Homeಕರ್ನಾಟಕಕೇಂದ್ರದ ವಕ್ಫ್‌ ಕಾನೂನಿನ ವಿರುದ್ಧ ನಿರ್ಣಯ ಅಂಗೀಕರಿಸುವಂತೆ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ ಮುಸ್ಲಿಂ ವೈಯಕ್ತಿಕ ಕಾನೂನು...

ಕೇಂದ್ರದ ವಕ್ಫ್‌ ಕಾನೂನಿನ ವಿರುದ್ಧ ನಿರ್ಣಯ ಅಂಗೀಕರಿಸುವಂತೆ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ

- Advertisement -
- Advertisement -

ಕೇಂದ್ರ ಸರ್ಕಾರದ ವಿವಾದಾತ್ಮಕ ವಕ್ಫ್‌ ಕಾನೂನಿನ ವಿರುದ್ಧ ನಿರ್ಣಯ ಅಂಗೀಕರಿಸುವಂತೆ ರಾಜ್ಯ ಸರ್ಕಾರವನ್ನು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ (ಎಐಎಂಪಿಎಲ್‌ಬಿ) ಆಗ್ರಹಿಸಿದೆ.

ಬೆಂಗಳೂರಿನ ಶಾಸಕರ ಭವನದಲ್ಲಿ ಸೋಮವಾರ (ಜೂ.24) ಜರುಗಿದ ಸಮಾಲೋಚನಾ ಸಭೆಯಲ್ಲಿ, ರಾಜ್ಯದ ವಿವಿಧ ಸಾಮಾಜಿಕ ಸಂಘಟನೆಗಳು, ಧಾರ್ಮಿಕ ಸಮುದಾಯಗಳ ಸಂಸ್ಥೆಗಳು ಹಾಗೂ ಪ್ರಮುಖ ಗಣ್ಯರು ಭಾಗವಹಿಸಿ, ಸರ್ವಾನುಮತದಿಂದ ಕೆಲವು ನಿರ್ಣಯಗಳನ್ನು ಘೋಷಿಸಿದರು.

“ಸಂಸತ್ತಿನಲ್ಲಿ ಅಂಗೀಕರಿಸಲ್ಪಟ್ಟಿರುವ ವಿವಾದಾತ್ಮಕ ವಕ್ಫ್‌ ತಿದ್ದುಪಡಿ ಕಾಯ್ದೆಗಳು ಕೇವಲ ಭೇದಭಾವ ಹಾಗೂ ವಿಭಜಕ ಸ್ವರೂಪದ್ದಾಗಿಲ್ಲದೆ, ಭಾರತ ಸಂವಿಧಾನದ ಮೂಲಭೂತ ಆಶಯಗಳಿಗೆ ನೇರವಾಗಿ ವಿರುದ್ಧವಾಗಿವೆ. ಈ ತಿದ್ದುಪಡಿಗಳು ಭಾರತ ಸಂವಿಧಾನದ ಮೂಲಭೂತ ಹಕ್ಕುಗಳಾದ ಕಲಂ 34, 25, 26, 29 ಮತ್ತು 30 ನ್ನು ಸ್ಪಷ್ಟವಾಗಿ ಅತಿಕ್ರಮಿಸುತ್ತವೆ” ಎಂದು ಸಭೆಯಲ್ಲಿ ಅಂಗೀಕರಿಸಲಾದ ನಿರ್ಣಯದಲ್ಲಿ ಆತಂಕ ವ್ಯಕ್ತಪಡಿಸಲಾಗಿದೆ.

“ಈ ತಿದ್ದುಪಡಿಗಳು ಮುಸ್ಲಿಂ ಸಮುದಾಯದ ವಕ್ಫ್‌ ಆಸ್ತಿಗಳಿಂದ, ಹಿಂದೂ, ಸಿಖ್‌, ಕ್ರಿಶ್ಚಿಯನ್‌ ಮತ್ತು ಬೌದ್ಧ ಮುಂತಾದ ಇತರೆ ಧಾರ್ಮಿಕ ಸಮುದಾಯಗಳ ದತ್ತಿ ಆಸ್ತಿಗಳಿಗೆ ನೀಡಿರುವ ಸಂರಕ್ಷಣೆಯನ್ನು ವಂಚಿಸುತ್ತವೆ. ಇದು ಸ್ಪಷ್ಟವಾದ ತಾರತಮ್ಯವನ್ನು ಪ್ರದರ್ಶಿಸುತ್ತದೆ. ಇವು ಮುಸ್ಲಿಮರಿಂದ ಅವರ ಧಾರ್ಮಿಕ ಸ್ವಾತಂತ್ರ್ಯ (ಕಲಂ 25) ಹಾಗೂ ತಮ್ಮ ಧಾರ್ಮಿಕ ಮತ್ತು ದತ್ತಿ ಸಂಸ್ಥೆಗಳ ವ್ಯವಸ್ಥಾಪನೆ ಮತ್ತು ಆಡಳಿತದ ಹಕ್ಕನ್ನು (ಕಲಂ 26 ಮತ್ತು 29) ಹರಣ ಮಾಡುತ್ತವೆ” ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಗಿದೆ.

“ಯಾವುದೇ ಮುಸ್ಲಿಂ ವ್ಯಕ್ತಿಯು ತನ್ನ ವೈಯಕ್ತಿಕ ಆಸ್ತಿಯನ್ನು ವಕ್ಫ್‌ಗೆ ಸಮರ್ಪಿಸಲು ಹೊಂದಿರುವ ಧಾರ್ಮಿಕ ಮತ್ತು ಸಾಂವಿಧಾನಿಕ ಸ್ವಾತಂತ್ರ್ಯವನ್ನು ಈ ತಿದ್ದುಪಡಿ ಕ್ಷೀಣಗೊಳಿಸುತ್ತದೆ. ವಿಶೇಷವಾಗಿ, ಆ ವ್ಯಕ್ತಿ ನಿರಂತರ ಐದು ವರ್ಷಗಳ ಕಾಲ ‘ನಿಷ್ಠಾವಂತ ಮುಸ್ಲಿಂ’ ಆಗಿರಬೇಕು ಎಂಬ ಷರತ್ತನ್ನು ವಿಧಿಸುತ್ತದೆ” ಎಂಬುದನ್ನು ನಿರ್ಣಯದಲ್ಲಿ ವಿರೋಧಿಸಲಾಗದೆ.

“ಯಾವುದೇ ವಕ್ಫ್‌ ಆಸ್ತಿಯ ಮೇಲೆ ಸರ್ಕಾರದ ಹಕ್ಕು ಅಥವಾ ಮಾಲೀಕತ್ವದ ಕುರಿತು ವಿವಾದವಿದ್ದಲ್ಲಿ, ಈ ತಿದ್ದುಪಡಿಯ ನಂತರ ಆ ಆಸ್ತಿಯು ಸರ್ಕಾರದ ಅಧೀನವಾಗುತ್ತದೆ. ಏಕೆಂದರೆ, ಅಂತಹ ವಿವಾದದ ನಿರ್ಣಯವನ್ನು ವಕ್ಫ್‌ ಮಂಡಳಿ ನಿರ್ಧರಿಸುವ ಬದಲಿಗೆ ಸರ್ಕಾರದ ನಿಯುಕ್ತ ಅಧಿಕಾರಿ ನಿರ್ಧರಿಸುತ್ತಾನೆ. ವಕ್ಫ್‌ ಮಂಡಳಿ ಹಾಗೂ ಕೇಂದ ವಕ್ಫ್‌ ಕೌನ್ಸಿಲ್‌ನ ಸದಸ್ಯತ್ವಕ್ಕೆ ಮುಸ್ಲಿಮನಾಗಿರಬೇಕೆಂಬ ಷರತ್ತನ್ನು ಈಗ ರದ್ದುಪಡಿಸಲಾಗಿದೆ. ಇದಲ್ಲದೆ, ಕೇಂದ್ರ ವಕ್ಫ್‌ ಕೌನ್ಸಿಲ್‌ ಮತ್ತು ರಾಜ್ಯ ವಕ್ಫ್‌ ಮಂಡಳಿಗಳ ಚುನಾವಣಾ ಪ್ರಕ್ರಿಯೆಯನ್ನು ನಾಮನಿರ್ದೇಶನದಿಂದ ಬದಲಾಯಿಸಲಾಗಿದೆ” ಎಂದು ನಿರ್ಣಯದಲ್ಲಿ ವಿವರಿಸಲಾಗಿದೆ.

‘ಬಳಕೆಯಿಂದ ವಕ್ಫ್‌ ಆಸ್ತಿಗಳನ್ನು ಕಡ್ಡಾಯವಾಗಿ ನೋಂದಾಯಿಸಬೇಕು. ಅಂತಹ ಆಸ್ತಿಗಳ ಕುರಿತು ಯಾವುದೇ ವಿವಾದವೆದ್ದರೆ, ಆ ಆಸ್ತಿಗಳು ತಮ್ಮ ವಕ್ಫ್‌ ಸ್ಥಾನಮಾನವನ್ನು ಕಳೆದುಕೊಳ್ಳುತ್ತವೆ ಎಂಬ ತಿದ್ದುಪಡಿಗಳ ಅನ್ವಯ, ಯಾವುದೇ ಅನಿವಾಸಿ ಮುಸ್ಲಿಂ ತನ್ನ ವೈಯಕ್ತಿಕ ಆಸ್ತಿಯನ್ನು ವಕ್ಫ್‌ ಗೆ ಸಮರ್ಪಿಸಲು ಅವಕಾಶವಿರುವುದಿಲ್ಲ. ವಕ್ಫ್‌ ಕಾಯ್ದೆ 2025, ಮುಸ್ಲಿಮರಿಗೆ ತಮ್ಮ ಸಂಸ್ಥೆಗಳನ್ನು ಸ್ಥಾಪಿಸಲು, ನಿರ್ವಹಿಸಲು ಮತ್ತು ಆಡಳಿತ ನಡೆಸಲು ಇರುವ
ಮೂಲಭೂತ ಸಾಂವಿಧಾನಿಕ ಹಕ್ಕಿನ ಮೇಲೆ ನಿರ್ಬಂಧ ಹೇರುವಂತಿದೆ” ಎಂದು ನಿರ್ಣಯದಲ್ಲಿ ಆತಂಕ ವ್ಯಕ್ತಪಡಿಸಲಾಗಿದೆ.

“ನಾವು ಎಲ್ಲರೂ ಈ ವಿವಾದಾತ್ಮಕ ತಿದ್ದುಪಡಿಗಳನ್ನು ನಿರ್ದಿಷ್ಟವಾಗಿ ತಿರಸ್ಕರಿಸುತ್ತೇವೆ. ಸರ್ಕಾರವು ಇವುಗಳನ್ನು ಹಿಂತೆಗೆದುಕೊಂಡು ಸಂವಿಧಾನ ಮತ್ತು ಪ್ರಜಾಪ್ರಭುತ್ವದ ತತ್ತ್ವಗಳನ್ನು ಗೌರವಿಸಬೇಕೆಂದು ದೃಢವಾಗಿ ಆಗ್ರಹಿಸುತ್ತೇವೆ” ಎಂದು ಒತ್ತಾಯಿಸಿದ್ದಾರೆ.

“ಇದಲ್ಲದೆ, ಕರ್ನಾಟಕ ರಾಜ್ಯ ಸರ್ಕಾರವೂ ಈ ವಿವಾದಾತ್ಮಕ ಕಾನೂನಿನ ವಿರುದ್ಧ ನಿರ್ಣಯವನ್ನು ಅಂಗೀಕರಿಸಬೇಕೆಂದು ನಾವು ಒತ್ತಾಯಿಸುತ್ತೇವೆ. ಜೊತೆಗೆ, ಈ ವಿವಾದಾತ್ಮಕ ಕಾಯ್ದೆಯ ವಿರುದ್ಧ ಮಾನ್ಯ ಸರ್ವೋಚ್ಚ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣದ ಅಂತಿಮ ತೀರ್ಪು ಹೊರಬೀಳುವವರೆಗೆ, ಈ ಕಾಯ್ದೆಯ ಜಾರಿಗೆ ತಾತ್ಕಾಲಿಕ ತಡೆಯಾಜ್ಞೆ ನೀಡಬೇಕೆಂದು ನಾವು ಆಗ್ರಹಿಸುತ್ತೇವೆ” ಎಂದು ಸಭೆಯಲ್ಲಿ ಒತ್ತಾಯಿಸಲಾಗಿದೆ.

Latest Update | ಇಸ್ರೇಲ್ ಮೇಲೆ ಕ್ಷಿಪಣಿ ದಾಳಿ ನಡೆಸಿದ ಇರಾನ್: ಮೂವರು ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...

ಬೆಂಗಳೂರಿನಲ್ಲಿ ಮಾದಕ ವಸ್ತು ಜಾಲ ಪತ್ತೆ; 10 ಜನರ ಬಂಧನ, 23.6 ಕೋಟಿ ಮೌಲ್ಯದ ಮಾದಕ ವಸ್ತು ವಶ

ಬೆಂಗಳೂರು: ಬೃಹತ್ ಮಾದಕ ವಸ್ತು ಜಾಲ ಪತ್ತೆಯಾಗಿದ್ದು, ಬೆಂಗಳೂರು ನಗರ ಪೊಲೀಸರು 10 ಜನ ಶಂಕಿತರನ್ನು ಬಂಧಿಸಿದ್ದಾರೆ ಮತ್ತು ಅಂದಾಜು 23.63 ಕೋಟಿ ರೂ. ಮಾರುಕಟ್ಟೆ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಕಳೆದ ಕೆಲವು...

‘ಮತ ಚಲಾಯಿಸದವರನ್ನು ಶಿಕ್ಷಿಸಲು ಸಾಧ್ಯವಿಲ್ಲ’: ಮತದಾನ ಕಡ್ಡಾಯಗೊಳಿಸಲು ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಮತ ಚಲಾಯಿಸುವುದನ್ನು ಕಡ್ಡಾಯಗೊಳಿಸಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಸುಪ್ರೀಂ ಕೋರ್ಟ್ ಗುರುವಾರ (ಏ. 16) ವಜಾಗೊಳಿಸಿದೆ ಮತ್ತು ಉದ್ದೇಶಪೂರ್ವಕವಾಗಿ ಮತದಾನದಿಂದ ದೂರ ಉಳಿಯುವ ನಾಗರಿಕರಿಗೆ ದಂಡ ವಿಧಿಸಲು...