಷಿಸಿದರು.

“ಸಂಸತ್ತಿನಲ್ಲಿ ಅಂಗೀಕರಿಸಲ್ಪಟ್ಟಿರುವ ವಿವಾದಾತ್ಮಕ ವಕ್ಫ್‌ ತಿದ್ದುಪಡಿ ಕಾಯ್ದೆಗಳು ಕೇವಲ ಭೇದಭಾವ ಹಾಗೂ ವಿಭಜಕ ಸ್ವರೂಪದ್ದಾಗಿಲ್ಲದೆ, ಭಾರತ ಸಂವಿಧಾನದ ಮೂಲಭೂತ ಆಶಯಗಳಿಗೆ ನೇರವಾಗಿ ವಿರುದ್ಧವಾಗಿವೆ. ಈ ತಿದ್ದುಪಡಿಗಳು ಭಾರತ ಸಂವಿಧಾನದ ಮೂಲಭೂತ ಹಕ್ಕುಗಳಾದ ಕಲಂ 34, 25, 26, 29 ಮತ್ತು 30 ನ್ನು ಸ್ಪಷ್ಟವಾಗಿ ಅತಿಕ್ರಮಿಸುತ್ತವೆ” ಎಂದು ಸಭೆಯಲ್ಲಿ ಅಂಗೀಕರಿಸಲಾದ ನಿರ್ಣಯದಲ್ಲಿ ಆತಂಕ ವ್ಯಕ್ತಪಡಿಸಲಾಗಿದೆ.

“ಈ ತಿದ್ದುಪಡಿಗಳು ಮುಸ್ಲಿಂ ಸಮುದಾಯದ ವಕ್ಫ್‌ ಆಸ್ತಿಗಳಿಂದ, ಹಿಂದೂ, ಸಿಖ್‌, ಕ್ರಿಶ್ಚಿಯನ್‌ ಮತ್ತು ಬೌದ್ಧ ಮುಂತಾದ ಇತರೆ ಧಾರ್ಮಿಕ ಸಮುದಾಯಗಳ ದತ್ತಿ ಆಸ್ತಿಗಳಿಗೆ ನೀಡಿರುವ ಸಂರಕ್ಷಣೆಯನ್ನು ವಂಚಿಸುತ್ತವೆ. ಇದು ಸ್ಪಷ್ಟವಾದ ತಾರತಮ್ಯವನ್ನು ಪ್ರದರ್ಶಿಸುತ್ತದೆ. ಇವು ಮುಸ್ಲಿಮರಿಂದ ಅವರ ಧಾರ್ಮಿಕ ಸ್ವಾತಂತ್ರ್ಯ (ಕಲಂ 25) ಹಾಗೂ ತಮ್ಮ ಧಾರ್ಮಿಕ ಮತ್ತು ದತ್ತಿ ಸಂಸ್ಥೆಗಳ ವ್ಯವಸ್ಥಾಪನೆ ಮತ್ತು ಆಡಳಿತದ ಹಕ್ಕನ್ನು (ಕಲಂ 26 ಮತ್ತು 29) ಹರಣ ಮಾಡುತ್ತವೆ” ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಗಿದೆ.

“ಯಾವುದೇ ಮುಸ್ಲಿಂ ವ್ಯಕ್ತಿಯು ತನ್ನ ವೈಯಕ್ತಿಕ ಆಸ್ತಿಯನ್ನು ವಕ್ಫ್‌ಗೆ ಸಮರ್ಪಿಸಲು ಹೊಂದಿರುವ ಧಾರ್ಮಿಕ ಮತ್ತು ಸಾಂವಿಧಾನಿಕ ಸ್ವಾತಂತ್ರ್ಯವನ್ನು ಈ ತಿದ್ದುಪಡಿ ಕ್ಷೀಣಗೊಳಿಸುತ್ತದೆ. ವಿಶೇಷವಾಗಿ, ಆ ವ್ಯಕ್ತಿ ನಿರಂತರ ಐದು ವರ್ಷಗಳ ಕಾಲ ‘ನಿಷ್ಠಾವಂತ ಮುಸ್ಲಿಂ’ ಆಗಿರಬೇಕು ಎಂಬ ಷರತ್ತನ್ನು ವಿಧಿಸುತ್ತದೆ” ಎಂಬುದನ್ನು ನಿರ್ಣಯದಲ್ಲಿ ವಿರೋಧಿಸಲಾಗದೆ.

“ಯಾವುದೇ ವಕ್ಫ್‌ ಆಸ್ತಿಯ ಮೇಲೆ ಸರ್ಕಾರದ ಹಕ್ಕು ಅಥವಾ ಮಾಲೀಕತ್ವದ ಕುರಿತು ವಿವಾದವಿದ್ದಲ್ಲಿ, ಈ ತಿದ್ದುಪಡಿಯ ನಂತರ ಆ ಆಸ್ತಿಯು ಸರ್ಕಾರದ ಅಧೀನವಾಗುತ್ತದೆ. ಏಕೆಂದರೆ, ಅಂತಹ ವಿವಾದದ ನಿರ್ಣಯವನ್ನು ವಕ್ಫ್‌ ಮಂಡಳಿ ನಿರ್ಧರಿಸುವ ಬದಲಿಗೆ ಸರ್ಕಾರದ ನಿಯುಕ್ತ ಅಧಿಕಾರಿ ನಿರ್ಧರಿಸುತ್ತಾನೆ. ವಕ್ಫ್‌ ಮಂಡಳಿ ಹಾಗೂ ಕೇಂದ ವಕ್ಫ್‌ ಕೌನ್ಸಿಲ್‌ನ ಸದಸ್ಯತ್ವಕ್ಕೆ ಮುಸ್ಲಿಮನಾಗಿರಬೇಕೆಂಬ ಷರತ್ತನ್ನು ಈಗ ರದ್ದುಪಡಿಸಲಾಗಿದೆ. ಇದಲ್ಲದೆ, ಕೇಂದ್ರ ವಕ್ಫ್‌ ಕೌನ್ಸಿಲ್‌ ಮತ್ತು ರಾಜ್ಯ ವಕ್ಫ್‌ ಮಂಡಳಿಗಳ ಚುನಾವಣಾ ಪ್ರಕ್ರಿಯೆಯನ್ನು ನಾಮನಿರ್ದೇಶನದಿಂದ ಬದಲಾಯಿಸಲಾಗಿದೆ” ಎಂದು ನಿರ್ಣಯದಲ್ಲಿ ವಿವರಿಸಲಾಗಿದೆ.

‘ಬಳಕೆಯಿಂದ ವಕ್ಫ್‌ ಆಸ್ತಿಗಳನ್ನು ಕಡ್ಡಾಯವಾಗಿ ನೋಂದಾಯಿಸಬೇಕು. ಅಂತಹ ಆಸ್ತಿಗಳ ಕುರಿತು ಯಾವುದೇ ವಿವಾದವೆದ್ದರೆ, ಆ ಆಸ್ತಿಗಳು ತಮ್ಮ ವಕ್ಫ್‌ ಸ್ಥಾನಮಾನವನ್ನು ಕಳೆದುಕೊಳ್ಳುತ್ತವೆ ಎಂಬ ತಿದ್ದುಪಡಿಗಳ ಅನ್ವಯ, ಯಾವುದೇ ಅನಿವಾಸಿ ಮುಸ್ಲಿಂ ತನ್ನ ವೈಯಕ್ತಿಕ ಆಸ್ತಿಯನ್ನು ವಕ್ಫ್‌ ಗೆ ಸಮರ್ಪಿಸಲು ಅವಕಾಶವಿರುವುದಿಲ್ಲ. ವಕ್ಫ್‌ ಕಾಯ್ದೆ 2025, ಮುಸ್ಲಿಮರಿಗೆ ತಮ್ಮ ಸಂಸ್ಥೆಗಳನ್ನು ಸ್ಥಾಪಿಸಲು, ನಿರ್ವಹಿಸಲು ಮತ್ತು ಆಡಳಿತ ನಡೆಸಲು ಇರುವ
ಮೂಲಭೂತ ಸಾಂವಿಧಾನಿಕ ಹಕ್ಕಿನ ಮೇಲೆ ನಿರ್ಬಂಧ ಹೇರುವಂತಿದೆ” ಎಂದು ನಿರ್ಣಯದಲ್ಲಿ ಆತಂಕ ವ್ಯಕ್ತಪಡಿಸಲಾಗಿದೆ.

“ನಾವು ಎಲ್ಲರೂ ಈ ವಿವಾದಾತ್ಮಕ ತಿದ್ದುಪಡಿಗಳನ್ನು ನಿರ್ದಿಷ್ಟವಾಗಿ ತಿರಸ್ಕರಿಸುತ್ತೇವೆ. ಸರ್ಕಾರವು ಇವುಗಳನ್ನು ಹಿಂತೆಗೆದುಕೊಂಡು ಸಂವಿಧಾನ ಮತ್ತು ಪ್ರಜಾಪ್ರಭುತ್ವದ ತತ್ತ್ವಗಳನ್ನು ಗೌರವಿಸಬೇಕೆಂದು ದೃಢವಾಗಿ ಆಗ್ರಹಿಸುತ್ತೇವೆ” ಎಂದು ಒತ್ತಾಯಿಸಿದ್ದಾರೆ.

“ಇದಲ್ಲದೆ, ಕರ್ನಾಟಕ ರಾಜ್ಯ ಸರ್ಕಾರವೂ ಈ ವಿವಾದಾತ್ಮಕ ಕಾನೂನಿನ ವಿರುದ್ಧ ನಿರ್ಣಯವನ್ನು ಅಂಗೀಕರಿಸಬೇಕೆಂದು ನಾವು ಒತ್ತಾಯಿಸುತ್ತೇವೆ. ಜೊತೆಗೆ, ಈ ವಿವಾದಾತ್ಮಕ ಕಾಯ್ದೆಯ ವಿರುದ್ಧ ಮಾನ್ಯ ಸರ್ವೋಚ್ಚ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣದ ಅಂತಿಮ ತೀರ್ಪು ಹೊರಬೀಳುವವರೆಗೆ, ಈ ಕಾಯ್ದೆಯ ಜಾರಿಗೆ ತಾತ್ಕಾಲಿಕ ತಡೆಯಾಜ್ಞೆ ನೀಡಬೇಕೆಂದು ನಾವು ಆಗ್ರಹಿಸುತ್ತೇವೆ” ಎಂದು ಸಭೆಯಲ್ಲಿ ಒತ್ತಾಯಿಸಲಾಗಿದೆ.

Latest Update | ಇಸ್ರೇಲ್ ಮೇಲೆ ಕ್ಷಿಪಣಿ ದಾಳಿ ನಡೆಸಿದ ಇರಾನ್: ಮೂವರು ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಪೊಲೀಸರಿಂದ ಬೈಕ್ ಸೀಝ್‌; ಠಾಣೆ ಮುಂದೆ ಬೆಂಕಿ ಹಚ್ಚಿಕೊಂಡ ‘ಗಿಗ್’ ಕಾರ್ಮಿಕ

ಪೊಲೀಸರು ತನ್ನ ಬೈಕ್‌ ವಶಪಡಿಸಿಕೊಂಡ ನಂತರ 32 ವರ್ಷದ ಗಿಗ್ ಕಾರ್ಮಿಕನೊಬ್ಬ ಠಾಣೆಯ ಹೊರಗೆ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಕ್ಷಯ್ ಕಶ್ಯಪ್ ಎಂದು ಗುರುತಿಸಲ್ಪಟ್ಟ ಯುವಕನಿಗೆ ದೇಹದ...

ಎಪ್‌ಸ್ಟೀನ್ ಫೈಲ್ಸ್ ನಲ್ಲಿ ಹೆಸರು ಪ್ರಸ್ತಾಪ; ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ ಬಿಲ್ ಗೇಟ್ಸ್: ವರದಿ 

ನ್ಯೂಯಾರ್ಕ್: ಅಮೆರಿಕದ ತಂತ್ರಜ್ಞಾನ ಉದ್ಯಮಿ ಬಿಲ್ ಗೇಟ್ಸ್, ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೈನ್‌ನೊಂದಿಗಿನ ಹಳೆಯ ಸಂಪರ್ಕಕ್ಕಾಗಿ ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿದೆ. ವಾಲ್ ಸ್ಟ್ರೀಟ್ ಜರ್ನಲ್ ವರದಿಯ ಪ್ರಕಾರ, ಫೌಂಡೇಶನ್‌ನ ಟೌನ್...

ಕೆಎಸ್‌ಯು-ಐಯುಎಂಎಲ್ ಪ್ರತಿಭಟನೆಯಲ್ಲಿ ಘರ್ಷಣೆ; ಗಾಯಗೊಂಡ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ಬುಧವಾರ ಪೊಲೀಸರು ಮತ್ತು ಕೇರಳ ವಿದ್ಯಾರ್ಥಿ ಸಂಘ (ಕೆಎಸ್‌ಯು)-ಐಯುಎಂಎಲ್ ಯುವ ಘಟಕದ ಪ್ರತಿಭಟನಾಕಾರರ ನಡುವೆ ನಡೆದ ಘರ್ಷಣೆಯಲ್ಲಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಕುತ್ತಿಗೆ ಮತ್ತು ಕೈಗೆ ಗಾಯಗಳಾಗಿದೆ. ಕಾಂಗ್ರೆಸ್-ಕೆಎಸ್‌ಯು...

ಉತ್ತರಾಖಂಡ| ದೇವಸ್ಥಾನದ ಸಮೀಪ ಖಾಲಿ ಜಾಗದಲ್ಲಿ ನಮಾಜ್; ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ

ಉತ್ತರಾಖಂಡದ ಜಗತ್ಪುರದ ಅತ್ರಿಯ ದೇವಸ್ಥಾನದ ಮುಂಭಾಗದಲ್ಲಿರುವ ಖಾಲಿ ಜಾಗದಲ್ಲಿ ನಮಾಜ್ ಮಾಡಿದ ನಂತರ ಶಾಹಿದ್ ಎಂದು ಗುರುತಿಸಲಾದ ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಧಾರ್ಮಿಕ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು...

ಮುಝಫ್ಫರ್‌ನಗರ ಗಲಭೆ ಪ್ರಕರಣ : 37 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಉತ್ತರ ಪ್ರದೇಶದ ಮುಝಫ್ಫರ್‌ನಗರದ ನ್ಯಾಯಾಲಯ 2013ರ ಕೋಮು ಗಲಭೆಗೆ ಸಂಬಂಧಿಸಿದ ಎಂಟು ಜನರ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯಗಳ ಕೊರತೆಯನ್ನು ಉಲ್ಲೇಖಿಸಿ 37 ಆರೋಪಿಗಳನ್ನು ಮಂಗಳವಾರ (ಫೆ.25) ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ. ತೀರ್ಪು ಪ್ರಕಟಿಸಿದ ಹೆಚ್ಚುವರಿ...

ಇಸ್ರೇಲ್ ಸಂಸತ್ತಿನಲ್ಲಿ ಭಾಷಣದ ವೇಳೆ ಪ್ರಧಾನಿ ಮೋದಿ ಗಾಝಾ ನರಮೇಧ ಉಲ್ಲೇಖಿಸಲಿ : ಪ್ರಿಯಾಂಕಾ ಗಾಂಧಿ ಆಗ್ರಹ

ಇಸ್ರೇಲ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಸಂಸತ್ತಾದ ನೆಸೆಟ್ ಅನ್ನು ಉದ್ದೇಶಿಸಿ ಮಾತನಾಡುವಾಗ ಗಾಝಾ ನರಮೇಧವನ್ನು ಉಲ್ಲೇಖಿಸಿ ನ್ಯಾಯಕ್ಕಾಗಿ ಆಗ್ರಹಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ...

ಕೇಂದ್ರ ಸಚಿವರ ಸಮ್ಮುಖದಲ್ಲಿ ‘ಮುಸ್ಲಿಂ ವಿರೋಧಿ ಹೇಳಿಕೆ’ ನೀಡಿದ ಹಿಂದುತ್ವವಾದಿ ವ್ಯಕ್ತಿ

ಉತ್ತರಾಖಂಡದಲ್ಲಿ ನಡೆದ ಸಾರ್ವಜನಿಕ ಹಿಂದೂ ಧಾರ್ಮಿಕ ಕಾರ್ಯಕ್ರಮದಲ್ಲಿ, ಕೇಂದ್ರ ಸಚಿವರ ಸಮ್ಮುಖದಲ್ಲಿಯೇ ಹಿಂದುತ್ವವಾದಿ ಮುಖಂಡನೊಬ್ಬ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದು ರಾಜಕೀಯ ಮತ್ತು ಸಾಮಾಜಿಕ ವಿವಾದಕ್ಕೆ ಕಾರಣವಾಗಿದೆ. ಇದು ಪೊಲೀಸ್ ಕ್ರಮ...

ಎನ್‌ಸಿಇಆರ್‌ಟಿ ಪಠ್ಯಪುಸ್ತಕದ ‘ನ್ಯಾಯಾಂಗದಲ್ಲಿನ ಭ್ರಷ್ಟಾಚಾರ’ ವಿಷಯಕ್ಕೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಪ್ರಕಟಿಸಿದ 8ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ "ನ್ಯಾಯಾಂಗದಲ್ಲಿನ ಭ್ರಷ್ಟಾಚಾರ" ಎಂಬ ವಿಷಯ ಉಲ್ಲೇಖಿಸಿರುವುದಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಫೆ.25) ತೀವ್ರ...

ಮಧ್ಯಪ್ರದೇಶ: ಡಾ. ಹರಿಸಿಂಗ್ ಗೌರ್ ವಿವಿಯಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ ದುಷ್ಕರ್ಮಿಗಳಿಂದ ವಿದ್ಯಾರ್ಥಿಗಳ ಮೇಲೆ ದಾಳಿ, ಜೀವಬೆದರಿಕೆ;  ಎಫ್‌ಐಆರ್ ದಾಖಲು

ಮಧ್ಯಪ್ರದೇಶದ ಸಾಗರ್‌ನಲ್ಲಿರುವ ಡಾ. ಹರಿ ಸಿಂಗ್ ಗೌರ್ ವಿಶ್ವವಿದ್ಯಾಲಯದಲ್ಲಿ ನಡೆದ ಸರಣಿ ಹಿಂಸಾತ್ಮಕ ಘಟನೆಗಳು ಕ್ಯಾಂಪಸ್ ಸುರಕ್ಷತೆಯ ಬಗ್ಗೆ ಗಂಭೀರ ಕಳವಳವನ್ನು ಉಂಟುಮಾಡಿವೆ. ಐದು ದಿನಗಳಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವ್ಯಕ್ತಿಗಳಿಂದ ಎರಡು ಜೀವ...

ಅಜೀಂ ಪ್ರೇಮ್‌ ಜಿ ವಿವಿಯಲ್ಲಿ ದಾಂಧಲೆ : ಎಬಿವಿಪಿ ಸದಸ್ಯರ ವಿರುದ್ಧ ಕಠಿಣ ಕ್ರಮಕ್ಕೆ ಕೆವಿಎಸ್‌ ಆಗ್ರಹ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಂಧಲೆ ನಡೆಸಿದ ಎಬಿವಿಪಿ ಸದಸ್ಯರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಕರ್ನಾಟಕ ವಿದ್ಯಾರ್ಥಿ ಸಂಘಟನೆ (ಕೆವಿಎಸ್‌) ಆಗ್ರಹಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯ ರಾಜ್ಯ...